ನರೇಗಲ್ಲ ಹಿರೇ ಕೆರೆಗೆ ಕೇಂದ್ರದ ಅಧಿಕಾರಿ ಭೇಟಿ

•ಜಮೀನಿನ ಬದುವುಗಳಲ್ಲಿ ಸಸಿ ನೆಡಲು ರೈತರನ್ನು ಪ್ರೇರೇಪಿಸಿ

Team Udayavani, Jul 8, 2019, 3:07 PM IST

gadaga-tdy-5..

ನರೇಗಲ್ಲ: ಐತಿಹಾಸಿಕ ಹಿರೇ ಕೆರೆಯನ್ನು ಕೇಂದ್ರ ವಾಣಿಜ್ಯ ಇಲಾಖೆ ಹೆಚ್ಚುವರಿ ಕಾರ್ಯದರ್ಶಿ ಸುನೀಲಕುಮಾರ ಭೇಟಿ ನೀಡಿ ಪರಿಶೀಲಿಸಿದರು.

ನರೇಗಲ್ಲ: ಪಟ್ಟಣದ ಐತಿಹಾಸಿಕ ಹಿರೇ ಕೆರೆಗೆಕೇಂದ್ರ ವಾಣಿಜ್ಯ ಇಲಾಖೆ ಹೆಚ್ಚುವರಿ ಕಾರ್ಯದರ್ಶಿ ಸುನೀಲಕುಮಾರ ರವಿವಾರ ಭೇಟಿ ನೀಡಿ ಕೆರೆ ಅಭಿವೃದ್ಧಿ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ದಿನದಿಂದ ದಿನಕ್ಕೆ ಅಂತರ್ಜಲ ಮಟ್ಟ ದಾಖಲೆ ಪ್ರಮಾಣದಲ್ಲಿ ಕುಸಿಯುತ್ತಿದೆ. ಸಕಾಲಕ್ಕೆ ಮಳೆಯಾಗುತ್ತಿಲ್ಲ. ಜಲಮೂಲಗಳು ನಾಶವಾಗುತ್ತಿವೆ. ಆದರೆ, ಗ್ರಾಮೀಣ ಪ್ರದೇಶಗಳಲ್ಲಿ ಇಂದಿಗೂ ಪುರಾತ ಜಲಮೂಲಗಳ ಸಂರಕ್ಷO ಕಾರ್ಯ ನಡೆಯುತ್ತಿರುವುದು ಶ್ಲಾಘನೀಯವಾಗಿದೆ. ಇದರಂತೆ ಪ್ರತಿಯೊಂದು ಗ್ರಾಮಗಳ ಕೆರೆ ಅಭಿವೃದ್ಧಿಗೆ ಸಾರ್ವಜನಿಕರು ಮುಂದಾದಲ್ಲಿ ಬರಗಾಲದಿಂದ ಮುಕ್ತಿ ಸಿಗಲಿದೆ ಎಂದು ಹೇಳಿದರು.

ಗದಗ ಜಿಲ್ಲೆಯಲ್ಲಿ ಸರಾಸರಿ ಶೇ.55ರಷ್ಟು ಮಳೆಯಾಗುತ್ತಿದೆ. ಅದರಲ್ಲಿ ಅಂದಾಜು ಶೇ. 15ರಷ್ಟು ಮಾತ್ರ ಬಳಕೆಯಾಗುತ್ತಿದೆ. ಇನ್ನುಳಿದ ನೀರು ಬಳಕೆಗೆ ಹೆಚ್ಚಿನ ಒತ್ತು ನೀಡಬೇಕಿದೆ. ಸಾರ್ವಜನಿಕರು, ರೈತರು ಮುಂದೆ ನಿಂತು ಸ್ವಂತ ಹಣದಲ್ಲಿ ಹೂಳೆತ್ತುವ ಕಾರ್ಯದೊಂದಿಗೆ ಕೆರೆ ಅಭಿವೃದ್ಧಿ ಕಾರ್ಯ ಕೈಗೊಂಡಿರುವುದು ಬಹಳ ಸಂತಸದ ವಿಷಯವಾಗಿದೆ. ಕೆರೆಗೆ ನೀರು ತುಂಬಿಸುವ ಮಾರ್ಗ ಸೇರಿದಂತೆ ಇನ್ನಿತರ ಅಭಿವೃದ್ಧಿ ಕಾರ್ಯಗಳ ಬಗ್ಗೆ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸುವಂತೆ ಸೂಚಿಸಿದರು.

