ಜೀವನಪ್ರೀತಿ ಕಲಿಸಿದ ಗೆಳತಿಗೆ ಹೇಳಬೇಕಿದೆ ಧನ್ಯವಾದ…


Team Udayavani, Jul 8, 2019, 5:00 AM IST

n-15

ಜೀವನ ಪ್ರೀತಿ ಕಳೆದುಕೊಂಡರೆ ಒಂದು ಅರ್ಥದಲ್ಲಿ ಬದುಕು ಮುಗಿದ ಹಾಗೆ. ಬದುಕಬೇಕು, ಏನಾದರೂ ಸಾಧಿಸಬೇಕೆಂಬ ಹಂಬಲ ಹುಟ್ಟುವುದೇ ಜೀವನ ಪ್ರೀತಿ ಇದ್ದಾಗ. ಆದರೆ ಜೀವನದಲ್ಲಿ ಎದುರಾಗುವ ಕೆಲವೊಂದು ಕಹಿ ಘಟನೆಗಳಿಂದ ಜೀವನ ಪ್ರೀತಿ ಬಿಡಿ ಜೀವನವೇ ಬೇಡ ಅನಿಸುತ್ತದೆ. ಇಂತಹ ಸಂದರ್ಭದಲ್ಲಿ ಇನ್ನೊಂದು ಜೀವ ಆಸರೆಯಾಗಿ ನಿಂತರೆ ಬದುಕು ಸುಂದರವಾಯ್ತು ಎಂದೆನಿಸುವುದಿದೆ.

ಅದೆಷ್ಟು ಬಾರಿ ನಾನು ಸೋತೆ ಎಂದಾಗ ನನಗೆ ಆಸರೆಯಾದ ಜೀವಕ್ಕೆ ಧನ್ಯವಾದ ಹೇಳಲೇಬೇಕಿದೆ.

ಬಹುಶಃ ನನ್ನ ನಿನ್ನ ಸ್ನೇಹಕ್ಕೆ 15 ವರ್ಷ ಕಳೆದಿರಬಹುದು. ಆದರೆ ಜೀವನದ ಪ್ರತಿ ಹಂತದಲ್ಲೂ ಉತ್ತಮ ಸಲಹಾಗಾರ್ತಿಯಾಗಿ ನನ್ನ ಜತೆಯಾಗಿದ್ದೆ. ಯಾರಲ್ಲೂ ಹೇಳಲಾಗದ ವಿಷಯಗಳನ್ನು ನಿನ್ನಲ್ಲಿ ಹಂಚಿಕೊಳ್ಳುತ್ತಿದೆ.

ತಪ್ಪು ಮಾಡು ಆದರೆ ಆ ತಪ್ಪನ್ನು ಮತ್ತೆ ಮಾಡಬೇಡ ಎಂದಿದ್ದೆ. ಆ ಒಂದು ಮಾತು ನನ್ನ ಕಿವಿಯಲ್ಲಿ ಇನ್ನೂ ಹಾಗೆ ರಿಂಗಣಿಸುತ್ತಿದೆ. ವೃತ್ತಿ ಮತ್ತು ವೈಯಕ್ತಿಕ ಜೀವನದ ಯಾವುದೇ ಸಮಸ್ಯೆಗಳನ್ನು ನಿನ್ನಲ್ಲಿ ಹೇಳಿಕೊಂಡಾಗ ಒಂದು ಒಳ್ಳೆಯ ಸಲಹೆ ಸಿಗುತ್ತೆ ಅನ್ನುವ ಭರವಸೆ ನನ್ನದಾಗಿರುತ್ತದೆ. ಬೇಗನೆ ಸಿಡಿಮಿಡಿ, ಕೋಪ ಗೊಳ್ಳುವ ಸ್ವಭಾವ ನನ್ನದಾದರೆ, ಶಾಂತ, ತಾಳ್ಮೆಯ ಸ್ವಭಾವ ನಿನ್ನದು. ಯಾವುದೇ ಫ‌ಲಾಪೇಕ್ಷೆಯಿಲ್ಲದೆ ಸಹಾಯ ಮಾಡುವ ಗುಣ ನಿನ್ನದು. ಪ್ರಾಣಿಗಳೆಂದರೆ ನಿನಗೆ ಅತೀವ ಪ್ರೀತಿ. ನಿನ್ನಂತಹ ಮಾರ್ಗದರ್ಶಕಿ ಜೀವನ ಪೂರ್ತಿ ನನ್ನ ಜತೆಯಾಗಿರಬೇಕು ಅನ್ನೋದು ನನ್ನ ಅಭಿಲಾಷೆ. ನಮ್ಮ ಈ ಸ್ನೇಹ ಶಾಶ್ವತವಾಗಿರಲಿ.

ಅದೆಷ್ಟೋ ಬಾರಿ ನಿನಗೆ ಧನ್ಯವಾದ ಹೇಳಬೇಕೆಂದರೂ ಸಾಧ್ಯವಾಗಲಿಲ್ಲ ಗೆಳತಿ. ಅದಕ್ಕಾಗಿ ಈಗ ಹೇಳುತ್ತಿದ್ದೇನೆ ನನ್ನ ಬದುಕಿನಲ್ಲಿ ಜತೆಯಾಗಿದ್ದಕ್ಕೆ ಸಹಸ್ರಾರು ಧನ್ಯವಾದಗಳು.

•ಗೌರಿ

ಟಾಪ್ ನ್ಯೂಸ್

Revanna 2

H.D. Revanna;ಇನ್ನಷ್ಟು ವಿಚಾರಣೆಗೆ 4 ದಿನ ಎಸ್ ಐಟಿ ಕಸ್ಟಡಿಗೆ

1-wqeqwqe

IPL; ಪಂಜಾಬ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ಗೆ 28 ರನ್‌ಗಳ ಜಯ

voter

Pen Drive ಹಗರಣದ ನಡುವೆ ರಾಜ್ಯದ ಎರಡನೇ ಹಂತದ ಬಹಿರಂಗ ಪ್ರಚಾರ ಅಂತ್ಯ

Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ

Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ

ಯತ್ನಾಳ್ ಮಂತ್ರಿ ಮಾಡಲು ಸಲಹೆ ನೀಡಿದ್ದೇ ನಾನು: ರಮೇಶ ಜಿಗಜಿಣಗಿ

Basangouda Patil Yatnal ಮಂತ್ರಿ ಮಾಡಲು ಸಲಹೆ ನೀಡಿದ್ದೇ ನಾನು: ರಮೇಶ ಜಿಗಜಿಣಗಿ

Prajwal Revanna ಮಾಡಿದ್ದು ಅತ್ಯಂತ ಹೇಯ ಕೃತ್ಯ: ಎಂ.ಬಿ.ಪಾಟೀಲ್

Prajwal Revanna ಮಾಡಿದ್ದು ಅತ್ಯಂತ ಹೇಯ ಕೃತ್ಯ: ಎಂ.ಬಿ.ಪಾಟೀಲ್

Politics: ಸೋಲಿನ ಭಯದಿಂದ ಕಾಂಗ್ರೆಸ್ ನಾಯಕರು ಹತಾಶರಾಗಿದ್ದಾರೆ; ಜಗದೀಶ್ ಶೆಟ್ಟರ್

Politics: ಸೋಲಿನ ಭಯದಿಂದ ಕಾಂಗ್ರೆಸ್ ನಾಯಕರು ಹತಾಶರಾಗಿದ್ದಾರೆ; ಜಗದೀಶ್ ಶೆಟ್ಟರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

Revanna 2

H.D. Revanna;ಇನ್ನಷ್ಟು ವಿಚಾರಣೆಗೆ 4 ದಿನ ಎಸ್ ಐಟಿ ಕಸ್ಟಡಿಗೆ

1-wqeqwqe

IPL; ಪಂಜಾಬ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ಗೆ 28 ರನ್‌ಗಳ ಜಯ

voter

Pen Drive ಹಗರಣದ ನಡುವೆ ರಾಜ್ಯದ ಎರಡನೇ ಹಂತದ ಬಹಿರಂಗ ಪ್ರಚಾರ ಅಂತ್ಯ

Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ

Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ

ಯತ್ನಾಳ್ ಮಂತ್ರಿ ಮಾಡಲು ಸಲಹೆ ನೀಡಿದ್ದೇ ನಾನು: ರಮೇಶ ಜಿಗಜಿಣಗಿ

Basangouda Patil Yatnal ಮಂತ್ರಿ ಮಾಡಲು ಸಲಹೆ ನೀಡಿದ್ದೇ ನಾನು: ರಮೇಶ ಜಿಗಜಿಣಗಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.