ರೈತರ ಮೇಲೆ ದ್ವೇಷ ಬಿಟ್ಟು ನೀರು ಬಿಡಿ

ರೈತ ಮುಖಂಡ ಮಂಜೇಶ್‌ಗೌಡ ನೇತೃತ್ವದಲ್ಲಿ ರೈತರ ಪ್ರತಿಭಟನೆ

Team Udayavani, Jul 6, 2019, 2:21 PM IST

mandya-tdy-1..

ಶ್ರೀರಂಗಪಟ್ಟಣದಲ್ಲಿ ಕೆಆರ್‌ಎಸ್‌ನಿಂದ ಜಿಲ್ಲೆಯ ನಾಲೆಗಳಿಗೆ ನೀರು ಹರಿಸಲು ಆಗ್ರಹಿಸಿ ವಿವಿಧ ರೈತಪರ ಸಂಘಟನೆಗಳಿಂದ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು.

ಶ್ರೀರಂಗಪಟ್ಟಣ: ನಾಲೆಗಳಿಗೆ ನೀರು ಹರಿಸದ ಸರ್ಕಾರದ ಕ್ರಮ ಖಂಡಿಸಿ, ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ವಿವಿಧ ರೈತಪರ ಸಂಘಟನೆಗಳಿಂದ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಲಾಯಿತು.

ಪಟ್ಟಣದ ಕುವೆಂಪು ವೃತ್ತದಲ್ಲಿ ರೈತ ಮುಖಂಡ ಮಂಜೇಶ್‌ಗೌಡ ನೇತೃತ್ವದಲ್ಲಿ ಜಮಾಯಿಸಿದ ರೈತ ಸಂಘ, ದಲಿತ ಸಂಘಟನೆ ಸೇರಿದಂತೆ ವಿವಿಧ ಕನ್ನಡ ಪರ ಸಂಘಟನೆಗಳು ಮೈಸೂರು-ಬೆಂಗಳೂರು ಹೆದ್ಧಾರಿ ತಡೆದು ಪ್ರತಿಭಟನೆ ನಡೆಸಿದರು.

ರೈತರ ಕಡೆಗಣನೆ: ನಾಲೆಗಳಿಗೆ ನೀರು ಹರಿಸಲು ಹಲವಾರು ದಿನಗಳಿಂದ ಜಿಲ್ಲಾ ಮಟ್ಟದಲ್ಲಿ ಪ್ರತಿಭಟನೆ ನಡೆಸಿದರೂ ಸರ್ಕಾರ ರೈತರ ಬಗ್ಗೆ ಕಾಳಜಿ ವಹಿಸದೆ, ಪ್ರತಿಭಟನಾ ಸ್ಥಳಕ್ಕೆ ಸರ್ಕಾರದ ಯಾವುದೇ ಮಂತ್ರಿಗಳು, ಶಾಸಕರು ಆಗಮಿಸದೆ ರೈತರನ್ನು ಕಡೆಗಣಿಸಿದೆ. ರೈತರ ಬಗ್ಗೆ ಗಮನ ಹರಿಸದೆ ಕಟಾವಿಗೆ ಬಂದ ಕಬ್ಬು ಸೇರಿದಂತೆ ಇತರ ಬೆಳೆಗಳಿಗೆ ನೀರಿಲ್ಲದೆ ಪರದಾಡುವಂತಾಗಿದೆ ಎಂದು ರೈತ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಂಜೇಶ್‌ ಗೌಡ ಸರ್ಕಾರ ಹಾಗೂ ಜಿಲ್ಲಾಡಳಿತದ ವಿರುದ್ಧ ಕಿಡಿಕಾರಿದರು.

ಮಲತಾಯಿ ಧೋರಣೆ: ದಸಂಸ ರಾಜ್ಯ ಸಂಚಾಲಕ ಗುರುಪ್ರಸಾದ್‌ ಕೆರಗೋಡು ಮಾತನಾಡಿ, ಜಿಲ್ಲೆಯ ಬಗ್ಗೆ ಅಪಾರ ಗೌರವವಿದ್ದ ಮುಖ್ಯಮಂತ್ರಿಗಳು ಲೋಕಸಭೆ ಚುನಾವಣೆ ಬಳಿಕ ಮಲತಾಯಿ ಧೋರಣೆ ಅನುಸರಿಸು ತ್ತಿದ್ದಾರೆ. ಕೂಡಲೆ ರೈತರ ಬೇಡಿಕೆಗಳಿಗೆ ಸ್ಪಂದಿಸುವ ಕೆಲಸ ಮಾಡಬೇಕೆಂದು ಆಗ್ರಹಿಸಿದರು.

