ಮಂಗಳೂರು-ಬೆಂಗಳೂರು ರೈಲು ಮಾರ್ಗ: ಗುಡ್ಡ ಕುಸಿದರೆ ತೆರವುಗೊಳಿಸುವುದೇ ಸವಾಲು


Team Udayavani, Jul 8, 2019, 12:02 PM IST

TRAIN

ಸಂಗ್ರಹ ಚಿತ್ರ

ಸುಬ್ರಹ್ಮಣ್ಯ : ಬೆಂಗಳೂರು- ಮಂಗಳೂರು ನಡುವೆ ಪ್ರತೀ ವರ್ಷ ಮಳೆಗಾಲದಲ್ಲಿ ರೈಲು ಸಂಚಾರ ಅನುಮಾನ. ಇದಕ್ಕೆ ಕಾರಣ ಪಶ್ಚಿಮ ಘಟ್ಟದ ಮೂಲಕ ಹಾದುಹೋಗುವ ರೈಲು ಮಾರ್ಗದಲ್ಲಿ ಗುಡ್ಡ ಕುಸಿತ.

ಸಕಲೇಶಪುರ – ಸುಬ್ರಹ್ಮಣ್ಯ ರೈಲು ಮಾರ್ಗದ ಮಧ್ಯೆ ಕಳೆದ ಬಾರಿ ಅತಿವೃಷ್ಟಿ ಸಂದರ್ಭ 65 ಕಡೆ ಭೂಕುಸಿತ ಸಂಭವಿಸಿ ತಿಂಗಳುಗಟ್ಟಲೆ ರೈಲು ಓಡಾಟ ಸ್ಥಗಿತಗೊಂಡಿತ್ತು. ಮಾರ್ಗದ ಎರಡೂ ಕಡೆ ಗುಡ್ಡಗಳು ಈಗಲೂ ಬಾಯೆ¤ರೆದೇ ಇವೆ. ಹೀಗಾಗಿ ಈ ಬಾರಿಯೂ ಮಳೆ ಜೋರಾದಾಗ ಭೂಕುಸಿತ ಪುನರಾವರ್ತನೆಯಾಗುವ ಸಾಧ್ಯತೆ ಹೆಚ್ಚು.

ದೊಡ್ಡ ಸವಾಲು
ಈ ರೈಲು ಮಾರ್ಗ ನಿರ್ಮಾಣವಾದ ಬಳಿಕ ಇಷ್ಟು ಭಾರೀ ಪ್ರಮಾಣದಲ್ಲಿ ಗುಡ್ಡ ಕುಸಿದಿರಲಿಲ್ಲ. ಸಿರಿಬಾಗಿಲು, ಎಡಕುಮೇರಿ, ಕಡಗರಹಳ್ಳ, ದೋಣಿಗಲ್‌ -ಅತೀ ಹೆಚ್ಚು ಗುಡ್ಡ ಕುಸಿತ ಅನುಭವಿಸಿದ ಪ್ರದೇಶಗಳಿವು. ಹಳಿ ಮೇಲೆ ಬಿದ್ದ ಮಣ್ಣು ತೆರವು ಮಾಡಿ ಹಳಿಯನ್ನು ಪೂರ್ವ ಸ್ಥಿತಿಗೆ ತರುವುದು ರೈಲ್ವೇ ಇಲಾಖೆಗೆ ದೊಡ್ಡ ಸವಾಲು.

ಹಳಿ ಮೇಲೆ ಬಂಡೆಕಲ್ಲುಗಳು
ಮಣ್ಣಿನ ಜತೆಗೆ ಬಂಡೆಕಲ್ಲುಗಳು ಬೀಳುವುದರಿಂದ ಹಳಿಗಳು ಸಂಪೂರ್ಣ ನಾಶವಾಗುತ್ತವೆ. ಹಿಟಾಚಿ ಮತ್ತು ಕಾರ್ಮಿಕರ ಸಹಾಯದಿಂದ ತೆರವು, ದುರಸ್ತಿ ನಡೆಸಬೇಕು. ಮಳೆ ಸುರಿಯುವಾಗ ಹಿಟಾಚಿ ಯಂತ್ರಗಳನ್ನು ಮಣ್ಣು ಕುಸಿದಲ್ಲಿಗೆ ಒಯ್ಯುವುದು ಕೂಡ ಸವಾಲೇ ಸರಿ. ಸ್ಥಳವು ಇಕ್ಕಟ್ಟಾಗಿದ್ದರೆ, ಅಕ್ಕಪಕ್ಕ ಪ್ರಪಾತಗಳಿದ್ದರೆ ಜಾಗದ ಕೊರತೆಯಿಂದ ಟಿಪ್ಪರ್‌ ಬಳಸಿ ಮಣ್ಣು ಸ್ಥಳಾಂತರಿಸುವುದಕ್ಕೂ ಸಾಧ್ಯವಾಗದು.

ಸವಾಲುಗಳು ಏನೇನು?
ಹಳಿ ಮೇಲೆ ಬಿದ್ದ ಮಣ್ಣು, ಬಂಡೆಗಲ್ಲು ತೆರವು ಕಷ್ಟದ ಕೆಲಸ. ಕಾಡಾನೆಗಳ ಭಯ ಇನ್ನೊಂದೆಡೆ. ಕೆಲಸ ಮಾಡುತ್ತಿರುವಾಗಲೇ ಮತ್ತೆ ಗುಡ್ಡ ಕುಸಿಯುವ ಭೀತಿ. ಒಂದು ಕಡೆ ಮಣ್ಣು ತೆರವುಗೊಳಿಸಿ ಇನ್ನೊಂದೆಡೆಗೆ ಹೋದಾಗ ದಾರಿಯಲ್ಲಿ ಮಣ್ಣು ಕುಸಿದು ಕಾರ್ಮಿಕರು, ಅಧಿಕಾರಿಗಳು ದಿಗ್ಬಂಧನಕ್ಕೆ ಒಳಗಾದ ಉದಾಹರಣೆಗಳೂ ಇವೆ. ಮಣ್ಣು ತೆರವು ಮಾಡಿದ ಬಳಿಕ ಹಳಿ ದುರಸ್ತಿಯಾಗಬೇಕು. ಆಮೇಲೆ ಪ್ರಾಯೋಗಿಕ ಸಂಚಾರ ನಡೆಸಿಯೇ ರೈಲು ಸಂಚಾರಕ್ಕೆ ಅಧಿಕಾರಿಗಳು ಅನುಮತಿ ನೀಡುತ್ತಾರೆ.

2 ಎಕರೆ ಗುಡ್ಡ ಜರಿದಿತ್ತು
ಸುಬ್ರಹ್ಮಣ್ಯ-ಸಕಲೇಶಪುರ ರೈಲು ಮಾರ್ಗದ ಸಿರಿಬಾಗಿಲು ಮಾರ್ಗ 86ರ ಬಳಿ ಕಳೆದ ವರ್ಷ ಭಾರೀ ಗಾತ್ರದ ಗುಡ್ಡ ಜರಿದು ಮಣ್ಣು ಮತ್ತು ಬಂಡೆಗಲ್ಲು ರೈಲು ಸುರಂಗದ ಮೇಲೆ ಬಿದ್ದಿತ್ತು. 170 ಮೀ. ಉದ್ದದ ಸುರಂಗ ಸಂಪೂರ್ಣ ಮುಚ್ಚಿತ್ತು. ಮೇಲ್ಭಾಗದಲ್ಲಿ 25 ಮೀ.ನಷ್ಟು ಎತ್ತರಕ್ಕೆ ಮಣ್ಣು ಆವರಿಸಿತ್ತು. ಆಗ ಸುಮಾರು ಎರಡು ಎಕ್ರೆ ವಿಸ್ತಾರದಲ್ಲಿ ಗುಡ್ಡ ಜರಿದುದು ಗುಡ್ಡ ಕುಸಿತ ಘಟನೆಯ ತೀವ್ರತೆಗೆ ಸಾಕ್ಷಿ.

ಕಟ್ಟೆಚ್ಚರ ವಹಿಸಲಾಗುತ್ತಿದೆ
ಸುಬ್ರಹ್ಮಣ್ಯ-ಸಕಲೇಶಪುರ ರೈಲು ಮಾರ್ಗದಲ್ಲಿ ಗುಡ್ಡ ಜರಿತ ಕುರಿತು ನಿಗಾ ವಹಿಸಲಾಗುತ್ತಿದೆ. ರಾತ್ರಿ ಹೊತ್ತು ಪೆಟ್ರೋಲ್‌ ಮ್ಯಾನ್‌ ನಿಯೋಜಿಸಲಾಗಿದೆ. ಇಲಾಖೆಯ ತಾಂತ್ರಿಕ ಅಧಿಕಾರಿಗಳು ಮಾರ್ಗದ ಸುರಕ್ಷತೆ ಮತ್ತು ಗುಣಮಟ್ಟ ಪರಿಶೀಲನೆಯ ಕುರಿತು ಕಟ್ಟೆಚ್ಚರ ವಹಿಸುತ್ತಿದ್ದಾರೆ.
– ಗೋಪಿನಾಥ್‌ ರೈಲ್ವೇ ಅಧಿಕಾರಿ, ಮೈಸೂರು ರೈಲ್ವೇ ವಿಭಾಗ