ನರೇಗಲ್ಲ ನೆಲ, ಜಲ ಸಂರಕ್ಷಣಾ ಸಮಿತಿ ವತಿಯಿಂದ ಹಿರೇ ಕೆರೆ ಅಭಿವೃದ್ಧಿಗಾಗಿ ಮನವಿ ಸಲ್ಲಿಸಲಾಯಿತು. ನೆಲ ಜಲ ಸಂರಕ್ಷಣಾ ಸಮಿತಿ ಅಧ್ಯಕ್ಷ ಗುರುರಾಜ ಕುಲಕರ್ಣಿ, ಬಸವರಾಜ ವಂಕಲಕುಂಟಿ, ಉಮೇಶ ಸಂಗನಾಳಮಠ, ಕೆ.ಜಿ. ಉಡುಪಿ, ರವೀಂದ್ರನಾಥ ದೊಡ್ಡಮೇಟಿ, ಶಿವನಗೌಡ ಪಾಟೀಲ, ನಿಂಗನಗೌಡ ಲಕ್ಕನಗೌಡ್ರ, ಕೆ.ಸಿ. ಜೋಗಿ, ಪ.ಪಂ ಮುಖ್ಯಾಧಿಕಾರಿ ಎಸ್‌.ಎಸ್‌. ಹುಲ್ಲಮ್ಮನವರ, ಇಂಜಿನಿಯರ್‌ ವಿ.ಪಿ. ಕಾಟೇವಾಲ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.

ಅಬ್ಬಿಗೇರಿಗೆ ಭೇಟಿ: ನರೇಗಲ್ಲ ಹಿರೇಕೆರೆ ವೀಕ್ಷಣೆ ನಂತರ ಅಧಿಕಾರಿಗಳ ತಂಡ ಅಬ್ಬಿಗೇರಿ ಕೋಟುಮಚಗಿ ರಸ್ತೆ ಪುರಾತನ ಕಲಕೇರಿ ಕೆರೆಯನ್ನು ಹಾಗೂ ಉದ್ಯೋಗ ಖಾತ್ರಿ ಯೋಜನೆಯಡಿ ನಿರ್ಮಾಣವಾದ ಒಡ್ಡುಗಳ ಕಾಮಗಾರಿ ವೀಕ್ಷಿಸಿತು. ಜಮೀನಿನ ಬದುವುಗಳಲ್ಲಿ ಸಸಿ ನೆಡಲು ರೈತರಿಗೆ ಪ್ರೇರೇಪಿಸಬೇಕು. ರಸ್ತೆ ಅಕ್ಕ ಪಕ್ಕದಲ್ಲಿಯೂ ಸಸಿಗಳನ್ನು ನೆಡುವ ಕಾರ್ಯವಾಗಬೇಕು. ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಬರುವ ಬತ್ತಿ ಹೋಗಿರುವ ಕೊಳವೆ ಬಾವಿಗಳನ್ನು ಗುರುತಿಸಿ ಅವುಗಳ ಅಂತರ್ಜಲಮಟ್ಟ ವೃದ್ಧಿಸಲು ಕ್ರಮ ಕೈಗೊಳ್ಳಬೇಕು. ಮಳೆ ನೀರು ಹರಿದು ಹೋಗದಂತೆ ಸಂಗ್ರಹಿಸಲು ಅಗತ್ಯವಾದ ಯೋಜನೆ ರೂಪಿಸಬೇಕು ಎಂದು ಹೆಚ್ಚುವರಿ ಕಾರ್ಯದರ್ಶಿ ಸುನೀಲಕುಮಾರ ಸಲಹೆ ನೀಡಿದರು.

ಕೃಷಿ ಇಲಾಖೆ ಜಂಟಿ ನಿರ್ದೇಶಕ ಸಿ.ಬಿ. ಬಾಲರಡ್ಡಿ, ಇಒ ಎಂ.ವಿ. ಚಳಗೇರಿ, ಯೋಜನಾ ನಿರ್ಧೇಶಕ ಸಂತೋಷ ಪಾಟೀಲ, ಸಹಾಯಕ ಕೃಷಿ ಅಧಿಕಾರಿ ಸಿದ್ದೇಶ ಕೋಡಿಹಳ್ಳಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.

ಟಾಪ್ ನ್ಯೂಸ್

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Amit Shah

UP; ಗುಂಡಿಟ್ಟವರು,ದೇಗುಲ ಕಟ್ಟಿದವರ ನಡುವಿನ ಚುನಾವಣೆ: ಅಮಿತ್‌ ಶಾ

mohan bhagwat

RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್‌ ಭಾಗವತ್‌

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Amit Shah

UP; ಗುಂಡಿಟ್ಟವರು,ದೇಗುಲ ಕಟ್ಟಿದವರ ನಡುವಿನ ಚುನಾವಣೆ: ಅಮಿತ್‌ ಶಾ

mohan bhagwat

RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್‌ ಭಾಗವತ್‌

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.