ಉಡುಪಿ: ಒಂಟಿ ವೃದ್ಧೆಯ ಕೊಲೆ


Team Udayavani, Jul 7, 2019, 11:26 AM IST

udupi-house

ಉಡುಪಿ: ಒಂಟಿಯಾಗಿ ವಾಸಿಸುತ್ತಿದ್ದ ವೃದ್ಧೆಯನ್ನು ಕೊಂದು ಚಿನ್ನಾಭರಣ ದೋಚಿದ ಘಟನೆ ಠಾಣಾ ವ್ಯಾಪ್ತಿಯ ಪುತ್ತೂರು ಸುಬ್ರಹ್ಮಣ್ಯ ನಗರದಲ್ಲಿ ಸಂಭವಿಸಿದೆ.

ಸುಬ್ರಹ್ಮಣ್ಯ ದೇವಸ್ಥಾನ ಸಮೀಪದ 5ನೇ ಕ್ರಾಸ್‌ ನಿವಾಸಿ ರತ್ನಾವತಿ ಜಿ.ಶೆಟ್ಟಿ (80) ಕೊಲೆಯಾದವರು. ಈ ದುಷ್ಕೃತ್ಯ ಶುಕ್ರವಾರ ತಡರಾತ್ರಿ ಬೆಳಕಿಗೆ ಬಂದಿದೆ. ಮೃತದೇಹ ಕೊಳೆತಿದ್ದು, ನಾಲ್ಕು ದಿನಗಳ ಹಿಂದೆಯೇ ಘಟನೆ ನಡೆದಿರ ಬಹುದೆಂದು ಪೊಲೀಸರು ಶಂಕಿಸಿದ್ದಾರೆ.

“ಜು.2ರ ಅಪರಾಹ್ನ 3 ಗಂಟೆಯಿಂದ ಜು.5ರ ರಾತ್ರಿ 8.30ರ ನಡುವೆ ಕೊಲೆ ನಡೆದಿರಬಹುದು’ ಎಂದು ರತ್ನಾವತಿ ಅವರ ಪುತ್ರಿ ಸುಪ್ರಭಾ ಅವರು ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ. ಬೆಡ್‌ರೂಮ್‌ನಲ್ಲಿದ್ದ ರತ್ನಾವತಿ ಶೆಟ್ಟಿ ಅವರನ್ನು ಕೊಲೆ ಮಾಡಿ ಅವರ ಮೈಮೇಲಿದ್ದ ಸರ, ಬಳೆ, ಬೆಂಡೋಲೆಗಳನ್ನು ದೋಚಿಕೊಂಡು ಹೋಗಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ. ಕಳವಾಗಿರುವ ಸೊತ್ತುಗಳ ಮಾಹಿತಿ ಸಿಕ್ಕಿಲ್ಲ.

9 ವರ್ಷಗಳಿಂದ ಒಂಟಿ ಜೀವನ
ರತ್ನಾವತಿ ಅವರು ನಿವೃತ್ತ ಶಿಕ್ಷಕ ದಿ| ಗೋಪಾಲ ಶೆಟ್ಟಿ ಅವರ ಪತ್ನಿ. ಗೋಪಾಲ ಶೆಟ್ಟಿ 2010ರಲ್ಲಿ ಮೃತಪಟ್ಟಿದ್ದರು. ಬಳಿಕ ಇವರು ಒಂಟಿಯಾಗಿದ್ದರು. ಇವರಿಗೆ ಇಬ್ಬರು ಪುತ್ರರು ಹಾಗೂ ಇಬ್ಬರು ಪುತ್ರಿಯರಿದ್ದಾರೆ. ಓರ್ವ ಪುತ್ರ ಬೆಂಗಳೂರಿನಲ್ಲಿ ಹಾಗೂ ಇನ್ನೋರ್ವ ಮುಂಬಯಿಯಲ್ಲಿದ್ದಾರೆ. ಓರ್ವ ಪುತ್ರಿ ಉಡುಪಿ ಅಂಬಲಪಾಡಿಯಲ್ಲಿ ಹಾಗೂ ಇನ್ನೊಬ್ಬರು ಕೊರಂಗ್ರಪಾಡಿ ಯಲ್ಲಿದ್ದಾರೆ. ಮಕ್ಕಳ ಮನೆಗೆ ಹೋಗಲು ಇವರು ಒಪ್ಪುತ್ತಿರಲಿಲ್ಲ. ಮಕ್ಕಳು ಆಗಾಗ ಬಂದು ಹೋಗುತ್ತಿದ್ದರು. ಶುಕ್ರವಾರ ರಾತ್ರಿ ಪಕ್ಕದ ಮನೆಯವರಿಗೆ ವಿಪರೀತ ವಾಸನೆ ಬಂದ ಕಾರ ಣ ರತ್ನಾವತಿಯ ಸಂಬಂಧಿಕರಿಗೆ ತಿಳಿಸಲಾಗಿತ್ತು.

ಬಾಡಿಗೆ ಮನೆ ನಿರ್ವಹಣೆ
ಮನೆ ಹಿಂಭಾಗದಲ್ಲಿ 4 ಸಣ್ಣ ಬಾಡಿಗೆ ಕೋಣೆಗಳಿವೆ. ಇದರ ವ್ಯವಹಾರವನ್ನು ರತ್ನಾವತಿಯೇ ನೋಡಿಕೊಳ್ಳುತ್ತಿದ್ದರು.

