ಮೋದಿ ವಿರುದ್ಧ ಸುರ್ಜೇವಾಲಾ ವಾಗ್ಧಾಳಿ
Team Udayavani, Jul 7, 2019, 3:00 AM IST
ನವದೆಹಲಿ: ಕರ್ನಾಟಕದಲ್ಲಿ ಶಾಸಕರ ರಾಜೀನಾಮೆ ಕುರಿತು ಪ್ರತಿಕ್ರಿಯಿಸಿರುವ ಕಾಂಗ್ರೆಸ್ ವಕ್ತಾರ ರಣದೀಪ್ ಸುರ್ಜೆವಾಲಾ, “ಮೋದಿ ಎಂದರೆ ಭಾರತದಲ್ಲಿ ದುರುದ್ದೇಶಪೂರಿತವಾಗಿ ಯೋಜಿಸಿದ ಪಕ್ಷಾಂತರ’ ಎಂಬುದಾಗಿ ಆರೋಪಿಸಿದ್ದಾರೆ.
ಮೋದಿ ಎಂಬ ಪದಕ್ಕೆ ಅವರು ಈ ರೀತಿಯ ವ್ಯಾಖ್ಯಾನ ಮಾಡಿದ್ದು, ಹಣ ಮತ್ತು ಅಧಿಕಾರದ ಆಸೆ ತೋರಿಸಿ ಜನರಿಂದ ಆಯ್ಕೆಯಾದ ಸರ್ಕಾರವನ್ನು ಕೆಡವಲು ಯತ್ನಿಸುತ್ತಿರುವುದು ದುರದೃಷ್ಟಕರ ಸಂಗತಿಯಾಗಿದೆ. ಹಾಡಹಗಲಿನಲ್ಲೇ ಪ್ರಜಾಪ್ರಭುತ್ವದ ಕಗ್ಗೊಲೆಯಾಗುತ್ತಿದೆ ಎಂದು ಸುರ್ಜೇವಾಲಾ ಆರೋಪಿಸಿದ್ದಾರೆ.
ಈವರೆಗೆ 12 ಬಾರಿ ಸರ್ಕಾರವನ್ನು ಉರುಳಿಸಲು ಯತ್ನಿಸಲಾಗಿದೆ. ಅರುಣಾಚಲದಲ್ಲಿ ಇದು ಶುರುವಾಗಿದೆ. ಅಸ್ಸಾಂ, ತ್ರಿಪುರಾ, ಗೋವಾ, ಉತ್ತರಾಖಂಡ ಮತ್ತು ಮಹಾರಾಷ್ಟ್ರದಲ್ಲೂ ಸರ್ಕಾರ ಉರುಳಿಸಲು ಬಿಜೆಪಿ ಯತ್ನಿಸಿದೆ. ಪಶ್ಚಿಮ ಬಂಗಾಳದಲ್ಲಿ 30 ಶಾಸಕರು ಸಂಪರ್ಕದಲ್ಲಿದ್ದಾರೆ ಎಂದು ಪ್ರಧಾನಿ ಮೋದಿಯವರೇ ಹೇಳಿದ್ದಾರೆ. ಪ್ರಧಾನಿಯೇ ಇಂಥ ಕೃತ್ಯಕ್ಕೆ ಇಳಿದರೆ ನಾವು ಏನು ಮಾಡಲು ಸಾಧ್ಯ ಎಂದು ಸುರ್ಜೇವಾಲಾ ಪ್ರಶ್ನಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
MUST WATCH
ಹೊಸ ಸೇರ್ಪಡೆ
Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ
Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
ಬಿಗ್ಬಾಸ್ ವಿನ್ನರ್ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು