ಕರೆಂಟ್ ಹೋದ್ರೆ ಬಿಎಸ್ಸೆನ್ನೆಲ್ ಔಟ್!

•ಶಿರಸಿ ತಾಪಂನಿಂದ ಪ್ರಧಾನಿಗೆ ಪತ್ರ •ಇದ್ದೂ ಸತ್ತು ಹೋದ ದೂರವಾಣಿ

Team Udayavani, Jul 6, 2019, 4:04 PM IST

uk-tdy-7..

ಶಿರಸಿ: ತಾಲೂಕು ಪಂಚಾಯತ್‌ ಮಾಸಿಕ ಪ್ರಗತಿ ಪರಿಶೀಲನಾ ಸಭೆ ನಡೆಯಿತು.

ಶಿರಸಿ: ಎಲ್ಲ ಇದ್ದೂ ಸತ್ತು ಹೋದ ದೂರವಾಣಿ. ಬಿಎಸ್ಸೆನ್ನೆಲ್ ಎಲ್ಲಿದೆ ಎಂದು ಕೇಳಬೇಕಾಗಿದೆ. ತಾಲೂಕಿನ ದೂರವಾಣಿ ಅವ್ಯವಸ್ಥೆ ಕುರಿತು ತಕ್ಷಣ ಸಂಸದ ಅನಂತಕುಮಾರ ಹೆಗಡೆ, ಪ್ರಧಾನಿ ನರೇಂದ್ರ ಮೋದಿ ಅವರಿಗೆ ದೂರು ದಾಖಲಿಸಬೇಕು ಎಂದು ತಾಪಂ ಠರಾವು ಕೈಗೊಳ್ಳಬೇಕು ಎಂಬ ಸದಸ್ಯ ನರಸಿಂಹ ಹೆಗಡೆ ಬಕ್ಕಳ ಅವರ ಒತ್ತಾಯಕ್ಕೆ ಇಡೀ ಸಭೆ ಒಕ್ಕೊರಲಿನ ನಿರ್ಣಯ ಅಂಗೀಕರಿಸಿತು.

ಶುಕ್ರವಾರ ಅಧ್ಯಕ್ಷೆ ಶ್ರೀಲತಾ ಕಾಳೇರಮನೆ ಅಧ್ಯಕ್ಷತೆಯಲ್ಲಿ ನಡೆದ ಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ವಿಷಯ ಪ್ರಸ್ತಾಪಿಸಿದ ಬಕ್ಕಳ, ದೂರವಾಣಿ ವಿನಿಮಯ ಕೇಂದ್ರಗಳಿಗೆ ಕರೆಂಟ್ ಬಂದರೆ ಮಾತ್ರ ಚಾಲೂ ಇರುತ್ತವೆ. ಜನರೇಟರ್‌, ಬ್ಯಾಟರಿ ಎಲ್ಲ ಇದ್ದರೂ ನಿರ್ವಹಣೆ ಇಲ್ಲ. ಕೇಬಲ್ ಕಟ್ ಆಗಿದ್ದರೆ ದುರಸ್ತಿಗೂ ತಂತಿ ಇಲ್ಲ. ನಿರ್ಲಕ್ಷಿತ ನಿಗಮ ಇದಾಗಿದೆ ಎಂದರು.

ಶಿರಸಿ ಕಚೇರಿಗೆ ಕೇಳಿದರೂ ಬೇಕಾಬಿಟ್ಟಿ ಉತ್ತರ ಕೊಡುತ್ತಾರೆ. ಗ್ರಾಹಕರ ಜೊತೆ ಹೇಗೆ ನಡೆದುಕೊಳ್ಳಬೇಕು ಎಂಬುದೂ ಗೊತ್ತಿಲ್ಲ ಎಂದೂ ಸದಸ್ಯರು ಧ್ವನಿಗೂಡಿಸಿ, ತಕ್ಷಣ ಶಿರಸಿ ತಾಲೂಕಿನಲ್ಲಿ ಈ ಬಗ್ಗೆ ಕ್ರಮ ಆಗಬೇಕು ಎಂದಾಗ ಉಪಾಧ್ಯಕ್ಷ ಚಂದ್ರು ಎಸಳೆ, ಸ್ಥಾಯಿ ಸಮಿತಿ ಅಧ್ಯಕ್ಷ ರವಿ ಹಳದೋಟ, ಅಧ್ಯಕ್ಷೆ ಕಾಳೇರಮನೆ ಕೂಡ ಧ್ವನಿಗೂಡಿಸಿದರು.

ಹೆಸ್ಕಾಂ ಅಧಿಕಾರಿಗಳು ಸಭೆಗೆ ವರದಿ ಕೊಟ್ಟಿಲ್ಲ ಎಂದೇ ಅಸಮಾಧಾನ ವ್ಯಕ್ತಪಡಿಸಿದ ಅಧ್ಯಕ್ಷೆ ಕಾಮಗಾರಿ ವಿಳಂಬ, ದಾಸನಕೊಪ್ಪ ಗ್ರಿಡ್‌ ಸಮಸ್ಯೆಗಳ ಕುರಿತೂ ಪ್ರಶ್ನಿಸಿ ನಾವೇನು ಉತ್ತರ ಕೊಡಬೇಕು. ಯಾಕೋ ಕಳಪೆ ಕಾಮಗಾರಿ ಆದಂತಿದೆ ಎಂದೂ ಹೇಳಿದರು.

ಎಷ್ಟೋ ಕಡೆ ರಸ್ತೆ ಪಕ್ಕವೇ ಕಂಬ ನೆಟ್ಟಿದ್ದಾರೆ. ಒಂದು ಟೊಂಗೆ ಕೂಡ ಹೊಸ ಲೈನ್‌ ಮಾಡುವಾಗಲೂ ಕಡಿಯುವುದಿಲ್ಲ. ಮೇಲೆ ಮೇಲೆ ಕಂಬ ಹುಗೀತಾರೆ, ಇನ್ಸುಲೇಟರ್‌ ಕತೆ ಹೇಳುವದೂ ಬೇಡ. ಪದೇ ಪದೇ ಪಂಚರ್‌ ಆಗುತ್ತದೆ ಎಂದು ಉಪಾಧ್ಯಕ್ಷ ಚಂದ್ರು ಎಸಳೆ ಪ್ರಶ್ನಿಸಿದರು. ಸದಸ್ಯೆ ರತ್ನಾ ಶೆಟ್ಟಿ ಲಂಡಕನಳ್ಳಿಯಲ್ಲಿ ಟಿಸಿ ಕೂಡಿಸಿ ಆರು ತಿಂಗಳಾದರೂ ಪವರ್‌ ಕನೆಕ್ಷನ್‌ ಕೊಟ್ಟಿಲ್ಲ ಎಂದೂ ದೂರಿದಾಗ ಸ್ಥಳದಲ್ಲಿ ಸಮಸ್ಯೆ ಇರಬೇಕು ಎಂದು ಅಧಿಕಾರಿಗಳು ಪ್ರತಿಕ್ರಿಯೆ ನೀಡಿದರು. ಸಮಸ್ಯೆ ಏನೂ ಇಲ್ಲ, ನೀವು ಸ್ಥಳಕ್ಕೆ ಬನ್ನಿ ಎಂದೂ ಶೆಟ್ಟಿ ಆಹ್ವಾನಿಸಿದರು.

ಬಿಇಒ ಸದಾನಂದ ಸ್ವಾಮಿ, ಎರಡನೇ ಸೆಮಿಸ್ಟರ್‌ನ ಎರಡೂವರೆ ಸಾವಿರ ಪುಸ್ತಕಗಳು ವಾರದೊಳಗೆ ಬರುತ್ತವೆ. ಸಮವಸ್ತ್ರ ಬಂದಿಲ್ಲ, 2450 ಬೈಸಿಕಲ್ ಬಂದಿದ್ದು, ಫಿಟಿಂಗ್‌ ಮಾಡಲಾಗುತ್ತಿದೆ ಎಂದು ತಿಳಿಸಿದರು.

ಇಒಒ ಚಿನ್ನಣ್ಣನವರ್‌, ಸದಸ್ಯೆ ಸರೋಜಾ ಭಟ್ಟ, ಸದಸ್ಯರಾದ ವಿನಾಯಕ ಹೆಗಡೆ, ನಾಗರಾಜ್‌ ಶೆಟ್ಟಿ ಇತರರು ಇದ್ದರು.

ಟಾಪ್ ನ್ಯೂಸ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qeeqwewqwqe

Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ

Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.