ಮಸ್ಕತ್ನಲ್ಲಿ ಬಂಧನ:ಬಿಡುಗಡೆಗೆ ಸಹಕರಿಸಲು ವಿದೇಶ ಸಚಿವರಿಗೆ ಮನವಿ
Team Udayavani, Jul 6, 2019, 9:52 AM IST
ಮಂಗಳೂರು: ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲು ಅವರು ಗುರುವಾರ ಕೇಂದ್ರ ವಿದೇಶಾಂಗ ಖಾತೆ ರಾಜ್ಯ ಸಚಿವ ವಿ. ಮುರಳೀಧರನ್ ಅವರನ್ನು ಭೇಟಿ ಮಾಡಿ ಕೆಲವು ದಿನಗಳ ಹಿಂದೆ ಮಸ್ಕತ್ ಪೊಲೀಸರಿಂದ ಬಂಧಿತರಾದ ಬೆಳ್ತಂಗಡಿ ತಾಲೂಕಿನ ಕಾಶಿಪಟ್ಣ ನಿವಾಸಿ ಪ್ರಕಾಶ್ ಪೂಜಾರಿ ಅವರನ್ನು ಭಾರತಕ್ಕೆ ಕರೆತರುವ ವಿಚಾರದಲ್ಲಿ ಮಧ್ಯ ಪ್ರವೇಶಿಸಲು ಮಸ್ಕತ್ನ ಭಾರತೀಯ ರಾಯಭಾರಿ ಕಚೇರಿಯ ಅಧಿಕಾರಿಗಳಿಗೆ ನಿರ್ದೇಶನ ನೀಡುವಂತೆ ವಿನಂತಿಸಿದರು.
ಈ ಬಗ್ಗೆ ವಿದೇಶಾಂಗ ಇಲಾಖೆಯ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡ ಸಚಿವರು ಕಾನೂನು ತೊಡಕು ನಿವಾರಣೆಯಾದ ತತ್ಕ್ಷಣ ಅವರನ್ನು ಸ್ವದೇಶಕ್ಕೆ ಕರೆತರುವ ಭರವಸೆ ನೀಡಿದರು.
ಇದಲ್ಲದೆ ಉದ್ಯೋಗಕ್ಕೆಂದು ಕುವೈಟ್ಗೆ ತೆರಳಿ ಸಿಲುಕಿಕೊಂಡಿರುವ 73 ಭಾರತೀಯರ ಪೈಕಿ ಮರಳಲಿಚ್ಛಿಸಿರುವ 13 ಭಾರತೀಯರು ಸ್ವದೇಶಕ್ಕೆ ವಾಪಸಾಗಲು ಹಣಕಾಸಿನ ಅಡಚಣೆ ಇರುವುದರಿಂದ ಅವರಿಗೆ ವಿಮಾನ ಟಿಕೆಟ್ ವ್ಯವಸ್ಥೆ ಮಾಡಿಸಿ ಕೊಡಲು ಭಾರತೀಯ ರಾಯಭಾರ ಕಚೇರಿಯ ಅಧಿಕಾರಿಗಳಿಗೆ ನಿರ್ದೇಶನ ನೀಡುವಂತೆ ನಳಿನ್ ಅವರು ಸಚಿವರಲ್ಲಿ ಮನವಿ ಮಾಡಿದರು.
ವಿಮಾನ ಟಿಕೆಟ್ನ ವ್ಯವಸ್ಥೆ ಮಾಡಿಸಿ ಕೊಡುವ ಬಗ್ಗೆ ಅಧಿಕಾರಿಗಳ ಜತೆ ಚರ್ಚಿಸಿ ಪರಿಶೀಲಿಸಲಾಗುವುದು ಎಂದು ಸಚಿವರು ಭರವಸೆ ನೀಡಿದರು ಎಂದು ನಳಿನ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kerala “ವೆಸ್ಟ್ನೈಲ್’ ಜ್ವರದ ಆತಂಕ; ದ.ಕ. ಜಿಲ್ಲೆಯಲ್ಲೂ ವಿಶೇಷ ನಿಗಾ
ನೈಋತ್ಯ ಕ್ಷೇತ್ರ; ಬಿಜೆಪಿ- ಜೆಡಿಎಸ್ ಒಮ್ಮತದ ಅಭ್ಯರ್ಥಿಗೆ ಗೆಲುವು: ಡಾ| ಧನಂಜಯ ಸರ್ಜಿ
Mulki ಪ್ರೇಯಸಿ ಆತ್ಮಹತ್ಯೆ ಬೆನ್ನಲ್ಲೇ ಪ್ರಿಯತಮನೂ ಆತ್ಮಹತ್ಯೆ
Surathkal; ಉದ್ಯಮಿಯ ಮೇಲೆ ಪತ್ನಿ, ಸಂಬಂಧಿಕರಿಂದ ಹಲ್ಲೆ, ಗೃಹಬಂಧನ
Moodabidri ಹೊಸಬೆಟ್ಟು: ಈಜುಕೊಳಕ್ಕೆ ಧುಮುಕಿದ ಯುವಕ ಸಾವು