ಬೆಂಗಳೂರಿನಿಂದ ಧಾರವಾಡಕ್ಕೆ ಹೈಸ್ಪೀಡ್ ರೈಲು
•2022ರೊಳಗೆ ಯೋಜನೆ ಅನುಷ್ಠಾನ•ಕೇಂದ್ರ ಸಚಿವರಿಂದ ಅಭಿವೃದ್ಧಿ ಸಂಕಲ್ಪ
Team Udayavani, Jul 7, 2019, 9:34 AM IST
ಧಾರವಾಡ: ವಿದ್ಯಾಗಿರಿಯ ಜೆಎಸ್ಸೆಸ್ ಕಾಲೇಜಿನ ಸನ್ನಿಧಿ ಕಲಾಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರನ್ನು ಸತ್ಕರಿಸಲಾಯಿತು.
ಧಾರವಾಡ: ದೇಶದಲ್ಲಿ ಬದಲಾವಣೆ ಅತಿ ಅವಶ್ಯವಾಗಿದ್ದು, ಈ ಹಿನ್ನೆಲೆಯಲ್ಲಿ ರೈಲು, ಪ್ರವಾಸೋದ್ಯಮ, ಕೈಗಾರಿಕೆಗಳಿಗೆ ಹೆಚ್ಚು ಆದ್ಯತೆ ನೀಡಲಾಗುವುದು ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು.
ವಿದ್ಯಾಗಿರಿಯ ಜೆಎಸ್ಸೆಸ್ ಕಾಲೇಜಿನ ಸನ್ನಿಧಿ ಕಲಾಕ್ಷೇತ್ರದಲ್ಲಿ ಹು-ಧಾ ಪಶ್ಚಿಮ ವಿಧಾನಸಭಾ ಕ್ಷೇತ್ರದ ನಾಗರಿಕರಿಂದ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ಸತ್ಕಾರ ಸ್ವೀಕರಿಸಿ ಅವರು ಮಾತನಾಡಿದರು.
ಕ್ಷೇತ್ರದ ಅಭಿವೃದ್ಧಿಗಾಗಿ ಕೈಗಾರಿಕೆಗೆ ಹೆಚ್ಚಿನ ಆದ್ಯತೆ ನೀಡಿ ನಿರೋದ್ಯೋಗ ಸಮಸ್ಯೆ ಬಗೆಹರಿಸಲಾಗುವುದು. ಪ್ರತಿಯೊಬ್ಬರಿಗೂ 2024ರೊಳಗೆ ಶುದ್ಧ ಕುಡಿಯುವ ನೀರು ಒದಗಿಸುವ ಸಂಕಲ್ಪ ಮಾಡಲಾಗಿದೆ. 2022ರೊಳಗೆ ಬೆಂಗಳೂರಿನಿಂದ ಧಾರವಾಡಕ್ಕೆ 4 ಗಂಟೆಗಳಲ್ಲಿ ರೈಲು ಸಂಚರಿಸುವಂತೆ ಯೋಜನೆ ರೂಪಿಸಲಾಗುತ್ತಿದೆ ಎಂದು ತಿಳಿಸಿದರು.
ಮೋದಿ ಅವರ ಸಂಪುಟದಲ್ಲಿ ಮಂತ್ರಿ ಸ್ಥಾನ ಲಭಿಸಿರುವುದು ಜವಾಬ್ದಾರಿ ಹೆಚ್ಚಿಸಿದೆ. ಹೀಗಾಗಿ ಆದಷ್ಟು ಸನ್ಮಾನ ಸಮಾರಂಭಗಳನ್ನು ಬದಿಗಿಟ್ಟು ಪ್ರಾಮಾಣಿಕವಾಗಿ ಜನರ ಅಪೇಕ್ಷೆಗೆ ತಕ್ಕಂತೆ ಸಮಾಜಮುಖೀಯಾಗಿ ಕಾರ್ಯಪ್ರವೃತ್ತನಾಗುತ್ತೇನೆ. ಯುಪಿಎ ಸರ್ಕಾರ 10 ವರ್ಷಗಳಲ್ಲಿ 13 ಲಕ್ಷ ಮನೆಗಳನ್ನು ನಿರ್ಮಿಸಿದರೆ ಮೋದಿ ಸರ್ಕಾರ 5 ವರ್ಷಗಳಲ್ಲಿ 26 ಲಕ್ಷ ಮನೆಗಳನ್ನು ನಿರ್ಮಿಸಿ ವಿತರಿಸಿದೆ. ಇದು ಮೋದಿ ಸರ್ಕಾರದ ಕೆಲಸಕ್ಕೆ ಹಿಡಿದ ಕೈಗನ್ನಡಿ ಎಂದರು.
ಆರೆಸ್ಸೆಸ್ ಉತ್ತರ ಪ್ರಾಂತ ಸಹ ಕಾರ್ಯವಾಹ ಶ್ರೀಧರ ನಾಡಿಗೇರ ಮಾತನಾಡಿ, ಗುಲಾಮರ ದೇಶ ಎಂದು ಬಿಂಬಿತವಾಗುತ್ತಿದ್ದ ಭಾರತ ಇಂದು ಜಗತ್ತಿನ ಬಲಿಷ್ಠ ರಾಷ್ಟ್ರಗಳಲ್ಲಿ ಒಂದಾಗಿದೆ. ಅಧಿಕಾರಕ್ಕಾಗಿ ಸಮಾಜ ಒಡೆಯುವ ಶಕ್ತಿಗಳು ನಮ್ಮ ಒಳಗೆ ಮತ್ತು ಹೊರಗೆ ಇವೆ. ಅವುಗಳ ನಾಶದಿಂದ ಜನರಲ್ಲಿ ಸಂಘಟಿತ ಭಾವ ಮೂಡಿದರೆ ಭಾರತ ವಿಶ್ವಗುರು ಆಗಲಿದೆ. ಅಧಿಕಾರದಲ್ಲಿರುವ ಸರ್ಕಾರ ಎಲ್ಲರನ್ನು ಒಗ್ಗೂಡಿಸುವ ಕೆಲಸ ಮಾಡಬೇಕು ಎಂದು ಹೇಳಿದರು.
ಶಾಸಕ ಅರವಿಂದ ಬೆಲ್ಲದ ಮಾತನಾಡಿದರು. ಪ್ರೊ| ಎಂ.ಐ. ಸವದತ್ತಿ ಅಧ್ಯಕ್ಷತೆ ವಹಿಸಿದ್ದರು. ಮುರುಘಾ ಮಠದ ಮಲ್ಲಿಕಾರ್ಜುನ ಸ್ವಾಮೀಜಿ ಸಾನ್ನಿಧ್ಯವಹಿಸಿದ್ದರು. ಎಸ್.ಆರ್. ರಾಮಗೌಡರ, ಅರುಣ ಜೋಶಿ, ರೆವರೆಂಡ್ ಸಕ್ಕರಿ, ಕೆ.ಬಿ. ನಾವಲಗಿಮಠ, ಸುಭಾಷ ನಾಡಿಗೇರ, ಡಾ| ಆನಂದ ಪಾಂಡುರಂಗಿ ಇದ್ದರು. ರವಿ ಕುಲಕರ್ಣಿ ನಿರೂಪಿಸಿದರು. ಪ್ರೊ| ಕಿರಣ ಶಿಂಧೆ ಸ್ವಾಗತಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ
Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ
Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ
Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ
Hubli; ಖರ್ಗೆ ಬ್ಲಾಕ್ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ
MUST WATCH
ಹೊಸ ಸೇರ್ಪಡೆ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