ರೈತರಿಗೆ ಕೃಷಿ ಪತ್ತಿನ ಸಂಘ ಜೀವಾಳ

•ಪಿಕೆಪಿಎಸ್‌ ಅಧ್ಯಕ್ಷರಿಗಾಗಿ ಆಡಳಿತ ನಿರ್ವಹಣೆ ತರಬೇತಿ ಕಾರ್ಯಾಗಾರ

Team Udayavani, Jul 7, 2019, 10:15 AM IST

07-July-6

ಬೀದರ: ವಿವಿಧ ಜಿಲ್ಲೆಗಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಅಧ್ಯಕ್ಷರಿಗಾಗಿ ಉತ್ತಮ ಆಡಳಿತ ನಿರ್ವಹಣೆ ಕುರಿತು ತರಬೇತಿ ಕಾರ್ಯಾಗಾರ ಜರುಗಿತು.

ಬೀದರ: ಸಹಕಾರಿ ವ್ಯವಸ್ಥೆಯಲ್ಲಿ ಜನರಿಗೆ ಅತಿ ಸುಲಭವಾಗಿ ಕೈಗೆಟಕುವ ದರದಲ್ಲಿ ಸಾಲ ಸೌಲಭ್ಯ ಸಿಗುತ್ತಿದ್ದು, ಗ್ರಾಮೀಣ ಜನರಿಗೆ ಅದರಲ್ಲೂ ಕೃಷಿಕರಿಗೆ ಅತ್ಯಂತ ಅನುಕೂಲಕರವಾಗಿದೆ ಎಂದು ಡಿಸಿಸಿ ಬ್ಯಾಂಕಿನ ನಿರ್ದೇಶಕ ಅಬ್ದುಲ ಸಲೀಮ ಹೇಳಿದರು.

ನಗರದಲ್ಲಿ ವಿವಿಧ ಜಿಲ್ಲೆಗಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಅಧ್ಯಕ್ಷರಿಗಾಗಿ ಏರ್ಪಡಿಸಿದ್ದ ಉತ್ತಮ ಆಡಳಿತ ನಿರ್ವಹಣೆ ಕುರಿತ ತರಬೇತಿ ಕಾರ್ಯಗಾರ ಉದ್ಘಾಟಿಸಿ ಅವರು ಮಾತನಾಡಿದರು.

ರೈತರಿಗೆ ಹಣಕಾಸಿನ ಸೌಲಭ್ಯ ನೀಡುವ ಸಹಕಾರಿ ವ್ಯವಸ್ಥೆಗೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳೇ ಜೀವಾಳವಾಗಿವೆ. ಸುದೃಢವಾದ ಸಂಘಗಳು ಕೇವಲ ತನ್ನ ಸದಸ್ಯರಿಗೆ ಮಾತ್ರವಲ್ಲ ಊರಿಗೆ, ಸಮಾಜಕ್ಕೆ ಮತ್ತು ದೇಶಕ್ಕೂ ಆಸ್ತಿಗಳಾಗಿವೆ. ತನ್ನ ಹಣಕಾಸಿನ ವ್ಯವಹಾರಗಳನ್ನು ಚೆನ್ನಾಗಿ ನಿರ್ವಹಿಸುವುದರಿಂದ ಗ್ರಾಮದ ಜನರಿಗೆ ಲಾಭಾಂಶ ಹಂಚಿಕೆಯಾಗಿ ಸಂಪನ್ಮೂಲಗಳ ಸದಬಳಕೆಯಾಗುತ್ತದೆ. ಬೀದರ ಜಿಲ್ಲೆಯಲ್ಲಿರುವ 3 ಲಕ್ಷ ರೈತ ಕುಟುಂಬಗಳಲ್ಲಿ 2.60 ಲಕ್ಷ ಕುಟುಂಬಗಳನ್ನು ಸಹಕಾರಿ ಸಂಘಗಳ ಸದಸ್ಯರನ್ನಾಗಿ ಮಾಡಿಕೊಳ್ಳಲಾಗಿದೆ. ಜಿಲ್ಲೆಯ ಶೇ.70 ಕೃಷಿ ಸಾಲವನ್ನು ಡಿಸಿಸಿ ಬ್ಯಾಂಕ್‌ ನೀಡುತ್ತಿದ್ದು, ಇದು ರಾಜ್ಯದಲ್ಲೇ ಅತಿ ಹೆಚ್ಚು ಕೃಷಿ ಸಾಲದ ಪಾಲುಗಾರಿಕೆ ಹೊಂದಿರುವ ಸಹಕಾರಿ ಬ್ಯಾಂಕಾಗಿ ರಾಜ್ಯದಲ್ಲೇ ಮೊದಲ ಸ್ಧಾನದಲ್ಲಿದೆ. ಮಧ್ಯಮಾವಧಿ ಕೃಷಿ ಸಾಲದಲ್ಲೂ 136 ಕೋಟಿ ವಿತರಿಸಲಾಗಿದೆ ಎಂದು ವಿವರಿಸಿದರು.

ಬೀದರನ ಶೇ.70 ಪಿಕೆಪಿಎಸ್‌ಗಳು ಲಾಭದಲ್ಲಿದ್ದು, ಅತ್ಯುತ್ತಮ ಸಾಧನೆಯ ದಾಖಲೆ ಹೊಂದಿವೆ. ಸಾಲದ ವಸೂಲಾತಿ ಮತ್ತು ವ್ಯವಹಾರ ಅಭಿವೃದ್ಧಿ ಮೂಲಕ ಲಾಭದತ್ತ ಸಾಗಲು ಸಹಕಾರಿ ಸಂಘಗಳ ಆಡಳಿತ ಮಂಡಳಿ ಸದಸ್ಯರಿಗೆ ತರಬೇತಿಗಳು ಅವಶ್ಯಕ. ಆಡಳಿತದಲ್ಲಿ ಪಾರದರ್ಶಕತೆ ತರುವ ಸಲುವಾಗಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳಲ್ಲಿ ಗಣಕಯಂತ್ರಗಳನ್ನು ಅಳವಡಿಸಲಾಗಿದೆ. ಪ್ರತಿಯೊಂದು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳನ್ನು ಆಧುನಿಕ ಬ್ಯಾಂಕಿಂಗ್‌ ವ್ಯವಸ್ಧೆಗೆ ಅನುಗುಣವಾಗಿ ಸನ್ನದುಗೊಳಿಸಿದರೆ ಕೇವಲ ಕೃಷಿ ಕ್ಷೇತ್ರವನ್ನಲ್ಲದೇ ಇತರ ವ್ಯಾಪಾರಾಭಿವೃದ್ಧಿ ಚಟುವಟಿಕೆಗಳನ್ನು ಕೈಗೊಳ್ಳುವತ್ತ ಸಂಘಗಳು ಗಮನ ಹರಿಸಲು ಸಾಧ್ಯವಾಗುತ್ತದೆ ಎಂದರು.

ಅಧ್ಯಕ್ಷತೆ ವಹಿಸಿದ್ದ ಕಲಬುರಗಿ ವಿಭಾಗದ ಜಂಟಿ ನಿಬಂಧಕ ಐ.ಎಸ್‌. ಗಿರಡ್ಡಿ ಮಾತನಾಡಿ, ಸಹಕಾರಿ ಸಂಘಗಳು ವ್ಯವಹಾರ ಅಭಿವೃದ್ಧಿ ಮೂಲಕ ಸ್ವಾವಲಂಬಿಗಳಾಗಬೇಕು. ಊರಿನ ಅಭಿವೃದ್ಧಿಗೆ ಕೊಡುಗೆ ನೀಡಬೇಕು. ಈ ನಿಟ್ಟಿನಲ್ಲಿ ಪ್ರತಿಯೊಂದು ಸಂಸ್ಥೆಯ ಅಧ್ಯಕ್ಷರು ದೂರದೃಷ್ಟಿಯಿಂದ ಕೆಲಸ ನಿರ್ವಹಿಸಿದರೆ ಆ ಗ್ರಾಮದ ಚಿತ್ರಣ ಬದಲಾಗುತ್ತದೆ ಎಂದು ವಿವರಿಸಿದರು.

ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಾಜನ ಮಲ್ಲಿಕಾರ್ಜುನ, ಪ್ರಧಾನ ವ್ಯವಸ್ಥಾಪಕ ವಿಠಲ ರೆಡ್ಡಿ, ನರಸಾರೆಡ್ಡಿ, ಸಹಾಯಕ ನಿಬಂಧಕರು ಎ.ಎಸ್‌. ನಿಂಬಾಳ, ಸಹಾರ್ದ ನಿರ್ದೇಶಕ ಸುಬ್ರಮಣ್ಯ ಪ್ರಭು, ಎಸ್‌.ಜಿ. ಪಾಟೀಲ, ನಾಗಶೆಟ್ಟಿ, ತನ್ವೀರ ಇತರರು ಇದ್ದರು.

ಟಾಪ್ ನ್ಯೂಸ್

ಮತ್ತೆರಡು ಕಿಂಡಿ ಅಣೆಕಟ್ಟುಗಳಿಗೆ ಅಕ್ರಮ ಮರಳುಗಾರಿಕೆ ಹೊಡೆತ?

ಮತ್ತೆರಡು ಕಿಂಡಿ ಅಣೆಕಟ್ಟುಗಳಿಗೆ ಅಕ್ರಮ ಮರಳುಗಾರಿಕೆ ಹೊಡೆತ?

1-KL-S

Amethi;ನಾನು ಗಾಂಧಿ ಕುಟುಂಬದ ಸೇವಕನಲ್ಲ: ಕಾಂಗ್ರೆಸ್‌ ಅಭ್ಯರ್ಥಿ

1-qweqeq

Bihar;10 ವರ್ಷ ಜೈಲು ಶಿಕ್ಷೆ: ಪರೋಲ್‌ ಮೇಲೆ ಬಂದು ಚುನಾವಣ ಪ್ರಚಾರ!

