ಹುಡುಕಾಟದಲ್ಲಿ ಸಿಕ್ಕ ಕಳೆದು ಹೋದ ಬದುಕು

ಚಿತ್ರ ವಿಮರ್ಶೆ

Team Udayavani, Jul 7, 2019, 3:03 AM IST

Devaki

ಕಾಯಿಲೆಯ ಕೊನೆ ಹಂತದಲ್ಲಿ ನೀವು ಸಂಪೂರ್ಣವಾಗಿ ನಿಮ್ಮನ್ನೇ ಮರೆತಿರುತ್ತೀರಿ ವೈದ್ಯರು ಹೀಗೆ ಹೇಳುವಾಗ ಆಕೆಗೆ ಇಡೀ ಜಗತ್ತೇ ಕುಸಿದಂತಾಗುತ್ತದೆ. ಮಗಳ ಮುಖ ಕಣ್ಣ ಮುಂದೆ ಬರುತ್ತದೆ. ತಾನು ಬದುಕನ್ನೇ ಮರೆತರೆ ತನಗೆ ಬದುಕಾಗಿರುವ ತನ್ನ ಹತ್ತು ವರುಷದ ಮಗಳನ್ನು ನೋಡಿಕೊಳ್ಳುವವರಾರು, ಆಕೆಯ ಮುಂದಿನ ಭವಿಷ್ಯವೇನು … ದೇವಕಿಯ ತಲೆಯಲ್ಲಿ ನೂರಾರು ಪ್ರಶ್ನೆಗಳು.

ಕೊನೆಗೂ ಒಲ್ಲದ ಮನಸ್ಸಿನಿಮದ ಪರಿಹಾರವೊಂದನ್ನು ಕಂಡುಕೊಂಡು ನಿಟ್ಟುಸಿರು ಬಿಡುವ ವೇಳೆಗೆ ದೊಡ್ಡ ಶಾಕ್‌ ದೇವಕಿಗೆ ಎದುರಾಗುತ್ತದೆ. ಮಗಳನ್ನು ಕಿಡ್ನಾಪ್‌ ಮಾಡಲಾಗಿದೆ ಎಂಬ ಸುದ್ದಿ ಬರಸಿಡಿಲಿನಂತೆ ದೇವಕಿ ಕಿವಿಗಪ್ಪಳಿಸುತ್ತದೆ. ಇಷ್ಟು ಹೇಳಿದ ಮೇಲೆ ಇದೊಂದು ತಾಯಿ-ಮಗಳ ಕಥೆ ಎಂದು ಪ್ರತ್ಯೇಕವಾಗಿ ಹೇಳುವ ಅಗತ್ಯವಿಲ್ಲ.

“ಮಮ್ಮಿ’ ಚಿತ್ರದಲ್ಲಿ ಹಾರರ್‌ ಮೊರೆ ಹೋಗಿದ್ದ ನಿರ್ದೇಶಕ ಲೋಹಿತ್‌, ಈ ಬಾರಿ “ದೇವಕಿ’ ಮೂಲಕ ತಾಯಿಯೊಬ್ಬಳ ತೊಳಲಾಟವನ್ನು ಕಟ್ಟಿಕೊಟ್ಟಿದ್ದಾರೆ. ಸಿನಿಮಾ ನೋಡುವಾಗ ಮೇಲ್ನೋಟಕ್ಕೆ ನಿಮಗೆ ತಾಯಿ ಹಾಗೂ ಪೊಲೀಸ್‌ ಅಧಿಕಾರಿಯೊಬ್ಬ ಕಳೆದು ಹೋದ ಮಗುವನ್ನು ಹುಡುಕುವಂತೆ ಕಂಡರೂ,

ಚಿತ್ರದಲ್ಲಿ ಅದರಾಚೆ ಹಲವು ಅಂಶಗಳನ್ನು ಹೇಳುವ ಪ್ರಯತ್ನ ಮಾಡಲಾಗಿದೆ. ಮುಖ್ಯವಾಗಿ ಪತಿಯಿಂದ ದೂರವಾದ ಪತ್ನಿಯೊಬ್ಬಳು ಅನುಭವಿಸುವ ಹಿಂಸೆ, ಮಗಳು ಕಾಣದೇ ಹೋದಾಗ ತಾಯಿ ಹೃದಯ ಪಡುವ ಸಂಕಟ, ಸಹಾಯಕ್ಕೆ ನಿಲ್ಲುವ ಪೊಲೀಸ್‌ ಅಧಿಕಾರಿಯ ಮನದ ನೋವು, ವೇಶ್ಯಾವಾಟಿಕೆ, ಮಕ್ಕಳ ಮಾರಾಟ ಜಾಲದಂತಹ ಸರಿಪಡಿಸಲಾಗದ ಕೊಳಕು ವ್ಯವಸ್ಥೆ …

ಹೀಗೆ ಚಿತ್ರ ಹಲವು ಅಂಶಗಳನ್ನು ಬಿಚ್ಚಿಡುತ್ತಾ ಸಾಗುತ್ತದೆ. ಚಿತ್ರ ತುಂಬಾ ಫ್ರೆಶ್‌ ಆಗಿ ಕಾಣುತ್ತದೆ ಎಂದರೆ ಅದಕ್ಕೆ ಕಾರಣ ಕೋಲ್ಕತ್ತಾ. “ದೇವಕಿ’ ಚಿತ್ರ ಸಂಪೂರ್ಣವಾಗಿ ಕೋಲ್ಕತ್ತಾದಲ್ಲಿ ಚಿತ್ರೀಕರಣಗೊಂಡಿದೆ. ಇಡೀ ಕಥೆ ನಡೆಯೋದೇ ಅಲ್ಲಿ. ಹಾಗಾಗಿ, ಅಲ್ಲಿನ ಪರಿಸರವನ್ನು ತುಂಬಾ ಚೆನ್ನಾಗಿ ತೋರಿಸಲಾಗಿದೆ. ಜೊತೆಗೆ ಅಲ್ಲಿನ ಒಂದಷ್ಟು ಕಲಾವಿದರನ್ನು ಕೂಡಾ ಚಿತ್ರದಲ್ಲಿ ಬಳಸಿಕೊಳ್ಳಲಾಗಿದೆ.

ನಿರ್ದೇಶಕ ಲೋಹಿತ್‌ ಯಾವುದೇ ಸಿದ್ಧಸೂತ್ರಗಳಿಗೆ ಅಂಟಿಕೊಳ್ಳದೇ ಸಿನಿಮಾ ಮಾಡಿದ್ದಾರೆ. ಒಂದು ಗಂಭೀರ ವಿಷಯವನ್ನು ಎಷ್ಟು ಗಂಭೀರವಾಗಿ ಕಟ್ಟಿಕೊಡಬಹುದೋ, ಅದನ್ನು ಇಲ್ಲಿ ಮಾಡಲಾಗಿದೆ. ಹಾಗಾಗಿ, ಔಟ್‌ ಅಂಡ್‌ ಔಟ್‌ ಮನರಂಜನೆ ಇಷ್ಟಪಡುವವರಿಗೆ ಈ ಸಿನಿಮಾ ಅಷ್ಟೊಂದು ರುಚಿಸಲಿಕ್ಕಿಲ್ಲ.

ಚಿತ್ರದ ಮುಖ್ಯಭೂಮಿಕೆಯಲ್ಲಿ ನಟಿಸಿರುವ ಪ್ರಿಯಾಂಕಾ ಉಪೇಂದ್ರ ತಮ್ಮ ಪಾತ್ರವನ್ನು ಸಮರ್ಥವಾಗಿ ನಿರ್ವಹಿಸಿದ್ದಾರೆ. ತಾಯಿಯೊಬ್ಬಳ ನೋವು, ಮಗಳು ಸಿಗುತ್ತಾಳೆಂದಾಗಿನ ಖುಷಿ, ಮತ್ತೆ ಕೈ ತಪ್ಪಿದಾಗಿನ ದುಃಖ ಎಲ್ಲವನ್ನು ಪ್ರಿಯಾಂಕಾ ಚೆನ್ನಾಗಿ ಕಟ್ಟಿಕೊಟ್ಟಿದ್ದಾರೆ. ಈ ಚಿತ್ರದ ಮೂಲಕ ಪ್ರಿಯಾಂಕಾ ಉಪೇಂದ್ರ ಅವರ ಮಗಳು ಐಶ್ವರ್ಯಾ ಕೂಡಾ ಚಿತ್ರರಂಗಕ್ಕೆ ಬಂದಿದ್ದಾರೆ.

ಐಶ್ವರ್ಯಾ ಆಗಾಗ ಕಾಣಿಸಿಕೊಂಡರೂ, ನಟನೆಯಲ್ಲಿ ಗಮನಸೆಳೆಯುತ್ತಾರೆ. ಉಳಿದಂತೆ ಕಿಶೋರ್‌ ಪೊಲೀಸ್‌ ಅಧಿಕಾರಿಯಾಗಿ ಇಷ್ಟವಾಗುತ್ತಾರೆ. ಛಾಯಾಗ್ರಾಹಕ ವೇಣು ಕೋಲ್ಕತ್ತಾದ ಸೌಂದರ್ಯವನ್ನು ಕಟ್ಟಿಕೊಡುವಲ್ಲಿ ಹಿಂದೆ ಬಿದ್ದಿಲ್ಲ. ಚಿತ್ರದ ಹಿನ್ನೆಲೆ ಸಂಗೀತ ಕಥೆಯ ಆಶಯಕ್ಕೆ ತಕ್ಕುದಾಗಿದೆ.

ಚಿತ್ರ: ದೇವಕಿ
ನಿರ್ಮಾಣ: ರವೀಶ್‌, ಅಕ್ಷಯ್‌
ನಿರ್ದೇಶನ: ಲೋಹಿತ್‌
ತಾರಾಗಣ: ಪ್ರಿಯಾಂಕಾ ಉಪೇಂದ್ರ, ಐಶ್ವರ್ಯಾ, ಕಿಶೋರ್‌ ಮತ್ತಿತರರು.

* ರವಿಪ್ರಕಾಶ್‌ ರೈ

ಟಾಪ್ ನ್ಯೂಸ್

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Siddapura ಬಸ್‌ನಲ್ಲಿ ಹೃದಯಾಘಾತ ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Siddapura ಬಸ್‌ನಲ್ಲಿ ಹೃದಯಾಘಾತ; ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

IPL ಚೆನ್ನೈಯಲ್ಲಿ ಮೆರೆದಾಡಿದ ಪಂಜಾಬ್‌ ಕಿಂಗ್ಸ್‌

IPL ಚೆನ್ನೈಯಲ್ಲಿ ಮೆರೆದಾಡಿದ ಪಂಜಾಬ್‌ ಕಿಂಗ್ಸ್‌

T20 World Cup; ಅಫ್ಗಾನಿಸ್ತಾನ ತಂಡಕ್ಕೆ ರಶೀದ್ ಖಾನ್ ನಾಯಕ

T20 World Cup; ಅಫ್ಗಾನಿಸ್ತಾನ ತಂಡಕ್ಕೆ ರಶೀದ್ ಖಾನ್ ನಾಯಕ

T20 World Cup; ಪಾಕಿಸ್ಥಾನ ತಂಡದ ಆಯ್ಕೆ ವಿಳಂಬ

T20 World Cup; ಪಾಕಿಸ್ಥಾನ ತಂಡದ ಆಯ್ಕೆ ವಿಳಂಬ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nalkane Ayama Movie Review

Nalkane Ayama Movie Review; ದೆವ್ವದ ಕಾಟದ ಹಿಂದೊಂದು ಅಸಲಿ ಆಟ!

O2 movie review

O2 movie review; ಸುಂದರ ಬೀದಿಯ ತಣ್ಣನೆಯ ಗಾಳಿಯಂತೆ…

scam kannada movie review

Scam review; ವ್ಯವಸ್ಥೆಯ ಹಿಂದಿನ ಘೋರ ದರ್ಶನ

appa i love you movie review

Appa I Love You Review; ತಂದೆ-ಮಗನ ಭಾವ ಲಹರಿ

Bharjari gandu movie review

Bharjari Gandu Review; ಹಳ್ಳಿ ಅಡ್ಡದಲ್ಲಿ ಭರ್ಜರಿ ಆ್ಯಕ್ಷನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Siddapura ಬಸ್‌ನಲ್ಲಿ ಹೃದಯಾಘಾತ ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Siddapura ಬಸ್‌ನಲ್ಲಿ ಹೃದಯಾಘಾತ; ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Kundapura; ಹಲ್ಲೆ , ಬೆದರಿಕೆ, ಚಿನ್ನದ ಸರ ಲೂಟಿ: ದೂರು

Kundapura; ಹಲ್ಲೆ,ಬೆದರಿಕೆ, ಚಿನ್ನದ ಸರ ಲೂಟಿ: ದೂರು

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.