ಭೂ ಸ್ವಾಧೀನ ತಿದ್ದುಪಡಿ ಕಾಯ್ದೆ ಊರ್ಜಿತವಾಗಲ್ಲ :ಗೋಪಾಲಗೌಡ

ಕೇಂದ್ರ ಸರ್ಕಾರ ರೂಪಿಸಿದ ಕಾಯ್ದೆ ತಿದ್ದುಪಡಿಗೆ ರಾಜ್ಯಕ್ಕೆ ಅಧಿಕಾರವಿಲ್ಲ

Team Udayavani, Jul 8, 2019, 12:55 PM IST

08-July-21

ಕಲಬುರಗಿ: ವಿಶ್ವೇಶ್ವರಯ್ಯ ಭವನದಲ್ಲಿ ಕರ್ನಾಟಕ ಪ್ರಾಂತ ರೈತ ಸಂಘ ಹಮ್ಮಿಕೊಂಡಿದ್ದ 'ಭೂ ಸಮಾವೇಶ'ದಲ್ಲಿ ಸುಪ್ರೀಂಕೋರ್ಟ್‌ ನಿವೃತ್ತ ನ್ಯಾಯಮೂರ್ತಿ ವಿ. ಗೋಪಾಲಗೌಡ ಮಾತನಾಡಿದರು.

ಕಲಬುರಗಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಭೂ ಸ್ವಾಧೀನ ಕಾಯ್ದೆ 2013ಕ್ಕೆ ರಾಜ್ಯ ಸರ್ಕಾರ ತಿದ್ದುಪಡಿ ಮಾಡಿ ಅದನ್ನು ಅಂಗೀಕರಿಸಿದರೂ, ಆ ಕಾಯ್ದೆ ನ್ಯಾಯಾಲಯದಲ್ಲಿ ಊರ್ಜಿತಗೊಳ್ಳುವುದಿಲ್ಲ ಎಂದು ಸುಪ್ರೀಂಕೋರ್ಟ್‌ ನಿವೃತ್ತ ನ್ಯಾಯಮೂರ್ತಿ ವಿ.ಗೋಪಾಲಗೌಡ ತಿಳಿಸಿದರು.

ನಗರದ ವಿಶ್ವೇಶ್ವರಯ್ಯ ಭವನದಲ್ಲಿ ರವಿವಾರ ಕರ್ನಾಟಕ ಪ್ರಾಂತ ರೈತ ಸಂಘ ರೈತಪರ ಭೂಸ್ವಾಧೀನ ಕಾಯ್ದೆ-2013ಕ್ಕೆ ರೈತ ವಿರೋಧಿ ತಿದ್ದುಪಡಿ ಅಂಗೀಕರಿಸಿದ್ದನ್ನು ಕೈಬಿಡಲು ಒತ್ತಾಯಿಸಿ ಮತ್ತು 1964ರ ಭೂ ಕಂದಾಯ ಕಾನೂನು ಕಲಂ 109 ಅಡಿಯಲ್ಲಿ ಕೈಗಾರಿಕೆಗಳಿಗೆ ಭೂಮಿ ಖರೀದಿ ನಿಲ್ಲಿಸುವಂತೆ ಹಾಗೂ ಈಗಾಗಲೇ ಖರೀದಿಸಿದ ಭೂಮಿಗೆ ಯೋಗ್ಯ ಪರಿಹಾರಕ್ಕಾಗಿ ಆಗ್ರಹಿಸಿ ಹಮ್ಮಿಕೊಂಡಿದ್ದ ‘ಭೂ ಸಮಾವೇಶ’ ಉದ್ಘಾಟಿಸಿ ಅವರು ಮಾತನಾಡಿದರು.

ಈ ಹಿಂದೆ ಕೇಂದ್ರ ಸರ್ಕಾರ ಸರ್ವರ ಸಮ್ಮತಿ ಮೇರೆಗೆ ರೈತ ಪರ ಭೂಸ್ವಾಧೀನ ಕಾಯ್ದೆ-2013 ಅನ್ನು ರೂಪಿಸಿದೆ. ಕೇಂದ್ರ ಸರ್ಕಾರ ರೂಪಿಸಿದ ಕಾಯ್ದೆಗೆ ತಿದ್ದುಪಡಿ ಮಾಡಲು ರಾಜ್ಯ ವಿಧಾನಸಭೆಗೆ ಅಧಿಕಾರವಿಲ್ಲ. ಒಂದು ವೇಳೆ ಮಾಡಿದರೂ ಅದಕ್ಕೆ ಪೂರಕವಾಗಿರುವ ಅಂಶಗಳನ್ನು ರಾಷ್ಟ್ರಪತಿಗಳ ಅನುಮತಿ ಪಡೆದುಕೊಂಡು ಸೇರಿ ತಿದ್ದುಪಡಿ ಮಾಡಲು ಅವಕಾಶವಿದೆ. ಆದರೆ, ಯಾವುದೇ ಕಾರಣಕ್ಕೂ ಕಾಯ್ದೆಗೆ ತದ್ವಿರುದ್ಧವಾಗಿರುವ ಅಂಶಗಳನ್ನು ಸೇರಿಸಲು ಅವಕಾಶವಿಲ್ಲ ಎಂದರು.

ಕಾಯ್ದೆಯಲ್ಲಿ ತದ್ವಿರುದ್ಧವಾದ ಅಂಶಗಳು ಇದ್ದಾಗ ರಾಷ್ಟ್ರಪತಿಗಳ ಅನುಮತಿ ಪಡೆದು ತಿದ್ದುಪಡಿ ಅಂಗೀಕರಿಸಿದರೂ ಅದು ಸುಪ್ರೀಂಕೋರ್ಟ್‌ನ ಸಂವಿಧಾನ ಪೀಠದಲ್ಲಿ ಊರ್ಜಿತಗೊಳ್ಳೋದಿಲ್ಲ ಎನ್ನುವ ಅಂಶವನ್ನು ಅವರು, ಹಲವು ಪ್ರಕರಣಗಳನ್ನು ಉಲ್ಲೇಖೀಸಿ ಉದಾಹರಣೆ ಸಹಿತ ವಿವರಿಸಿದರು.

ರಾಜ್ಯ ಸರ್ಕಾರ ಬಂಡವಾಳಶಾಹಿ ಮತ್ತು ಕೈಗಾರಿಕೋದ್ಯಮಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಕಾಯ್ದೆಗೆ ತಿದ್ದುಪಡಿ ತರಲು ಹೊರಟಿದೆ. ಕಾಯ್ದೆಯಲ್ಲಿ ರೈತ ವಿರೋಧಿ ಅಂಶಗಳನ್ನು ಸೇರ್ಪಡೆಗೊಳಿಸಿರುವುದು ಸಂವಿಧಾನ ವಿರೋಧಿ ಮತ್ತು ಅತ್ಯಂತ ಅಪಾಯಕಾರಿ ನಿರ್ಧಾರವಾಗಿದೆ. ತಿದ್ದುಪಡಿ ಕಾಯ್ದೆಯು ಭೂ ಸ್ವಯಂ ಪ್ರೇರಿತ ಸ್ವಾಧೀನ ಅಂಶವನ್ನು ಒಳಗೊಂಡಿದ್ದು, ಇದರ ವಿರುದ್ಧ ರೈತ ಮುಖಂಡರು ಗಟ್ಟಿ ದನಿ ಎತ್ತಬೇಕು. ಕೇಂದ್ರ ಸರ್ಕಾರದ ಕಾಯ್ದೆಗೆ ತದ್ವಿರುದ್ಧವಾದ ತಿದ್ದುಪಡಿಯನ್ನು ರಾಜ್ಯ ಸರ್ಕಾರ ತಂದಿದೆ ಎಂಬುವುದು ನ್ಯಾಯ ಪೀಠಕ್ಕೆ ಮನದಟ್ಟು ಮಾಡಿಕೊಡುವ ಕೆಲಸವಾಗಬೇಕು ಎಂದರು.