Revanna 2

SIT ಅಧಿಕಾರಿಗಳಿಗೆ ತಲೆನೋವಾದ ಎಚ್‌.ಡಿ.ರೇವಣ್ಣ

Belthangady ವೇಣೂರಿನ ಬಾಹುಬಲಿಗೆ ಮಸ್ತಕಾಭಿಷೇಕ; ವಿರಾಟ್‌ ವಿರಾಗಿಗೆ ಮಜ್ಜನ ಸಮಾಪನ

Belthangady ವೇಣೂರಿನ ಬಾಹುಬಲಿಗೆ ಮಸ್ತಕಾಭಿಷೇಕ; ವಿರಾಟ್‌ ವಿರಾಗಿಗೆ ಮಜ್ಜನ ಸಮಾಪನ

voter

Odisha; ಒಂದೇ ವಿಧಾನಸಭಾ ಕ್ಷೇತ್ರಕ್ಕೆ 3 ಪಕ್ಷಗಳಿಂದ ಒಂದೇ ಕುಟುಂಬದ ಅಭ್ಯರ್ಥಿಗಳು!

HDK 2

JDSನಿಂದ ಅಂತರಕ್ಕೆ ಬಿಜೆಪಿ ಚಿಂತನೆ? ಶಾ-ಎಚ್‌ಡಿಕೆ ಭೇಟಿ ಇಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮತ್ತೆರಡು ಕಿಂಡಿ ಅಣೆಕಟ್ಟುಗಳಿಗೆ ಅಕ್ರಮ ಮರಳುಗಾರಿಕೆ ಹೊಡೆತ?

ಮತ್ತೆರಡು ಕಿಂಡಿ ಅಣೆಕಟ್ಟುಗಳಿಗೆ ಅಕ್ರಮ ಮರಳುಗಾರಿಕೆ ಹೊಡೆತ?

Belthangady ವೇಣೂರಿನ ಬಾಹುಬಲಿಗೆ ಮಸ್ತಕಾಭಿಷೇಕ; ವಿರಾಟ್‌ ವಿರಾಗಿಗೆ ಮಜ್ಜನ ಸಮಾಪನ

Belthangady ವೇಣೂರಿನ ಬಾಹುಬಲಿಗೆ ಮಸ್ತಕಾಭಿಷೇಕ; ವಿರಾಟ್‌ ವಿರಾಗಿಗೆ ಮಜ್ಜನ ಸಮಾಪನ

kaadaane

Chikkamagaluru: ವನ್ಯಜೀವಿ ದಾಳಿಗೆ 5 ವರ್ಷದಲ್ಲಿ 16 ಜನರ ಸಾವು

Lok Sabha Elections; ಊರಿನತ್ತ ಹೊರಟ ಉತ್ತರ ಕರ್ನಾಟಕ ಮಂದಿ

Lok Sabha Elections; ಊರಿನತ್ತ ಹೊರಟ ಉತ್ತರ ಕರ್ನಾಟಕ ಮಂದಿ

1-anna

BJP; ಅಸಮರ್ಥ ಅಣ್ಣಾಮಲೈ ರಾಜ್ಯ ಬಿಟ್ಟಿದ್ದು ಒಳ್ಳೆಯದಾಯಿತು: ಪ್ರಿಯಾಂಕ್‌ ಖರ್ಗೆ

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

ಮತ್ತೆರಡು ಕಿಂಡಿ ಅಣೆಕಟ್ಟುಗಳಿಗೆ ಅಕ್ರಮ ಮರಳುಗಾರಿಕೆ ಹೊಡೆತ?

ಮತ್ತೆರಡು ಕಿಂಡಿ ಅಣೆಕಟ್ಟುಗಳಿಗೆ ಅಕ್ರಮ ಮರಳುಗಾರಿಕೆ ಹೊಡೆತ?

1-KL-S

Amethi;ನಾನು ಗಾಂಧಿ ಕುಟುಂಬದ ಸೇವಕನಲ್ಲ: ಕಾಂಗ್ರೆಸ್‌ ಅಭ್ಯರ್ಥಿ

1-qweqeq

Bihar;10 ವರ್ಷ ಜೈಲು ಶಿಕ್ಷೆ: ಪರೋಲ್‌ ಮೇಲೆ ಬಂದು ಚುನಾವಣ ಪ್ರಚಾರ!

Revanna 2

SIT ಅಧಿಕಾರಿಗಳಿಗೆ ತಲೆನೋವಾದ ಎಚ್‌.ಡಿ.ರೇವಣ್ಣ

Belthangady ವೇಣೂರಿನ ಬಾಹುಬಲಿಗೆ ಮಸ್ತಕಾಭಿಷೇಕ; ವಿರಾಟ್‌ ವಿರಾಗಿಗೆ ಮಜ್ಜನ ಸಮಾಪನ

Belthangady ವೇಣೂರಿನ ಬಾಹುಬಲಿಗೆ ಮಸ್ತಕಾಭಿಷೇಕ; ವಿರಾಟ್‌ ವಿರಾಗಿಗೆ ಮಜ್ಜನ ಸಮಾಪನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.