ರಂಗಕರ್ಮಿ ಮುದ್ದುಕೃಷ್ಣ ದಂಪತಿ ಅಪಘಾತದಲ್ಲಿ ಸಾವು


Team Udayavani, Jul 9, 2019, 3:00 AM IST

rangakarmi

ಮೈಸೂರು: ಉತ್ತರ ಪ್ರದೇಶದ ಲಕ್ನೋ ಬಳಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೈಸೂರಿನ ಹಿರಿಯ ರಂಗಕರ್ಮಿ ಕೆ. ಮುದ್ದುಕೃಷ್ಣ (68) ಹಾಗೂ ಅವರ ಪತ್ನಿ ಸಿಎಫ್ಟಿಆರ್‌ಐನ ವಿಜ್ಞಾನಿ ಇಂದ್ರಾಣಿ (59) ಮೃತಪಟ್ಟಿದ್ದಾರೆ.

ನಗರದ ರಾಮಕೃಷ್ಣ ನಗರದ ನಿವಾಸಿಗಳಾದ ಕೆ. ಮುದ್ದುಕೃಷ್ಣ ದಂಪತಿ ಕಳೆದ 4 ದಿನಗಳ ಹಿಂದೆ ಲಕ್ನೋಗೆ ಪ್ರವಾಸ ಬೆಳೆಸಿದ್ದರು. ಬಾಡಿಗೆ ಕಾರಿನಲ್ಲಿ ವಾರಾಣಸಿ ಹಾಗೂ ಕಾಶಿ ನೋಡಲು ತೆರಳುತ್ತಿದ್ದ ಸಂದರ್ಭ ಇವರ ಕಾರಿಗೆ ಭಾನುವಾರ ಮಧ್ಯಾಹ್ನ 3.30ಕ್ಕೆ ಬಸ್‌ ಡಿಕ್ಕಿ ಹೊಡೆದ ಪರಿಣಾಮ ದಂಪತಿ ತೀವ್ರವಾಗಿ ಗಾಯಗೊಂಡಿದ್ದರು. ಇಂದ್ರಾಣಿ ಅವರು ಆಸ್ಪತ್ರೆ ಸಾಗಿಸುವ ವೇಳೆ ಮೃತಪಟ್ಟಿದ್ದರು.

ಗಂಭೀರವಾಗಿ ಗಾಯಗೊಂಡಿದ್ದ ಮುದ್ದುಕೃಷ್ಣ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚೇತರಿಕೆ ಹಾದಿಯಲ್ಲಿದ್ದ ಮುದ್ದುಕೃಷ್ಣ ಅವರು ಸೋಮವಾರ ಬೆಳಗ್ಗೆ ಪತ್ನಿ ಸಾವಿನ ಸುದ್ದಿ ಕೇಳಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಇಂದು ಇಂದ್ರಾಣಿ ಅವರ ಜನ್ಮ ದಿನವಾಗಿತ್ತು. ಈ ಸಂದರ್ಭದಲ್ಲೇ ದುರಂತ ಸಂಭವಿಸಿದೆ.

ಮೃತರಿಗೆ ಅನನ್ಯ ಮತ್ತು ಅಲೋಕ್‌ ಎಂಬ ಇಬ್ಬರು ಗಂಡು ಮಕ್ಕಳಿದ್ದು, ಇಬ್ಬರು ಮದುವೆಯಾಗಿ ಸ್ವೀಡನ್‌ನಲ್ಲೇ ನೆಲೆಸಿದ್ದಾರೆ. ಸದ್ಯ ಮುದ್ದುಕೃಷ್ಣ ಅವರ ಆಪ್ತ ಗೆಳೆಯ, ರಂಗ ಕಲಾವಿದ ಜಯಂತ್‌ ಪಾಟೀಲ್‌ ಹಾಗೂ ಇತರರು ಲಕ್ನೋಗೆ ತೆರಳಿದ್ದಾರೆ. ಮರಣೋತ್ತರ ಪರೀಕ್ಷೆ ನಡೆಸಲಾಗಿದ್ದು, ಪಾರ್ಥಿವ ಶರೀರವನ್ನು ಮಂಗಳವಾರ ಮಧ್ಯಾಹ್ನ ಮೈಸೂರಿಗೆ ಬರಲಿದ್ದು, ಜು.10ರಂದು ಅಂತ್ಯ ಸಂಸ್ಕಾರ ನೆರವೇರಲಿದೆ.

ಬ್ಯಾಂಕ್‌ ಉದ್ಯೋಗಿಯಾಗಿದ್ದ ಮುದ್ದುಕೃಷ್ಣ 15 ವರ್ಷದ ಹಿಂದೆ ಸ್ವಯಂ ನಿವೃತ್ತರಾಗಿದ್ದರು. 1983ರಲ್ಲೇ “ಸಮುದಾಯ’ ಸಂಘಟನೆಯಲ್ಲಿ ಗುರುತಿಸಿಕೊಂಡಿದ್ದ ಇವರು, ಮೈಸೂರಿನಲ್ಲಿ ರಂಗ ಸಂಘಟಕರಾಗಿ ಕೆಲಸ ಮಾಡಿದ್ದರು. ಸಮುದಾಯದ ಕಾರ್ಯದರ್ಶಿಯಾಗಿ, ನಾಟಕ ಅಕಾಡೆಮಿ ಸದಸ್ಯರಾಗಿಯೂ ಸೇವೆ ಸಲ್ಲಿಸಿದ್ದಾರೆ. ಮಾನವ ಮಂಟಪದಲ್ಲಿ ನೂರಾರು ಜೋಡಿಗೆ ಸರಳ ವಿವಾಹ ಮಾಡಿಸಿದ್ದ ಇವರು, ನೇರ ನುಡಿಗೆ ಹೆಸರಾಗಿದ್ದರು.

ಇವರು ರಂಗಪ್ರದರ್ಶನ ನಡೆಯುವ ಎಲ್ಲಾ ಜಾಗದಲ್ಲಿ ಮುದ್ದುಕೃಷ್ಣ ಇರುತ್ತಿದ್ದರು. ಜೊತೆಗೆ ಅಭಿನಯಿಸಿದ್ದಕ್ಕಿಂತ ರಂಗ ಸಂಘಟನೆ ಮಾಡಿದ್ದೆ ಹೆಚ್ಚು. ಸಮುದಾಯದಲ್ಲೂ ಕಾರ್ಯ ನಿರ್ವಹಿಸಿದ್ದರು. ಪಕ್ಷಿ ವೀಕ್ಷಕರಾಗಿಯೂ ಇದ್ದ ಮುದ್ದುಕೃಷ್ಣ ಅವರು ರಂಗ ವಿಮರ್ಶಕರಾಗಿದ್ದರು ಎಂದು ಹಿರಿಯ ರಂಗಕರ್ಮಿ ಮೈಮ್‌ ರಮೇಶ್‌ ಪತ್ರಿಕೆಗೆ ತಿಳಿಸಿದರು.

ಮುಖ್ಯಮಂತ್ರಿ ಸಂತಾಪ: ಲಕ್ನೋದಲ್ಲಿ ರಸ್ತೆ ಅಪಘಾತದಲ್ಲಿ ಮೃತಪಟ್ಟ ರಂಗಕರ್ಮಿ ಕೆ. ಮುದ್ದುಕೃಷ್ಣ ಹಾಗೂ ಪತ್ನಿ ಇಂದ್ರಾಣಿ ಅಕಾಲಿಕ ನಿಧನಕ್ಕೆ ಮುಖ್ಯಮಂತ್ರಿ ಸಂತಾಪ ವ್ಯಕ್ತಪಡಿಸಿದ್ದಾರೆ. ಭಗವಂತನು ಅವರ ಆತ್ಮಕ್ಕೆ ಶಾಂತಿ ನೀಡಲಿ. ಅವರ ಕುಟುಂಬಕ್ಕೆ ಈ ಆಘಾತ ಭರಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುವುದಾಗಿ ಅವರು ತಿಳಿಸಿದ್ದಾರೆ.

ಟಾಪ್ ನ್ಯೂಸ್

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.