ಸಿದ್ದು ಕ್ಷಮೆಯಾಚಿಸಲಿ:.ಸಿ.ಟಿ.ರವಿ
Team Udayavani, Jul 5, 2019, 5:23 AM IST
ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಪ್ರಧಾನಿ ಮೋದಿಯವರ ಜಪ ಮಾಡದಿದ್ದರೆ, ಟೀಕೆ ಮಾಡದಿದ್ದರೆ ಊಟ ಅರಗದಿರುವ ಕಾಯಿಲೆ ಇದೆ. ಅನಗತ್ಯವಾಗಿ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ವಿರುದ್ಧ ಆರೋಪ ಮಾಡಿರುವ ಸಿದ್ದರಾಮಯ್ಯ ಕೂಡಲೇ ಕ್ಷಮೆ ಯಾಚಿಸಬೇಕೆಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಆಗ್ರಹಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಆನಂದ್ ಸಿಂಗ್ ರಾಜೀನಾಮೆ ಹಿಂದೆ ಮೋದಿ, ಅಮಿತ್ ಶಾ ಅವರ ಕೈವಾಡವಿದೆ ಎಂಬ ಸಿದ್ದರಾಮಯ್ಯನವರ ಆರೋಪ ಸರಿಯಲ್ಲ. ಸರ್ಕಾರವನ್ನು ಬೀಳಿಸಲು ಕಾಂಗ್ರೆಸ್, ಜೆಡಿಎಸ್ನ ಶಾಸಕರು ತುದಿಗಾಲಲ್ಲಿ ನಿಂತಿರುವಾಗ ಮೋದಿ, ಅಮಿತ್ ಶಾ ಅವರು ಯಾಕೆ ಬೇಕು ಎಂದು ಪ್ರಶ್ನಿಸಿದರು.
ಏಕೆ ದೂರು ನೀಡಲಿಲ್ಲ?: ಬಿಜೆಪಿಯವರು 30, 40 ಕೋಟಿ ರೂ.ಕೊಡಲು ಬಂದಿದ್ದರು ಎಂದು ಜೆಡಿಎಸ್ ಶಾಸಕ ಮಹದೇವ್ ಹೇಳಿದ್ದಾರೆ. ದೇಶದಲ್ಲಿ 11 ಕೋಟಿ ಬಿಜೆಪಿ ಸದಸ್ಯರಿದ್ದು, ಯಾರು ಹಣ ನೀಡಿದರು ಎಂಬುದನ್ನು ಮಹದೇವ್ ತಿಳಿಸಬೇಕು. ಅವರ ಹೇಳಿಕೆ ಸತ್ಯವಾಗಿದ್ದರೆ ಅಂದೇ ಏಕೆ ಅವರು ದೂರು ನೀಡಲಿಲ್ಲ ಎಂದು ಪ್ರಶ್ನಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್
LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ ವ್ಯಂಗ್ಯ
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