ಖಾಸಗಿ ಬಸ್‌ ಸೇವೆ ಸಾಹಸದ ಕೆಲಸ

ಬಬಲೇಶ್ವರದಿಂದ ಬೆಂಗಳೂರಿಗೆ ಸಾರಿಗೆ ಸಂಪರ್ಕ

Team Udayavani, Jul 5, 2019, 3:53 PM IST

05-July-35

ವಿಜಯಪುರ: ಕಣಬೂರ ಗ್ರಾಮದಲ್ಲಿ ಬಬಲೇಶ್ವರ-ಬೆಂಗಳೂರು ಸುವಿಹಾರಿ ಖಾಸಗಿ ಬಸ್‌ ಸೇವೆಗೆ ಗೃಹ ಸಚಿವ ಎಂ.ಬಿ. ಪಾಟೀಲ ಚಾಲನೆ ನೀಡಿದರು.

ವಿಜಯಪುರ: ಪೈಪೋಟಿಯ ಇಂದಿನ ಯುಗದಲ್ಲಿ ಕಠಿಣ ಎನಿಸಿರುವ ಸಾರಿಗೆ ಉದ್ಯಮದಲ್ಲಿ ಗ್ರಾಮಾಂತರ ಪ್ರದೇಶದ ಯುವಕನೊಬ್ಬ ಲಕ್ಷಾಂತರ ರೂ. ಬಂಡವಾಳ ತೊಡಗಿಸಿ ಖಾಸಗಿ ಬಸ್‌ ಸಂಚಾರ ಆರಂಭಿಸಿರುವುದು ನಿಜಕ್ಕೂ ಸಾಹಸದ ಕೆಲಸ. ನನ್ನ ಕ್ಷೇತ್ರ ವ್ಯಾಪ್ತಿಯ ಗ್ರಾಮೀಣ ಭಾಗದಿಂದ ಯುವಕನೊಬ್ಬ ಬೆಂಗಳೂರಿಗೆ ಬಸ್‌ ಸೇವೆ ಆರಂಭಿಸಿರುವುದು ಈ ಭಾಗದ ಜನರಿಗೆ ಅನುಕೂಲ ಕಲ್ಪಿಸಿದೆ ಎಂದು ಗೃಹ ಸಚಿವ ಎಂ.ಬಿ.ಪಾಟೀಲ ಹೇಳಿದರು.

ಬಬಲೇಶ್ವರದಿಂದ ಬೆಂಗಳೂರಿಗೆ ನಿತ್ಯ ಸಂಚಾರಕ್ಕೆ ಆರಂಭಿಸಿರುವ ನೂತನ ಸುವಿಹಾರಿ ಬಸ್‌ಗಳಿಗೆ ಚಾಲನೆ ನೀಡಿ ಮಾತನಾಡಿದ ಅವರು, ಬಬಲೇಶ್ವರ ತಾಲೂಕಿನ ಕಣಬೂರ ಗ್ರಾಮದ ಯುವಮುಖಂಡ ರಾಜೇಸಾಬ ಮುಲ್ಲಾ ತಮ್ಮ ಸಾಯಿ ಟ್ರಾವೆಲ್ಸ್ ಮೂಲಕ ಬಬಲೇಶ್ವರ, ನಂದಿಶುಗರ್‌, ಗಲಗಲಿ, ಬೀಳಗಿ ಭಾಗದ ಪ್ರಯಾಣಿಕರು ಬೆಂಗಳೂರಿಗೆ ತಲುಪಲು ಅನುಕೂಲ ಕಲ್ಪಿಸಿದೆ ಎಂದರು.

ಸದರಿ ಬಸ್‌ಗಳು ಸಿದ್ಧಗೊಂಡು ಮೂರು ತಿಂಗಳಾಗಿದ್ದು, ನನ್ನಿಂದಲೇ ಉದ್ಘಾಟಿಸಬೇಕೆಂಬ ಹಠದಿಂದ ಈ ವರೆಗೆ ಕಾದಿದ್ದಾನೆ. ಇದರಿಂದ ಆತನಿಗೆ ಸುಮಾರು 1 ಲಕ್ಷ ರೂ. ನಷ್ಟವಾಗಿದ್ದು, ಈ ನಷ್ಟವನ್ನು ಭರಿಸಲು ನಾನು ವೈಯಕ್ತಿಕವಾಗಿ 2 ಲಕ್ಷ ರೂ. ನೆರವು ನೀಡುತ್ತಿದ್ದೇನೆ. ಬೆಂಗಳೂರಿನಲ್ಲಿ ಜಿಂದಾಲ್ ಭೂಮಿ ಹಂಚಿಕೆ ಉಪಸಮಿತಿ ಸಭೆ ಮುಂದೂಡಿದ್ದರಿಂದ ನನಗೆ ಬರಲು ಅನುಕೂಲವಾಯಿತು. ಹೀಗಾಗಿ ಇದೀಗ ನನ್ನ ಮತಕ್ಷೇತ್ರದ ಕಾರ್ಯಕರ್ತನ ಪ್ರೀತಿಗೆ ಮಣಿದು ನಾನಿಲ್ಲಿಗೆ ಬಂದು ಬಸ್‌ ಸೇವೆಗೆ ಚಾಲನೆ ನೀಡಿದ್ದಾಗಿ ಹೇಳಿದರು.