ಕತ್ತಿ ಪತ್ತೆ
ಮೃತದೇಹ ಬೆಡ್‌ರೂಮ್‌ನ ಮಂಚದ ಮೇಲಿತ್ತು. ಮನೆಯ ಟಾಯ್ಲೆಟ್‌ನಲ್ಲಿದ್ದ ನೀರು ತುಂಬಿದ ಬಕೆಟ್‌ನಲ್ಲಿ ಕತ್ತಿಯೊಂದು ಪತ್ತೆಯಾಗಿದ್ದು ವಿಧಿ ವಿಜ್ಞಾನ ಪ್ರಯೋಗಾಲಯದ ತಜ್ಞರು ಇದನ್ನು ಪರೀಕ್ಷೆಗೆ ಒಳಪಡಿಸಿದ್ದಾರೆ. ಆದರೆ ಕೊಲೆ ಹೇಗೆ ನಡೆದಿದೆ ಎಂಬುದನ್ನು ಪತ್ತೆ ಹಚ್ಚಲು ಇದುವರೆಗೆ ಸಾಧ್ಯವಾಗಿಲ್ಲ. ದೇಹ ಪೂರ್ಣ ಕೊಳೆತ ಸ್ಥಿತಿಯಲ್ಲಿರುವುದರಿಂದ ಮರಣೋತ್ತರ ಪರೀಕ್ಷಾ ವರದಿ ಕೈ ಸೇರಿದ ಬಳಿಕವೇ ಈ ಬಗ್ಗೆ ಸ್ಪಷ್ಟ ಮಾಹಿತಿ ದೊರೆಯುತ್ತದೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

ಎಸ್‌ಪಿ ನಿಶಾ ಜೇಮ್ಸ್‌, ಶ್ವಾನದಳ ಹಾಗೂ ವಿಧಿವಿಜ್ಞಾನ ಪ್ರಯೋಗಾಲಯದ ತಜ್ಞರು ಶುಕ್ರವಾರ ತಡರಾತ್ರಿಯೇ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದರು. ಸಾಮಾಜಿಕ ಕಾರ್ಯಕರ್ತ ನಿತ್ಯಾನಂದ ಒಳಕಾಡು ಅವರು ಮೃತದೇಹವನ್ನು ಸಾಗಿಸಲು ನೆರವಾದರು.

ಬಾಡಿಗೆಗೆಂದು ಬಂದ ಜೋಡಿಯ ಕೃತ್ಯ?
ಕಳೆದ ಸೋಮವಾರ(ಜು.1)ದಂದು ದಂಪತಿ ಎಂದು ಪರಿಚಯಿಸಿಕೊಂಡು ಬಂದಿದ್ದ ಯುವಜೋಡಿಯೊಂದು ಬಾಡಿಗೆ ಮನೆಯನ್ನು ಪಡೆದುಕೊಂಡಿತ್ತು. ಆ ಜೋಡಿ ಒಂದು ದಿನ ಮಾತ್ರ ಇದ್ದು ಬಳಿಕ ನಾಪತ್ತೆಯಾಗಿದ್ದರು. ಹಾಗಾಗಿ ಅವರೇ ಈ ಕೃತ್ಯ ನಡೆಸಿರಬಹುದು ಎಂಬ ಶಂಕೆ ಬಲವಾಗಿದೆ. ಆ ಜೋಡಿ ಸೋಮವಾರ ಮಧ್ಯಾಹ್ನ ವೇಳೆಗೆ ಆಟೋರಿಕ್ಷಾದಲ್ಲಿ ಬಂದು ರತ್ನಾವತಿ ಜತೆ ತುಂಬಾ ಹೊತ್ತು ಮಾತನಾಡಿ ವಾಪಸಾಗಿದ್ದರು. ಅನಂತರ ಅದೇ ರಿಕ್ಷಾದಲ್ಲಿ ಅಪರಾಹ್ನ ವಾಪಸ್‌ ಬಂದಿದ್ದರು.  ಮಂಗಳವಾರ ಯುವಕ ಆ ಪರಿಸರದವರಲ್ಲಿ “ನಾವು ಇಲ್ಲಿ ಬಾಡಿಗೆ ಮನೆ ಪಡೆದು ಕೊಂಡಿದ್ದೇವೆ. ನನಗೆ ಕೆಲಸವಿದ್ದರೆ ತಿಳಿಸಿ’ ಎಂದಿದ್ದ. ಅನಂತರ ಪತ್ತೆಯಾಗಿಲ್ಲ. ಇನ್ನುಳಿದ ಎರಡು ಬಾಡಿಗೆ ಕೋಣೆಗಳಲ್ಲಿ ಇಬ್ಬರು ವಾಸವಾಗಿದ್ದರು. ಅವರು ಕೆಲವು ದಿನಗಳ ಹಿಂದೆ ಬಾಡಿಗೆ ಕೋಣೆ ಬಿಟ್ಟು ಹೊರ ಹೋಗಿದ್ದರು.

ಟಾಪ್ ನ್ಯೂಸ್

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

1-weeeqwe

ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Brahmavar

Padubidri: ಅಪಘಾತದ ಗಾಯಾಳು ಸಾವು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.