ಮಕ್ಕಳ ಉಜ್ವಲ ಭವಿಷ್ಯಕ್ಕೆ ಗಂಭೀರ ಚಿಂತನೆ ಅಗತ್ಯ
Team Udayavani, Jul 6, 2019, 10:52 AM IST
ಹೊಳೆಆಲೂರ: ಪ್ರಸ್ತುತ ದಿನಗಳಲ್ಲಿ ಗುರಿ-ಸಾಧನೆಗೆ ವಿಫುಲ ಅವಕಾಶಗಳಿದ್ದರೂ ಯುವಜನತೆ ಭವಿಷ್ಯದ ಬಗ್ಗೆ ಗಂಭೀರವಾಗಿ ಚಿಂತನೆ ಮಾಡುತ್ತಿಲ್ಲ ಎಂದು ಡಾ| ಪ್ರಕಾಶ ಜಂಬಲದಿನ್ನಿ ಹೇಳಿದರು.
ಸ್ಥಳೀಯ ಯಚ್ಚರೇಶ್ವರ ವಿದ್ಯಾ ಸಂಸ್ಥೆಯಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜ್ಞಾನ ವಿಕಾಸ ಸಂಸ್ಥೆಯ ವತಿಯಿಂದ ಶುಕ್ರವಾರ ನಡೆದ ಯುವ ಜನ ಜಾಗೃತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ವಿದ್ಯಾರ್ಥಿಗಳ ಭವಿಷ್ಯ ಸುಂದರ ಆಗಬೇಕಾದರೆ ಜೀವನದಲ್ಲಿ ಸಕಾರಾತ್ಮಕ ಚಟುವಟಿಕೆಯಲ್ಲಿ ತೊಡಗಿಕೊಳ್ಳಬೇಕು. ಸ್ಪಷ್ಟವಾದ ಗುರಿ, ಕಠಿಣ ಪರಿಶ್ರಮ, ಪ್ರಾಮಾಣಿಕ ಪ್ರಯತ್ನದಿಂದ ಏನು ಬೇಕಾದರೂ ಸಾಧಿಸಬಹುದು. ಕೇವಲ ಅಂಕ ಗಳಿಸಿದರೆ ಸಾಲದು, ಸಮಾಜಮುಖೀ ಧೋರಣೆ ಬೆಳೆಸಿಕೊಳ್ಳಬೇಕು ಎಂದು ಹೇಳಿದರು.
ಹೊಳೆಆಲೂರ ವೈದ್ಯರ ಸಂಘದ ಅಧ್ಯಕ್ಷ ಡಾ| ಎಸ್.ಬಿ.ಹಿರೇಗೌಡ್ರ ಮಾತನಾಡಿ, ಸಕಲ ಐಶ್ವರ್ಯಗಳಿಗಿಂತ ಆರೋಗ್ಯ ಸಂಪತ್ತು ಸರ್ವ ಶ್ರೇಷ್ಠ. ಯುವ ಜನಾಂಗ ಆಧುನಿಕತೆಯ ಹೆಸರಿನಲ್ಲಿ ಗುಟಕಾ, ಮದ್ಯಪಾನ, ಸಿಗರೇಟ್ಸೇವನೆಯಂತಹ ದುಷ್ಟಚಟಗಳಿಗೆ ಬಲಿಯಾಗುತ್ತಿರುವುದು ವಿಷಾದನೀಯ ಎಂದು ಹೇಳಿದರು.
ಯಚ್ಚರೇಶ್ವರ ವಿದ್ಯಾ ಸಂಸ್ಥೆಯ ಅಧ್ಯಕ್ಷ ಎಚ್.ಕೆ. ಪಟೇಲ್, ವಿಶ್ವಕರ್ಮ ವಿಕಾಸ ಸಂಸ್ಥೆಯ ಅಧ್ಯಕ್ಷ ಪಾಂಡುರಂಗ ಪತ್ತಾರ, ಪ್ರಾಚಾರ್ಯ ಪಿ.ಆರ್. ವಾಗ್ಮೋಡೆ. ಎಸ್.ಜಿ. ಸಾಸ್ವಿಹಾಳ, ಮಹೇಶ ಘಾಳಿ, ಮಂಜುಳಾ ರೊಟ್ಟಿಗವಾಡ, ಬಿ.ಎಫ್. ಬಾಲನಗೌಡ್ರ, ಎಸ್.ಕೆ. ಆಡಿನ, ಎಸ್.ಎನ್.ಎಲಿಗಾರ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಗದಗ: ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
MUST WATCH
ಹೊಸ ಸೇರ್ಪಡೆ
Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ
Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು