ಕನ್ನಡದಲ್ಲಿ ಗ್ರಾಮೀಣ ಬ್ಯಾಂಕಿಂಗ್‌ ಪರೀಕ್ಷೆ


Team Udayavani, Jul 5, 2019, 5:01 AM IST

nirmala

ಹೊಸದಿಲ್ಲಿ: ಬ್ಯಾಂಕಿಂಗ್‌ ಪರೀಕ್ಷೆ ತೆಗೆದುಕೊಳ್ಳುವವರಿಗೊಂದು ಸಿಹಿ ಸುದ್ದಿ. ಶೀಘ್ರದಲ್ಲೇ ಕನ್ನಡಿಗರು, ಕನ್ನಡದಲ್ಲೇ ಬ್ಯಾಂಕ್‌ಗಳ ಸಿಬಂದಿ ನೇಮಕಾತಿ ಪರೀಕ್ಷೆ ಬರೆಯಬಹುದು. ಕರ್ನಾಟಕ ಸರಕಾರದ ಬಹುದಿನಗಳ ಬೇಡಿಕೆಗೆ ಕೇಂದ್ರ ಸರಕಾರ ಕಡೆಗೂ ಒಪ್ಪಿಗೆ ನೀಡಿದೆ.

ಈವರೆಗೆ ಕೇವಲ ಇಂಗ್ಲಿಷ್‌ ಮತ್ತು ಹಿಂದಿ ಭಾಷೆಗಳಲ್ಲಿ ಮಾತ್ರ ನಡೆಸಲಾಗುತ್ತಿದ್ದ ಬ್ಯಾಂಕ್‌ಗಳ ಸಿಬಂದಿ ನೇಮಕಾತಿ ಪರೀಕ್ಷೆಗಳನ್ನು ಇನ್ನು ಮುಂದೆ ಕನ್ನಡ ಸಹಿತ 13 ಪ್ರಾಂತೀಯ ಭಾಷೆಗಳಲ್ಲಿ ನಡೆಸುವುದಾಗಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಲೋಕಸಭೆಯಲ್ಲಿ ಗುರುವಾರ ಘೋಷಿಸಿದರು.

ವಿವಿಧ ರಾಜ್ಯಗಳಲ್ಲಿನ ಪ್ರಾಂತೀಯ ಹಾಗೂ ಗ್ರಾಮೀಣ ಬ್ಯಾಂಕ್‌ (ಆರ್‌ಆರ್‌ಬಿ)ಗಳಲ್ಲಿನ ಅಧಿಕಾರಿಗಳು (ಶ್ರೇಣಿ-1) ಹಾಗೂ ಕಚೇರಿಯ ಸಹಾಯಕ ಸಿಬಂದಿಯ ನೇರ ನೇಮಕಾತಿ ಪರೀಕ್ಷೆಗಳನ್ನು ಆಯಾ ಪ್ರಾದೇಶಿಕ ಭಾಷೆಗಳಲ್ಲಿ ನಡೆಸಬೇಕು ಎಂಬುದು ಕರ್ನಾಟಕ ಸಹಿತ ಹಲವಾರು ರಾಜ್ಯ ಸರಕಾರಗಳ ಬೇಡಿಕೆಯಾಗಿತ್ತು.

ಇತ್ತೀಚೆಗಷ್ಟೇ ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಸಂಸದರಾದ ತೇಜಸ್ವಿ ಸೂರ್ಯ ಮತ್ತು ಚಂದ್ರಶೇಖರ್‌, ಬ್ಯಾಂಕಿಂಗ್‌ ಪರೀಕ್ಷೆಗಳಲ್ಲಿ ಆಗುತ್ತಿರುವ ಸಮಸ್ಯೆಗಳ ಬಗ್ಗೆ ಪ್ರಸ್ತಾವಿಸಿದ್ದರು. ಆಗ ಉತ್ತರಿಸಿದ್ದ ನಿರ್ಮಲಾ ಸೀತಾರಾಮನ್‌, ಈ ಬಗ್ಗೆ ಹಲವಾರು ಸಂಸದರಿಂದ ಮನವಿಗಳು ಬಂದಿವೆ ಎಂದು ಹೇಳಿದ್ದರು.

