ಕಾಂಗ್ರೆಸ್‌ ಚೌಕಟ್ಟಲ್ಲೇ ಅಹಿಂದ ಸಂಘಟನೆ

ತುಳಿತಕ್ಕೊಳಗಾದವರ ಪರವಾಗಿರುವುದೇ ಕಾಂಗ್ರೆಸ್‌: ಸಿದ್ದರಾಮಯ್ಯ ಅಭಿಮತ

Team Udayavani, Jul 6, 2019, 5:00 AM IST

Siddu 1

ಬೆಂಗಳೂರು: ಕಾಂಗ್ರೆಸ್‌ ಪಕ್ಷದ ಚೌಕಟ್ಟಿನಲ್ಲಿಯೇ ಅಹಿಂದ ಸಮಾವೇಶವನ್ನು ಮಾಡು ತ್ತೇನೆಂದು ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಈ ಮೂಲಕ ಮತ್ತೆ ಅಹಿಂದ ನಾಯಕತ್ವ ವಹಿಸಿ ಕೊಳ್ಳಲು ತಾವು ಸಿದ್ಧ ಎನ್ನುವ ಸಂದೇಶ ರವಾನಿಸಿದ್ದಾರೆ.

ಶುಕ್ರವಾರ ಮಾಧ್ಯಮ ಗಳೊಂದಿಗೆ ಮಾತನಾಡಿ, ಕಾಂಗ್ರೆಸ್‌ ಅಂದರೆ ಅಹಿಂದ, ತುಳಿತಕ್ಕೊಳ ಗಾದವರ ಪರವಾಗಿ ರುವುದೇ ಕಾಂಗ್ರೆಸ್‌ ಎಂದು ಹೇಳಿದರು. ತಾವು ಮುಖ್ಯ ಮಂತ್ರಿಯಾಗಿದ್ದಾಗ ಅಹಿಂದ ವರ್ಗಗಳಿಗೆ ಸಾಕಷ್ಟು ಯೋಜನೆಗಳನ್ನು ನೀಡಿದರೂ, ಆ ವರ್ಗ ಚುನಾವಣೆಯಲ್ಲಿ ತಮ್ಮ ಬೆನ್ನಿಗೆ ನಿಲ್ಲ ಲಿಲ್ಲ ಎಂಬ ಬೇಸರವನ್ನು ತಮ್ಮ ಆಪ್ತರ ಎದುರು ಹೇಳಿಕೊಂಡಿದ್ದರು. ಹೀಗಾಗಿ ಸಿದ್ದರಾಮಯ್ಯ ಅವರನ್ನು ಮತ್ತೆ ಅಹಿಂದ ಸಂಘಟನೆ ಮಾಡುವಂತೆ ಮನವಿ ಮಾಡಿ ದ್ದರು. ಆ ಮೂಲಕ ಛಿದ್ರವಾಗಿರುವ ಅಹಿಂದ ಮತಗಳನ್ನು ಒಗ್ಗೂಡಿಸಿ, ಪಕ್ಷದ ಜತೆಗೆ ವೈಯಕ್ತಿಕ ನಾಯಕತ್ವವನ್ನೂ ಬಲಗೊಳಿಸಿ ಕೊಳ್ಳಬಹುದೆಂದು ಸಲಹೆ ನೀಡಿದ್ದರು.

ಆದರೆ, ಈ ಬಗ್ಗೆ ಸಿದ್ದರಾಮ್ಯಯ ಎಲ್ಲಿಯೂ ಬಹಿರಂಗವಾಗಿ ಹೇಳಿಕೆ ನೀಡದೇ ಮೌನ ವಹಿಸಿದ್ದರು. ಅಲ್ಲದೇ ಈಗಾಗಲೇ ಅಹಿಂದ ಹೆಸರು ಹೇಳಿರುವುದರಿಂದಲೇ ಮೇಲ್ವರ್ಗದ ಮತಗಳು ಕಾಂಗ್ರೆಸ್‌ನಿಂದ ದೂರವಾಗಿವೆ ಎಂಬ ಆರೋಪ ಕೇಳಿ ಬರುತ್ತಿರುವುದರಿಂದ ತಾವು ಅಹಿಂದ ಸಂಘಟನೆಗೆ ಮುಂದಾದರೆ, ಪಕ್ಷದ ಕೆಂಗಣ್ಣಿಗೆ ಗುರಿಯಾಗುತ್ತೇನೆ ಎನ್ನುವ ಕಾರಣಕ್ಕೆ ತಾವು ತೆರೆ ಮರೆಯಲ್ಲಿ ಪರೋಕ್ಷವಾಗಿ ಅಹಿಂದ ಸಂಘಟನೆಯ ಬೆನ್ನಿಗೆ ನಿಲ್ಲುತ್ತೇನೆಂದು ತಮ್ಮ ಆಪ್ತರ ಎದುರು ಹೇಳಿಕೊಂಡಿದ್ದರು ಎನ್ನಲಾಗಿತ್ತು.

ಆದರೆ, ಶುಕ್ರವಾರ ಕಾಂಗ್ರೆಸ್‌ ಚೌಕಟ್ಟಿನಲ್ಲಿಯೇ ಅಹಿಂದ ಸಂಘಟಿಸುವುದಾಗಿ ಹೇಳುವ ಮೂಲಕ ಮತ್ತೆ ಅಹಿಂದ ವರ್ಗವನ್ನು ತಮ್ಮ ಹಿಡಿತಕ್ಕೆ ತೆಗೆದುಕೊಳ್ಳುವ ಪ್ರಯತ್ನಕ್ಕೆ ಕೈ ಹಾಕುವ ಮೂನ್ಸೂಚನೆ ನೀಡಿದ್ದಾರೆ.

ಬಿಜೆಪಿ ವಿರುದ್ಧ ವಾಗ್ಧಾಳಿ: ಬಿಜೆಪಿ ಆಪರೇಷನ್‌ ಕಮಲ ಮಾಡುತ್ತಿರುವುದರ ವಿರುದ್ಧ ವಾಗ್ಧಾಳಿ ನಡೆಸಿದ ಅವರು, ಬಿಜೆಪಿಯವರು ರಾಜ್ಯ ಸರ್ಕಾರವನ್ನು ಅಸ್ಥಿರಗೊಳಿಸಲು ಹೊರಟಿದ್ದಾರೆ. ಆದರೆ, ಅವರು ಅದರಲ್ಲಿ ಯಶಸ್ಸು ಕಾಣಲಿಲ್ಲ. ನಮ್ಮ ಶಾಸಕರನ್ನು ಬಿಜೆಪಿಯವರು ಮುಂಬೈಗೆ ಕರೆದುಕೊಂಡು ಹೋಗಿದ್ದು ಸುಳ್ಳಾ? ಅದ್ಯಾವುದೋ ಅಶ್ವಥ್‌ ನಾರಾಯಣ ಎನ್ನುವವನು ಕರೆದುಕೊಂಡು ಹೋಗಿದ್ದು ಸುಳ್ಳಾ? ಉಮೇಶ್‌ ಜಾಧವ್‌ ಬಿಜೆಪಿಗೆ ಹೋಗಿದ್ದು ಸುಳ್ಳಾ ಎಂದು ಪ್ರಶ್ನಿಸಿದರು.

ಕಾಂಗ್ರೆಸ್‌ನಲ್ಲಿ ಅತೃಪ್ತರಿದ್ದಾರೆಂದು ಬಿಜೆಪಿಯವರಿಗೆ ಹೇಗೆ ಗೊತ್ತು. ಅವರು ಯಾರನ್ನು ಸಂಪರ್ಕ ಮಾಡಿದ್ದಾರೆ ಎನ್ನವುದು ಎಲ್ಲವೂ ಗೊತ್ತಿದೆ. ಯಾರಿಗೆ ಆಮಿಷ ಒಡ್ಡಿದ್ದಾರೆಯೋ ಅವರೇ ಬಂದು ನಮ್ಮ ಬಳಿ ಹೇಳಿದ್ದಾರೆ ಎಂದರು. ಆನಂದ್‌ ಸಿಂಗ್‌ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ನಾವು ಅವರ ಜತೆ ಇನ್ನೂ ಮಾತನಾಡಿಲ್ಲ. ಜಿಂದಾಲ್ಗೆ ಜಮೀನು ಕೊಡಬೇಡಿ ಎಂದು ರಾಜೀ ನಾಮೆ ನೀಡಿದ್ದಾರೆ. ಬಿಜೆಪಿಯಲ್ಲಿದ್ದಾಗಲೇ ಜಮೀನು ನೀಡಿದ್ದಾರೆ. ಆಗ ಯಾಕೆ ರಾಜೀನಾಮೆ ನೀಡಲಿಲ್ಲ ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ರಮೇಶ್‌ ಜಾರಕಿಹೊಳಿ ಯಾವಾಗ ಬೇಕಾದರೂ ರಾಜೀನಾಮೆ ನೀಡಬಹುದು. ಆದರೆ, ಸಂಬಂಧಿಸಿದವರಿಗೆ ರಾಜೀನಾಮೆ ತಲುಪಿಸಬೇಕು. ರಮೇಶ್‌ ಜತೆ ಮಾತನಾಡಿ ಸಾಕಾಗಿದೆ. ನಮಗೇ ಬೇಜಾರಾಗಿ ಸುಮ್ಮನಾಗಿದ್ದೇವೆ ಎಂದರು. ಆಪರೇಷನ್‌ ಕಮಲದ ಆಡಿಯೋ ಬಗ್ಗೆ ತನಿಖೆ ನಡೆಸಲು ಎಸ್‌ಐಟಿ ರಚನೆ ವಿಳಂಬ ಮಾಡಿರುವ ಬಗ್ಗೆ ಮುಂಬರುವ ಅಧಿವೇಶನದಲ್ಲಿ ಪ್ರಶ್ನೆ ಮಾಡುತ್ತೇನೆಂದು ಹೇಳಿದರು.

