ವಿಶ್ವ ವಿಖ್ಯಾತ ಮರವಂತೆ ಬೀಚ್‌ನಲ್ಲಿ ‘ಪ್ರವಾಸಿ ಮಿತ್ರ’ರ ಕೊರತೆ


Team Udayavani, Jul 9, 2019, 6:13 AM IST

maravante

ಕುಂದಾಪುರ: ನದಿ – ಸಮುದ್ರದ ಮಧ್ಯೆ ಹಾದು ಹೋಗುವ ಹೆದ್ದಾರಿಯ ಅಪೂರ್ವವಾದ ದೃಶ್ಯ ಕಾಣ ಸಿಗುವ ವಿಶ್ವವಿಖ್ಯಾತ ಮರವಂತೆ ಕಡಲ ತೀರದಲ್ಲಿ ಸಾವಿರಾರು ಮಂದಿ ಪ್ರವಾಸಿಗರು ಬರುತ್ತಿದ್ದಾರೆ. ಆದರೆ ಇಲ್ಲಿ ಪ್ರವಾಸಿಗರ ಸುರಕ್ಷತೆಗಾಗಿ ಇರಬೇಕಾದ ‘ಪ್ರವಾಸಿ ಮಿತ್ರ’ರ ಕೊರತೆಯಿದೆ. ಅಪಾಯವನ್ನು ಲೆಕ್ಕಿಸದೇ ನೀರಿಗಿಳಿಯುತ್ತಿದ್ದರೂ, ಕೇಳುವವರೆ ಇಲ್ಲದಂತಾಗಿದೆ.

ಇಲ್ಲಿ ಗೃಹ ರಕ್ಷಕ ದಳದ ಇಬ್ಬರು ಸಿಬಂದಿ ಹಾಗೂ ಒಬ್ಬರು ಲೈಫ್‌ ಗಾರ್ಡ್‌ ಸೇರಿ ಮೂವರನ್ನು ಪ್ರತಿ ದಿನ ಇರುವಂತೆ ನಿಯೋಜಿಸಲಾಗಿದ್ದರೂ, ಹೆಚ್ಚಿನ ದಿನಗಳಲ್ಲಿ ಇಲ್ಲಿ ಒಬ್ಬರು ಮಾತ್ರ ಇರುತ್ತಾರೆ. ಇತ್ತೀಚೆಗಷ್ಟೇ ಗೃಹ ರಕ್ಷಕ ದಳದಿಂದ ನಾಲ್ವರನ್ನು ಇಲ್ಲಿ ನಿಯೋಜಿಸಲಾಗಿದ್ದರೂ, ಅದಿನ್ನು ಜಾರಿಯಾಗಿಲ್ಲ.

ಕಾಮಗಾರಿಯಿಂದ ಸೂಚನಾ ಫಲಕಕ್ಕೆ ಹಾನಿ

ಕಡಲ ತಟದಲ್ಲಿ ಎಷ್ಟೇ ಮುನ್ನೆಚ್ಚರಿಕೆ ಫಲಕಗಳನ್ನು ಹಾಕಲಾಗಿದ್ದರೂ, ಸಲಹೆ – ಸೂಚನೆ ನೀಡಿದರೂ ಅದನ್ನೆಲ್ಲ ಲೆಕ್ಕಿಸದೇ, ಅಲೆಗಳ ಅಬ್ಬರವನ್ನು ಕೂಡ ಅಂದಾಜಿಸದೇ ನೀರಿಗೆ ಇಳಿದು ಆಡುತ್ತಾರೆ. ಬ್ರೇಕ್‌ ವಾಟರ್‌ ಕಾಮಗಾರಿಯಿಂದಾಗಿ ಕೆಲವೆಡೆ ಸೂಚನಾ ಫಲಕಗಳು ಇಲ್ಲದಂತಾಗಿದೆ. ಅದಕ್ಕಾಗಿ ಬಹು ಮುಖ್ಯವಾಗಿ ಇಲ್ಲಿ ಪ್ರವಾಸಿ ಮಿತ್ರರ ಅಗತ್ಯವಿದೆ. ಆದರೂ, ಇಲ್ಲಿ ಕೆಲ ದಿನಗಳಲ್ಲಿ ತ್ರಾಸಿ – ಮರವಂತೆಯ ಕಡಲ ಕಿನಾರೆಯಲ್ಲಿ ಹೆಚ್ಚಿನ ದಿನಗಳಲ್ಲಿ ಒಬ್ಬರು ಸಿಬಂದಿ ಮಾತ್ರ ಇರುತ್ತಾರೆ.

ಈ ಪ್ರವಾಸಿ ಮಿತ್ರರು ಬೆಳಗ್ಗೆ 10 ರಿಂದ ಸಂಜೆ 7 ಗಂಟೆಯವರೆಗೆ ಕಡಲ ತೀರದಲ್ಲಿ ಕೆಲಸ ನಿರ್ವ ಹಿಸುತ್ತಾರೆ. ಇಲ್ಲಿಗೆ ಬರುವಂತಹ ಪ್ರವಾಸಿಗರಿಗೆ ಸಲಹೆ, ಸೂಚನೆಗಳನ್ನು ಕೊಡಬೇಕಾದುದು ಇವರ ಕರ್ತವ್ಯವಾಗಿರುತ್ತದೆ. ಅಪಾಯ ಸಂಭವಿಸಿದಾಗ ನೀರಿಗಿಳಿದು ರಕ್ಷಿಸಲು ಒಬ್ಬ ಲೈಫ್‌ ಗಾರ್ಡ್‌ ಕೂಡ ಇಲ್ಲಿರಬೇಕಾಗುತ್ತದೆ.

ಸೆಲ್ಫಿ ಕ್ರೇಜ್‌ಗೆ ಬಲಿ

ಇತ್ತೀಚಿನ ದಿನಗಳಲ್ಲಿ ಪ್ರವಾಸಿ ತಾಣಗಳಲ್ಲಿ ಸೆಲ್ಫಿ ಕ್ರೇಜ್‌ ಹೆಚ್ಚಾಗಿದ್ದು, ಹೊರ ಜಿಲ್ಲೆ, ರಾಜ್ಯಗಳಿಂದ ಬರುವಂತಹ ಪ್ರವಾಸಿಗರು ಭೋರ್ಗರೆಯುವ ಕಡಲ ತೆರೆಗಳ ಮಧ್ಯೆ ನಿಂತು ಅಪಾಯಕಾರಿ ಸೆಲ್ಫಿ ತೆಗೆಸಿಕೊಳ್ಳುವಂತಹ ನಿದರ್ಶನಗಳು ಇವೆ. ಈ ಸಂದರ್ಭದಲ್ಲಿ ಅವರಿಗೆ ಮುನ್ನೆಚ್ಚರಿಕೆ ನೀಡಬೇಕಾ ದುದು ಪ್ರವಾಸಿ ಮಿತ್ರರ ಬಹು ಮುಖ್ಯ ಕಾರ್ಯ.

ಮಳೆಗಾಲದ ಸಮಯದಲ್ಲಿ ಸಮುದ್ರದ ಅಲೆಗಳು ಅತ್ಯಂತ ಅಪಾಯಕಾರಿಯಾಗಿದ್ದು, ಇದರ ಅಬ್ಬರವನ್ನು ಅಂದಾಜಿಸುವುದು ಕೂಡ ಕಷ್ಟ. ಇದನ್ನು ಅರಿಯದೇ ಬೇರೆ ಬೇರೆ ಕಡೆಗಳಿಂದ ಬರುವಂತಹ ಪ್ರವಾಸಿಗರು, ಸಮುದ್ರ ತೀರದವರೆಗೆ ಅಪಾಯಕಾರಿ ಸ್ಥಳಕ್ಕೂ ಇಳಿಯುತ್ತಾರೆ. ತ್ರಾಸಿಯಿಂದ ಮರವಂತೆವರೆಗೆ ಸುಮಾರು 3 ಕಿ.ಮೀ. ಉದ್ದದ ಕಡಲ ಕಿನಾರೆಯಲ್ಲಿ ಒಬ್ಬರೇ ಸಿಬಂದಿ ಮಾತ್ರ ಇದ್ದರೆ ಅನಾಹುತವನ್ನು ತಡೆಯುವುದಾದರೂ ಹೇಗೆ ಎನ್ನುವುದು ಸ್ಥಳೀಯರ ಪ್ರಶ್ನೆ.

ಟಾಪ್ ನ್ಯೂಸ್

Supreme Court slams IMA

Supreme Court; ಪತಂಜಲಿ ಆಯ್ತು, ಈಗ ಐಎಂಎ ವಿರುದ್ಧ ಸುಪ್ರೀಂ ಕೋರ್ಟ್‌ ಗರಂ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Supreme Court slams IMA

Supreme Court; ಪತಂಜಲಿ ಆಯ್ತು, ಈಗ ಐಎಂಎ ವಿರುದ್ಧ ಸುಪ್ರೀಂ ಕೋರ್ಟ್‌ ಗರಂ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Supreme Court slams IMA

Supreme Court; ಪತಂಜಲಿ ಆಯ್ತು, ಈಗ ಐಎಂಎ ವಿರುದ್ಧ ಸುಪ್ರೀಂ ಕೋರ್ಟ್‌ ಗರಂ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.