ಸ್ವಯಂ ಪ್ರೇರಿತ ರಕ್ತದಾನ ಶಿಬಿರ
Team Udayavani, Jul 5, 2019, 2:31 PM IST
ಹಳಿಯಾಳ: ಇಐಡಿ ಪ್ಯಾರಿ ಸಕ್ಕರೆ ಕಾರ್ಖಾನೆಯಲ್ಲಿ ನಡೆದ ಸ್ವಯಂ ಪ್ರೇರಿತ ರಕ್ತದಾನ ಶಿಬಿರದಲ್ಲಿ ಕಾರ್ಖಾನೆ ಸಿಬ್ಬಂದಿ ರಕ್ತದಾನ ಮಾಡಿದರು.
ಹಳಿಯಾಳ: ನಾವೆಲ್ಲರು ಒಂದೆ, ನಮ್ಮೆಲ್ಲರ ನರಗಳಲ್ಲಿ ಹರಿಯುತ್ತಿರುವ ರಕ್ತವು ಒಂದೆ. ಹೀಗಿರುವಾಗ ಯಾವುದೇ ವ್ಯಕ್ತಿ ಇನ್ನೊಬ್ಬರ ಜೀವ ಉಳಿಸಲು ಸ್ವಯಂ ಪ್ರೇರಿತನಾಗಿ ರಕ್ತದಾನ ಮಾಡಿದರೆ, ಮಾನವೀಯ ಸಮಾಜ ಕಾಣಲು ಸಾಧ್ಯ ಎಂದು ಹಳಿಯಾಳದ ಇಐಡಿ ಪ್ಯಾರಿ ಮುಖ್ಯಸ್ಥ ಜೆ. ವೆಂಕಟರಾವ್ ಅಭಿಪ್ರಾಯಪಟ್ಟರು.
ವಿ.ಆರ್. ದೇಶಪಾಂಡೆ ಮೆಮೋರಿಯಲ್ ಟ್ರಸ್ಟ್ನ ಸಂಸ್ಥಾಪಕರ ದಿನಾಚರಣೆ ಅಂಗವಾಗಿ ಪ್ಯಾರಿ ಸಕ್ಕರೆ ಕಾರ್ಖಾನೆಯಲ್ಲಿ ನಡೆದ ಸ್ವಯಂ ಪ್ರೇರಿತ ರಕ್ತ ದಾನ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.
ಬೆಳಗಾವಿ ಕೆಎಲ್ಇ ಬ್ಲಿಡ್ ಬ್ಯಾಂಕ್ ವೈದ್ಯರಾದ ಡಾ| ಬಸವರಾಜ ದೇವಗಿ ಮಾತನಾಡಿ ರಕ್ತದಾನದಿಂದ ಆಗುವ ಉಪಯೋಗಗಳು ಮತ್ತು ರಕ್ತ ದಾನಿಯ ಅರ್ಹತೆಗಳ ಬಗ್ಗೆ ತಿಳಿಸಿದರು.
ಶಿಬಿರದಲ್ಲಿ ಇಐಡಿ ಪ್ಯಾರಿ (ಇಂಡಿಯಾ), ಹಳಿಯಾಳದ 56 ಸಿಬ್ಬಂದಿ ರಕ್ತದಾನ ಮಾಡಿದರು.
ಡಾ| ಜೆ.ಎ.ಅತ್ತಾರ್, ಸಂಸ್ಥೆಯ ಯೋಜನಾ ಸಂಯೋಜಕ ವಿನಾಯಕ ಚವ್ಹಾಣ, ಪ್ರಧಾನ ವ್ಯವಸ್ಥಾಪಕ ರವೀಂದ್ರ ದೇಸಾಯಿ, ಸುನೀಲ ಅರಳಿಮಟ್ಟಿ, ಯೋಜನಾಧಿಕಾರಿ ಸಂತೋಷ ಪರೀಟ ಇದ್ದರು. ಕೆನರಾ ಬ್ಯಾಂಕ್ ದೇಶಪಾಂಡೆ ಆರ್ಸೆಟ್ ಸಂಸ್ಥೆ ಕ್ಷೇತ್ರಾಧಿಕಾರಿ ವಿಷ್ಣು ಮಡಿವಾಳ, ಸಚೀನ ಬೇಣಚೆಕರ್, ಸಂತೋಷ ಸಿದ್ನೇಕೊಪ್ಪ, ನಾರಾಯಣ ರಾಂದೇವಾಡಿ ಮೊದಲಾದವರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Horoscope: ಧೈರ್ಯ, ಸಾಹಸದ ಪ್ರವೃತ್ತಿ ಯಶಸ್ಸಿಗೆ ಪೂರಕ, ವ್ಯಾಪಾರಿಗಳಿಗೆ ನಿರೀಕ್ಷಿತ ಲಾಭ
Udupi ಇನ್ನೂ ನಡೆಯದ ಟೆಂಡರ್ ಪ್ರಕ್ರಿಯೆ; ರಾಜ್ಯದಲ್ಲಿ ಅಗ್ನಿಶಾಮಕ ವಾಹನ ಕೊರತೆ
Covishield Vaccine; ಹಾಕಿಸಿಕೊಂಡವರು ಐಸ್ಕ್ರೀಮ್ ತಿನ್ನಬಾರದಾ?
Supreme Court ಸಲಹೆ; ಹೊಂದಾಣಿಕೆಯು ಸುಖ ದಾಂಪತ್ಯದ ಅಡಿಪಾಯ
Parashurama Park 2 ವಾರದಲ್ಲಿ ಕ್ರಮ ಕೈಗೊಳ್ಳಲು ನಿರ್ಮಿತಿ ಕೇಂದ್ರಕ್ಕೆ ಹೈಕೋರ್ಟ್ ಸೂಚನೆ