ನೆಲ್ಲಿಯರ ಕಾಲನಿ: 11 ಕುಟುಂಬಗಳಿಗೆ ಸರಕಾರದ ನೆರಳಲ್ಲಿ ಹೊಸಬಾಳು


Team Udayavani, Jul 6, 2019, 5:24 AM IST

05KSDE2

ಕಾಸರಗೋಡು: ಜಿಲ್ಲೆಯ ನೆಲ್ಲಿಯರ ಕಾಲನಿಯ ಹನ್ನೊಂದು ಕುಟುಂಬಗಳಿಗೆ ಸರಕಾರದ ನೆರಳು ಹೊಸಬಾಳು ಒದಗಿಸು ತ್ತಿದೆ. ಲೋಕಸಭೆ ಚುನಾವಣೆಯ ಬಿರುಸಿ ನಲ್ಲಿದ್ದ ವೇಳೆ ಜಿಲ್ಲೆಯ ಮಲೆನಾಡ ಪ್ರದೇಶದಲ್ಲಿ ಸುರಿದ ಭಾರೀ ಗಾಳಿಮಳೆಗೆ ಎಲ್ಲವನ್ನೂ ಕಳೆದುಕೊಂಡು ಕಂಗೆಟ್ಟಿದ್ದ 11 ಕುಟುಂಬಗಳ 47 ಮಂದಿಗೆ ರಾಜ್ಯ ಸರಕಾರ ಶಾಶ್ವತ ಪುನರ್ವಸತಿ ಒದಗಿಸುವ ಯತ್ನದಲ್ಲಿ ಮುಂದುವರಿಯುತ್ತಿದೆ.

ಕಿನಾನೂರು-ಕರಿಂದಳಂ ಗ್ರಾಮ ಪಂಚಾ ಯತ್‌ ವ್ಯಾಪ್ತಿಯ ನೆಲ್ಲಿಯರ ಕಾಲನಿಯಲ್ಲಿ ವಾಸಿಸುತ್ತಿದ್ದ 11 ಕುಟುಂಬಗಳು ಈ ಪ್ರಯೋಜನ ಪಡೆಯಲಿವೆ. ಕೂಲಿ ಕಾಯಕ ನಡೆಸುತ್ತಿರುವವರ ಸಹಿತ ಬಡವರೇ ವಾಸಿಸುತ್ತಿರುವ ಈ ಕಾಲನಿಯಲ್ಲಿ ಇದು ನುಂಗಲಾರದ ತುತ್ತಾಗಿತ್ತು. ಕಳೆದ ಎ. 23ರಂದು ಅನಿರೀಕ್ಷಿತವಾಗಿ ಅಪ್ಪಳಿಸಿದ ಬೇಸಗೆ ಮಳೆಯ ಬಿರುಸಿಗೆ ಈ ಮಂದಿ ಸರ್ವಸ್ವವನ್ನೂ ಕಳೆದುಕೊಂಡು ಅನಾಥರಾಗಿದ್ದರು. ಇಲ್ಲೇ ಹುಟ್ಟಿ, ಇಲ್ಲೇ ಬೆಳೆದ ಈ ಮಂದಿ ಬದುಕಿನಲ್ಲಿ ಮಾಡಿಕೊಂಡಿದ್ದ ಮನೆ ಮತ್ತು ಬದುಕು ಒಂದೇ ದಿನದಲ್ಲಿ ನೆಲಸಮವಾಗಿತ್ತು.

ತಾತ್ಕಾಲಿಕ ಪುನರ್ವಸತಿಯಾಗಿ ಪರಪ್ಪ ಶಾಲೆಯಲ್ಲಿ ಈ ಮಂದಿಗೆ ಆಸರೆ ಒದಗಿಸ ಲಾಗಿತ್ತು. ಅನಂತರ ಇಲ್ಲಿನ ಸಮುದಾಯ ಸಭಾಂಗಣಕ್ಕೆ ಇವರನ್ನು ಸ್ಥಳಾಂತರಿಸ ಲಾಗಿತ್ತು. ಆದರೆ ಎಷ್ಟು ದಿನ ಇದೇ ಸ್ಥಿತಿಯಲ್ಲಿ ಬದುಕ ಬೇಕು ಎಂಬ ಚಿಂತೆ ಆಬಾಲವೃದ್ಧರನ್ನು ಕಾಡ ತೊಡಗಿತ್ತು. ಆದರೆ ಈ ದುಃಸ್ಥಿತಿಯನ್ನು ಗಮನಿ ಸಿದ ರಾಜ್ಯ ಸರಕಾರ ತತ್‌ಕ್ಷಣ ಶಾಶ್ವತ ಪರಿಹಾರಕ್ಕೆ ಕ್ರಮ ಕೈಗೊಂಡಿತ್ತು. ಪರಿಶಿಷ್ಟ ಪಂಗಡ ಅಭಿವೃದ್ಧಿ ನೇತೃತ್ವದಲ್ಲಿ ಕಿನಾನೂರು- ಕರಿಂದಳಂ ಗ್ರಾ. ಪಂ. ಮತ್ತು ಸಾರ್ವಜನಿಕರು ಪರಿಹಾರಕ್ಕೆ ಯತ್ನಿಸಿದ್ದರು. ಪರಿಶಿಷ್ಟ ಪಂಗಡ ಅಭಿವೃದ್ಧಿ ಇಲಾಖೆಯ 2019-20 ವರ್ಷದ ಕಾರ್ಪ್‌ ನಿಧಿಯಲ್ಲಿ ಅಳವಡಿಸಿ ಮೊದಲ ಹಂತವಾಗಿ ವಿವಿಧೋದ್ದೇಶ ಸಮುದಾಯ ಸಭಾಂಗಣ ನಿರ್ಮಿಸಿದೆ. ಕೆಲವು ತಾಂತ್ರಿಕ ಸಮಸ್ಯೆಗಳಿ ದ್ದರೂ, ಪ್ರಾಮಾಣಿಕ ಯತ್ನಗಳ ಫಲವಾಗಿ ಕೇವಲ 27 ದಿನಗಳಲ್ಲಿ ಕಟ್ಟಡದ ಕಾಮಗಾರಿ ಪೂರ್ಣಗೊಂಡಿದೆ. ಜೂ.16ರಂದು ಈ ಕುಟುಂಬಗಳ ಮಂದಿ ಈ ಕಟ್ಟಡಕ್ಕೆ ಸ್ಥಳಾಂತರ ಗೊಂಡಿದ್ದಾರೆ. ರೆಡ್‌ ಕ್ರಾಸ್‌ ಸಂಸ್ಥೆಯ ವತಿ ಯಿಂದ ಒಂದೊಂದು ಕುಟುಂಬಕ್ಕೂ ತಲಾ 2 ಮಂಚ, ಹಾಸುಗೆ, ತಲೆದಿಂಬು, ಗ್ಯಾಸ್‌ ಸ್ಟವ್‌ ಇತ್ಯಾದಿ ಒದಗಿಸಲಾಗಿದೆ.

ಮುಂದಿನ ಒಂದೇ ವರ್ಷದಲ್ಲಿ ಪ್ರಧಾನ ಮಂತ್ರಿ ಆವಾಸ್‌ ಯೋಜನೆ ಯಾ ರಾಜ್ಯ ಸರಕಾರದ ಲೈಫ್‌ ಯೋಜನೆ ಪ್ರಕಾರ ಈ ಮಂದಿಗೆ ಸ್ವಂತ ಮನೆ ನಿರ್ಮಿಸಿ ನೀಡ ಲಾಗುವುದು ಎಂದು ಸಂಬಂಧಪಟ್ಟವರು ತಿಳಿಸಿದ್ದಾರೆ.

ಟಾಪ್ ನ್ಯೂಸ್

Salaar: ಜಪಾನ್‌ನಲ್ಲಿ ಈ ತಿಂಗಳು ತೆರೆಕಾಣಲಿದೆ ಪ್ರಭಾಸ್‌ – ಪ್ರಶಾಂತ್‌ ನೀಲ್‌  ʼಸಲಾರ್‌ʼ

Salaar: ಜಪಾನ್‌ನಲ್ಲಿ ಈ ತಿಂಗಳು ತೆರೆಕಾಣಲಿದೆ ಪ್ರಭಾಸ್‌ – ಪ್ರಶಾಂತ್‌ ನೀಲ್‌ ʼಸಲಾರ್‌ʼ

12-uv-fusion

Spray fans: ಬಿಸಿ ಗಾಳಿಯೂ ತಂಪಾಯ್ತು

ಕಳ್ಳರು & ದರೋಡೆಕೋರರ ಗ್ಯಾಂಗ್‌ ಚುಚ್ಚಿದ್ದ ವಿಷಕ್ಕೆ ಪೊಲೀಸ್‌ ಕಾನ್ಸ್‌ ಟೇಬಲ್‌ ಮೃತ್ಯು

ಕಳ್ಳರು & ದರೋಡೆಕೋರರ ಗ್ಯಾಂಗ್‌ ಚುಚ್ಚಿದ್ದ ವಿಷಕ್ಕೆ ಪೊಲೀಸ್‌ ಕಾನ್ಸ್‌ ಟೇಬಲ್‌ ಮೃತ್ಯು

ಗುಜರಾತ್ ನಿಂದ ಓಡಿ ಹೋದ 12 ಉದ್ಯಮಿಗಳ ಬಗ್ಗೆ ಮಾತನಾಡಿ: ಮೋದಿಗೆ ಲಾಡ್ ಸವಾಲು

Dharwad; ಗುಜರಾತ್ ನಿಂದ ಓಡಿ ಹೋದ 12 ಉದ್ಯಮಿಗಳ ಬಗ್ಗೆ ಮಾತನಾಡಿ: ಮೋದಿಗೆ ಲಾಡ್ ಸವಾಲು

Kidnapped: ಹಾಡ ಹಗಲೇ ಮಹಿಳೆಯಿಂದ ಹೋಟೆಲ್ ಮಾಲೀಕನ ಮಗನ ಅಪಹರಣ: CCTVಯಲ್ಲಿ ದೃಶ್ಯ ಸೆರೆ

Kidnapped: ಹಾಡ ಹಗಲೇ ಮಹಿಳೆಯಿಂದ ಹೋಟೆಲ್ ಮಾಲೀಕನ ಮಗನ ಅಪಹರಣ: CCTVಯಲ್ಲಿ ದೃಶ್ಯ ಸೆರೆ

11-plastic

Eco-friendly Bio Plastic: ಪರಿಸರ ಸ್ನೇಹಿ ಮೆಕ್ಕೆಜೋಳದ ಬಯೋ ಪ್ಲಾಸ್ಟಿಕ್‌

16-uv-fusion

Aranthodu: ವಾಹನಗಳ ಮಧ್ಯೆ ಸರಣಿ ಅಪಘಾತ; ಬೈಕ್ ಸವಾರ ಗಂಭೀರ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Salaar: ಜಪಾನ್‌ನಲ್ಲಿ ಈ ತಿಂಗಳು ತೆರೆಕಾಣಲಿದೆ ಪ್ರಭಾಸ್‌ – ಪ್ರಶಾಂತ್‌ ನೀಲ್‌  ʼಸಲಾರ್‌ʼ

Salaar: ಜಪಾನ್‌ನಲ್ಲಿ ಈ ತಿಂಗಳು ತೆರೆಕಾಣಲಿದೆ ಪ್ರಭಾಸ್‌ – ಪ್ರಶಾಂತ್‌ ನೀಲ್‌ ʼಸಲಾರ್‌ʼ

12-uv-fusion

Spray fans: ಬಿಸಿ ಗಾಳಿಯೂ ತಂಪಾಯ್ತು

ಕಳ್ಳರು & ದರೋಡೆಕೋರರ ಗ್ಯಾಂಗ್‌ ಚುಚ್ಚಿದ್ದ ವಿಷಕ್ಕೆ ಪೊಲೀಸ್‌ ಕಾನ್ಸ್‌ ಟೇಬಲ್‌ ಮೃತ್ಯು

ಕಳ್ಳರು & ದರೋಡೆಕೋರರ ಗ್ಯಾಂಗ್‌ ಚುಚ್ಚಿದ್ದ ವಿಷಕ್ಕೆ ಪೊಲೀಸ್‌ ಕಾನ್ಸ್‌ ಟೇಬಲ್‌ ಮೃತ್ಯು

ಗುಜರಾತ್ ನಿಂದ ಓಡಿ ಹೋದ 12 ಉದ್ಯಮಿಗಳ ಬಗ್ಗೆ ಮಾತನಾಡಿ: ಮೋದಿಗೆ ಲಾಡ್ ಸವಾಲು

Dharwad; ಗುಜರಾತ್ ನಿಂದ ಓಡಿ ಹೋದ 12 ಉದ್ಯಮಿಗಳ ಬಗ್ಗೆ ಮಾತನಾಡಿ: ಮೋದಿಗೆ ಲಾಡ್ ಸವಾಲು

Kidnapped: ಹಾಡ ಹಗಲೇ ಮಹಿಳೆಯಿಂದ ಹೋಟೆಲ್ ಮಾಲೀಕನ ಮಗನ ಅಪಹರಣ: CCTVಯಲ್ಲಿ ದೃಶ್ಯ ಸೆರೆ

Kidnapped: ಹಾಡ ಹಗಲೇ ಮಹಿಳೆಯಿಂದ ಹೋಟೆಲ್ ಮಾಲೀಕನ ಮಗನ ಅಪಹರಣ: CCTVಯಲ್ಲಿ ದೃಶ್ಯ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.