ಚಾರ್ಮಾಡಿಯಿಂದ ಕೊಡಚಾದ್ರಿ: ಕಾಡಿನಲ್ಲಿ 300 ನೀರಿನ ತೊಟ್ಟಿ

ಪ್ರಾಣಿಗಳ ದಾಹ ನೀಗಿಸಲು ಪರಿಸರಾಸಕ್ತರ ನಿರ್ಧಾರ

Team Udayavani, Jul 9, 2019, 5:21 AM IST

toti

ಕುಂದಾಪುರ: ಪಶ್ಚಿಮಘಟ್ಟದಲ್ಲಿ ನೀರಿನ ಹರಿವಿನ ಕೊರತೆಯಾಗಿದೆ. ಈ ಬಾರಿ ಮಳೆಯಾಗಿಲ್ಲ . ಈ ಬೇಸಗೆಯಲ್ಲಿ ಮನುಷ್ಯರಿಗಷ್ಟೇ ಅಲ್ಲ ಪ್ರಾಣಿಗಳಿಗೂ ಕುಡಿಯುವ ನೀರಿನ ಅಭಾವವಾಗಿತ್ತು. ನೀರನ್ನರಸುತ್ತಾ ಕಾಡು ಪ್ರಾಣಿಗಳು ಊರಿಗೆ ಲಗ್ಗೆ ಹಾಕುವುದು ಸಾಮಾನ್ಯವಾಗಿತ್ತು. ಇದಕ್ಕಾಗಿ ಪರಿಸರಾಸಕ್ತರು ಸ್ವಪ್ರೇರಿತರಾಗಿ ಕಾಡಿನಲ್ಲಿ 300 ನೀರಿನ ಕಾಂಕ್ರೀಟ್ ತೊಟ್ಟಿಗಳನ್ನು ಸ್ಥಾಪಿಸಲು ನಿರ್ಧರಿಸಿದ್ದಾರೆ.

ಎಲ್ಲೆಡೆ ಸಮಸ್ಯೆ

ಈ ಬಾರಿಯ ಬೇಸಗೆಯಲ್ಲಿ ಹಿಂದೆಂದಿಗಿಂತ ಹೆಚ್ಚಾಗಿ ಕರಾವಳಿಯ ದ.ಕ. ಉಡುಪಿ, ಉತ್ತರಕನ್ನಡದಲ್ಲೂ ನೀರಿನ ಸಮಸ್ಯೆ ತೀವ್ರವಾಗಿತ್ತು. ಅತ್ತ ಶಿವಮೊಗ್ಗದಲ್ಲೂ ತೀರಾ ಭಿನ್ನ ಪರಿಸ್ಥಿತಿ ಇರಲಿಲ್ಲ. ಪಶ್ಚಿಮಘಟ್ಟದಲ್ಲಿ ಸಾಕಷ್ಟು ವಿಶಿಷ್ಟ ತಳಿಯ ಕಾಡುಪ್ರಾಣಿಗಳಿವೆ. ಅಪರೂಪದ ಜೀವಸಂಕುಲಗಳಿವೆ. ಇನ್ನೆಲ್ಲೂ ಕಾಣಸಿಗದ ಜೀವವೈವಿಧ್ಯಗಳಿವೆ. ವಿಶಾಲವಾದ ಕಾಡಿನಲ್ಲಿ ಅಲ್ಲಲ್ಲಿ ನೀರಿನ ಆಶ್ರಯ ಇರುವುದರಿಂದ ಪ್ರಾಣಿಗಳು ಬಾಯಾರಿಕೆ ನೀಗಿಸಿಕೊಳ್ಳಲು ಸಮಸ್ಯೆ ಇರಲಿಲ್ಲ. ಆದರೆ ಕಾಡ್ಗಿಚ್ಚು ಹಾಗೂ ಅರಣ್ಯ ಲೂಟಿ ಯಿಂದ ಕಾಡಿನ ಮರಗಳ ಸಂಖ್ಯೆಯೂ ಕ್ಷೀಣಿಸಿದೆ.

ವಲಸೆ

ಸಾಮಾನ್ಯವಾಗಿ ಕಾಡುಪ್ರಾಣಿಗಳು ಕಾಡಿನಲ್ಲಿ ಕೆರೆಗಳು, ನೀರಿನ ಒರತೆ ಬತ್ತಿಹೋದಾಗ ನೀರಿರುವ ಪ್ರದೇಶಕ್ಕೆ ವಲಸೆ ಹೋಗುತ್ತವೆ. ವನ್ಯಜೀವಿಗಳು ಕೂಗುತ್ತಾ ನೀರರಸುತ್ತಾ ಕಾಡಂಚಿನ ಭಾಗದಲ್ಲಿ ತಿರುಗಾಡುವ ದೃಶ್ಯ ಕಾಣಿಸುತ್ತಿತ್ತು.

ಕುಂದಾಪುರ ತಾಲೂಕಿನಲ್ಲಿ ವಾರಾಹಿ ಕಾಲುವೆ ಇರುವ ಕಾರಣ, ವಾರಾಹಿಯ ಸಮೃದ್ಧ ನೀರು ಕಾಡಿನ ಪ್ರಾಣಿಗಳಿಗೆ ನೀರಿನಾಶ್ರಯವಾಗಿದೆ. ಆದರೆ ಕಾಲುವೆಯಲ್ಲಿ ಕಾಡುಪ್ರಾಣಿಗಳಿಗೆ ನೀರು ಕುಡಿಯಲು ಅವಕಾಶ ಇಲ್ಲ. ಕಾಲುವೆ ಆಳಕ್ಕೆ ಇಳಿಯಲು ವ್ಯವಸ್ಥೆ ಇಲ್ಲ. ಪ್ರಾಣಿಗಳು ಬೀಳುವ ಅಪಾಯದ ಸಾಧ್ಯತೆಯೇ ಹೆಚ್ಚು.