ಇದೇ ವಿಚಾರವಾಗಿ ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಸ್ವಯಂ ಪ್ರೇರಿತವಾಗಿ ಉತ್ತರಿಸಿದ ಸಚಿವರು, ಪ್ರಾಂತೀಯ ಭಾಷೆಗಳನ್ನು ನಿರರ್ಗಳವಾಗಿ ಮಾತನಾಡುವ ಗ್ರಾಮೀಣ ಅಭ್ಯರ್ಥಿಗಳಿಗೆ ಪ್ರಾದೇಶಿಕ ಬ್ಯಾಂಕ್‌ಗಳಲ್ಲಿ ಉದ್ಯೋಗ ಸಂಪಾದಿಸುವ ಅವಕಾಶಗಳನ್ನು ಹೆಚ್ಚಿಸಲಾಗಿದೆ ಎಂದು ಹೇಳಿದರು.

ಸೌಲಭ್ಯ ವಿಸ್ತರಣೆಗೆ ಆಗ್ರಹ

ವಿತ್ತ ಸಚಿವರ ಘೋಷಣೆಯನ್ನು ಸ್ವಾಗತಿಸಿದ ರಾಜ್ಯಸಭೆ ಸಂಸದ ಎಲ್. ಹನುಮಂತಯ್ಯ, ಪ್ರಾದೇಶಿಕ ಭಾಷೆಗಳಲ್ಲಿ ಪರೀಕ್ಷೆ ಬರೆಯುವ ಅವಕಾಶ, ರಾಷ್ಟ್ರೀಯ ಬ್ಯಾಂಕ್‌ಗಳ ಸಿಬಂದಿ ನೇಮಕಾತಿಗೂ ಅನ್ವಯವಾಗುವಂತಾಗಲಿ ಎಂದು ಆಶಿಸಿದರು.

ಗಡುವು ಮುಗಿದ ದಿನವೇ ಘೋಷಣೆ!

ಆರ್‌ಆರ್‌ಬಿ ನೇಮಕಾತಿ ಪರೀಕ್ಷೆಗಳನ್ನು ನಡೆಸುವ ಜವಾಬ್ದಾರಿಯನ್ನು ಬ್ಯಾಂಕಿಂಗ್‌ ಪರ್ಸನಲ್ ಸೆಲೆಕ್ಷನ್‌ (ಐಬಿಪಿಎಸ್‌) ಹೊತ್ತಿದೆ. ಪ್ರಸಕ್ತ ವರ್ಷದಲ್ಲಿ ಗ್ರಾಮೀಣ ಬ್ಯಾಂಕ್‌ಗಳ ಸಿಬಂದಿ ನೇಮಕಾತಿಗೆ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಜು. 4ರಂದು ಕೊನೆಯ ದಿನವಾಗಿತ್ತು. ಇದೇ ದಿನ ವಿತ್ತ ಸಚಿವರು 13 ಭಾಷೆಗಳಲ್ಲಿ ಪರೀಕ್ಷೆ ನಡೆಸಲು ಒಪ್ಪಿಗೆ ಘೋಷಿಸಿದ್ದಾರೆ. ಹೀಗಾಗಿ ಈ ವರ್ಷ ನಡೆಯುತ್ತದೆಯೋ ಅಥವಾ ಮುಂದಿನ ವರ್ಷವೋ ಎಂಬ ಬಗ್ಗೆ ಖಾತ್ರಿಯಾಗಿಲ್ಲ. ಒಂದು ವೇಳೆ ಐಬಿಪಿಎಸ್‌ ಎಲ್ಲ ಸಿದ್ಧತೆ ಮಾಡಿಕೊಂಡರೆ ಈ ವರ್ಷ ನಡೆಸಬಹುದು. ಈಗಾಗಲೇ ಪ್ರಕಟಿಸಿರುವಂತೆ ಈ ವರ್ಷದ ಪರೀಕ್ಷೆಗಳು ಆ. 3, 4, 11, 17, 18ರಂದು ನಡೆಯಲಿವೆ.
ಹೊಸ ಭಾಷೆಗಳು ಯಾವುವು?