ದ್ವೇಷ ಬೇಡ, ನೀರು ಹರಿಸಿ: ತಾಲೂಕು ರೈತ ಸಂಘದ ಅಧ್ಯಕ್ಷ ಕೃಷ್ಣೇಗೌಡ ಮಾತನಾಡಿ, ಮುಖ್ಯಮಂತ್ರಿಗಳು ನಾಲೆಗಳಿಗೆ ನೀರು ಹರಿಸದೆ, ಕೇಂದ್ರ ಕಾವೇರಿ ನೀರು ನಿರ್ವಹಣಾ ಮಂಡಳಿಯತ್ತ ಕೈ ತೋರಿಸುವುದು ಮುಖ್ಯಮಂತ್ರಿ ಕುಮಾರಸ್ವಾಮಿ ಘನತೆಗೆ ತಕ್ಕುದಲ್ಲ. ಅವರನ್ನು ಬೆಂಬಲಿಸಿ ಜಿಲ್ಲೆ 7 ಶಾಸಕರನ್ನು ಕೊಟ್ಟಿದೆ. ಆದರೆ, ಮಗನನ್ನು ಎಂಪಿ ಮಾಡಲಿಲ್ಲ ಎಂದು ಜಿಲ್ಲೆಯ ಜನರ ಬಗ್ಗೆ ಕ್ರೂರವಾಗಿ ಮಾತನಾಡುವುದು. ನಾಲೆಗಳಿಗೆ ನೀರು ಹರಿಸದಿರುವುದು ಸರಿಯಲ್ಲ ಎಂದರು. ಪ್ರತಿಭಟನೆಯಲ್ಲಿ ಜಿಪಂ ಮಾಜಿ ಸದಸ್ಯ ಕೆ.ಟಿ.ಗೋವಿಂದೇಗೌಡ, ಎಂ.ಬಿ.ನಾಗಣ್ಣ, ರೈತ ಸಂಘದ ಕಾಯ್ನಾಧ್ಯಕ್ಷ ಸ್ವಾಮೀಗೌಡ, ಅಧ್ಯಕ್ಷ ಶ್ರೀಕಂಠಯ್ಯ, ಕರವೇ ಅಧ್ಯಕ್ಷ ಶಂಕರ್‌, ದಲಿತ ಸಂಘಟನೆಯ ಮುಖಂಡರಾದ ಕುಬೇರಪ್ಪ, ರವಿಚಂದ್ರ, ಪಿಎಸ್‌ಎಸ್ಕೆ ಮಾಜಿ ನಿರ್ದೇಶಕ ಪಾಂಡು, ಜಿಲ್ಲಾ ರೈತ ಸಂಘದ ಉಪಾಧ್ಯಕ್ಷ ನಾಗೇಂದ್ರಸ್ವಾಮಿ, ಕರವೇ ಹರೀಶ್‌, ಚಂದ್ರಶೇಖರ್‌, ಜಯರಾಮು, ವಿವಿಧ ಜನಪರ ಸಂಘಟನೆಗಳ ಕಾರ್ಯಕರ್ತರು ಅಪಾರ ಸಂಖ್ಯೆ ರೈತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಸಂಚಾರ ಅಸ್ತವ್ಯಸ್ತ: ಒಂದು ಗಂಟೆಗೂ ಹೆಚ್ಚುಹೊತ್ತು ಹೆದ್ದಾರಿ ತಡೆ ಮಾಡಿದ್ದರಿಂದ ವಾಹನ ಸಂಚಾರ ಅಸ್ತವ್ಯಸ್ತಗೊಂಡು ಪ್ರಯಾಣಿ ಕರು ಪರದಾಡುವಂತಾಗಿದೆ. ಬಳಿಕ‌ ಸ್ಥಳಕ್ಕೆ ತಹಶೀಲ್ದಾರ್‌ ನಾಗೇಶ್‌ ಆಗಮಿಸಿ ಪ್ರತಿಭಟನಾ ಕಾರರ ಮನವೊಲಿಸಿದರು.

ಟಾಪ್ ನ್ಯೂಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

15

UV Fusion: ಜೀವನವನ್ನು ಪ್ರೀತಿಸೋಣ

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.