ದೇಶದ್ರೋಹ ಕೇಸ್; ಎಂಡಿಎಂಕೆ ಮುಖ್ಯಸ್ಥ ವೈಕೋ ದೋಷಿ, 1 ವರ್ಷ ಜೈಲುಶಿಕ್ಷೆ
Team Udayavani, Jul 5, 2019, 7:07 PM IST
ಹೈದರಾಬಾದ್: 2009ರ ದೇಶದ್ರೋಹ ಪ್ರಕರಣದಲ್ಲಿ ಎಂಡಿಎಂಕೆ(ಮರುಮಲಾರಾಚಿ ದ್ರಾವಿಡ ಮುನ್ನೇತ್ರ ಕಳಗಂ) ಮುಖ್ಯಸ್ಥ ವೈಕೋ ದೋಷಿ ಎಂದು ತೀರ್ಪು ನೀಡಿರುವ ಚೆನ್ನೈ ವಿಶೇಷ ಕೋರ್ಟ್ ಒಂದು ವರ್ಷ ಜೈಲುಶಿಕ್ಷೆ ವಿಧಿಸಿದೆ.
2009ರಲ್ಲಿ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಮಾತನಾಡುತ್ತ, ಕೇಂದ್ರ ಸರ್ಕಾರವನ್ನು ದೂಷಿಸಿ, ಎಲ್ ಟಿಟಿಇಯನ್ನು ಬೆಂಬಲಿಸಿ ಮಾತನಾಡಿದ್ದರು. ಈ ಸಂದರ್ಭದಲ್ಲಿ ಎಂ.ಕರುಣಾನಿಧಿ ತಮಿಳುನಾಡಿನ ಮುಖ್ಯಮಂತ್ರಿಯಾಗಿದ್ದರು.
ದೇಶದ್ರೋಹ ಪ್ರಕರಣದಡಿ ಕೋರ್ಟ್ ಶುಕ್ರವಾರ ವೈಕೋಗೆ 10 ಸಾವಿರ ರೂಪಾಯಿ ದಂಡ ವಿಧಿಸಿ, ಕೋರ್ಟ್ ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸಲು ಒಂದು ತಿಂಗಳ ಕಾಲಾವಕಾಶ ನೀಡಿದೆ.
ತನ್ನ ವಿರುದ್ಧದ ದೋಷಾರೋಪವನ್ನು ರದ್ದುಪಡಿಸುವಂತೆ ಕೋರಿ ಈ ಮೊದಲು ವೈಕೋ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸಲು ಸಾಧ್ಯವಾಗದ ಹಿನ್ನೆಲೆಯಲ್ಲಿ ಆರೋಪಪಟ್ಟಿ ರದ್ದುಪಡಿಸುವಂತೆ ಕೋರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು