ಸ್ಪೀಕರ್ ಮೇಲೆ ಅನುಮಾನ ವ್ಯಕ್ತಪಡಿಸುವ ಅಗತ್ಯವಿಲ್ಲ: ಬಿಎಸ್ವೈ
Team Udayavani, Jul 8, 2019, 3:00 AM IST
ಬೆಂಗಳೂರು: ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಏನು ಹೇಳುತ್ತಾರೆ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಏನು ಹೇಳುತ್ತಾರೆ, ಬೇರೆಯವರು ಏನು ಹೇಳುತ್ತಾರೋ ಅದಕ್ಕೆಲ್ಲಾ ನಾನು ಉತ್ತರ ನೀಡುವುದಿಲ್ಲ. ಆದರೆ, ಸ್ಪೀಕರ್ ಬಗ್ಗೆ ಅಪಾರ ಗೌರವವಿದ್ದು, ಅವರ ಬಗ್ಗೆ ಅನುಮಾನ ವ್ಯಕ್ತಪಡಿಸುವ ಅಗತ್ಯವಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಾಸಕರ ರಾಜೀನಾಮೆ ವಿಚಾರದಲ್ಲಿ ನಾನು ಮಧ್ಯ ಪ್ರವೇಶಿಸುವುದಿಲ್ಲ. ಅದು ನನಗೆ ಸಂಬಂಧವಿಲ್ಲದ ವಿಷಯ ಎಂದು ತಿಳಿಸಿದರು.
ಕಾಂಗ್ರೆಸ್-ಜೆಡಿಎಸ್ ಶಾಸಕರು ಸ್ವಇಚ್ಛೆಯಿಂದ ರಾಜೀನಾಮೆ ನೀಡಿದ್ದಾರೆ. ಸ್ಪೀಕರ್ ಅವರು ನಿಷ್ಪಕ್ಷಪಾತವಾಗಿ ಕ್ರಮ ಕೈಗೊಳ್ಳಲಿದ್ದಾರೆ. ಅವರ ಮೇಲೆ ಅಪಾರ ಗೌರವವಿದೆ. ಅವರು ಈ ವಿಚಾರದಲ್ಲಿ ಮಾದರಿ ಸ್ಪೀಕರ್ ಆಗಿ ನಡೆದುಕೊಳ್ಳುತ್ತಾರೆ ಎಂಬ ನಂಬಿಕೆ ಇದೆ.
-ಆರ್.ಅಶೋಕ್, ಮಾಜಿ ಉಪಮುಖ್ಯಮಂತ್ರಿ
ಆಪರೇಷನ್ ಕಮಲ ಎಂದು ಆರೋಪಿಸುವ ಮೂಲಕ ರಾಜೀನಾಮೆ ನೀಡಿದ ಹಿರಿಯ ನಾಯಕರಿಗೆ ಮೈತ್ರಿ ಸರ್ಕಾರ ಅವಮಾನ ಮಾಡುತ್ತಿದೆ. ಮೈತ್ರಿ ಪಕ್ಷದ ನಾಯಕರು ಬಿಜೆಪಿ ವಿರುದ್ಧ ಮಾಡುತ್ತಿರುವ ಆರೋಪದಲ್ಲಿ ಹುರುಳಿಲ್ಲ. ನಾವು ಆಪರೇಷನ್ ಕಮಲಕ್ಕೆ ಕೈ ಹಾಕಿಲ್ಲ. ಆ ರೀತಿ ಹೇಳುವ ಮೂಲಕ ರಾಮಲಿಂಗಾರೆಡ್ಡಿ, ಎಚ್.ವಿಶ್ವನಾಥ್ರಂತಹ ಹಿರಿಯರಿಗೆ ಅವಮಾನ ಮಾಡಬಾರದು.
-ಎಂ.ಪಿ.ರೇಣುಕಾಚಾರ್ಯ, ಶಾಸಕ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು