ಕಸ ಚೆಲ್ಲಿದರೆ 5 ಸಾವಿರವರೆಗೆ ದಂಡ ವಿಧಿಸಿ

ಮಾಲಿಕರಿಗೆ ಎಚ್ಚರಿಕೆ, ಪುರಸಭೆ ಅಧಿಕಾರಿಗಳಿಗೆ ಶಾಸಕ ನಾರಾಯಣಸ್ವಾಮಿ ಖಡಕ್‌ ಸೂಚನೆ

Team Udayavani, Jul 5, 2019, 11:18 AM IST

kolar-tdy-2..

ಬಂಗಾರಪೇಟೆ ಪಟ್ಟಣದ ಮುಖ್ಯ ಬಜಾರ್‌ ರಸ್ತೆಯಲ್ಲಿ ಶಾಸಕ ಎಸ್‌.ಎನ್‌.ನಾರಾಯಣಸ್ವಾಮಿ ಪರಿಶೀಲನೆ ನಡೆಸಿದರು. ಪುರಸಭೆ ಮಾಜಿ ಅಧ್ಯಕ್ಷ ಕೆ.ಚಂದ್ರಾರೆಡ್ಡಿ ಅಂಗಡಿ ಮಾಲಿಕರನ್ನು ತೀವ್ರ ತರಾಟೆಗೆ ತೆಗೆದುಕೊಂಡರು.

ಬಂಗಾರಪೇಟೆ: ಪಟ್ಟಣದ ಬಜಾರ್‌ ರಸ್ತೆಯಲ್ಲಿರುವ ಅಂಗಡಿಗಳ ಮಾಲಿಕರಿಗೆ ರಸ್ತೆಗೆ ಕಸ ಸುರಿಯದಂತೆ ಹಲವು ಬಾರಿ ಎಚ್ಚರಿಕೆ ನೀಡಿದರೂ, ಮಾಲಿಕರು ನಿಯಮ ಪಾಲಿಸುತ್ತಿಲ್ಲ. ಇದು ಮುಂದುವರಿದರೆ ಅಂತಹವರ ವಿರುದ್ಧ ಸೂಕ್ತ ಕ್ರಮ ಮತ್ತು ದಂಡ ವಿಧಿಸಲಾಗುವುದು ಎಂದು ಶಾಸಕ ಎಸ್‌.ಎನ್‌. ನಾರಾಯಣಸ್ವಾಮಿ ಸೂಚನೆ ನೀಡಿದರು.

ಗುರುವಾರ ಬೆಳಗ್ಗೆ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಕೆ.ಚಂದ್ರಾರೆಡ್ಡಿರೊಂದಿಗೆ ಬಜಾರ್‌ ರಸ್ತೆಗೆ ಆಗಮಿಸಿದ ಶಾಸಕರು, ಪಟ್ಟಣದ ಮುಖ್ಯ ಬಜಾರ್‌ ರಸ್ತೆಯಲ್ಲಿ ಪ್ರತಿಯೊಂದು ಅಂಗಡಿಗಳ ಮಾಲಿಕರು ತಮ್ಮ ಅಂಗಡಿಯೊಳಗಿನ ಕಸ ರಸ್ತೆ ಹಾಕಿದ್ದಾರೆ. ಪ್ರತಿ ದಿನ ಪುರಸಭೆಯಿಂದ ಕಸವನ್ನು ತೆಗೆದುಕೊಂಡು ಹೋಗಲು ವಾಹನ ಬರುತ್ತಿದ್ದರೂ ಎಚ್ಚೆತ್ತುಕೊಳ್ಳದೇ ರಸ್ತೆಗೆ ಕಸ ಹಾಕುತ್ತಿರುವುದಕ್ಕೆ ತೀವ್ರ ಗರಂ ಆಗಿದ್ದರು.

ಮುಖ್ಯ ಬಜಾರ್‌ ರಸ್ತೆಯ ಉದ್ದಕ್ಕೂ ಎಲ್ಲಾ ಅಂಗಡಿಗಳೇ ಇದ್ದು, ಪ್ರತಿಯೊಂದು ಅಂಗಡಿಯ ಮುಂದೆ ಕಸ ಸುರಿದರೆ ತುಂಬಲು ಪೌರಕಾರ್ಮಿಕರಿಗಾಗಿ ಕಾಯಬೇಕು. ಬದಲಿಗೆ ಡಬ್ಬಿಯನ್ನು ಇಟ್ಟುಕೊಂಡು ಪುರಸಭೆ ವಾಹನಕ್ಕೆ ಸುರಿದರೆ ಸ್ವಚ್ಛವೂ ಉಳಿಯುತ್ತದೆ. ಹೀಗೆ ಬೇಜವಾಬ್ದಾರಿಯಿಂದ ನಡೆದುಕೊಳ್ಳಬಾರದು ಎಂದು ಅಸಮಧಾನ ವ್ಯಕ್ತಪಡಿಸಿದರು.

ಮುಖ್ಯವಾಗಿ ಟೀ ಅಂಗಡಿಗಳಲ್ಲಿ ಟೀ ಕುಡಿದ ಬಳಿಕ ಗ್ಲಾಸ್‌ಗಳನ್ನು ರಸ್ತೆಗೆ ಹಾಕದೇ, ಒಂದು ಕಾಟನ್‌ ಬಾಕ್ಸ್‌ ಇಟ್ಟು ಅದರಲ್ಲಿ ಹಾಕಬೇಕು. ಪುರಸಭೆ ಅಧಿಕಾರಿ ಸಿಬ್ಬಂದಿ ಎಷ್ಟೇ ಅರಿವು ಮೂಡಿಸದರೂ ಜನರು ಹಾಗೂ ಅಂಗಡಿಗಳ ಮಾಲಿಕರು ಎಚ್ಚೆತ್ತುಕೊಂಡಿಲ್ಲ. ಇನ್ನು ಮುಂದೆ ಕಸವನ್ನು ಬೇಕಾಬಿಟ್ಟಿ ಕಸ ರಸ್ತೆಗೆ ಸುರಿದರೆ ಅಂತಹ ಅಂಗಡಿಗಳ ಒಳಗೆ ಕಸ ಹಾಕಿ. ತಮ್ಮ ಮನೆಯಲ್ಲಿ ಈ ರೀತಿ ಕಸ ಹಾಕಿಕೊಳ್ಳುತ್ತಾರೆಯೇ ? ಇನ್ನು ಮುಂದೆ ಪುರಸಭೆ ವ್ಯಾಪ್ತಿಯ ರಸ್ತೆಯಲ್ಲಿ ಕಸ ಹಾಕುವಂತಿಲ್ಲ, ಮನೆಗಳು, ಅಂಗಡಿಗಳು, ಹೋಟೆಲ್ಗಳು, ತರಕಾರಿ ಅಂಗಡಿಗಳು ಸೇರಿದಂತೆ ರಸ್ತೆಗೆ ಕಸ ಸುರಿದರೆ 5 ಸಾವಿರವರೆಗೂ ದಂಡ ವಿಧಿಸಿ ಎಂದು ಪುರಸಭೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಪಟ್ಟಣದ ಎಲ್ಲಾ ರಸ್ತೆಗಳಲ್ಲಿ ಅನಧಿಕೃತ ಶೀಟ್‌ಗಳನ್ನು ಹಾಕಿರುವುದರಿಂದ ಪುರಸಭೆ ಅಧಿಕಾರಿ ಸಿಬ್ಬಂದಿ ತೆರವುಗೊಳಿಸಲಿದ್ದಾರೆ. ಇದಕ್ಕೆ ಸಾರ್ವಜನಿಕರು ಸಹಕಾರ ನೀಡುವಂತೆ ಹೇಳಿದರು.

ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಹಾಗೂ ಪುರಸಭೆ ಸದಸ್ಯ ಕೆ.ಚಂದ್ರಾರೆಡ್ಡಿ ಮಾತನಾಡಿ, ಪಟ್ಟಣದಲ್ಲಿ ಪ್ರತಿ ಯೊಂದು ರಸ್ತೆಯ ಉದ್ದಕ್ಕೂ ಅಂಗಡಿಗಳ ಮುಂದೆ ಅನಧಿಕೃತವಾಗಿ ಅಳವಡಿಸಿಕೊಂಡಿರುವ ಕ್ರಮ ಶೀಟ್‌ಗಳನ್ನು ಹಾಗೂ ಅಂಗಡಿಗಳ ಮುಂದೆ ರಸ್ತೆಗೆ ಹೊಂದಿಕೊಂಡಂತೆ ಅಕ್ರಮವಾಗಿ ನಿರ್ಮಾಣ ಮಾಡಿಕೊಂಡಿರುವ ಅಂಗಡಿಗಳನ್ನು ಸಂಪೂರ್ಣವಾಗಿ ತೆಗೆಯಬೇಕು. ಒತ್ತಡಕ್ಕೂ ಮಣಿಯದೇ ನೇರವಾಗಿ ತೆರವುಗೊಳಿಸಿ ಪಟ್ಟಣವನ್ನು ಪ್ರಾಫಿಕ್‌ ಹಾಗೂ ಕಸ ಮುಕ್ತ ನಗರವನ್ನಾಗಿ ಮಾಡಲು ಎಲ್ಲರೂ ಸಹಕಾರ ನೀಡಬೇಕಾಗಿದೆ ಎಂದರು. ಪುರಸಭೆ ಸದಸ್ಯ ಪ್ರಶಾಂತ್‌, ಆರೋಗ್ಯ ನಿರೀಕ್ಷಕ ಗೋವಿಂದ ರಾಜು, ಪೌರಕಾರ್ಮಿಕರು ಸಿಬ್ಬಂದಿ ಹಾಜರಿದ್ದರು.

