ಖರ್ಗೆ ಅಧ್ಯಕ್ಷರಾದಲ್ಲಿ ಅನುಕೂಲ
Team Udayavani, Jul 5, 2019, 5:12 AM IST
ದಾವಣಗೆರೆ: ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷರಾಗಿ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ನೇಮಕವಾದಲ್ಲಿ ಪಕ್ಷದ ಸಂಘಟನೆ ಹಾಗೂ ಬಲವರ್ಧನೆಗೆ ಹೆಚ್ಚು ಅನುಕೂಲವಾಗಲಿದೆ ಎಂದು ಕಾಂಗ್ರೆಸ್ ಸತ್ಯಶೋಧನಾ ಸಮಿತಿ ಮನವಿ ಮಾಡಿದೆ.
ಲೋಕಸಭಾ ಚುನಾವಣೆಯ ಸೋಲಿನ ಹಿನ್ನೆಲೆಯಲ್ಲಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ನೈತಿಕ ಹೊಣೆ ಹೊತ್ತು ರಾಹುಲ್ ಗಾಂಧಿ ರಾಜೀನಾಮೆ ನೀಡಿದ್ದಾರೆ. ಪಕ್ಷದ ಹಿತದೃಷ್ಟಿಯಿಂದ ಗಾಂಧಿ ಕುಟುಂಬದವರೇ ಅಧ್ಯಕ್ಷರಾಗಿ ಇರಬೇಕೆಂಬುದು ಎಲ್ಲರ ಒತ್ತಾಸೆ ಆಗಿತ್ತು. ಎಲ್ಲಾ ಮುಖಂಡರು ಮನವೊಲಿಸಿದರೂ ಅವರು ತಮ್ಮ ನಿರ್ಧಾರ ಬದಲಿಸಲಿಲ್ಲ. ಹಾಗಾಗಿ ಈಗ ಆ ಸ್ಥಾನಕ್ಕೆ ಹಲವು ಮುಖಂಡರ ಹೆಸರು ಕೇಳಿಬರುತ್ತಿವೆ. ಅದರಲ್ಲಿ ಮುಖ್ಯವಾಗಿ ಖರ್ಗೆ, ಸುಶಿಲ್ಕುಮಾರ್ ಶಿಂಧೆ, ಸಚಿನ್ ಪೈಲಟ್ ಹಾಗೂ ಇತರ ಹೆಸರು ಪ್ರಸ್ತಾಪ ವಾಗಿವೆ. ಮಲ್ಲಿಕಾರ್ಜುನ ಖರ್ಗೆ ಆಯ್ಕೆ ಮಾಡಿ ದಲ್ಲಿ ಪಕ್ಷದ ಸಂಘಟನೆಗೆ ಸಹಕಾರಿಯಾಗಲಿದೆ ಎಂದು ಸತ್ಯಶೋಧನಾ ಸಮಿತಿಯ ಸಂಚಾಲಕ ಬಸವರಾಜ ರಾಯರಡ್ಡಿ, ಸದಸ್ಯರಾದ ವಿ.ಆರ್.ಸುದರ್ಶನ್, ಧ್ರುವ ನಾರಾಯಣ ಹಾಗೂ ವೀರಣ್ಣ ಮತ್ತಿಕಟ್ಟೆ ಗುರುವಾರ ಪತ್ರಿಕಾಗೋಷ್ಠಿ ಯಲ್ಲಿ ತಮ್ಮ ಆಶಯ ವ್ಯಕ್ತಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ
Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್ ತೀರ್ಪು