ಕಾಲುವೆ ಕಳಪೆ ಕಾಮಗಾರಿ ಸರಿಪಡಿಸಲು ಸೂಚನೆ
Team Udayavani, Jul 7, 2019, 4:10 PM IST
ಗಂಗಾವತಿ: ಕಾಮಗಾರಿ ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದರು.
ಗಂಗಾವತಿ: ಎಡದಂಡೆ ಕಾಲುವೆ ದುರಸ್ತಿ ಕಾರ್ಯದಲ್ಲಿ ನಿಯಮ ಉಲ್ಲಂಘಿಸಿ ಕಾಮಗಾರಿ ನಡೆಸುವ ಕುರಿತು ಆರೋಪದ ಹಿನ್ನೆಲೆಯಲ್ಲಿ ಸ್ಥಳಕ್ಕೆ ಶನಿವಾರ ಕಾರ್ಯಪಾಲಕ ಅಭಿಯಂತರ ರಾಜಶೇಖರ ಶೆಟ್ಟರ್ ಭೇಟಿ ನೀಡಿ ಯೋಜನೆಯಂತೆ ಕಾಮಗಾರಿ ನಿರ್ವಹಿಸಬೇಕು. ಸ್ಥಳದಲ್ಲೇ ಮುಕ್ಕಾಂ ಹೂಡಿ ಗುಣಮಟ್ಟ ಕಾಯ್ದುಕೊಳ್ಳುವಂತೆ ಕಿರಿಯ ಅಭಿಯಂತರ ಅಮರೇಶ ಅವರನ್ನು ತರಾಟೆ ತೆಗೆದುಕೊಂಡರು. ಕಾಲುವೆಯ ಎಡ-ಬಲಭಾಗವನ್ನು ಹೊಸ ಮರಂ ಹಾಕಿ ಬಲಪಡಿಸಿ ಲೈನಿಂಗ್ ಹಾಕಬೇಕು. ನಿಯಮ ಉಲ್ಲಂಘಿಸಿದರೆ ಸರಕಾರಕ್ಕೆ ವರದಿ ಮಾಡಲಾಗುತ್ತದೆ. ಬಿಲ್ ತಡೆಯಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಸ್ಥಳದಲ್ಲಿ ಸಹಾಯಕ ಕಾರ್ಯಪಾಲಕ ಅಭಿಯಂತರ ಎಂ.ಆರ್. ಕಂದಕೂರು, ಕಿರಿಯ ಅಭಿಯಂತರ ಅಮರೇಶ, ಟೆಂಡರ್ ಪಡೆದ ಗುತ್ತಿಗೆದಾರರ ಖಾಸಗಿ ಅಭಿಯಂತರ ಇದ್ದರು.
ರೈತರ ನಿಯೋಗ ಭೇಟಿ: ಕಾಲುವೆ ಕಾಮಗಾರಿ ಯೋಜನೆಯಂತೆ ನಡೆದಿಲ್ಲ ಎಂಬ ‘ಉದಯವಾಣಿ’ ವರದಿ ಹಿನ್ನೆಲೆಯಲ್ಲಿ ರೈತ ಮುಖಂಡರಾದ ಟಿ. ಸತ್ಯನಾರಾಯಣ, ಸಿ. ರಾಮಕೃಷ್ಣ, ಮರಿವಾಡ ಸತ್ಯನಾರಾಯಣ ಸೇರಿ ಪ್ರಮುಖ ರೈತರು ಕಾಮಗಾರಿ ನಡೆಯುವ ಸ್ಥಳಕ್ಕೆ ಭೇಟಿ ನೀಡಿ ಗುಣಮಟ್ಟದ ಕಾಮಗಾರಿ ಮಾಡಬೇಕು. ಇಲ್ಲದಿದ್ದರೆ ಜಲಸಂಪನ್ಮೂಲ ಸಚಿವರಿಗೆ ದಾಖಲೆ ಜತೆ ದೂರು ನೀಡಲಾಗುತ್ತದೆ. ಕಾಲುವೆಯ 2 ಭಾಗಗಳನ್ನು ಉತ್ತಮ ಮರಂ ಮಣ್ಣಿನಿಂದ ಬಲಗೊಳಿಸಿ ಟೆವೆಲ್ಸ್ ನಿರ್ಮಿಸಿ ಲೈನಿಂಗ್ ಹಾಕಬೇಕು. ಕಾಲುವೆಯಲ್ಲಿ ನೀರು ನಿಲ್ಲಿಸಿ ಮೂರು ತಿಂಗಳು ಕಳೆದ ನಂತರ ಕಾಮಗಾರಿ ನಡೆಸಲಾಗುತ್ತಿದೆ. ಗುಣಮಟ್ಟ ಕಾಪಾಡಲು ಹೇಗೆ ಸಾಧ್ಯ. ಹಗಲು ರಾತ್ರಿ ಕಾಮಗಾರಿ ನಿರ್ವಹಿಸಿ ಗುಣಮಟ್ಟದ ಕಾಮಗಾರಿ ಮಾಡಬೇಕೆಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್
April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ
Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ
MUST WATCH
ಹೊಸ ಸೇರ್ಪಡೆ
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
IPL; ಮೆಕ್ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ
Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