ಪುರಿ ಜಗನ್ನಾಥನ ರಥಯಾತ್ರೆ ಆರಂಭ
Team Udayavani, Jul 5, 2019, 5:03 AM IST
ಭುವನೇಶ್ವರ/ಕೋಲ್ಕತಾ: ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಒಡಿಶಾದ ಪುರಿಯಲ್ಲಿ ಜಗನ್ನಾಥನ ವಾರ್ಷಿಕ ರಥಯಾತ್ರೆಗೆ ಗುರುವಾರ ಚಾಲನೆ ದೊರೆಯಿತು. ಪುರಿ ಜಗನ್ನಾಥ ದೇಗುಲದಿಂದ ಬಲಭದ್ರ, ಜಗನ್ನಾಥ, ದೇವಿ ಸುಭದ್ರೆ ಹಾಗೂ ಸುದರ್ಶನರ ಮೂರ್ತಿಗಳನ್ನು ಹೊತ್ತ ಬೃಹತ್ ರಥಗಳನ್ನು ಮೆರವಣಿಗೆ ಮೂಲಕ ಸಾಗಿಸಲಾಯಿತು. 9 ದಿನಗಳ ಕಾಲ ಈ ಕಾರ್ಯಕ್ರಮ ನಡೆಯಲಿದೆ. ಪುರಿ ಶಂಕರಾಚಾರ್ಯ ಸ್ವಾಮಿ ನಿಶ್ಚಲಾನಂದ ಸರಸ್ವತಿ ಅವರು ಈ ಎಲ್ಲ ಮೂರ್ತಿಗಳಿಗೂ ಪೂಜೆ ಸಲ್ಲಿಸಿದರು. ಒಡಿಶಾ ಸಿಎಂ ನವೀನ್ ಪಟ್ನಾಯಕ್, ಇತರ ಸಚಿವರು, ಶಾಸಕರು ಹಾಗೂ ಇತರೆ ಗಣ್ಯರು ಸಮಾರಂಭಕ್ಕೆ ಸಾಕ್ಷಿಯಾದರು.
ಸಾಮರಸ್ಯದ ಕರೆ:ಪಶ್ಚಿಮ ಬಂಗಾಲದ ಕೋಲ್ಕತಾದಲ್ಲಿ ಇಸ್ಕಾನ್ ಆಯೋಜಿಸಿದ್ದ ರಥಯಾತ್ರೆಗೆ ಸಿಎಂ ಮಮತಾ ಬ್ಯಾನರ್ಜಿ ಚಾಲನೆ ನೀಡಿದರು. ಟಿಎಂಸಿ ಸಂಸದೆ ನುಸ್ರತ್ ಜಹಾನ್ ಮುಖ್ಯ ಅತಿಥಿಯಾಗಿದ್ದರು. ಅವರ ಪತಿ ನಿಖೀಲ್ ಜೈನ್ ಕೂಡ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಇಲ್ಲಿ ಧಾರ್ಮಿಕ ಸಾಮರಸ್ಯಕ್ಕೆ ಕರೆ ನೀಡಿದ ಸಿಎಂ ಮಮತಾ, ‘ಎಲ್ಲ ಧರ್ಮಗಳ ಬಗ್ಗೆಯೂ ಸಹಿಷ್ಣುತೆ ಮತ್ತು ಎಲ್ಲರೂ ಒಂದೇ ಎಂಬ ಭಾವನೆಯೇ ನೈಜ ಧರ್ಮ’ ಎಂದಿದ್ದಾರೆ. ಇದೇ ವೇಳೆ ಮಾತನಾಡಿದ ನುಸ್ರತ್, ‘ರಾಜಕೀಯ ಮತ್ತು ಧರ್ಮವನ್ನು ನಾವು ಬೇರೆ ಬೇರೆಯಾಗಿಯೇ ನೋಡಬೇಕು’ ಎಂದು ಹೇಳಿದ್ದಾರೆ.
ಇನ್ನು, ಗುಜರಾತ್ನಲ್ಲಿ ನಡೆದ ರಥ ಯಾತ್ರೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಕುಟುಂಬ ಸಮೇತರಾಗಿ ಪಾಲ್ಗೊಂಡಿದ್ದಾರೆ. ಇದಕ್ಕೂ ಮುನ್ನ, ಪ್ರಧಾನಿ ನರೇಂದ್ರ ಮೋದಿಯವರು ರಥಯಾತ್ರೆ ಹಿನ್ನೆಲೆಯಲ್ಲಿ ದೇಶದ ಜನತೆಗೆ ಟ್ವಿಟರ್ ಮೂಲಕ ಶುಭಾಶಯ ಕೋರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಜಗತ್ತಿಗಿಂತ ಮೊದಲು ಪಾಕ್ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್ ದಾಳಿ ಬಗ್ಗೆ ಪ್ರಧಾನಿ
Encounter: ಛತ್ತೀಸ್ಗಢದಲ್ಲಿ ಎನ್ಕೌಂಟರ್… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ
Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್ ಶಾ
Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್
Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ
MUST WATCH
ಹೊಸ ಸೇರ್ಪಡೆ
ಬಿಜೆಪಿ ಸುಳ್ಳು ಉತ್ಪಾದನೆ ಮಾಡುವ ಫ್ಯಾಕ್ಟರಿ: ಸಿಎಂ ಸಿದ್ದರಾಮಯ್ಯ
ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ
Kasturba ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾದ ಡಾ| ರಾಮದಾಸ್ ಎಂ.ಪೈ ಬ್ಲಾಕ್ ಉದ್ಘಾಟನೆ
ವಚನ ಬದುಕು ಚಂದಾಗಿಸುವ ಕಾಲಾತೀತ ದಿವ್ಯ ಸಂದೇಶ: ಶಿವಾಚಾರ್ಯರು
Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು