ಮಹಿಳೆಯರ ಸ್ವಾವಲಂಬಿ ಬದುಕಿಗೆ ಕುಟುಂಬಶ್ರೀ ಘಟಕಗಳು : ಕೆ.ಎನ್‌.ಕೃಷ್ಣ ಭಟ್‌


Team Udayavani, Jul 5, 2019, 4:06 PM IST

bdk

ಬದಿಯಡ್ಕ: ಮಹಿಳೆಯರು ಸ್ವಾವಲಂಬಿಯಾಗಿ ಬದುಕನ್ನು ಕಟ್ಟಿಕೊಳ್ಳಲು ಕುಟುಂಬಶ್ರೀ ಮೂಲಕ ಸಾಧ್ಯವಾಗಿದೆ. ಇಂತಹ ಸಂಘಟನೆಗಳ ಮೂಲಕ ಮನೆಯೊಳಗಿನ ಮಹಿಳೆಯರು ಹೊರಲೋಕವನ್ನು ಕಾಣಲು ಮತ್ತು ಇತರರೊಂದಿಗೆ ಬೆರೆಯಲು ಸಹಕಾರಿಯಾಗಿದೆ ಎಂದು ಬದಿಯಡ್ಕ ಗ್ರಾಮಪಂಚಾಯತ್‌ ಅಧ್ಯಕ್ಷ ಕೆ.ಎನ್‌.ಕೃಷ್ಣ ಭಟ್‌ ಅಭಿಪ್ರಾಯಪಟ್ಟರು.

ಬದಿಯಡ್ಕ ಗ್ರಾಮಪಂಚಾಯತ್‌ ಸಿ.ಡಿ.ಎಸ್‌. ವಾರ್ಷಿಕೋತ್ಸವ ವೇದಿಕೆ-2019ನ್ನು ಬದಿಯಡ್ಕ ಗುರುಸದನದಲ್ಲಿ ಉದ್ಘಾಟಿಸಿ ಅವರು ಮಾತನಾಡಿದರು. ಕುಟುಂಬಶ್ರೀಯ ಘಟಕಗಳ ಮೂಲಕ ಹಲಸಿನ ಮೌಲ್ಯವರ್ಧನೆ ಸಾಧ್ಯವಾಗಲಿದೆ. ಸರಕಾರವು ಎಲ್ಲಾ ರೀತಿಯ ಬೆಂಬಲವನ್ನು ನೀಡುತ್ತಿದ್ದು, ಅದಕ್ಕಾಗಿ ಎಲ್ಲಾ ಸದಸ್ಯರೂ ಜೊತೆಗೂಡಬೇಕು. ಸರಕಾರದ ಯಾವುದೇ ಯೋಜನೆಗಳನ್ನು ಜನತೆಗೆ ತಲುಪಿಸುವಲ್ಲಿ ಕುಟುಂಬಶ್ರೀ ಘಟಕಗಳು ಪ್ರಧಾನ ಕಾರಣವಾಗಿದೆ ಎಂದರು.

ಬದಿಯಡ್ಕ ಗ್ರಾ.ಪಂ. ಸಿಡಿಎಸ್‌ ಅಧ್ಯಕ್ಷೆ ಸುಧಾ ಜಯರಾಂ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು. ಅಭಿವೃದ್ಧಿ ಸ್ಥಾಯಿ ಸಮಿತಿ ಅಧ್ಯಕ್ಷ ಅನ್ವರ್‌ ಓಸೋನ್‌ ಮಾತನಾಡುತ್ತಾ ಮಹಿಳೆಯರನ್ನು ಸಮಾಜದ ಮುಖ್ಯವಾಹಿನಿಗೆ ಕರೆತರಲು ಸರಕಾರವು ಕುಟುಂಬಶ್ರೀ ಘಟಕಗಳನ್ನು ಅನುಷ್ಠಾನಗೊಳಿಸಿ 21 ವರ್ಷಗಳಾಯಿತು. ಇಂದು ಅದು ಬಲಿಷ್ಠ ಸಂಘಟನೆಯಾಗಿ ಹೊರಹೊಮ್ಮಿ ಸರಕಾರ ಹಾಗೂ ಜನರ ಮಧ್ಯೆ ಸೇತುವೆಯಾಗಿ ಕಾರ್ಯನಿರ್ವಹಿಸುತ್ತದೆ ಎಂದರು. ಆರೋಗ್ಯ ಮತ್ತು ವಿದ್ಯಾಭ್ಯಾಸ ಸ್ಥಾಯಿ ಸಮಿತಿ ಅಧ್ಯಕ್ಷ ಶ್ಯಾಮಪ್ರಸಾದ ಮಾನ್ಯ ಮಾತನಾಡಿ ಕುಟುಂಬಶ್ರೀ ಕಾರ್ಯಕರ್ತೆಯರು ಅದೆಷ್ಟೋ ಮಂದಿ ಇಂದು ಜನಪ್ರತಿನಿಧಿಗಳಾಗಿ ನಮ್ಮ ಮುಂದಿದ್ದಾರೆ ಎಂದರು.

ಗ್ರಾ.ಪಂ. ಉಪಾಧ್ಯಕ್ಷೆ ಝೆ„ಬುನ್ನೀಸ, ಸ್ಥಾಯಿ ಸಮಿತಿ ಅಧ್ಯಕ್ಷೆ ಶಬಾನ, ಗ್ರಾ.ಪಂ.ಸದಸ್ಯರುಗಳಾದ ಬಾಲಕೃಷ್ಣ ಶೆಟ್ಟಿ ಕಡಾರು, ಮುನೀರ್‌, ಜಯಶ್ರೀ, ರಾಜೇಶ್ವರಿ, ಜಯಂತಿ, ಪ್ರಸನ್ನ, ಲಕ್ಷ್ಮಿನಾರಾಯಣ ಪೈ, ವಿಶ್ವನಾಥ ಪ್ರಭು, ಮುಹಮ್ಮದ್‌, ಪುಷ್ಪ ಕುಮಾರಿ, ಪ್ರೇಮ ಕುಮಾರಿ, ಅನಿತ ಕ್ರಾಸ್ತ, ಕುಟುಂಬಶ್ರೀ ಸಂಚಾಲಕಿ ರಮ್ಯಾ, ಆರೋಗ್ಯ ಅಧಿಕಾರಿ ಪ್ರಕಾಶ್‌, ಸಹ ಅಧಿಕಾರಿ ದೇವಿಜಾಕ್ಷನ್‌, ಕೃಷಿಭವನದ ಅಧಿಕಾರಿ ಮೀರಾ, ಮೈರ್ಕಳ ನಾರಾಯಣ ಭಟ್‌, ಎಂ.ಎಚ್‌. ಜನಾರ್ಧನ, ಜಯಪ್ರಕಾಶ ಪಜಿಲ ಶುಭಹಾರೈಸಿದರು. ಕುಟುಂಬಶ್ರೀ ವಾರ್ಷಿಕೋತ್ಸವದ ಪ್ರಯುಕ್ತ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ತೀಪುಗಾರರಾಗಿ ರವಿಕಾಂತ ಕೇಸರಿ ಕಡಾರು, ನಿವೃತ್ತ ಅಧ್ಯಾಪಕ ಜನಾರ್ಧನ ಸಹಕರಿಸಿದರು. ಸುಮತಿ ವಿದ್ಯಾಗಿರಿ ಪ್ರಾರ್ಥನಾ ಗೀತೆಯನ್ನು ಹಾಡಿದರು. ಸರಸ್ವತಿ ಸ್ವಾಗತಿಸಿ, ಅನ್ನತ್‌ ವಂದಿಸಿದರು. ಲೀಲಾವತಿ ಕನಕಪ್ಪಾಡಿ ನಿರೂಪಿಸಿದರು.

ಕಾಸರಗೋಡಿನ ಕನ್ನಡ ಭಾಷೆಯ ಬೆಳವಣಿಗೆಗಳಿಗೆ ಇಂದು ಹೆಚ್ಚು ಆದ್ಯತೆ ನೀಡಬೇಕಾಗಿದೆ. ಸ್ಥಳೀಯಾಡಳಿತ ಸಂಸ್ಥೆಗಳು ಮುತುವರ್ಜಿವಹಿಸಬೇಕಾದ ಜವಾಬ್ದಾರಿಯೂ ಇದೆ. ಬದಿಯಡ್ಕ ಗ್ರಾ.ಪಂ. ಬಹುಸಂಖ್ಯಾತ ಕನ್ನಡಿಗರೇ ಇರುವ ಪ್ರದೇಶ. ತಾನು ಈ ಹಿಂದೆ ಗ್ರಾ.ಪಂ. ಸದಸ್ಯನಾಗಿರುವಾಗ ವಿವಿಧ ಅರ್ಜಿ ಫಾರಂ ಗಳು ಕನ್ನಡದಲ್ಲೇ ಲಭ್ಯವಾಗಿಸುವಲ್ಲಿ ಕಾರ್ಯಪ್ರವೃತ್ತನಾಗಿದ್ದೆ. ಕನ್ನಡ ಭಾಷೆಯ ಫಲಕಗಳನ್ನೂ ಸಾಕಷ್ಟು ಬಳಸಿದ್ದೆ. ಆದರೆ ಇದೀಗ ಗ್ರಾ.ಪಂ.ನಲ್ಲಿ ಕನ್ನಡಿಗರಾಗಿರುವ ಅಧ್ಯಕ್ಷರು, ಸದಸ್ಯರುಗಳು ಇದ್ದೂ ಕನ್ನಡವನ್ನು ಅವಗಣಿಸುತ್ತಿರುವುದು ಖೇದಕರ. ಈ ಬಗ್ಗೆ ಕನ್ನಡ ಉಳಿಸಿ ಬೆಳೆಸಲು ಸಂಬಂಧಪಟ್ಟವರು ಅಗತ್ಯ ಕ್ರಮಗಳಿಗೆ ಮುಂದಾಗಬೇಕು.
ಮಂಜುನಾಥ ಡಿ.ಮಾನ್ಯ. ಮಾಜೀ. ಸದಸ್ಯ.ಬದಿಯಡ್ಕ ಗ್ರಾ.ಪಂ.

ಟಾಪ್ ನ್ಯೂಸ್

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.