ಇದೇ ವೇಳೆ, ಡಿಸಿಎಂ ಕೆ.ಎಸ್‌.ಈಶ್ವರಪ್ಪ ಹಾಗೂ ಜೆಡಿಎಸ್‌ ನಾಯಕ ಎಚ್.ವಿಶ್ವನಾಥ್‌ ಅವರಿಗೆ ನನ್ನ ಮೇಲೆ ಅಸೂಯೆ. ಅದಕ್ಕೆ ಪದೇಪದೆ ನನ್ನ ವಿರುದ್ಧ ಹೇಳಿಕೆ ನೀಡುತ್ತಾರೆಂದು ಹೇಳಿದರು.

ಟಾಪ್ ನ್ಯೂಸ್

1

Tollywood: ಬಹುನಿರೀಕ್ಷಿತ ʼಪುಷ್ಪ-2ʼ ರಿಲೀಸ್‌ ಡೇಟ್‌ ಮುಂದೂಡಿಕೆ?

ಮಗುವನ್ನು ಕಾರಿನಲ್ಲಿ ಬಿಟ್ಟು ಮದುವೆಗೆ ಹೋದ ಕುಟುಂಬ… ನೆನಪಾಗುವಷ್ಟರಲ್ಲಿ ಮಿಂಚಿತ್ತು ಕಾಲ

ಮಗುವನ್ನು ಕಾರಿನಲ್ಲಿ ಬಿಟ್ಟು ಮದುವೆಗೆ ಹೋದ ಕುಟುಂಬ… ನೆನಪಾಗುವಷ್ಟರಲ್ಲಿ ಮಿಂಚಿತ್ತು ಕಾಲ

Hassan; ಕೆರೆಯಲ್ಲಿ ಈಜಲು ಹೋಗಿ ನೀರು ಪಾಲಾದ ನಾಲ್ವರು ಮಕ್ಕಳು

Hassan; ಕೆರೆಯಲ್ಲಿ ಈಜಲು ಹೋಗಿ ನೀರು ಪಾಲಾದ ನಾಲ್ವರು ಮಕ್ಕಳು

ಈಶ್ವರ್ ಖಂಡ್ರೆ

Bidar; ಯುವಕರ‌ ಬದುಕು‌ ಹಾಳು ಮಾಡಿದ‌ ಕೀರ್ತಿ ಬಿಜೆಪಿಗೆ ಸಲ್ಲುತ್ತದೆ: ಈಶ್ವರ್ ಖಂಡ್ರೆ

ಜಮ್ಮು – ಕಾಶ್ಮೀರದಲ್ಲಿ ಭದ್ರತಾ ಪಡೆಗಳಿಂದ ಎನ್‌ಕೌಂಟರ್‌… ಇಬ್ಬರು ಉಗ್ರರು ಹತ

ಜಮ್ಮು – ಕಾಶ್ಮೀರದಲ್ಲಿ ಭದ್ರತಾ ಪಡೆಗಳಿಂದ ಎನ್‌ಕೌಂಟರ್‌… ಇಬ್ಬರು ಉಗ್ರರು ಹತ

Virat kohli spoke about his post-retirement life

Virat Kohli; ನಿವೃತ್ತಿಯ ಬಗ್ಗೆ ಮಾತನಾಡಿದ ವಿರಾಟ್..; ಫ್ಯಾನ್ಸ್ ಗೆ ಆತಂಕತಂದ ಕೊಹ್ಲಿ ಮಾತು

Monsoon: ನಿಗದಿತ ಸಮಯಕ್ಕೆ ಕೇರಳಕ್ಕೆ ಮುಂಗಾರು ಪ್ರವೇಶ: ಹವಾಮಾನ ಇಲಾಖೆ

Monsoon: ನಿಗದಿತ ಸಮಯಕ್ಕೆ ಕೇರಳಕ್ಕೆ ಮುಂಗಾರು ಪ್ರವೇಶ: ಹವಾಮಾನ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನವಜಾತ ಶಿಶುವನ್ನು ಪ್ಲಾಸ್ಟಿಕ್ ಚೀಲದಲ್ಲಿ ಸುತ್ತಿ ಚರಂಡಿಗೆ ಎಸೆದು ಪರಾರಿ… ಪೊಲೀಸರಿಂದ ಶೋಧ

ನವಜಾತ ಶಿಶುವನ್ನು ಪ್ಲಾಸ್ಟಿಕ್ ಚೀಲದಲ್ಲಿ ಸುತ್ತಿ ಚರಂಡಿಗೆ ಎಸೆದ ಪಾಪಿಗಳು; ಪೊಲೀಸರಿಂದ ಶೋಧ

kar49 ಅಭ್ಯರ್ಥಿಗಳಿಂದ ಉಮೇದುವಾರಿಕೆ: ನಾಮಪತ್ರ ಸಲ್ಲಿಕೆಗೆ ಇಂದು ಕೊನೆ ದಿನ

49 ಅಭ್ಯರ್ಥಿಗಳಿಂದ ಉಮೇದುವಾರಿಕೆ: ನಾಮಪತ್ರ ಸಲ್ಲಿಕೆಗೆ ಇಂದು ಕೊನೆ ದಿನ

ಪ್ರಜ್ವಲ್‌ ಎಲ್ಲಿ? ಕುಟುಂಬದವರು ಸಹಿತ ಯಾರಿಗೂ ಗೊತ್ತಿಲ್ಲ: ಜಿ.ಟಿ.ದೇವೇಗೌಡ

JDS MP ಪ್ರಜ್ವಲ್‌ ಎಲ್ಲಿ? ಕುಟುಂಬದವರು ಸಹಿತ ಯಾರಿಗೂ ಗೊತ್ತಿಲ್ಲ: ಜಿ.ಟಿ.ದೇವೇಗೌಡ

ಪರಿಷತ್‌ ಚುನಾವಣೆ: 3 ಪಕ್ಷಕ್ಕೂ ಬಂಡಾಯ ಬಿಸಿ

ಪರಿಷತ್‌ ಚುನಾವಣೆ: 3 ಪಕ್ಷಕ್ಕೂ ಬಂಡಾಯ ಬಿಸಿ; ಪಕ್ಷದ ವಿರುದ್ಧವೇ ಸಡ್ಡು ಹೊಡೆದು ಸ್ಪರ್ಧೆ

Attendance ಕೊರತೆ ಇದ್ದರೂ ಎಸೆಸೆಲ್ಸಿ ಪರೀಕ್ಷೆ-2ಕ್ಕೆ ಅವಕಾಶ

Attendance ಕೊರತೆ ಇದ್ದರೂ ಎಸೆಸೆಲ್ಸಿ ಪರೀಕ್ಷೆ-2ಕ್ಕೆ ಅವಕಾಶ

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

1

Tollywood: ಬಹುನಿರೀಕ್ಷಿತ ʼಪುಷ್ಪ-2ʼ ರಿಲೀಸ್‌ ಡೇಟ್‌ ಮುಂದೂಡಿಕೆ?

god promise kannada movie

Kannada Cinema; ‘ಗಾಡ್‌ ಪ್ರಾಮಿಸ್‌’ ಮುಹೂರ್ತ ಮಾಡಿದ್ರು

Wadgera; A crocodile appeared in the farm

Wadgera; ಜಮೀನಿನಲ್ಲಿ ಕಾಣಿಸಿಕೊಂಡು ರೈತರಿಗೆ ಆತಂಕ ತಂದ ಮೊಸಳೆ

7-ಬನಗ

Bengaluru: ಕಾಲೇಜಿನ 6ನೇ ಮಹಡಿಯಿಂದ ಜಿಗಿದು ಬಿಇ ವಿದ್ಯಾರ್ಥಿ ಆತ್ಮಹತ್ಯೆ

ಮಗುವನ್ನು ಕಾರಿನಲ್ಲಿ ಬಿಟ್ಟು ಮದುವೆಗೆ ಹೋದ ಕುಟುಂಬ… ನೆನಪಾಗುವಷ್ಟರಲ್ಲಿ ಮಿಂಚಿತ್ತು ಕಾಲ

ಮಗುವನ್ನು ಕಾರಿನಲ್ಲಿ ಬಿಟ್ಟು ಮದುವೆಗೆ ಹೋದ ಕುಟುಂಬ… ನೆನಪಾಗುವಷ್ಟರಲ್ಲಿ ಮಿಂಚಿತ್ತು ಕಾಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.