ನಮಗೆ ಅನ್ನ ಕೊಡುವ ರೈತರು ಮುಖ್ಯವಾಗಬೇಕೇ ಹೊರತು ಸ್ಟೀಲ್, ಉಕ್ಕು ತಯಾರಿಕಾ ಕಂಪನಿಗಳಲ್ಲ. ಸಮಾಜಕ್ಕಾಗಿ ಬೇಕಾದ ಶಾಲೆ-ಕಾಲೇಜು, ಆಸ್ಪತ್ರೆ, ನೀರಾವರಿ ಯೋಜನೆಗಳಿಗೆ ಫಲವತ್ತಲ್ಲದ ಭೂಮಿಯನ್ನು ಸ್ವಾಧೀನ ಮಾಡಿಕೊಳ್ಳಲಿ. ಆದರೆ, ಜನಹಿತದ ಹೆಸರಲ್ಲಿ ಸ್ವಾರ್ಥದ ಕೈಗಾರಿಕೆಗಳಿಗೆ ರೈತರು ಭೂಮಿ ಕೊಡುವುದು ಬೇಡ ಎಂದು ಕರೆ ನೀಡಿದರು.

ಕರ್ನಾಟಕ ಪ್ರಾಂತ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಮಾರುತಿ ಮಾನ್ಪಡೆ ಮಾತನಾಡಿ, ಸರ್ಕಾರಗಳು ಕಲಂ 109 ಅಡಿಯಲ್ಲಿ ಭೂಮಿಯನ್ನು ಕೈಗಾರಿಕೆಗಳಿಗೆ ಖರೀದಿಸಲು ಅವಕಾಶ ನೀಡಬಾರದು. ಇದರಿಂದ ಸೂಕ್ತ ಪರಿಹಾರ ರೈತರಿಗೆ ಸಿಗುವುದಿಲ್ಲ. ಈ ಕಾಯ್ದೆಯಡಿ ಸ್ವಾಧೀನ ಮಾಡಿಕೊಂಡ ಭೂಮಿಯನ್ನು ಸರ್ಕಾರ ಸರಿಯಾಗಿ ಬಳಸಿಕೊಳ್ಳುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಗುಜರಾತ, ತೆಲಂಗಾಣ, ಆಂಧ್ರಪ್ರದೇಶ ರಾಜ್ಯಗಳು ಕೈಗಾರಿಕೆಗಳಿಗೆ ಈ ಕಾಯ್ದೆಯನ್ನು ಜಾರಿಗೊಳಿಸಿ, ಕೈಗಾರಿಕೆಗಳಿಗೆ ಉಚಿತ ಭೂಮಿ ನೀಡುತ್ತಿವೆ ಎಂಬ ನೆಪವನ್ನು ರಾಜ್ಯ ಸರ್ಕಾರ ಹೇಳುತ್ತಿದೆ. ಆದರೆ, ತಿದ್ದುಪಡಿ ಕಾಯ್ದೆ ರೈತರಿಗೆ ಮರಣಶಾಸನದಂತಿದೆ. ಹೀಗಾಗಿ ಕೂಡಲೇ ಸರ್ಕಾರ ತಿದ್ದುಪಡಿ ಕಾಯ್ದೆ ಕೈಬಿಡಬೇಕು. ಇಲ್ಲವಾದಲ್ಲಿ ರೈತರ ಬೃಹತ್‌ ಹೋರಾಟ ರೂಪಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.

ರೈತ ಸಂಘದ ಜಿಲ್ಲಾಧ್ಯಕ್ಷ ಶರಣಬಸಪ್ಪ ಮಮಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಮಾಜಿ ಸಚಿವ ಎಸ್‌.ಕೆ. ಕಾಂತಾ, ವಕೀಲರ ಸಂಘದ ಅಧ್ಯಕ್ಷ ಅರುಣಕುಮಾರ ಕಿಣ್ಣಿ, ಯು.ಬಸವರಾಜ, ಗೌರಮ್ಮ ಪಾಟೀಲ, ಅಶೋಕ ಮ್ಯಾಗೇರಿ, ಶಾಂತಪ್ಪ ಪಾಟೀಲ, ಅಲ್ತಾಫ್‌ ಇನಾಮದಾರ, ಪಾಂಡುರಂಗ ಮಾವಿನ್‌, ಸುಧಾಮ ಧನ್ನಿ, ಸುಭಾಷ ಹೊಸಮನಿ ಹಾಗೂ ರೈತರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

ಸಾವಿರ ವರ್ಷಗಳ ಭಾರತಕ್ಕಾಗಿ ಯೋಜನೆ; ಈಗಿನ ಯೋಜನೆಗಳಿಂದ ಭಾರತದ ಭವಿಷ್ಯ ಉಜ್ವಲ

ಸಾವಿರ ವರ್ಷಗಳ ಭಾರತಕ್ಕಾಗಿ ಯೋಜನೆ; ಈಗಿನ ಯೋಜನೆಗಳಿಂದ ಭಾರತದ ಭವಿಷ್ಯ ಉಜ್ವಲ

bCharmady: ರಸ್ತೆಯಲ್ಲಿ ಸಿಲುಕಿದ ಕಂಟೈನರ್‌ ಲಾರಿ; ಟ್ರಾಫಿಕ್‌ ಜಾಮ್‌Charmady: ರಸ್ತೆಯಲ್ಲಿ ಸಿಲುಕಿದ ಕಂಟೈನರ್‌ ಲಾರಿ; ಟ್ರಾಫಿಕ್‌ ಜಾಮ್‌

Charmady: ರಸ್ತೆಯಲ್ಲಿ ಸಿಲುಕಿದ ಕಂಟೈನರ್‌ ಲಾರಿ; ಟ್ರಾಫಿಕ್‌ ಜಾಮ್‌

ಅನಾಮಧೇಯ ಲಿಂಕ್‌ ಕ್ಲಿಕ್ಕಿಸಿ ಲಕ್ಷಾಂತರ ರೂ. ಕಳೆದುಕೊಂಡ ವ್ಯಕ್ತಿ

ಅನಾಮಧೇಯ ಲಿಂಕ್‌ ಕ್ಲಿಕ್ಕಿಸಿ ಲಕ್ಷಾಂತರ ರೂ. ಕಳೆದುಕೊಂಡ ವ್ಯಕ್ತಿ

ಮಕ್ಕಳ ಕೈಗೆ ಮೊಬೈಲ್‌ ಬದಲು ಪತ್ರಿಕೆ ಕೊಡಿ; ಡಾ| ಜೋಗತಿ ಮಂಜಮ್ಮ

ಮಕ್ಕಳ ಕೈಗೆ ಮೊಬೈಲ್‌ ಬದಲು ಪತ್ರಿಕೆ ಕೊಡಿ; ಡಾ| ಜೋಗತಿ ಮಂಜಮ್ಮ

Road Mishap ಕಾಸರಗೋಡು; ಕಾರು-ಸ್ಕೂಟರ್‌ ಢಿಕ್ಕಿ: ದಂಪತಿ ಸಾವು

Road Mishap ಕಾಸರಗೋಡು; ಕಾರು-ಸ್ಕೂಟರ್‌ ಢಿಕ್ಕಿ: ದಂಪತಿ ಸಾವು

kejriwal

AAP ಮುಗಿಸಲು ಬಿಜೆಪಿ ಆಪರೇಷನ್‌ ಬಲೆ: ಕೇಜ್ರಿವಾಲ್ ಕಿಡಿ

Doddangudde ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಮೇ 21-24: ಪ್ರತಿಷ್ಠಾ ವರ್ಧಂತಿ ಮಹೋತ್ಸವ

Doddangudde ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಮೇ 21-24: ಪ್ರತಿಷ್ಠಾ ವರ್ಧಂತಿ ಮಹೋತ್ಸವ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-dddasd