ನಂದಿ ಸಕ್ಕರೆ ಕಾರ್ಖಾನೆ ಈ ಭಾಗದ ರೈತರ ಜೀವನಾಡಿ. ಈ ಕಾರ್ಖಾನೆಗೆ ಕಬ್ಬು ಸಾಗಾಣಿಕೆಗೆ ಅನುಕೂಲವಾಗಲೆಂದೆ ಕಳೆದ ಅವಧಿಯಲ್ಲಿ ಬಬಲೇಶ್ವರದಿಂದ ಗಲಗಲಿ ವರೆಗೆ 50 ಕೋಟಿ ರೂ. ವೆಚ್ಚದಲ್ಲಿ ಹೆದ್ದಾರಿ ಮಾದರಿಯಲ್ಲಿ ರಸ್ತೆ ನಿರ್ಮಿಸಿದ್ದೇನೆ. ಬಸವನ ಬಾಗೇವಾಡಿ, ವಿಜಯಪುರ, ಬೀಳಗಿ, ಜಮಖಂಡಿ ತಾಲೂಕಿನ ರೈತರಿಗೆ ಅನುಕೂಲವಾಗಲು ಕೊರ್ತಿ-ಕೋಲ್ಹಾರ, ಗಲಗಲಿ ಬ್ಯಾರೆಜ್‌ ಎತ್ತರಿಸುವ ಕಾರ್ಯ ಆರಂಭವಾಗಿದೆ. ಇದರಿಂದ ಬೇಸಿಗೆಯಲ್ಲಿಯೂ ಈ ಭಾಗದಲ್ಲಿ ನೀರಿನ ಕೊರತೆಯಾಗುವದಿಲ್ಲ. ವಿಜಯಪುರ ನಗರಕ್ಕೂ ಸಹ ಕುಡಿಯುವ ನೀರು ವ್ಯವಸ್ಥೆ ಪ್ರತಿದಿನವೂ ಪೂರೈಸಲು ವ್ಯವಸ್ಥೆಯಾಗುತ್ತದೆ ಎಂದರು.

ಮರೆಗುದ್ದಿಯ ಗುರುಪಾದ ಶ್ರೀಗಳು, ಅಡವಿ ಸಿದ್ದೇಶ್ವರ ಶ್ರೀಗಳು, ರಾಚಯ್ಯ ಶ್ರೀಗಳು, ರಡ್ಡಿ ಸಹಕಾರಿ ಬ್ಯಾಂಕ್‌ ನಿರ್ದೇಶಕ ಎಚ್.ಎಸ್‌. ಕೋರಡ್ಡಿ, ನಂದಿ ಸಕ್ಕರೆ ಕಾರ್ಖಾನೆ ಅಧ್ಯಕ್ಷ ಶಶಿಕಾಂತಗೌಡ ಪಾಟಿಲ, ಕಬ್ಬು ಬೆಳೆಗಾರ ಮುಖಂಡ ಶಿವನಗೌಡ ಪಾಟೀಲ, ಬಸವನ ಬಾಗೇವಾಡಿ ಕ್ಷೇತ್ರದ ಅಪ್ಪುಗೌಡ ಪಾಟೀಲ ಮನಗೂಳಿ, ವಿ.ಎಸ್‌. ಪಾಟಿಲ, ಡಾ| ಕೆ.ಎಚ್. ಮುಂಬಾರೆಡ್ಡಿ ಇದ್ದರು.

ಟಾಪ್ ನ್ಯೂಸ್

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾಶ್ರೀ: ಮೇ 27ರವರೆಗೆ ನ್ಯಾಯಾಂಗ ಬಂಧನ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.