ಬಾಲಕೃಷ್ಣ ಭೀಮಗುಳಿ

ಟಾಪ್ ನ್ಯೂಸ್

ED raids; ಸಚಿವರ ಆಪ್ತ ಕಾರ್ಯದರ್ಶಿ ಮನೆಯಲ್ಲಿತ್ತು ಕಂತೆ ಕಂತೆ ಹಣ, ಬೆಚ್ಚಿ ಬಿದ್ದ ಅಧಿಕಾರಿ

ED Raids; ಸಚಿವರ ಆಪ್ತ ಕಾರ್ಯದರ್ಶಿ ಮನೆಯಲ್ಲಿತ್ತು ಕಂತೆ ಕಂತೆ ಹಣ, ಬೆಚ್ಚಿ ಬಿದ್ದ ಅಧಿಕಾರಿ

Samantha: ಬೆತ್ತಲೆ ಫೋಟೋ ಹಾಕಿ ಡಿಲೀಟ್‌ ಮಾಡಿದ್ರಾ ಸಮಂತಾ?: ಟ್ರೆಂಡ್‌ ಆದ ಸ್ಯಾಮ್

Samantha: ಬೆತ್ತಲೆ ಫೋಟೋ ಹಾಕಿ ಡಿಲೀಟ್‌ ಮಾಡಿದ್ರಾ ಸಮಂತಾ?: ಟ್ರೆಂಡ್‌ ಆದ ಸ್ಯಾಮ್

Amethi: ಕಾಂಗ್ರೆಸ್ ಕಚೇರಿ ಮೇಲೆ ದಾಳಿ… ಕಾರುಗಳು ಪುಡಿ ಪುಡಿ, ಕಾರ್ಯಕರ್ತರಿಂದ ಪ್ರತಿಭಟನೆ

Amethi: ಕಾಂಗ್ರೆಸ್ ಕಚೇರಿ ಮೇಲೆ ದಾಳಿ… ಕಾರುಗಳು ಪುಡಿ ಪುಡಿ, ಕಾರ್ಯಕರ್ತರಿಂದ ಪ್ರತಿಭಟನೆ

Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್‌ ಇನ್ನಿಲ್ಲ

Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್‌ ಇನ್ನಿಲ್ಲ

ಕಾಡಾನೆ ತಡೆಗೆ ಜೋತಾಡುವ ಸೌರ ವಿದ್ಯುತ್‌ ಬೇಲಿ!

ಕಾಡಾನೆ ತಡೆಗೆ ಜೋತಾಡುವ ಸೌರ ವಿದ್ಯುತ್‌ ಬೇಲಿ!

Todays Horoscope: ಈ ರಾಶಿಯವರಿಗೆ ಏಳೂವರೆ ಶನಿಯ ಕೊನೆಯ ಹಂತದ ಕೀಟಲೆಗಳು ಇರಲಿದೆ

Todays Horoscope: ಈ ರಾಶಿಯವರಿಗೆ ಏಳೂವರೆ ಶನಿಯ ಕೊನೆಯ ಹಂತದ ಕೀಟಲೆಗಳು ಇರಲಿದೆ

8 ಸಂತ್ರಸ್ತೆಯರನ್ನು ಸಂಪರ್ಕಿಸಿದ ಎಸ್‌ಐಟಿ? ಇನ್ನಷ್ಟು ಎಫ್ಐಆರ್‌ ಸಾಧ್ಯತೆ

8 ಸಂತ್ರಸ್ತೆಯರನ್ನು ಸಂಪರ್ಕಿಸಿದ ಎಸ್‌ಐಟಿ? ಇನ್ನಷ್ಟು ಎಫ್ಐಆರ್‌ ಸಾಧ್ಯತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾಡಾನೆ ತಡೆಗೆ ಜೋತಾಡುವ ಸೌರ ವಿದ್ಯುತ್‌ ಬೇಲಿ!

ಕಾಡಾನೆ ತಡೆಗೆ ಜೋತಾಡುವ ಸೌರ ವಿದ್ಯುತ್‌ ಬೇಲಿ!