Kalaburagi: ಬಿಜೆಪಿ ಕಾರ್ಯಕರ್ತನ ಮೇಲೆ ಮರಣಾಂತಿಕ ಹಲ್ಲೆ

Lokayukta

Marks card ಕೊಡಲು ಲಂಚ: ಶಿಕ್ಷಣ ಇಲಾಖೆ ಅಧಿಕಾರಿಗಳಿಬ್ಬರು ಲೋಕಾಯುಕ್ತ ಬಲೆಗೆ

Kalaburagi; Suresh Sajjan submits nomination as BJP rebel candidate

Kalaburagi; ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಸುರೇಶ ಸಜ್ಜನ್ ನಾಮಪತ್ರ ಸಲ್ಲಿಕೆ

Kalaburagi: ಮರ್ಮಾಂಗಕ್ಕೆ ಕರೆಂಟ್ ಶಾಕ್ ನೀಡಿದ ಪ್ರಕರಣ: ಶೀಘ್ರ ಇನ್ನುಳಿದ ಆರೋಪಿಗಳ ಬಂಧನ

Kalaburagi: ಮರ್ಮಾಂಗಕ್ಕೆ ಕರೆಂಟ್ ಶಾಕ್ ನೀಡಿದ ಪ್ರಕರಣ: ಶೀಘ್ರ ಇನ್ನುಳಿದ ಆರೋಪಿಗಳ ಬಂಧನ

ಕಲಬುರಗಿ: ಎಂಎಲ್ಸಿ ಚುನಾವಣೆಯಲ್ಲಿ ಕೈತಪ್ಪಿದ ಟಿಕೆಟ್: ಬಿಜೆಪಿಯಲ್ಲಿ ಬಂಡಾಯ ಬಿಸಿ

ಎಂಎಲ್ಸಿ ಚುನಾವಣೆ: ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ಮುಂದಾದ ಬಿಜೆಪಿ ನಾಯಕ…

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

police crime

National Conference ರೋಡ್‌ ಶೋ ವೇಳೆ ಮೂವರಿಗೆ ಚಾಕು ಇರಿತ

ಸಾವಿರ ವರ್ಷಗಳ ಭಾರತಕ್ಕಾಗಿ ಯೋಜನೆ; ಈಗಿನ ಯೋಜನೆಗಳಿಂದ ಭಾರತದ ಭವಿಷ್ಯ ಉಜ್ವಲ

ಸಾವಿರ ವರ್ಷಗಳ ಭಾರತಕ್ಕಾಗಿ ಯೋಜನೆ; ಈಗಿನ ಯೋಜನೆಗಳಿಂದ ಭಾರತದ ಭವಿಷ್ಯ ಉಜ್ವಲ

bCharmady: ರಸ್ತೆಯಲ್ಲಿ ಸಿಲುಕಿದ ಕಂಟೈನರ್‌ ಲಾರಿ; ಟ್ರಾಫಿಕ್‌ ಜಾಮ್‌Charmady: ರಸ್ತೆಯಲ್ಲಿ ಸಿಲುಕಿದ ಕಂಟೈನರ್‌ ಲಾರಿ; ಟ್ರಾಫಿಕ್‌ ಜಾಮ್‌

Charmady: ರಸ್ತೆಯಲ್ಲಿ ಸಿಲುಕಿದ ಕಂಟೈನರ್‌ ಲಾರಿ; ಟ್ರಾಫಿಕ್‌ ಜಾಮ್‌

ಅನಾಮಧೇಯ ಲಿಂಕ್‌ ಕ್ಲಿಕ್ಕಿಸಿ ಲಕ್ಷಾಂತರ ರೂ. ಕಳೆದುಕೊಂಡ ವ್ಯಕ್ತಿ

ಅನಾಮಧೇಯ ಲಿಂಕ್‌ ಕ್ಲಿಕ್ಕಿಸಿ ಲಕ್ಷಾಂತರ ರೂ. ಕಳೆದುಕೊಂಡ ವ್ಯಕ್ತಿ

police crime

Madhya Pradesh:ಮಗ ಮಾಡಿದ ತಪ್ಪಿಗೆ ದಲಿತ ತಂದೆ,ತಾಯಿಗೆ ಕಂಬಕ್ಕೆ ಕಟ್ಟಿ ಥಳಿಸಿ,ಬೂಟಿನ ಹಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.