ಗುಡ್‌ ಬೈ ಎಂದ ದಂಗಲ್‌ ಸುಂದರಿ ಝೈರಾ ವಾಸಿಂ


Team Udayavani, Jul 5, 2019, 5:00 AM IST

20

ಬಾಲಿವುಡ್‌ನ‌ ಮಿಸ್ಟರ್‌ ಪರ್ಫೆಕ್ಟ್ ಖ್ಯಾತಿಯ ಅಮೀರ್‌ ಖಾನ್‌ ಅಭಿನಯದ ಸೂಪರ್‌ ಹಿಟ್‌ ದಂಗಲ್ ಚಿತ್ರದ ಮೂಲಕ ಬಾಲಿವುಡ್‌ಗೆ ಪರಿಚಯವಾದ ಚೆಲುವೆ ನಟಿ ಝೈರಾ ವಾಸಿಂ.

ಕಾಶ್ಮೀರಿ ಮೂಲಕದ ಝೈರಾ ತೀರಾ ಆಕಸ್ಮಿಕವೆಂಬಂತೆ ಚಿತ್ರರಂಗಕ್ಕೆ ಕಾಲಿಟ್ಟ ಹುಡುಗಿ. ದಂಗಲ್ ಚಿತ್ರದಲ್ಲಿ ಗೀತಾ ಪೋಗತ್‌ ಪಾತ್ರದಲ್ಲಿ ಮಿಂಚಿದ್ದರು ಝೈರಾ, ತನ್ನ ಸೌಂದರ್ಯ, ಅಭಿನಯ ಎರಡರಿಂದಲೂ ಪ್ರೇಕ್ಷಕರಿಗೆ ಹತ್ತಿರವಾದ ಹುಡುಗಿ. ಜೊತೆಗೆ ಅದೃಷ್ಟ ಕೂಡ ಕೈ ಹಿಡಿದಿದ್ದರಿಂದ, ಚೊಚ್ಚಲ ಚಿತ್ರವೇ ಈಕೆಗೆ ಸಾಕಷ್ಟು ಹೆಸರು, ಜನಪ್ರಿಯತೆ ತಂದುಕೊಟ್ಟಿತು. ನಟಿಸಿದ ಒಂದೇ ಚಿತ್ರ ಚಿಕ್ಕ ವಯಸ್ಸಿನಲ್ಲೆ ಝೈರಾಗೆ ದೊಡ್ಡ ಸಂಖ್ಯೆಯ ಅಭಿಮಾನಿಗಳನ್ನ ಕೊಟ್ಟಿತು. ನಟಿಸಿದ ಮೊದಲ ಚಿತ್ರ ದಂಗಲ… ಅಭಿನಯಕ್ಕಾಗಿ ರಾಷ್ಟ್ರಪ್ರಶಸ್ತಿ ಮುಡಿಗೇರಿಸಿಕೊಂಡ ಝೈರಾ ವಾಸಿಂಗೆ ನಂತರ ಬಾಲಿವುಡ್‌ನ‌ಲ್ಲಿ ಅವಕಾಶಗಳ ಹೆಬ್ಟಾಗಿಲೇ ತೆರೆಯಿತು.

ಬಾಲಿವುಡ್‌ನ‌ಲ್ಲಿ ಹತ್ತಾರು ಚಿತ್ರಗಳ ಆಫ‌ರ್ ಬಂದರೂ, ಝೈರಾ ವಾಸಿಂ ಆರಿಸಿಕೊಂಡಿದ್ದು ಕೇವಲ ಬೆರಳೆಣಿಕೆಯಷ್ಟು ಚಿತ್ರಗಳನ್ನ ಮಾತ್ರ. ಸಾಕಷ್ಟು ಅಳೆದು ತೂಗಿ ಚಿತ್ರಗಳ ಆಯ್ಕೆ ಮಾಡಿಕೊಳ್ಳುತ್ತಿದ್ದ ಝೈರಾ ಕಳೆದ ಐದು ವರ್ಷಗಳಿಂದ ಅಭಿನಯಿಸಿದ್ದು ಸೀಕ್ರೆಟ್‌ ಸೂಪರ್‌ ಸ್ಟಾರ್‌, ದಿ ಸೆ ಸ್ಕೈ ಈಸ್‌ ಪಿಂಕ್‌ ಸೇರಿದಂತೆ ಕೇವಲ ಎರಡು-ಮೂರು ಚಿತ್ರಗಳಲ್ಲಿ ಮಾತ್ರ. ಆದರೂ ಝೈರಾ ಮುಂದೆ ಹತ್ತಾರು ಚಿತ್ರಗಳ ಆಫ‌ರ್ ಬರುತ್ತಲೇ ಇದೆ.

ಆದರೆ, ಈಗ ಝೈರಾ ತನ್ನ ಅಭಿಮಾನಿಗಳಿಗೆ ಶಾಕಿಂಗ್‌ ಸುದ್ದಿಯೊಂದನ್ನು ನೀಡಿದ್ದಾರೆ. ಸುಮಾರು ಐದು ವರ್ಷಗಳಿಂದ ಬಾಲಿವುಡ್‌ನ‌ಲ್ಲಿ ಸಕ್ರಿಯವಾಗಿರುವ ಝೈರಾ ಇದೀಗ ಇದ್ದಕ್ಕಿದ್ದಂತೆ, ಚಿತ್ರರಂಗಕ್ಕೆ ಗುಡ್‌ ಬೈ ಹೇಳಲು ನಿರ್ಧರಿಸಿದ್ದಾರೆ. ಈ ಬಗ್ಗೆ ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿರುವ ಝೈರಾ, “ಐದು ವರ್ಷದ ಹಿಂದೆ ನಾನು ಕೈಗೊಂಡ ನಿರ್ಧಾರ ನನ್ನ ಇಡೀ ಬದುಕನ್ನೆ ಬದಲಾಯಿಸಿತು. ನಾನು ಬಾಲಿವುಡ್‌ನ‌ಲ್ಲಿ ಹೆಜ್ಜೆ ಇಟ್ಟಾಗ ಅಪಾರ ಜನಪ್ರಿಯತೆ ಸಿಕ್ಕಿತು. ಸಾರ್ವಜನಿಕರನ್ನು ಗಮನ ಸೆಳೆಯುವ ಪ್ರಧಾನ ಆಕರ್ಷಣೆ ಆಗಿದ್ದೆ. ಇದರಿಂದ ಯುವಜನತೆಗೆ ಮಾದರಿಯಾಗಿ ಗುರುತಿಸಲಾಯಿತು. ಆದರೆ, ಈ ಚಿತ್ರ ಜಗತ್ತು ನನಗೆ ಸಂತಸ ತಂದಿಲ್ಲ. ನಂಬಿಕೆ ಹಾಗೂ ಧರ್ಮದ ಮೇಲೆ ಹಸ್ತಕ್ಷೇಪ ಮಾಡುತ್ತದೆ. ಈ ಕಾರಣದಿಂದ ನಾನು ಚಿತ್ರರಂಗ ತೊರೆಯುವ ನಿರ್ಧಾರ ಮಾಡಿದ್ದೇನೆ. ನಾನು ಇಲ್ಲಿಗೆ ಪರಿಪೂರ್ಣವಾಗಿ ಹೊಂದಿಕೆಯಾಗದಿದ್ದರಿಂದ, ಇಲ್ಲಿ ಉಳಿಯಲಾರೆ’ ಎಂದು ಚಿತ್ರರಂಗ ಬಿಡುತ್ತಿರುವ ವಿಚಾರವನ್ನು ಬಹಿರಂಗ ಪಡಿಸಿದ್ದಾರೆ.

ಹಾಗಾದ್ರೆ ಚಿತ್ರರಂಗ ಬಿಟ್ಟ ನಂತರ ಝೈರಾ ವಾಸಿಂ ಏನು ಮಾಡುತ್ತಾರೆ ಅನ್ನೋ ಅಭಿಮಾನಿಗಳ ಪ್ರಶ್ನೆಗೆ, “ಅದನ್ನು ಶೀಘ್ರದಲ್ಲೇ ಬಹಿರಂಗಪಡಿಸುತ್ತೇನೆ’ ಎಂದಿದ್ದಾರೆ. ಒಟ್ಟಾರೆ ಝೈರಾ ಅವರ ಇಂಥದ್ದೊಂದು ದಿಢೀರ್‌ ನಿರ್ಧಾರ ಅವರ ಅಭಿಮಾನಿಗಳಿಗೆ ಶಾಕ್‌ ನೀಡಿದ್ದಂತೂ ಸುಳ್ಳಲ್ಲ.

ಟಾಪ್ ನ್ಯೂಸ್

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೋಟಿಸ್

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Malayalam Kannada Translated Story

ವಿಲ್ಲನ್ ‌ಗಳು ಮಾತನಾಡುವಾಗ ಏನನ್ನೂ ಬಚ್ಚಿಡುವುದಿಲ್ಲ

k-20

ಸೆರಗು-ಲೋಕದ ಬೆರಗು

ಕಡಿಮೆ ಮಾಡೋಣ ಪ್ಲಾಸ್ಟಿಕ್‌ ಸದ್ದು

ಕಡಿಮೆ ಮಾಡೋಣ ಪ್ಲಾಸ್ಟಿಕ್‌ ಸದ್ದು

ದಿರಿಸು-ಪುಸ್ತಕಗಳ ನಡುವೆ ಬದುಕು ನವಿಲುಗರಿ

ದಿರಿಸು-ಪುಸ್ತಕಗಳ ನಡುವೆ ಬದುಕು ನವಿಲುಗರಿ

ಎಲ್ಲ ದಿನಗಳೂ ಮಹಿಳಾ ದಿನಗಳೇ!

ಎಲ್ಲ ದಿನಗಳೂ ಮಹಿಳಾ ದಿನಗಳೇ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೋಟಿಸ್

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.