Belthangady ವೇಣೂರಿನ ಬಾಹುಬಲಿಗೆ ಮಸ್ತಕಾಭಿಷೇಕ; ವಿರಾಟ್‌ ವಿರಾಗಿಗೆ ಮಜ್ಜನ ಸಮಾಪನ

Belthangady ವೇಣೂರಿನ ಬಾಹುಬಲಿಗೆ ಮಸ್ತಕಾಭಿಷೇಕ; ವಿರಾಟ್‌ ವಿರಾಗಿಗೆ ಮಜ್ಜನ ಸಮಾಪನ

Belthangady ವಿದ್ಯುತ್‌ ಕಂಬಕ್ಕೆ ಟಿಪ್ಪರ್‌ ಢಿಕ್ಕಿ

Belthangady ವಿದ್ಯುತ್‌ ಕಂಬಕ್ಕೆ ಟಿಪ್ಪರ್‌ ಢಿಕ್ಕಿ

Snake; ನೀರಿಲ್ಲದ ಬಾವಿಗೆ ಬಿದ್ದ ನಾಗರಹಾವಿನ ರಕ್ಷಣೆ

Snake; ನೀರಿಲ್ಲದ ಬಾವಿಗೆ ಬಿದ್ದ ನಾಗರಹಾವಿನ ರಕ್ಷಣೆ

ಔತಣಕೂಟದಲ್ಲಿ ಯುವತಿಯ ವೀಡಿಯೋ ಮಾಡಿದ ಆರೋಪ: ಹಲ್ಲೆ-ಇತ್ತಂಡಗಳಿಂದ ದೂರು, ಪ್ರಕರಣ ದಾಖಲು

ಔತಣಕೂಟದಲ್ಲಿ ಯುವತಿಯ ವೀಡಿಯೋ ಮಾಡಿದ ಆರೋಪ: ಹಲ್ಲೆ-ಇತ್ತಂಡಗಳಿಂದ ದೂರು, ಪ್ರಕರಣ ದಾಖಲು

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

ED raids; ಸಚಿವರ ಆಪ್ತ ಕಾರ್ಯದರ್ಶಿ ಮನೆಯಲ್ಲಿತ್ತು ಕಂತೆ ಕಂತೆ ಹಣ, ಬೆಚ್ಚಿ ಬಿದ್ದ ಅಧಿಕಾರಿ

ED Raids; ಸಚಿವರ ಆಪ್ತ ಕಾರ್ಯದರ್ಶಿ ಮನೆಯಲ್ಲಿತ್ತು ಕಂತೆ ಕಂತೆ ಹಣ, ಬೆಚ್ಚಿ ಬಿದ್ದ ಅಧಿಕಾರಿ

Samantha: ಬೆತ್ತಲೆ ಫೋಟೋ ಹಾಕಿ ಡಿಲೀಟ್‌ ಮಾಡಿದ್ರಾ ಸಮಂತಾ?: ಟ್ರೆಂಡ್‌ ಆದ ಸ್ಯಾಮ್

Samantha: ಬೆತ್ತಲೆ ಫೋಟೋ ಹಾಕಿ ಡಿಲೀಟ್‌ ಮಾಡಿದ್ರಾ ಸಮಂತಾ?: ಟ್ರೆಂಡ್‌ ಆದ ಸ್ಯಾಮ್

Amethi: ಕಾಂಗ್ರೆಸ್ ಕಚೇರಿ ಮೇಲೆ ದಾಳಿ… ಕಾರುಗಳು ಪುಡಿ ಪುಡಿ, ಕಾರ್ಯಕರ್ತರಿಂದ ಪ್ರತಿಭಟನೆ

Amethi: ಕಾಂಗ್ರೆಸ್ ಕಚೇರಿ ಮೇಲೆ ದಾಳಿ… ಕಾರುಗಳು ಪುಡಿ ಪುಡಿ, ಕಾರ್ಯಕರ್ತರಿಂದ ಪ್ರತಿಭಟನೆ

Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್‌ ಇನ್ನಿಲ್ಲ

Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್‌ ಇನ್ನಿಲ್ಲ

ಕಾಡಾನೆ ತಡೆಗೆ ಜೋತಾಡುವ ಸೌರ ವಿದ್ಯುತ್‌ ಬೇಲಿ!

ಕಾಡಾನೆ ತಡೆಗೆ ಜೋತಾಡುವ ಸೌರ ವಿದ್ಯುತ್‌ ಬೇಲಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.