ಮಹಾನಗರ ಪಾಲಿಕೆ ಅಧಿಕಾರವೂ ಬಿಜೆಪಿಗೆ!


Team Udayavani, Jul 9, 2019, 3:08 AM IST

paaalike

ಬೆಂಗಳೂರು: ರಾಜ್ಯ ರಾಜಕೀಯದಲ್ಲಿನ “ರಾಜೀನಾಮೆ ಪರ್ವ’ ಬಿಬಿಎಂಪಿಯ ಮುಂದಿನ ಮೇಯರ್‌ ಚುನಾವಣೆ ಮೇಲೆ ಪರಿಣಾಮ ಬೀರುವ ಎಲ್ಲ ಸಾಧ್ಯತೆ ಕಾಣಿಸುತ್ತಿದೆ. ಕಾಂಗ್ರೆಸ್‌ನ ನಾಲ್ವರು ಶಾಸಕರು (ರಾಮಲಿಂಗಾ ರೆಡ್ಡಿ, ಮುನಿರತ್ನ, ಎಸ್‌.ಟಿ.ಸೋಮಶೇಖರ್‌ ಮತ್ತು ಬೈರತಿ ಬಸವರಾಜು) ಪಾಲಿಕೆಯಲ್ಲಿ ಮೈತ್ರಿ ಸರ್ಕಾರ ಅಧಿಕಾರ ನಡೆಸಲು ಆಧಾರವಾಗಿದ್ದರು.

ಅಷ್ಟೇ ಅಲ್ಲ, ಎಸ್‌.ಟಿ.ಸೋಮಶೇಖರ್‌, ಬೈರತಿ ಬಸವರಾಜು ಮತ್ತು ಮುನಿರತ್ನ ಅವರನ್ನು ತ್ರಿಮೂರ್ತಿಗಳು ಎಂದೇ ಕರೆಯಲಾಗುತ್ತಿತ್ತು. ಈಗ ಈ ನಾಯಕರು ರಾಜೀನಾಮೆ ನೀಡಿದ್ದು, ಇವರ ಜತೆಗೆ ಜೆಡಿಎಸ್‌ನ ಶಾಸಕ ಗೋಪಾಲಯ್ಯ ಅವರೂ ರಾಜೀನಾಮೆ ನೀಡಿರುವುದು ಪಾಲಿಕೆಯ ಮೈತ್ರಿ ಸರ್ಕಾರದ ಮೇಲೂ ಮಂಕುಕವಿದಿದೆ.

ಸೆ.28ರಂದು ಮೇಯರ್‌ ಗಂಗಾಂಬಿಕೆ ಮಲ್ಲಿಕಾರ್ಜುನ್‌ ಅವರ ಆಡಳಿತಾವಧಿ ಮುಕ್ತಾಯವಾಗಲಿದೆ. ಒಂದೊಮ್ಮೆ ಶಾಸಕರ ರಾಜೀನಾಮೆ ಅಂಗೀಕಾರವಾಗಿ ಇವರ ನಿಲುವುಗಳು ಬದಲಾದರೆ, ಒಂದುವರೆ ತಿಂಗಳಲ್ಲಿ ನಡೆಯಲಿರು ಮೇಯರ್‌ ಚುನಾವಣೆಯ ನೇರ ಲಾಭ ಬಿಜೆಪಿಗೆ ಆಗಲಿದೆ. ಇದರೊಂದಿಗೆ ಶಾಸಕರ ಆಪ್ತರೂ ಸಹ ಮೇಯರ್‌ ಚುನಾವಣೆಯಲ್ಲಿ ಮೈತ್ರಿಗೆ ವಿರುದ್ಧವಾಗಿ ಮತ ಚಲಾಯಿಸುವ ಅಪಾಯವಿರುವುದು ಪಾಲಿಕೆ ಮೈತ್ರಿ ಸದಸ್ಯರ ನಿದ್ದೆಗೆಡಿಸಿದೆ.

ಈ ಶಾಸಕರು ಪ್ರತಿನಿಧಿಸುವ ಕ್ಷೇತ್ರಗಳಲ್ಲಿ ಒಟ್ಟು 45 ವಾರ್ಡ್‌ಗಳಿವೆ. ಎಲ್ಲರೂ ಆಯಾ ಶಾಸಕರ ಬೆಂಬಲಿಗರೇ ಆಗಿರುವುದು ಸಹಜವಾಗೇ ಬಿಜಿಪಿಗೆ ಲಾಭ ತಂದುಕೊಡಲಿದೆ ಎಂದು ಹೇಳಲಾಗುತ್ತಿದೆ. ಇದರ ಜತೆಗೆ ರಾಜ್ಯದಲ್ಲಿ ಮೈತ್ರಿ ಸರ್ಕಾರವಿಲ್ಲದಿದ್ದರೆ ಪಾಲಿಕೆಯಲ್ಲೂ ಮೈತ್ರಿ ಸರ್ಕಾರ ಮುಂದುವರಿಸಿಕೊಂಡು ಹೋಗುವುದು ಸವಾಲಿನ ಕೆಲಸ ಎಂದು ಕೆಲವು ಸದಸ್ಯರು ಅಭಿಪ್ರಾಯಪಟ್ಟಿದ್ದಾರೆ.