ತೊಟ್ಟಿ ರಚನೆ

ಮುಂದಿನ ಬೇಸಗೆಯಲ್ಲಿ ಪ್ರಾಣಿಗಳಿಗೆ ನೀರಿಗೆ ಸಮಸ್ಯೆಯಾಗದಂತೆ ಖಾಸಗಿಯಾಗಿಯೇ ಒಂದಷ್ಟು ತೊಟ್ಟಿಗಳನ್ನು ನಿರ್ಮಿಸಿಕೊಡಬೇಕೆಂದು ಎನ್‌ಇಸಿಎಫ್ ಸಂಘಟನೆ ನಿಶ್ಚಯಿಸಿದೆ. ಇದಕ್ಕಾಗಿ ಸಿದ್ಧತೆಗಳನ್ನು ಮಾಡಿದ್ದು ಶೀಘ್ರದಲ್ಲಿಯೇ ಅರಣ್ಯ ಇಲಾಖೆ ಜತೆ ಸಮಾಲೋಚನೆ ನಡೆಸಲಿದೆ.

ಮಾಹಿತಿ ಸಂಗ್ರಹ

ಚಾರ್ಮಾಡಿಯಿಂದ ಕೊಡಚಾದ್ರಿವರೆಗೆ ದ.ಕ. ಉಡುಪಿ ಜಿಲ್ಲೆಗಳಲ್ಲಿ ಹಾದುಹೋಗುವ ಪಶ್ಚಿಮ ಘಟ್ಟದಲ್ಲಿ ಎಲ್ಲೆಲ್ಲೆ ಪ್ರಾಣಿಗಳಿಗೆ ಕುಡಿಯುವ ನೀರಿನ ತೀವ್ರ ಬರ ಎದುರಾಗುತ್ತದೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳಿಂದ ಮಾಹಿತಿ ಪಡೆಯಲಾಗುತ್ತದೆ. ನಂತರ ಜೀವವೈವಿಧ್ಯ ಎಲ್ಲಿ ಸಾಕಷ್ಟು ಸಂಖ್ಯೆಯಲ್ಲಿದೆ, ಎಲ್ಲಿ ಅಳವಿನಿಂಚಿನ ಪ್ರಾಣಿಗಳಿವೆ, ಯಾವ ಪ್ರಾಣಿಗಳಿಗೆ ನೀರು ಹುಡುಕುತ್ತಾ ವಲಸೆ ಹೋಗುವುದು ಕಷ್ಟ ಎಂಬ ಮಾಹಿತಿಗಳನ್ನು ಸಂಗ್ರಹಿಸಲಾಗುತ್ತದೆ. ಎಲ್ಲಿ ನೀರಿನ ಒರತೆ ಬತ್ತುತ್ತದೆ ಎಂದು ಕೂಡಾ ಗಮನಿಸಲಾಗುತ್ತದೆ. ಇಷ್ಟಾದ ಬಳಿಕ ಅರಣ್ಯ ಇಲಾಖೆಯ ಸಂಬಂಧಪಟ್ಟ ವಿಭಾಗಗಳ ಅಧಿಕಾರಿಗಳನ್ನು ಕೂಡಿಕೊಂಡು ತೊಟ್ಟಿ ಹಾಕಲಾಗುತ್ತದೆ.

ತೊಟ್ಟಿ

ನೀರಿನ ತೊಟ್ಟಿಗಳನ್ನು ಇಡುವ ಕುರಿತು ಯೋಚಿಸ ಲಾಗಿದೆ. 6×6 ಅಳತೆಯ 1.5 ಅಡಿ ಎತ್ತರದ ಇಳಿಜಾರು ಮಾದರಿಯ ತೊಟ್ಟಿಗಳನ್ನು ನಿರ್ಮಿಸಲಾಗುತ್ತದೆ. 300 ಮೀ.ಗೊಂದರಂತೆ ಸುಮಾರು 300 ತೊಟ್ಟಿ ಗಳನ್ನು ಹಾಕುವ ಯೋಚನೆಯಿದೆ. ಈ ತೊಟ್ಟಿಗೆ ಯಾವುದೇ ಸಣ್ಣ ಸಣ್ಣ ಪ್ರಾಣಿಗಳು ಬಿದ್ದರೂ ಅವು ರಕ್ಷಿಸಿಕೊಂಡು ಹೋಗುವ ಮಾದರಿಯಲ್ಲಿ ಇರಲಿವೆ. ಈ ತೊಟ್ಟಿಗಳಿಗೆ ಸ್ಥಳೀಯರು ಅಥವಾ ಅರಣ್ಯ ಇಲಾಖೆಯವರು ನೀರು ಹಾಕುವ ಜವಾಬ್ದಾರಿ ಕೂಡಾ ನೀಡಲಾಗುವುದು. ತೊಟ್ಟಿಗಳ ವೆಚ್ಚವನ್ನು ಪರಿಸರಾಸಕ್ತ ದಾನಿಗಳೇ ಭರಿಸಲಿದ್ದಾರೆ.

ಟಾಪ್ ನ್ಯೂಸ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Thekkatte: ಕಾರು ಮರಕ್ಕೆ ಢಿಕ್ಕಿ; ಯುವತಿ ಸ್ಥಳದಲ್ಲೇ ಸಾವು, ನಾಲ್ವರಿಗೆ ಗಂಭೀರ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.