ಟಾಪ್ ನ್ಯೂಸ್

1-jagan

Jagan ಮೋದಿಗೆ ದೂರು, ಸುಪ್ರೀಂ ಮೊರೆ: ನಾಯ್ಡು ವಿರುದ್ಧ ಕ್ರಮ ಏಕೆ ಕೈಗೊಳ್ಳಬಾರದು?

congress

Maharashtra ಮುಂದಿನ ಸಿಎಂ ಕಾಂಗ್ರೆಸ್ಸಿಗ: ಬಾಳಾ ಸಾಹೇಬ್‌ ಥೋರಾಟ್‌

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

gold 2

FATF; ಭಾರತದ ಚಿನ್ನೋದ್ಯಮ ಮೂಲಕ ಉಗ್ರರಿಗೆ ನೆರವು

1-uu

‘U-WIN’ ಪೋರ್ಟ್‌ಲ್‌ಗೆ ಅಕ್ಟೋಬರ್‌ನಲ್ಲಿ ಚಾಲನೆ

MASIDI

Fiscal Crisis: ಅಯೋಧ್ಯೆ ಮಸೀದಿ ಟ್ರಸ್ಟ್‌ ಸಮಿತಿಗಳ ವಿಸರ್ಜನೆ

ಭಕ್ತರ ನಂಬಿಕೆಗೆ ದ್ರೋಹ ಬಗೆದವರಿಗೆ ಶಿಕ್ಷೆಯಾಗಲಿ

ಭಕ್ತರ ನಂಬಿಕೆಗೆ ದ್ರೋಹ ಬಗೆದವರಿಗೆ ಶಿಕ್ಷೆಯಾಗಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kolar: ಹಕ್ಕಿಪಿಕ್ಕಿ ಕಾಲೋನಿ ಮಕ್ಕಳಿಗೆ ಅಕ್ಕಿ,ಮೊಟ್ಟೆ ಕೊಟ್ಟಿಲ್ಲ!

Kolar: ಹಕ್ಕಿಪಿಕ್ಕಿ ಕಾಲೋನಿ ಮಕ್ಕಳಿಗೆ ಅಕ್ಕಿ,ಮೊಟ್ಟೆ ಕೊಟ್ಟಿಲ್ಲ!

Kolar ಗುಂಪು ಘರ್ಷಣೆ: ಮಾರಕಾಸ್ತ್ರಗಳಿಂದ ಹಲ್ಲೆ

Kolar ಗುಂಪು ಘರ್ಷಣೆ: ಮಾರಕಾಸ್ತ್ರಗಳಿಂದ ಹಲ್ಲೆ

10

Lok Adalat: ವಿಚ್ಛೇದನಕ್ಕೆ ಬಂದಿದ್ದ ದಂಪತಿ, ಅದಾಲತ್‌ನಲ್ಲಿ ಒಂದಾದರು!

Kolar: ಜಿಲ್ಲೆಯಲ್ಲಿ ದಿಢೀರ್‌ ಸದ್ದು ಮಾಡಿದ ಡಿಜೆ!

Kolar: ಜಿಲ್ಲೆಯಲ್ಲಿ ದಿಢೀರ್‌ ಸದ್ದು ಮಾಡಿದ ಡಿಜೆ!

High-Court

Kolar: ಬಾಲಕಿಯರ ಖಾಸಗಿ ಫೋಟೋ ತೆಗೆದ ಶಿಕ್ಷಕ; ಪ್ರಕರಣ ರದ್ದುಪಡಿಸಲು ಹೈಕೋರ್ಟ್‌ ನಕಾರ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1-jagan

Jagan ಮೋದಿಗೆ ದೂರು, ಸುಪ್ರೀಂ ಮೊರೆ: ನಾಯ್ಡು ವಿರುದ್ಧ ಕ್ರಮ ಏಕೆ ಕೈಗೊಳ್ಳಬಾರದು?

Mysuru Dasara ಉದ್ಘಾಟಕರಾಗಿ ಪ್ರೊ| ಹಂಪನಾ: ಮೈಸೂರಿನಲ್ಲಿ ಮುಖ್ಯಮಂತ್ರಿ ಘೋಷಣೆ

Mysuru Dasara ಉದ್ಘಾಟಕರಾಗಿ ಪ್ರೊ| ಹಂಪನಾ: ಮೈಸೂರಿನಲ್ಲಿ ಮುಖ್ಯಮಂತ್ರಿ ಘೋಷಣೆ

congress

Maharashtra ಮುಂದಿನ ಸಿಎಂ ಕಾಂಗ್ರೆಸ್ಸಿಗ: ಬಾಳಾ ಸಾಹೇಬ್‌ ಥೋರಾಟ್‌

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

gold 2

FATF; ಭಾರತದ ಚಿನ್ನೋದ್ಯಮ ಮೂಲಕ ಉಗ್ರರಿಗೆ ನೆರವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.