ನಾಳೆ ಸರ್ಕಾರಿ ಶಾಲಾ ಬಂದ್ ಮಾಡಿ ಶಿಕ್ಷಕರ ಪ್ರತಿಭಟನೆ
Team Udayavani, Jul 8, 2019, 12:45 PM IST
ಕೋಲಾರ ನಗರದ ಪತ್ರಕರ್ತರ ಭವನದಲ್ಲಿ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಕೆ.ವಿ.ಜಗನ್ನಾಥ್ ಇತರರು ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ಕೋಲಾರ: ಶಿಕ್ಷಕರ ಏಳು ಪ್ರಮುಖ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಎರಡನೇ ಹಂತದ ರಾಜ್ಯಾವ್ಯಾಪಿ ಹೋರಾಟದ ಭಾಗವಾಗಿ ಜು.9ರಂದು ಜಿಲ್ಲೆಯ ಎಲ್ಲಾ ಶಿಕ್ಷಕರು ಶಾಲೆಗಳನ್ನು ಬಂದ್ ಮಾಡಿ ಡಿಡಿಪಿಐ ಕಚೇರಿ ಮುಂದೆ ಪ್ರತಿಭಟನೆ ನಡೆಸಲಿದ್ದಾರೆಂದು ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ದ ಜಿಲ್ಲಾಧ್ಯಕ್ಷ ಜಗದೀಶ್ ಹೇಳಿದರು.
ನಗರದ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘವು ಮೇ 30 ರಂದು ಬೆಂಗಳೂರಿನಲ್ಲಿ ಸಭೆ ಸೇರಿ ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ರಾಜ್ಯ ಸರ್ಕಾರಕ್ಕೆ ಜೂ.30 ರವರೆಗೂ ಗಡುವು ನೀಡಲಾಗಿತ್ತು. ಆದರೆ, ಸರಕಾರ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಈ ಹಿನ್ನೆಲೆಯಲ್ಲಿ ಎರಡನೇ ಹಂತದ ಹೋರಾಟವಾಗಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳ ಡಿಡಿಪಿಐ ಕಚೇರಿಗಳ ಮುಂದೆ ಜು.9ರಂದು ಶಿಕ್ಷಕರು ಇಡೀ ದಿನ ಪ್ರತಿಭಟನೆ ನಡೆಸಲಿದ್ದಾರೆಂದು ಹೇಳಿದರು.
ಈ ಎರಡನೇ ಹಂತದ ಹೋರಾಟಕ್ಕೂ ರಾಜ್ಯ ಸರಕಾರ ಸ್ಪಂದಿಸದಿದ್ದರೆ 3ನೇ ಹಂತದ ಹೋರಾಟವಾಗಿ ಸೆ.5ರ ಶಿಕ್ಷಕರ ದಿನಾಚರಣೆಯನ್ನು ಬಹಿಷ್ಕರಿಸಿ ವಿಧಾನ ಸೌಧ ಚಲೋ ಕಾರ್ಯಕ್ರಮ ಹಮ್ಮಿಕೊಳ್ಳ ಲಾಗುವುದು ಎಂದು ಎಚ್ಚರಿಸಿದರು.
ಗೋಷ್ಠಿಯಲ್ಲಿ ವಿವಿಧ ಶಿಕ್ಷಕರ ಸಂಘಗಳ ಮುಖಂಡರಾದ ಜಿ. ಶ್ರೀನಿ ವಾಸ್, ಎಂ.ನಾಗರಾಜ್, ಸಿ.ಅಪ್ಪೇಗೌಡ, ವೆಂಕಟ ಶಿವಪ್ಪ, ಜಿ.ಎಂ.ಗೋವಿಂದರೆಡ್ಡಿ, ವಿ.ಕಿಟ್ಟಪ್ಪ, ಎಂ.ನಾಗರಾಜ, ಆರ್. ನರಸಿಂಹ, ಪಿ.ಎಂ.ಕೃಷ್ಣಮೂರ್ತಿ, ವಿ. ತಿಪ್ಪಣ್ಣ, ವಿನೋದ್ಬಾಬು, ಆಂಜನೇ ಯಗೌಡ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು
Kolar; ಮೋದಿ ಶನಿ: ಮಾಜಿ ಸ್ಪೀಕರ್ ರಮೇಶ್ ಕುಮಾರ್ ಹೇಳಿಕೆ
CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?
ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್ದು: ಕೃಷ್ಣಬೈರೇ ಗೌಡ
Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್