ಕನ್ನಡ, ತೆಲುಗು, ತಮಿಳು, ಬಂಗಾಲಿ, ಅಸ್ಸಾಮಿ, ಗುಜರಾತಿ, ಕೊಂಕಣಿ, ಮಲಯಾಳ, ಮಣಿಪುರಿ, ಮರಾಠಿ, ಒರಿಯಾ, ಪಂಜಾಬಿ ಹಾಗೂ ಉರ್ದು. ಹಾಗೆಯೇ ಇಂಗ್ಲಿಷ್‌ ಮತ್ತು ಹಿಂದಿ ಭಾಷೆಯಲ್ಲೂ ಪರೀಕ್ಷೆಗಳು ಮುಂದುವರಿಯಲಿವೆ.
ಎಲ್ಲರ ಪ್ರಯತ್ನಕ್ಕೆ ಫ‌ಲ ದೊರಕಿದ್ದು, ಕನ್ನಡ ಭಾಷೆಗೆ ಜಯ ಸಿಕ್ಕಿದೆ. ಇದಕ್ಕಾಗಿ ನಾಡಿನ ಸಮಸ್ತ ಜನರ ಪರವಾಗಿ ಪ್ರಧಾನಿ ಹಾಗೂ ಕೇಂದ್ರ ಹಣಕಾಸು ಸಚಿವರಿಗೆ ಅಭಿನಂದನೆ ಸಲ್ಲಿಸಲಾಗುವುದು.
– ಡಿ.ವಿ. ಸದಾನಂದ ಗೌಡ, ಕೇಂದ್ರ ಸಚಿವ
ಕೇಂದ್ರದ ನಿರ್ಧಾರ ಸ್ವಾಗತಿಸುತ್ತೇನೆ. ಸ್ಥಳೀಯ ಬ್ಯಾಂಕ್‌ಗಳಿಗೆ ನೇಮಕಾತಿಗಾಗಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸ್ಥಳೀಯ ಭಾಷೆಯನ್ನು 1ರಿಂದ 10ನೇ ತರಗತಿಯವರೆಗೆ ಕಡ್ಡಾಯವಾಗಿ ಓದಿರಲೇಬೇಕೆಂಬ 2014ರ ನಿಯಮ ಹಿಂಪಡೆದರೆ ಕನ್ನಡಿಗರಿಗೆ ಇನ್ನಷ್ಟು ಅನುಕೂಲವಾಗುತ್ತದೆ.
– ಎಚ್.ಡಿ. ಕುಮಾರಸ್ವಾಮಿ, ಮುಖ್ಯಮಂತ್ರಿ

ಟಾಪ್ ನ್ಯೂಸ್

1-wqqewqeq

Hubli; ಜನರಲ್ಲಿ ಪೊಲೀಸರ ಬಗ್ಗೆ ನಂಬಿಕೆ ಹೋಗಿದೆ: ಎಡಿಜಿಪಿ ಹಿತೇಂದ್ರ

1-qweeqw

Kundapura; ತಾಯಿಯ ಶವದೊಂದಿಗೆ 72 ಗಂಟೆ ಕಳೆದಿದ್ದ ಪುತ್ರಿಯೂ ವಿಧಿವಶ!

Breach Of Privacy….; ಐಪಿಎಲ್ ಪ್ರಸಾರಕರ ವಿರುದ್ಧ ರೇಗಾಡಿದ ರೋಹಿತ್ ಶರ್ಮಾ

Breach Of Privacy….; ಐಪಿಎಲ್ ಪ್ರಸಾರಕರ ವಿರುದ್ಧ ರೇಗಾಡಿದ ರೋಹಿತ್ ಶರ್ಮಾ

13-doctor

Health: ಸದಾ ಎಚ್ಚರದಿಂದಿರಿ: ನಿಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಿ

Basavakalyana; ಬ್ಯಾಂಕ್ ಗೆ ಜಮೆ ಮಾಡಲು ತಂದಿದ್ದ 1.37 ಲಕ್ಷ ರೂ‌ ಎಗರಿಸಿದ ಖದೀಮ

Basavakalyana; ಬ್ಯಾಂಕ್ ಗೆ ಜಮೆ ಮಾಡಲು ತಂದಿದ್ದ 1.37 ಲಕ್ಷ ರೂ‌ ಎಗರಿಸಿದ ಖದೀಮ

12-

Heat Weather: ಹಬೆಯಾಡುತ್ತಿರುವ ವಸುಂಧರೆ

11-candle

UV Fusion: ಆಯಸ್ಸು ಅಳಿಯುವ ಮುನ್ನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14-panaji

Panaji: ಅಪಾಯಕಾರಿ ಮರ ಕಡಿಯಲು ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಸೂಚನೆ

Election; ಮೋದಿ ನೇತೃತ್ವದ ‘ನವ ಭಾರತ’ಕ್ಕೆ ಮದರಸಾಗಳ ಅಗತ್ಯವಿಲ್ಲ: ಹಿಮಂತ ಬಿಸ್ವಾ ಶರ್ಮಾ

Election; ಮೋದಿ ನೇತೃತ್ವದ ‘ನವ ಭಾರತ’ಕ್ಕೆ ಮದರಸಾಗಳ ಅಗತ್ಯವಿಲ್ಲ: ಹಿಮಂತ ಬಿಸ್ವಾ ಶರ್ಮಾ

Air India Express ವಿಮಾನದ ಇಂಜಿನ್ ನಲ್ಲಿ ಬೆಂಕಿ; ಬೆಂಗಳೂರಿನಲ್ಲಿ ತುರ್ತು ಭೂಸ್ಪರ್ಶ

Air India Express ವಿಮಾನದ ಇಂಜಿನ್ ನಲ್ಲಿ ಬೆಂಕಿ; ಬೆಂಗಳೂರಿನಲ್ಲಿ ತುರ್ತು ಭೂಸ್ಪರ್ಶ

Man finds Rs 9,900 crore in his bank account

Bhadohi; ಯು.ಪಿ ವ್ಯಕ್ತಿಯ ಖಾತೆಗೆ ಬರೋಬ್ಬರಿ 9,900 ಕೋಟಿ ರೂ ಜಮೆ! ಆಗಿದ್ದೇನು?

twin terror attacks in Jammu and Kashmir

Jammu and Kashmir ಉಗ್ರ ದಾಳಿ; ಮಾಜಿ ಸರಪಂಚ್ ಸಾವು, ಇಬ್ಬರು ಪ್ರವಾಸಿಗರಿಗೆ ಗಾಯ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

1-wqqewqeq

Hubli; ಜನರಲ್ಲಿ ಪೊಲೀಸರ ಬಗ್ಗೆ ನಂಬಿಕೆ ಹೋಗಿದೆ: ಎಡಿಜಿಪಿ ಹಿತೇಂದ್ರ

1-qweeqw

Kundapura; ತಾಯಿಯ ಶವದೊಂದಿಗೆ 72 ಗಂಟೆ ಕಳೆದಿದ್ದ ಪುತ್ರಿಯೂ ವಿಧಿವಶ!

1-aaa

Kaup: ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

Davanagere; ಭಾರೀ ಮಳೆಗೆ ನೆಲಕಚ್ಚಿದ ಭತ್ತದ ಬೆಳೆ

Davanagere; ಭಾರೀ ಮಳೆಗೆ ನೆಲಕಚ್ಚಿದ ಭತ್ತದ ಬೆಳೆ

Breach Of Privacy….; ಐಪಿಎಲ್ ಪ್ರಸಾರಕರ ವಿರುದ್ಧ ರೇಗಾಡಿದ ರೋಹಿತ್ ಶರ್ಮಾ

Breach Of Privacy….; ಐಪಿಎಲ್ ಪ್ರಸಾರಕರ ವಿರುದ್ಧ ರೇಗಾಡಿದ ರೋಹಿತ್ ಶರ್ಮಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.