ನೈಸರ್ಗಿಕ ಸಂಪನ್ಮೂಲ ಕಾಮಗಾರಿ ವೀಕ್ಷಣೆ
Team Udayavani, Jul 6, 2019, 11:01 AM IST
ರೋಣ: ತಾಲೂಕಿನ ವಿವಿಧ ಗ್ರಾಮಗಳಿಗೆ ಕೇಂದ್ರ ಜಲಶಕ್ತಿ ಅಭಿಯಾನ ತಂಡ ಭೇಟಿ ನೀಡಿ ನೈಸರ್ಗಿಕ ಸಂಪನ್ಮೂಲ ಕಾಮಗಾರಿ ವೀಕ್ಷಿಸಿತು.
ರೋಣ: ಕೇಂದ್ರ ಸರ್ಕಾರದ ಜಲಶಕ್ತಿ ಅಭಿಯಾನದ ಮೂಲಕ ಬರಗಾಲವನ್ನು ಎದುರಿಸುತ್ತಿರುವ ಜಿಲ್ಲೆಗಳಲ್ಲಿ ನೀರಿ ಸಂರಕ್ಷಣೆಯ ಕುರಿತು ಅಭಿಯಾನವನ್ನು ಮಾಡಲಾಗುವುದು ಎಂದು ಜಲಶಕ್ತ ಅಭಿಯಾನ ಯೋಜನೆಯ ಉಪ ಕಾರ್ಯದರ್ಶಿ ಗದಗ ಜಿಲ್ಲಾ ಬ್ಲಾಕ್ ನೊಡೆಲ್ ಅಧಿಕಾರಿ ಅನಿಲಕುಮಾರ ಹೇಳಿದರು.
ತಾಲೂಕಿನ ವಿವಿಧ ಗ್ರಾಮಗಳ ಜಲಶಕ್ತಿ ಹಾಗೂ ಜಲಾಮೃತ ಯೋಜನೆಯಡಿ ಕೈಗೊಳ್ಳಲಾದ ಕಾಮಗಾರಿಯನ್ನು ವಿಕ್ಷಿಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು. ಕೇಂದ್ರ ಸರ್ಕಾರವು ಬರಗಾಲದಿಂದ ತತ್ತರಿಸಿರುವ ಜಿಲ್ಲೆಗಳನ್ನು ಗುರುತಿಸಿ ಅಂತಹ ಜಿಲ್ಲೆಗಳಲ್ಲಿ ಅಂತರ್ಜಲ ಮಟ್ಟ ಹೆಚ್ಚಿಸುವ ನಿಟ್ಟಿನಲ್ಲಿ ಅರಣ್ಯಿಕರಣ,ಅಂತರ್ಜಲ ಪುನಶ್ಚೇತನ, ಮಳೆ ನೀರು ಸಂಗ್ರಹಣೆ ಕುರಿತಾಗಿ ಗ್ರಾಮೀಣ ಪ್ರದೇಶದ ಜನರಲ್ಲಿ ಅರಿವು ಮೂಡಿಸಲಾಗುವುದು ಎಂದರು.
ಇಳಿಜಾರು ಪ್ರದೇಶದಲ್ಲಿ ನೀರು ಹರಿದು ಮಣ್ಣಿನ ಫಲವತ್ತತೆಯೂ ಕಡಿಮೆಯಾಗುತ್ತದೆ. ಅದನ್ನು ತಡೆಗಟ್ಟಲು ಕ್ರಮ ಕೈಗೊಳ್ಳಬೇಕು. ಅಲ್ಲದೇ ಹಳ್ಳ, ಕೊಳ್ಳ, ನದಿಯಲ್ಲಿ ವ್ಯರ್ಥವಾಗಿ ಹರಿದು ಹೋಗುವ ಮಳೆ ನೀರನ್ನು ಚೆಕ್ ಡ್ಯಾಂ ಗಳನ್ನು ನಿರ್ಮಾಣ ಮಾಡುವ ಮೂಲಕ ನೀರನ್ನು ಸಂಗ್ರಹಿಸಿ ಅಂತರ್ಜಲ ಮಟ್ಟವನ್ನು ಹೆಚ್ಚಿಸಲಾಗುವುದು ಎಂದರು. ತಾಪಂ ಇಒ ಎಂ.ವಿ. ಚಳಗೇರಿ, ಎನ್.ಆರ್.ಇ.ಜಿ ಸಹಾಯಕ ನಿರ್ದೇಶಕ ಸಂತೋಷ ಪಾಟೀಲ, ಸಿದ್ದೇಶ ಕೊಡಿಹಳ್ಳಿ, ಎಂ.ಎಸ್.ಜಕ್ಕಣ್ಣವರ, ಜಿಪಂ ಅಭಿಯಂತರರಾದ ಶಂಕರಗೌಡ ಪಾಟೀಲ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Central Government ನೀಡಿದ ಬರ ಹಣ ಶೀಘ್ರವೇ ರೈತರ ಖಾತೆಗೆ ಜಮಾ: ಕೃಷ್ಣ ಬೈರೇಗೌಡ
ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ
ಮಹಾತ್ಮರ ಸಮಾಜಮುಖಿ ಸಂದೇಶ ಸಾರ್ವಕಾಲಿಕ: ಗುರುಮೂರ್ತಿ ಶ್ರೀ
ಮೋದಿಯಿಂದ ಬಡತನ ಮುಕ್ತ ಭಾರತ: ಬಸವರಾಜ ಬೊಮ್ಮಾಯಿ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
MUST WATCH
ಹೊಸ ಸೇರ್ಪಡೆ
Andhra Pradesh; ಸಿಎಂ ಜಗನ್ ಪಕ್ಷಕ್ಕೆ ರೈತರು,ಟೆೃಲರ್, ಗೃಹಿಣಿಯರೇ ಸ್ಟಾರ್ ಪ್ರಚಾರಕರು!
BJP ಅಧಿಕಾರದ ರಾಜ್ಯಗಳಲ್ಲಿ ಎಸ್ಸಿಪಿ, ಟಿಎಸ್ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ
Loksabha; ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್
ಉಗ್ರರಿದ್ದಲ್ಲೇ ನುಗ್ಗಿ ವಿನಾಶ; ಇದು ನವಭಾರತದ ಹೆಗ್ಗಳಿಕೆ: ಪ್ರಧಾನಿ ಮೋದಿ
Lok Sabha; ರಾಯ್ಬರೇಲಿ, ಅಮೇಠಿ ಕಾಂಗ್ರೆಸ್ ಅಭ್ಯರ್ಥಿಗಳ ಬಗ್ಗೆ ಇನ್ನೂ ಸಸ್ಪೆನ್ಸ್!