ಟೀಕಾಕಾರರು ವೃತ್ತಿಪರ ನಿರಾಶಾವಾದಿಗಳು

ಕೇಂದ್ರ ಸರ್ಕಾರದ ಟೀಕಾಕಾರರ ವಿರುದ್ಧ ಪ್ರಧಾನಿ ಮೋದಿ ವಾಗ್ಧಾಳಿ

Team Udayavani, Jul 7, 2019, 5:00 AM IST

m-35

ವಾರಾಣಸಿ: ಮುಂದಿನ ಐದು ವರ್ಷಗಳಲ್ಲಿ ದೇಶದ ಆರ್ಥಿಕತೆಯು 5 ಲಕ್ಷಕೋಟಿ ಡಾಲರ್‌ ಆರ್ಥಿಕತೆಯಾಗಿ ಬೆಳೆಯಲಿದೆ ಎಂದು ತಾವು ಹೇಳಿದ್ದನ್ನು ಟೀಕಿಸುವವರು ವೃತ್ತಿಪರ ನಿರಾಶಾವಾದಿಗಳು ಎಂದು ಪ್ರಧಾನಿ ನರೇಂದ್ರ ಮೋದಿ ಜರೆದಿದ್ದಾರೆ.

ವಾರಾಣಸಿಯಲ್ಲಿ ಶನಿವಾರ, ಬಿಜೆಪಿ ರಾಷ್ಟ್ರವ್ಯಾಪಿ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಪಕ್ಷದ ಸಂಸ್ಥಾಪಕರಾದ ಶ್ಯಾಮಪ್ರಸಾದ್‌ ಮುಖರ್ಜಿಯವರ 118ನೇ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಈ ಅಭಿಯಾನಕ್ಕೆ ಚಾಲನೆ ನೀಡಲಾಯಿತು.

ಉದ್ಘಾಟನೆಯ ಸೂಚಕವಾಗಿ, ಬಿಜೆಪಿ ಸದಸ್ಯತ್ವದ ಕಾರ್ಡುಗಳನ್ನು ವೇದಿಕೆಯ ಮೇಲಿದ್ದ ಕೆಲವು ಹೊಸ ಸದಸ್ಯರಿಗೆ ವಿತರಿಸಿ ಮಾತನಾಡಿದ ಮೋದಿ, ”ಸರ್ಕಾರದ ಸಾಮೂಹಿಕ ಪ್ರಯತ್ನದಿಂದಾಗಿ ಮುಂದಿನ ಐದು ವರ್ಷಗಳಲ್ಲಿ ನಮ್ಮ ದೇಶ 5 ಟ್ರಿಲಿಯನ್‌ ಡಾಲರ್‌ ಆರ್ಥಿಕತೆ ಎನಿಸಿಕೊಳ್ಳಲಿದೆ ಎಂಬ ನಂಬಿಕೆ ನನಗಿದೆ. ಆದರೆ ಕೆಲವರು, ಈಗ 5 ಟ್ರಿಲಿಯನ್‌ ಡಾಲರ್‌ ಮೌಲ್ಯದ ಆರ್ಥಿಕತೆಯ ರಾಷ್ಟ್ರವನ್ನಾಗಿಸುವ ಅವಶ್ಯಕತೆಯೇನು, ಅದಕ್ಕಾಗಿ ಪ್ರಯತ್ನಗಳನ್ನೇಕೆ ಮಾಡಬೇಕು ಎಂದು ಪ್ರಶ್ನಿಸುತ್ತಿದ್ದಾರೆ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಆರ್ಥಿಕ ಗುರಿ ಪ್ರಶ್ನಿಸುವವರನ್ನು ‘ವೃತ್ತಿಪರ ನಿರಾಶಾವಾದಿಗಳು’ ಎಂದು ಜರೆದ ಮೋದಿ, ”ಜನಸಾಮಾನ್ಯರಾದರೂ ನಮ್ಮ ಸಮಸ್ಯೆಗಳಿಗೆ ಒಂದು ನಿವಾರಣೋಪಾಯ ಹೇಳಬಹುದೇನೋ. ಆದರೆ, ಈ ವೃತ್ತಿಪರ ನಿರಾಶಾವಾದಿಗಳು, ನಿವಾರಣೋಪಾಯವನ್ನೂ ಸಮಸ್ಯೆಯನ್ನಾಗಿ ಬದಲಿಸಿಬಿಡುತ್ತಾರೆ” ಎಂದು ಗೇಲಿ ಮಾಡಿದರು.

ಭಾರತ ಮಾತೆಗೆ ಕೊಡುಗೆ: ಇದೇ ವೇಳೆ, 5 ಲಕ್ಷಕೋಟಿ ಡಾಲರ್‌ ಮೊತ್ತದ ಆರ್ಥಿಕತೆಯನ್ನು ಸಾಧಿಸುವುದು ಅಷ್ಟು ಸುಲಭವೂ ಅಲ್ಲ ಎಂಬುದನ್ನು ಒಪ್ಪಿಕೊಂಡ ಅವರು, ಅದಕ್ಕಾಗಿ ಕಠಿಣ ಹಾದಿ ಸವೆಸಬೇಕಿದೆ ಎಂದು ತಿಳಿಸಿದರು. ಬಜೆಟ್ನಲ್ಲಿನ ಅಂಶಗಳ ದೃಷ್ಟಿಯಲ್ಲಿ ಬಲಿಷ್ಠ ಆರ್ಥಿಕತೆ ಕಟ್ಟುವ ಬಗ್ಗೆ ಮಾತನಾಡಿದ ಅವರು, ”ನಮ್ಮ ಮುಂದಿರುವ ಸವಾಲುಗಳು, ಅದನ್ನು ಮೆಟ್ಟಿನಿಲ್ಲುವ ದಾರಿಗಳನ್ನೂ ತೋರಿಸುತ್ತವೆ. ಸಮಸ್ಯೆಗಳನ್ನು ಸಮರ್ಥವಾಗಿ ಮೆಟ್ಟಿ, ದೇಶವನ್ನು ಅಭಿವೃದ್ಧಿಗೊಳಿಸಿದರೆ ಅದೇ ನಾವು ಭಾರತ ಮಾತೆಗೆ ನೀಡಬಹುದಾದ ದೊಡ್ಡ ಕೊಡುಗೆ” ಎಂದರು.

ಇದೇ ವೇಳೆ, ”ಬಡತನವನ್ನು ಸದ್ಗುಣಗಳ ಸಂಕೇತ ಎಂದು ಮೊದಲಿನಿಂದಲೂ ಭಾವಿಸುತ್ತಾ ಬಂದಿದ್ದೇವೆ. ಆದರೆ, ಮುಂದೊಂದು ದಿನ 5 ಲಕ್ಷ ಕೋಟಿ ಡಾಲರ್‌ ಆರ್ಥಿಕತೆಯನ್ನು ನಾವು ಸಾಧಿಸಿದಾಗ ಯಾರಾದರೂ ಯಾವ ಕಾರಣಕ್ಕಾಗಿ ಬಡವರಾಗಿಯೇ ಮುಂದುವರಿಯಬೇಕು?” ಎಂದು ಪ್ರಶ್ನಿಸಿದರು.

ಮಿಂಚಿನ ಓಟ: ”ನಮ್ಮ ರಾಷ್ಟ್ರ ಆರ್ಥಿಕತೆಯಲ್ಲಿ ಹೊಸ ಮಜಲುಗಳನ್ನು ಮುಟ್ಟುವಲ್ಲಿ ಇಂಥ ಅನೇಕ ಘಟನೆಗಳು ಇತಿಹಾಸದಲ್ಲಿ ದಾಖಲಾಗಿವೆ. ಆದರೆ, ಈಗ ನಮ್ಮ ದೇಶ ಹೊಸ ಗುರಿಯತ್ತ ಮಿಂಚಿನ ಓಟ ಆರಂಭಿಸಿದೆ” ಎಂದ ಅವರು, ”ದೇಶದ ಸಿರಿವಂತರು, ಬಡವರು ಈ ರಾಷ್ಟ್ರದ ಎರಡು ಕೈಗಳಿದ್ದಂತೆ. ಇವರಿಬ್ಬರೂ ಶ್ರಮಪಟ್ಟರೆ ದೇಶದ ಆರ್ಥಿಕತೆಯನ್ನು ಬಲಾಡ್ಯಗೊಳಿಸಬಹುದು” ಎಂದರು.

ದೇಶದ ಪ್ರತಿನಿಧಿಗಳೂ ಆಗಬೇಕು: ಸದಸ್ಯತ್ವ ಅಭಿಯಾನದಡಿ ಪಕ್ಷಕ್ಕೆ ಸೇರ್ಪಡೆಗೊಳ್ಳುವವರನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ, ”ಬಿಜೆಪಿಯ ತಾಕತ್ತು ಇರುವುದೇ ಆ ಪಕ್ಷದ ಸರಳತೆ ಹಾಗೂ ವಿನಯಶೀಲತೆಯಲ್ಲಿ. ಬಿಜೆಪಿಗೆ ಸೇರ್ಪಡೆಗೊಳ್ಳುವ ವ್ಯಕ್ತಿಗಳು ಈ ಗುಣಗಳನ್ನು ಕಡ್ಡಾಯವಾಗಿ ಅಳವಡಿಸಿಕೊಳ್ಳುವಂತೆ ಯಾರೂ ಹೇಳುವುದಿಲ್ಲ. ಆದರೆ, ಅಂಥ ಗುಣಗಳನ್ನು ಅಳವಡಿಸಿಕೊಂಡರೆ ಅವರಿಗೇ ಅದು ಅನುಕೂಲ. ಈ ಹಿಂದೆ, ಅಟಲ್, ಅಡ್ವಾಣಿ, ಜೋಷಿಯವರೂ ಇದೇ ಗುಣ ಅಳವಡಿಸಿಕೊಂಡು ಮುಂದೆ ಬಂದವರು. ಅವರ ಪರಂಪರೆಯನ್ನು ನಾವೆಲ್ಲರೂ ಮುಂದುವರಿಸಿಕೊಂಡು ಹೋಗಬೇಕಿದೆ. ನಾವು ಪಕ್ಷದ ಸದಸ್ಯರಾಗುವುದರ ಜತೆಗೆ, ದೇಶದ ಪ್ರತಿನಿಧಿಯಾಗಿಯೂ ಕೆಲಸ ಮಾಡಬೇಕು. ಬಿಜೆಪಿಯು ‘ಎಲ್ಲರೂ ಒಟ್ಟಾಗಿ ಬನ್ನಿ, ದೇಶ ಕಟ್ಟೋಣ’ ಎಂದು ಕರೆ ನೀಡಿದರೆ, ಇತರ ಪಕ್ಷಗಳು ‘ಎಲ್ಲರೂ ಒಟ್ಟಾಗಿ ಬನ್ನಿ ಸರ್ಕಾರ ರಚಿಸೋಣ’ ಎಂದು ಕರೆ ನೀಡುತ್ತವೆ. ಇದೇ ನಮಗೂ, ಇತರರಿಗೂ ಇರುವ ವ್ಯತ್ಯಾಸ” ಎಂದರು.

ಲಾಲ್ ಬಹದ್ದೂರ್‌ ಶಾಸ್ತ್ರಿ ನೆನಪು
ವಾರಾಣಸಿಯ ವಿಮಾನ ನಿಲ್ದಾಣದಲ್ಲಿ ಲಾಲ್ ಬಹದ್ದೂರ್‌ ಶಾಸ್ತ್ರಿ ಅವರ ಪ್ರತಿಮೆಯನ್ನು ಉದ್ಘಾಟಿಸಿ ಮಾತನಾಡಿದ ಮೋದಿ, ಅಸಾಧ್ಯವಾದದನ್ನು ಸಾಧ್ಯವಾಗಿಸುವ ತಾಕತ್ತು ಜನರಿಗಿದೆ ಎನ್ನುತ್ತಾ ಶಾಸ್ತ್ರಿ ಅವರು ಪ್ರಧಾನಿಯಾಗಿದ್ದಾಗ ನಡೆದಿದ್ದ ಘಟನೆಯನ್ನು ಮೆಲುಕು ಹಾಕಿದರು. ”ದಶಕಗಳ ಹಿಂದೆ, ಭಾರತವು ತನಗೆ ಅಗತ್ಯವಿರುವ ಧಾನ್ಯಗಳನ್ನು ಪರರಾಷ್ಟ್ರಗಳಿಂದ ಆಮದು ಮಾಡಿಕೊಳ್ಳುವ ಸ್ಥಿತಿಯಲ್ಲಿತ್ತು. ಆದರೆ, ಅಂದಿನ ಪ್ರಧಾನಿ ಶಾಸ್ತ್ರಿಯವರು ಜೈ ಜವಾನ್‌, ಜೈ ಕಿಸಾನ್‌ ಎಂಬ ಕರೆಯನ್ನು ಈ ದೇಶದ ರೈತರಿಗೆ ನೀಡಿದಾಗ, ದೇಶದ ಎಲ್ಲಾ ರೈತರೂ ಪ್ರಧಾನಿಯವರ ಕರೆಗೆ ಓಗೊಟ್ಟು ಕಷ್ಟಪಟ್ಟು ದುಡಿದು ಉತ್ತಮ ಬೆಳೆ ಬೆಳೆದರಲ್ಲದೆ, ದೇಶದ ಎಲ್ಲಾ ಗೋದಾಮುಗಳನ್ನು ಧಾನ್ಯಗಳಿಂದ ತುಂಬಿಸಿದರು. ಜನರು ಮನಸ್ಸು ಮಾಡಿದರೆ ಎಂಥ ಪವಾಡವನ್ನಾದರೂ ಮಾಡಬಹುದು ಎಂಬುದಕ್ಕೆ ಇದು ಸಾಕ್ಷಿ ಎಂದರು. ಈ ಕಾರ್ಯಕ್ರಮದ ಬಳಿಕ ಮೋದಿ ಅವರು ‘ಆನಂದ್‌ ಕಾನನ್‌’ ಎಂಬ ಗಿಡ ನೆಡುವ ಕಾರ್ಯಕ್ರಮದಲ್ಲೂ ಭಾಗಿಯಾದರು. ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌, ಮಾಜಿ ಪ್ರಧಾನಿ ಲಾಲ್ ಬಹದ್ದೂರ್‌ ಶಾಸ್ತ್ರಿಯವರ ಪುತ್ರರಾದ ಅನಿಲ್ ಶಾಸ್ತ್ರಿ, ಸುನಿಲ್ ಶಾಸ್ತ್ರಿ ಹಾಗೂ ಉತ್ತರ ಪ್ರದೇಶದ ಸಂಪುಟದಲ್ಲಿ ಸಚಿವರಾಗಿರುವ ಶಾಸ್ತ್ರಿಯವರ ಸಂಬಂಧಿ ಸಿದ್ದಾರ್ಥ್ ನಾಥ್‌ ಸಿಂಗ್‌, ಬಿಜೆಪಿ ಕಾರ್ಯದರ್ಶಿ ಜೆ.ಪಿ. ನಡ್ಡಾ ಸೇರಿದಂತೆ ಹಲವಾರು ಗಣ್ಯರು ಹಾಜರಿದ್ದರು.

ಟಾಪ್ ನ್ಯೂಸ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.