ಮನೆ ಮನೆಗೆ ಮೇಘಶ್ರೀ


Team Udayavani, Jul 7, 2019, 5:00 AM IST

M-1

ಸಾಮಾನ್ಯವಾಗಿ ಮೊದಲೆಲ್ಲ ಕಿರುತೆರೆ ಕಲಾವಿದರು, ಹಿರಿತೆರೆಗೆ ಹೋಗಬೇಕು ಅಲ್ಲಿ ಮಿಂಚಬೇಕು ಎನ್ನುವ ಆಲೋಚನೆಯಲ್ಲಿ ಇರುತ್ತಿದ್ದರು. ಆದರೆ, ಈಗ ಪರಿಸ್ಥಿತಿ ಹಾಗಿಲ್ಲ, ಹಿರಿತೆರೆಯಷ್ಟೇ ಸ್ಕೋಪ್‌ ಕಿರುತೆರೆಯಲ್ಲೂ ಇರುವುದರಿಂದ, ಅನೇಕ ಹಿರಿತೆರೆ ಕಲಾವಿದರು ಮತ್ತು ತಂತ್ರಜ್ಞರು ಕೂಡ ಕಿರುತೆರೆಯತ್ತ ಮುಖ ಮಾಡುತ್ತಿದ್ದಾರೆ. ಈಗ ಯಾಕೆ ಈ ವಿಷಯ ಅಂದ್ರೆ, ಕನ್ನಡದ ಅಂಥಾದ್ದೇ ಭರವಸೆಯ ನಟಿಮಣಿಯೊಬ್ಬರು ಚಿತ್ರರಂಗದಲ್ಲಿ ಬ್ಯುಸಿಯಾಗಿರುವಂತೆಯೇ, ಮತ್ತೆ ಕಿರುತೆರೆಯತ್ತ ಮುಖ ಮಾಡಿದ್ದಾರೆ. ಅಂದಹಾಗೆ, ಆ ನಟಿ ಮೇಘಶ್ರೀ. ಈಗಾಗಲೇ ಕನ್ನಡ ಮತ್ತು ತೆಲುಗು ಚಿತ್ರರಂಗದಲ್ಲಿ ನಾಯಕ ನಟಿಯಾಗಿ ಒಂದಷ್ಟು ಚಿತ್ರಗಳಲ್ಲಿ ನಟಿಸಿ ಸೈ ಎನಿಸಿಕೊಂಡಿರುವ ಮಲೆನಾಡ ಹುಡುಗಿ ಮೇಘಶ್ರೀ ಈಗ ಕಿರುತೆರೆಯತ್ತ ಮುಖ ಮಾಡುತ್ತಿದ್ದಾರೆ.

“ಲೋಕೇಶ್‌ ಪ್ರೊಡಕ್ಷನ್ಸ್‌’ ನಲ್ಲಿ ಸೃಜನ್‌ ಲೋಕೇಶ್‌ ನಿರ್ಮಿಸುತ್ತಿರುವ, ತೇಜಸ್ವಿ ನಿರ್ದೇಶನದ ಇವಳು ಸುಜಾತಾ ಧಾರಾವಾಹಿಯಲ್ಲಿ ನಟಿ ಮೇಘಶ್ರೀ, ಸುಜಾತಾ ಹೆಸರಿನ ಲೀಡ್‌ ರೋಲ್‌ನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಸದ್ಯ ಈ ಧಾರಾವಾಹಿಯ ಪ್ರೀ-ಪ್ರೊಡಕ್ಷನ್‌ ಕೆಲಸಗಳು ನಡೆಯುತ್ತಿದ್ದು, ಜುಲೈ ಅಂತ್ಯಕ್ಕೆ ಅಥವಾ ಆಗಸ್ಟ್‌ ಮೊದಲವಾರದಿಂದ ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗಲಿದೆ.

ಈ ಬಗ್ಗೆ ಮಾತನಾಡುವ ಮೇಘಶ್ರೀ, “ನಾನೊಬ್ಬಳು ನಟಿಯಾಗಬೇಕು ಎನ್ನುವ ಕನಸಿನಿಂದ ಈ ಕ್ಷೇತ್ರಕ್ಕೆ ಬಂದವಳು. ಕಲಾವಿದೆ ಯಾಗಿ ನನಗೆ ಸಿನಿಮಾ ಅಥವಾ ಸೀರಿಯಲ್‌ ಎನ್ನುವ ಯಾವುದೇ ಭೇದ-ಭಾವವಿಲ್ಲ. ಎರಡಕ್ಕೂ ಅದರದ್ದೇಯಾದ ಲಿಮಿಟೇಷನ್ಸ್‌ ಮತ್ತು ಇಂಪಾರ್ಟೆನ್ಸ್‌ ಇದ್ದೇ ಇರುತ್ತದೆ. ಸಿನಿಮಾ ನೋಡುವ ವರ್ಗವೇ ಬೇರೆ ಇರುತ್ತದೆ, ಸೀರಿಯಲ್‌ ನೋಡುವ ವರ್ಗವೇ ಬೇರೆ ಇರುತ್ತದೆ. ಇವತ್ತು ಕೆಲವು ಸಿನಿಮಾಗಳಿಗಿಂತ ಸೀರಿಯಲ್‌ಗ‌ಳೇ ಹೆಚ್ಚು ಜನರನ್ನು ತಲುಪುತ್ತವೆ. ನನ್ನ ಪ್ರಕಾರ ಒಬ್ಬ ನಟಿಯಾಗಿ ಜನರಿಗೆ ಹತ್ತಿರವಾಗೋದು, ಅವರಿಗೆ ಇಷ್ಟವಾಗೋದು ಮುಖ್ಯ. ಅದಕ್ಕಾಗಿ ಸ್ವಲ್ಪ ಬದಲಾವಣೆ ಇರಲಿ ಅಂತ, ಇವಳು ಸುಜಾತಾ ಧಾರಾವಾಹಿಯಲ್ಲಿ ನಟಿಸಲು ಒಪ್ಪಿಕೊಂಡಿದ್ದೇನೆ. ಈ ಧಾರಾವಾಹಿಯಲ್ಲಿ ಸುಜಾತಾ ಎಂಬ ಸಾಮಾನ್ಯ ವರ್ಗದ ಹುಡುಗಿಯ ಪಾತ್ರ ನನ್ನದು. ಮಧ್ಯಮ ವರ್ಗದ ಹುಡುಗಿಯ ಜೀವನದ ಕುರಿತಾದ ಭಾವನಾತ್ಮಕ ಕಥೆ ಇದರಲ್ಲಿದ್ದು, ವೀಕ್ಷಕರಿಗೆ ಇಷ್ಟವಾಗುತ್ತದೆ’ ಎನ್ನುವ ಭರವಸೆ ಮೇಘಶ್ರೀ ಅವರದ್ದು.

ಇತ್ತೀಚೆಗೆ ಎಲ್ಲಾ ಭಾಷೆಗಳಲ್ಲೂ ಅಲ್ಲಿನ ಜನಪ್ರಿಯ ಹೀರೋ – ಹೀರೋಯಿನ್ಸ್‌ ಆಗಾಗ್ಗೆ ಕಿರುತೆರೆಗೆ ಬರುತ್ತಿರುತ್ತಾರೆ. ಸಿನಿಮಾಗಳಿಗೆ ಕಡಿಮೆಯಿಲ್ಲದಂತೆ ಗುಣಮಟ್ಟದಲ್ಲಿ ಇವತ್ತು ಸೀರಿಯಲ್ಸ್‌ ನಿರ್ಮಾಣವಾಗುತ್ತಿವೆ. ಹಾಗಾಗಿ, ಎರಡಕ್ಕೂ ಅಂಥಾದ್ದೇನೂ ವ್ಯತ್ಯಾಸವಿಲ್ಲ ಎನ್ನುವುದು ಮೇಘಶ್ರೀ ಮಾತು. ಇನ್ನು ಇವಳು ಸುಜಾತಾ ಧಾರಾವಾಹಿಯಲ್ಲಿ ಮೇಘಶ್ರೀ ಅವರೊಂದಿಗೆ ನವನಟ ಯಶವಂತ್‌ ನಾಯಕನಾಗಿ ಅಭಿನಯಿಸುತ್ತಿದ್ದಾರೆ.

ಸದ್ಯ ಮೇಘಶ್ರೀ ಅಭಿನಯದ ದಶರಥ, ರಾಜಮಾರ್ತಾಂಡ ಚಿತ್ರಗಳು ತೆರೆಗೆ ಬರಲು ಸಿದ್ಧವಾಗಿದ್ದು, ರಿದಂ ಚಿತ್ರದ ಚಿತ್ರೀಕರಣ ಇನ್ನೂ ನಡೆಯುತ್ತಿದೆ. ಒಟ್ಟಾರೆ ಸಿನಿಮಾ ಮತ್ತು ಸೀರಿಯಲ್‌ ಎರಡರಲ್ಲೂ ಸಕ್ರಿಯವಾಗಿರುವ ಮೇಘಶ್ರೀ ಎರಡನ್ನೂ ಹೇಗೆ ಒಟ್ಟಿಗೆ ನಿಭಾಯಿಸಿಕೊಂಡು ಹೋಗುತ್ತಾರೆ ಅನ್ನೋದು ಇನ್ನಷ್ಟೇ ಗೊತ್ತಾಗಬೇಕಿದೆ.

ಟಾಪ್ ನ್ಯೂಸ್

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

10

ಕುತ್ತಿಗೆಗೇ ಬಂತು… ಕುತ್ತಿಗೆ ಸ್ಪ್ರಿಂಗ್‌ ಇದ್ದಂತೆ…

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

World earth day: ಇರುವುದೊಂದೇ ಭೂಮಿ

World earth day: ಇರುವುದೊಂದೇ ಭೂಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.