ಇಂದಿರಾ ಕ್ಯಾಂಟೀನ್‌ ವಿಷಯ ಪ್ರಸ್ತಾಪ: ಇತ್ತೀಚೆಗೆ ನಡೆದ ಕೌನ್ಸಿಲ್‌ ಸಾಮಾನ್ಯ ಸಭೆಯಲ್ಲಿ ಕಾಂಗ್ರೆಸ್‌ನ ಜನಪ್ರಿಯ ಯೋಜನೆಗಳಲ್ಲಿ ಒಂದಾದ ಇಂದಿರಾ ಕ್ಯಾಂಟೀನ್‌ನ ಟೆಂಡರ್‌ ಕುರಿತು ಶಾಸಕ ಮುನಿರತ್ನ ಪ್ರಸ್ತಾಪಿಸಿದ್ದರು. ಪ್ರಸ್ತುತ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳಿಗೂ, ಅಂದು ಶಾಸಕರು ಪ್ರಸ್ತಾಪಿಸಿದ ವಿಷಯಕ್ಕೂ ನಂಟಿದೆ ಎನ್ನಲಾಗಿದ್ದು, ಇದು ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ.

ಪಾಲಿಕೆಯ ಸಾಮಾನ್ಯ ಸಭೆಯಲ್ಲಿ ಮಾತನಾಡಿದ್ದ ಮುನಿರತ್ನ “ಇಂದಿರಾ ಕ್ಯಾಂಟೀನ್‌ನಲ್ಲಿ 100 ಜನ ಸಹ ಊಟ ಮಾಡುತ್ತಿಲ್ಲ. ಇದರ ಟೆಂಡರ್‌ ಬದಲಾಯಿಸಿ’ ಎಂದು ಮನವಿ ಮಾಡಿದ್ದರು. ಅದಕ್ಕೆ ಪಾಲಿಕೆಯ ವಿರೋಧ ಪಕ್ಷದ ನಾಯಕರೂ ಧ್ವನಿ ಗೂಡಿಸಿದ್ದರು. ಸಾಮಾನ್ಯ ಸಭೆಯಿಂದ ಹೊರನಡೆಯುವ ಮುನ್ನ 20 ನಿಮಿಷಕ್ಕೂ ಹೆಚ್ಚು ಹೊತ್ತು ಪಾಲಿಕೆ ವಿರೋಧ ಪಕ್ಷದ ನಾಯಕ ಪದ್ಮನಾಭ ರೆಡ್ಡಿ ಅವರ ಪಕ್ಕದಲ್ಲೇ ಕುಳಿತಿದ್ದ ಶಾಸಕ ಮುನಿರತ್ನ, ಸುದೀರ್ಘ‌ ಚರ್ಚೆಯಲ್ಲಿ ತೊಡಗಿದ್ದರು.

ರೆಡ್ಡಿ ಬಂದರೆ ನಾನು ಬರುತ್ತೇನೆ ಎಂದಿದ್ದರು: ರಾಮಲಿಂಗಾರೆಡ್ಡಿ ಅವರು ರಾಜೀನಾಮೆ ನೀಡಿದರೆ ನಾನು ರಾಜೀನಾಮೆ ನೀಡುತ್ತೇನೆ ಎಂದು ಮುನಿರತ್ನ ಅವರು ತಮ್ಮ ಆಪ್ತ ವಲಯದಲ್ಲಿ ಹೇಳಿಕೊಂಡಿದ್ದರು ಎನ್ನಲಾಗಿದೆ. ಆದರೆ, ರಾಮಲಿಂಗಾರೆಡ್ಡಿ ಅವರು ರಾಜೀನಾಮೆ ನೀಡುತ್ತಾರೆ ಎಂದು ಯಾರೂ ನಿರೀಕ್ಷಿಸಿರಲಿಲ್ಲ. ರಾಮಲಿಂಗಾರೆಡ್ಡಿ ಅವರ ರಾಜೀನಾಮೆ ಮೈತ್ರಿ ಸರ್ಕಾರಕಷ್ಟೇ ಅಲ್ಲ, ಖುದ್ದು ಪಾಲಿಕೆಯ ಬಿಜೆಪಿ ಸದಸ್ಯರಿಗೂ ಅಚ್ಚರಿ ಮೂಡಿಸಿದೆ.

ಪರಮೇಶ್ವರ್‌ ಬಗ್ಗೆ ಅಸಮಾಧಾನ?: ನಗರಾಭಿವೃದ್ಧಿ ಸಚಿವರಾಗಿರುವ ಡಾ.ಜಿ.ಪರಮೇಶ್ವರ್‌ ಅವರು ಬೆಂಗಳೂರಿನ ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳವಲ್ಲಿ ವಿಫ‌ಲರಾದರು ಎಂಬ ಆರೋಪ ಕೇಳಿಬಂದಿದೆ. ಬೆಂಗಳೂರಿನ ಪ್ರಮುಖ ವಿಷಯಗಳಿಗೆ ಸಂಬಂಧಿಸಿದಂತೆ ಈ ಹಿಂದೆ ರಾಮಲಿಂಗಾರೆಡ್ಡಿ ಅವರ ಅಭಿಪ್ರಾಯ ಕೇಳಲಾಗುತ್ತಿತ್ತು. ಇತ್ತೀಚಿನ ದಿನಗಳಲ್ಲಿ ಪರಮೇಶ್ವರ್‌ ಅವರು ಮುನ್ನಡೆ ಸಾಧಿಸಿತ್ತಿದ್ದದ್ದು ಕೂಡ ರೆಡ್ಡಿ ಅವರ ಅಸಮಾಧಾನಕ್ಕೆ ಕಾರಣವಾಗಿರಬಹುದು ಎಂದು ಹೇಳಲಾಗುತ್ತಿದೆ.

ಬೆಂಗಳೂರಿನ ಪ್ರತಿ ಗಲ್ಲಿಯೂ ನನಗೆ ಗೊತ್ತು: ಪರಮೇಶ್ವರ್‌
ಬೆಂಗಳೂರಿನ ಪ್ರತಿಯೊಂದು ಗಲ್ಲಿಯೂ ನನಗೆ ಗೊತ್ತು ಎಂದು ತಮ್ಮ ವಿರುದ್ಧ ಅಸಮಾಧಾನ ಹೊರ ಹಾಕಿರುವ ಅತೃಪ್ತ ಶಾಸಕರಿಗೆ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್‌ ತಿರುಗೇಟು ನೀಡಿದ್ದು, ಜನಪ್ರತಿನಿಧಿ ಯಾವ ಜಿಲ್ಲೆಯವರಾದರೇನು ಅವರಿಗೆ ಸಾಮರ್ಥ್ಯ ಮುಖ್ಯ ಎಂದು ಹೇಳಿದ್ದಾರೆ.

ಬೆಂಗಳೂರಿನ ಶಾಸಕರು ತಮ್ಮ ವಿರುದ್ಧ ಅಸಮಾಧಾನ ಹೊರ ಹಾಕಿ ಬೆಂಗಳೂರು ಉಸ್ತುವಾರಿ ಜವಾಬ್ದಾರಿ ಹಿಂಪಡೆಯಬೇಕೆಂದು ಒತ್ತಡ ಹೇರುತ್ತಿದ್ದಾರೆ ಎನ್ನುವ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, “ನಾನು 1971 ರಲ್ಲೇ ಬೆಂಗಳೂರಿಗೆ ಬಂದಿದ್ದೇನೆ. ಬೆಂಗಳೂರಿನ ಪ್ರತಿ ಗಲ್ಲಿಯೂ ನನಗೆ ಗೊತ್ತು. ಜನಪ್ರತಿನಿಧಿ ಆದವರಿಗೆ ಯಾವುದೋ ಒಂದು ಜಿಲ್ಲೆಯಿಂದ ಬರುತ್ತಾರೆ ಎನ್ನುವ ಮಾನದಂಡ ಏಕೆ?. ಜನಪ್ರತಿನಿಧಿ ಆದವರಿಗೆ ಯಾವ ಜಿಲ್ಲೆಯಾದರೇನು?. ಹಲವು ಬಾರಿ ಬೆಂಗಳೂರಿನ ಶಾಸಕರ ಸಭೆ ನಡೆಸಿದ್ದೇನೆ.

ಸಭೆಗೆ ಯಾರ್ಯಾರು ಶಾಸಕರು ಬಂದಿದ್ದರು ಎನ್ನುವ ಮಾಹಿತಿ ನನ್ನ ಬಳಿ ಇದೆ. ಬೆಂಗಳೂರಿಗೆ 11 ಸಾವಿರ ಕೋಟಿ ರೂಪಾಯಿ ನೀಡಲಾಗಿದೆ. ಕಳೆದ ಬಾರಿಗಿಂತಲೂ ಈ ಬಾರಿ ಶಾಸಕರಿಗೆ ಹೆಚ್ಚು ಅನುದಾನ ನೀಡಲಾಗಿದೆ’ ಎಂದು ಅತೃಪ್ತರ ವಿರುದ್ಧ ಅಸಮಾಧಾನ ಹೊರ ಹಾಕಿದ್ದಾರೆ. ಇದೇ ವೇಳೆ, ಅತೃಪ್ತ ಶಾಸಕರನ್ನು ಮುಂಬೈಗೆ ಕಳುಹಿಸಲು ರಾಜ್ಯಪಾಲರು ಪೊಲೀಸ್‌ ಭದ್ರತೆ ಒದಗಿಸಲು ಸೂಚಿಸಿರುವ ಬಗ್ಗೆಯೂ ಪರಮೇಶ್ವರ್‌ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಟಾಪ್ ನ್ಯೂಸ್

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.