ಮಿತಿ ಮೀರಿ ಮಕ್ಕಳ ಸಾಗಿಸಬೇಡಿ

ಶಾಲಾ ಮಕ್ಕಳ ಸಾಗಿಸುವ ವಾಹನ ಚಾಲಕರಿಗೆ, ಮಾಲಿಕರಿಗೆ ಡಿವೈಎಸ್‌ಪಿ ಚೌಡಪ್ಪ ಸಲಹೆ

Team Udayavani, Jul 6, 2019, 1:57 PM IST

kolar-tdy-1..

ಕೋಲಾರದಲ್ಲಿ ಶಾಲಾ ಮಕ್ಕಳ ಸಾಗಿಸುವ ವಾಹನ ಮಾಲಿಕರು, ಚಾಲಕರಿಗೆ ಜಾಗೃತಿ ಮೂಡಿಸುವ ಕಾರ್ಯಕ್ರಮದಲ್ಲಿ ಡಿವೈಎಸ್‌ಪಿ ಚೌಡಪ್ಪ ಮಾತನಾಡಿದರು.

ಕೋಲಾರ: ಆಟೋ, ಟೆಂಪೋ, ಬಸ್‌ ಮತ್ತಿತರ ವಾಹನಗಳಲ್ಲಿ ಮಿತಿಮೀರಿ ಶಾಲಾ ಮಕ್ಕಳನ್ನು ತುಂಬಬಾರದು ಎಂದು ಡಿವೈಎಸ್ಪಿ ಚೌಡಪ್ಪ ತಾಕೀತು ಮಾಡಿದರು.

ನಗರದ ಪತ್ರಕರ್ತರ ಭವನದಲ್ಲಿ ಪೊಲೀಸ್‌, ಸಾರಿಗೆ, ಶಿಕ್ಷಣ ಇಲಾಖೆ ಹಾಗೂ ಕರ್ನಾಟಕ ಕಮರ್ಷಿಯಲ್ ವೆಹಿಕಲ್ಸ್ ಆಪರೇಟರ್ ವೆಲ್ಫೇರ್‌ ಟ್ರಸ್ಟ್‌ ಆಯೋಜಿಸಿದ್ದ ಶಾಲಾ ಮಕ್ಕಳ ಸುರಕ್ಷತೆ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ವಾಹನ ಚಾಲಕರು ಪರವಾನಗಿ ಪಡೆದಿರುವುದು ಮುಖ್ಯ. ಜತೆಗೆ ರಸ್ತೆ ಸುರಕ್ಷತೆ, ಸಾರಿಗೆ ನಿಯಮ ಮತ್ತು ಕಾನೂನು ಪಾಲನೆ ಮಾಡಬೇಕು. ಕೆಲವೊಮ್ಮೆ ಅರಿವಿಲ್ಲದೆ, ಇದ್ದರೂ ತಪ್ಪು ಮಾಡುತ್ತಾರೆ. ಇದು ಸರಿಯಲ್ಲ ಎಂದು ಎಚ್ಚರಿಸಿದರು.

ವಾಹನ ಚಾಲನೆಯಲ್ಲಿ ಜಾಗ್ರತೆ ಮತ್ತು ಸಮಯ ಪ್ರಜ್ಞೆ ಮುಖ್ಯ, ಆಟೋಗಳಲ್ಲಿ 3+1 ಮಾತ್ರ ಕರೆದುಕೊಂಡು ಹೋಗಲು ಅವಕಾಶವಿದೆ. ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಕಾನೂನು ಪಾಲಿಸಬೇಕು, ಸರಕು ಸಾಗಾಣಿಕೆ ವಾಹನದಲ್ಲಿ ಜನರ ಸಾಗಾಣಿಕೆಯೂ ಕಾನೂನು ಬಾಹಿರ ಎಂದು ಸೂಚಿಸಿದರು.

ಠಾಣೆಗೆ ಮಾಹಿತಿ ನೀಡಿ: ಸಾರ್ವಜನಿಕ ಶಿಕ್ಷಣ ಇಲಾಖೆೆ ಉಪನಿರ್ದೇಶಕ ಕೆ. ರತ್ನಯ್ಯ, ಶಾಲಾ ಮಕ್ಕಳನ್ನು ಸಾಗಿಸುವ ವಾಹನ ಚಾಲಕರು ಸುರಕ್ಷತೆ, ಭದ್ರತೆಗೆ ಒತ್ತು ನೀಡಬೇಕು. ಆಟೋ ಚಾಲಕರ ಮಾಹಿತಿಯನ್ನು ಸಮೀಪದ ಪೊಲೀಸ್‌ ಠಾಣೆಗೆ ನೀಡಬೇಕು ಎಂದು ಸಲಹೆ ನೀಡಿದರು.

