ಪ್ರಶಸ್ತಿ ಹಣ ಸಸಿ ನೆಡಲು ಕೊಟ್ಟ ಬಾಲಕ: ಜಿಲ್ಲಾಧಿಕಾರಿ ಮೆಚ್ಚುಗೆ
Team Udayavani, Jul 6, 2019, 9:51 AM IST
ಬಾಗಲಕೋಟೆ: ವಿದ್ಯಾರ್ಥಿ ಸಮರ್ಥ ಪರಾಂಡೆ ಪ್ರಶಸ್ತಿ ಹಣದಲ್ಲಿ ತಂದ ಸಸಿಗಳನ್ನು ಜಿಲ್ಲಾಧಿಕಾರಿ ಆರ್.ರಾಮಚಂದ್ರನ್ ಕೇಂದ್ರೀಯ ವಿದ್ಯಾಲಯ ಆವರಣದಲ್ಲಿ ನೆಟ್ಟರು.
ಬಾಗಲಕೋಟೆ: ಚಿತ್ರಕಲೆ ಸ್ಪರ್ಧೆಯೊಂದರಲ್ಲಿ ನಗದು ಬಹುಮಾನ ಪಡೆದಿದ್ದ ವಿದ್ಯಾರ್ಥಿಯೊಬ್ಬ ಆ ಹಣವನ್ನು ತಾನು ಕಲಿಯುವ ಶಾಲೆ ಆವರಣದಲ್ಲಿ ಸಸಿ ನೆಡಲು ಬಳಕೆ ಮಾಡಿದ್ದು, ಈ ಕಾರ್ಯವನ್ನು ಜಿಲ್ಲಾಧಿಕಾರಿ ಶ್ಲಾಘಿಸಿದ್ದಾರೆ.
ಕೇಂದ್ರಿಯ ವಿದ್ಯಾಲಯದ 5ನೇ ತರಗತಿ ವಿದ್ಯಾರ್ಥಿ ಸಮರ್ಥ ಪರಾಂಡೆ ಎಂಬ ವಿದ್ಯಾರ್ಥಿ, ಈಚೆಗೆ ಲೈನ್ಸ್ ಕ್ಲಬ್ನಿಂದ ಹಮ್ಮಿಕೊಂಡಿದ್ದ ಚಿತ್ರಕಲೆ ಬಿಡಿಸುವ ಸ್ಪರ್ಧೆಯಲ್ಲಿ ಮೊದಲ ಸ್ಥಾನ ಪಡೆದಿದ್ದ. 1ನೇ ಸ್ಥಾನ ಪಡೆದ ವಿದ್ಯಾರ್ಥಿ ಸಮರ್ಥಗೆ, ಲೈನ್ಸ್ ಕ್ಲಬ್ನಿಂದ 1,500 ನಗದು ಬಹುಮಾನ ನೀಡಲಾಗಿತ್ತು.
ಈ ಬಹುಮಾನದ ಹಣವನ್ನು, ಕೇಂದ್ರೀಯ ವಿದ್ಯಾಲಯ ಆವರಣದಲ್ಲಿ ಸಸಿ ನೆಡುವ ಉದ್ದೇಶಕ್ಕಾಗಿ ಶಾಲೆಗೆ ನೀಡಿದ್ದು, ಶಾಲೆಯ ಪ್ರಾಚಾರ್ಯರು ಮತ್ತು ಸಿಬ್ಬಂದಿ, ವಿದ್ಯಾರ್ಥಿ ನೀಡಿದ ಹಣದಲ್ಲಿ ಬೇವು, ಹುಣಸೆ ಸೇರಿದಂತೆ ವಿವಿಧ ಜಾತಿಯ 50 ಸಸಿಗಳನ್ನು ತರಿಸಿ, ಶಾಲೆಯ ಆವರಣದಲ್ಲಿ ನೆಟ್ಟಿದ್ದಾರೆ.
ವಿದ್ಯಾರ್ಥಿಯ ಪರಿಸರ ಸ್ನೇಹಿ ಕಾರ್ಯಕ್ಕೆ ಕೇಂದ್ರೀಯ ವಿದ್ಯಾಲಯದ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ಆರ್. ರಾಮಚಂದ್ರನ್, ಶಾಲೆಗೆ ಆಗಮಿಸಿ ಸಸಿ ನೆಡುವ ಕಾರ್ಯಕ್ಕೆ ಚಾಲನೆ ನೀಡಿದರು. ಅಲ್ಲದೇ ವಿದ್ಯಾರ್ಥಿ ಈ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಇನ್ಸ್ಟಾ ಪ್ರೊಫೈಲ್ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..
NewsClick ಸ್ಥಾಪಕ ಪ್ರಬೀರ್ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!
T20 ವಿಶ್ವಕಪ್ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್
Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ
ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್ ಬೆದರಿಕೆ ಇ-ಮೇಲ್: ಪೋಷಕರಿಗೆ ಆತಂಕ