ತಿಳಿವಳಿಕೆ ಅಗತ್ಯ: ಪ್ರಾದೇಶಿಕ ಸಾರಿಗೆ ಅಧಿಕಾರಿ ಎನ್‌.ಗೋಪಾಲಕೃಷ್ಣ, ಸಾರಿಗೆ ನಿಯಮಗಳಿಗೆ ಕಾಲಕಾಲಕ್ಕೆ ತಿದ್ದುಗಳಾಗುತ್ತಲೇ ಇದ್ದು, ಸುರಕ್ಷತೆ ವಿಚಾರದಲ್ಲಿ ಕೇಂದ್ರ ಸರ್ಕಾರ, ಸುಪ್ರೀಂ ಕೋರ್ಟ್‌ ಹಲವು ಆದೇಶಗಳನ್ನು ನೀಡಿದೆ. ಅವುಗಳ ಬಗ್ಗೆ ತಿಳಿವಳಿಕೆ ಅಗತ್ಯ ಎಂದರು. ಟ್ರಸ್ಟ್‌ನ ಅಧ್ಯಕ್ಷ ಹಾಗೂ ತ್ರಿಚಕ್ರ ವಾಹನ ಚಾಲಕರ ಸಂಘದ ರಾಜ್ಯ ಗೌರವಾಧ್ಯಕ್ಷ ಕೆ.ವಿ.ಸುರೇಶ್‌ಕುಮಾರ್‌, ರಾಜ್ಯಾದ್ಯಂತ ನಿಯಮ ಉಲ್ಲಂಘಿಸಿ ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗುವ ಆಟೋ ಇನ್ನಿತರೆ ಚಾಲಕರ ಮೇಲೆ ದಂಡ ವಿಧಿಸಲಾಗುತ್ತಿದೆ. ಚಾಲಕರಿಗೆ ಅರಿವು ಮೂಡಿಸುವ ಕೆಲಸ ಆಗುತ್ತಿಲ್ಲ. ಜಿಲ್ಲೆಯಲ್ಲಿ ಟ್ರಸ್ಟ್‌ ಜಿಲ್ಲಾಧಿಕಾರಿಗಳ ಸೂಚನೆ ಮೇರೆಗೆ ಮೊದಲು ಜಾಗೃತಿ ಮೂಡಿಸುವ ಕಾರ್ಯ ಕೈಗೆತ್ತಿಕೊಂಡಿದೆ. ಮುಂದಿನ ದಿನಗಳಲ್ಲಿ ಚಾಲಕರು ನಿಯಮ ಉಲ್ಲಂಘಿಸಿದರೆ ಕಾನೂನು ಕ್ರಮ ಕ್ರಮಕ್ಕೆ ಅವರೇ ಹೊಣೆಗಾರರು ಎಂದು ಎಚ್ಚರಿಸಿದರು.

ಸಾಲ ಸೌಲಭ್ಯ ಒದಗಿಸಿ: ಸರ್ಕಾರವು ಆಟೋ, ಬಸ್‌ ಇನ್ನಿತರೆ ಸಾರ್ವಜನಿಕ ಸಂಚಾರದ 15 ವರ್ಷಕ್ಕಿಂತ ಹಳೆಯ ವಾಹನಗಳನ್ನು ನಿರ್ಬಂಧಿಸಿದೆ. ಆದರೆ, ಇದರ ಸಾಧಕ ಬಾಧಕಗಳನ್ನು ಚರ್ಚಿಸಿಲ್ಲ. 15 ವರ್ಷ ಹಳೆಯದಾದ ಗಾಡಿಗಳ ವಿಲೇವಾರಿ ಹೇಗೆ ಎಂಬುದು ಸ್ಪಷ್ಟಪಡಿಸಬೇಕು, ವಾಹನ ಬಳಸಲು ಯೋಗ್ಯವಾಗಿರದಿದ್ದರೆ ಹೊಸ ವಾಹನ ಖರೀದಿಗೆ ಬ್ಯಾಂಕ್‌ ಇಲ್ಲವೇ ಸಹಕಾರ ಕ್ಷೇತ್ರದಿಂದ ಸಾಲ ಸೌಲಭ್ಯ ಕಲ್ಪಿಸಬೇಕು ಎಂದು ಒತ್ತಾಯಿಸಿದರು.

ಟ್ರಸ್ಟ್‌ನಿಂದ ಒಂದು ತಿಂಗಳ ಕಾಲ ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಸಂಬಂಧಿಸಿದ ಇಲಾಖೆ ಅಧಿಕಾರಿಗಳಿಂದ ದಿನಾಂಕ ನಿಗದಿಪಡಿಸಿ ಸುರಕ್ಷತಾ ಪ್ರಯಾಣ ಮತ್ತು ಪ್ರಯಾಣಿಕರ ಸುರಕ್ಷತೆ ಹೆಸರಿನಲ್ಲಿ ಜಾಗೃತಿ ಅಭಿಯಾನ ಹಮ್ಮಿಕೊಳ್ಳಲಾಗುವುದು ಎಂದರು.

ಜಿಲ್ಲಾ ಡ್ರೈವಿಂಗ್‌ ಸ್ಕೂಲ್ ಮಾಲಿಕರ ಸಂಘದ ಅಧ್ಯಕ್ಷ ಆರ್‌.ಗೋಪಾಲ್, ಇಫ್ಕೋಟೋಕಿಯಾ ವಿಮಾ ಸಂಸ್ಥೆಯ ಪ್ರತಿನಿಧಿ ನಾಗಮಣಿ, ಖಾಸಗಿ ಶಿಕ್ಷಣ ಸಂಸ್ಥೆಗಳ ಜಿಲ್ಲಾಧ್ಯಕ್ಷ ಸದಾನಂದ, ಶ್ರೀಕೃಷ್ಣ, ಆಟೋ ಚಾಲಕರ ಸಂಘದ ತಾಲೂಕು ಅಧ್ಯಕ್ಷ ಕೆ.ನಾರಾಯಣಸ್ವಾಮಿ, ಮಾಜಿ ಅಧ್ಯಕ್ಷ ಅಮ್ಜದ್‌ ಪಾಷ, ಮಂಜುನಾಥ್‌, ಆರ್‌.ಶ್ರೀನಿವಾಸನ್‌ ಮತ್ತಿತರರಿದ್ದರು.

ಟಾಪ್ ನ್ಯೂಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 23 ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

jameer

H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 23 ಮಂದಿಗೆ ಗಾಯ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.