ಪವಾಡ ನಡೆದರಷ್ಟೇ ಸರ್ಕಾರದ ಉಳಿವು

ಬೆಂಗಳೂರಿನ ಶಾಸಕರು ಉಳಿದರಷ್ಟೇ ಸರ್ಕಾರ ಸೇಫ್

Team Udayavani, Jul 9, 2019, 6:00 AM IST

vidhana-soudha-750

ಬೆಂಗಳೂರು: ಹದಿಮೂರು ಶಾಸಕರ ರಾಜೀನಾಮೆ, ಇಬ್ಬರು ಪಕ್ಷೇತರರ ಬೆಂಬಲ ವಾಪಸ್‌ನಿಂದ ಸಮ್ಮಿಶ್ರ ಸರ್ಕಾರ ಅಲ್ಪಮತಕ್ಕೆ ಕುಸಿದಿದ್ದು, ಇನ್ನೇನಾದರೂ ‘ಪವಾಡ’ ನಡೆದರಷ್ಟೇ ಸರ್ಕಾರ ಉಳಿಯಬಹುದು.ಇಲ್ಲವೇ ಅನರ್ಹತೆ ಅಸ್ತ್ರವಷ್ಟೇ ವರದಾನವಾಗಬೇಕು.

ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರೂ ಮುಂಬೈಗೆ ಹೋಗದೆ ಬೆಂಗಳೂರಿನಲ್ಲೇ ಇರುವ ಹಿರಿಯ ಕಾಂಗ್ರೆಸ್‌ ನಾಯಕ ರಾಮಲಿಂಗಾರೆಡ್ಡಿ, ಮುನಿರತ್ನ ಹಾಗೂ ಆನಂದ್‌ಸಿಂಗ್‌, ಮುಂಬೈನಲ್ಲಿರುವ ಎಸ್‌.ಟಿ. ಸೋಮಶೇಖರ್‌, ಬೈರತಿ ಬಸವರಾಜ್‌, ಗೋಪಾಲಯ್ಯ ಸೇರಿ ಆರು ಮಂದಿ ರಾಜೀನಾಮೆ ವಾಪಸ್‌ ಪಡೆದರೆ ಸರ್ಕಾರ ಪವಾಡ ಸದೃಶವಾಗಿ ಉಳಿಯಬಹುದು. ಅದಕ್ಕಾಗಿಯೇ ಶಾಸಕರು ವಾಪಸ್‌ ಬರುವಂತಾಗಲು ಅನರ್ಹತೆ ಅಸ್ತ್ರ ಸಹ ಪ್ರಯೋಗಿಸಲಾಗುತ್ತಿದೆ ಎನ್ನಲಾಗಿದೆ.

ಆರು ಶಾಸಕರು ವಾಪಸ್‌ ಬಂದರೆ ಸಮ್ಮಿಶ್ರ ಸರ್ಕಾರ ಉಳಿಯುತ್ತದೆ ಎಂಬುದು ಖಾತರಿಯಾದರೆ ಪಕ್ಷೇತರ ಶಾಸಕರು ವಾಪಸ್‌ ಬರಲೂ ಬಹುದು. ಸರ್ಕಾರ ಉಳಿಯಲು ಇದೊಂದೇ ಆಶಾಭಾವನೆ ಉಳಿದಿದೆ.

13 ಶಾಸಕರು ರಾಜೀನಾಮೆ ನೀಡಿದ್ದರೂ, ಆ ಪೈಕಿ ಆರು ಜನ ವಾಪಸ್‌ ಪಡೆದರೂ ಸರ್ಕಾರದ ಸಂಖ್ಯಾಬಲ 110ಕ್ಕೆ ಏರಲಿದೆ. ಇಬ್ಬರು ಪಕ್ಷೇತರರ ಬೆಂಬಲ ಪಡೆದರೆ 112 ಆಗಲಿದೆ. ಆಗ ಸದನದಲ್ಲಿ ಬಹುಮತ ಸಾಬೀತಿಗೆ ರಾಜ್ಯಪಾಲರು ಸೂಚಿಸಿದರೂ ಬಹುಮತ ಸಾಬೀತು ಮಾಡಿ ಸರ್ಕಾರ ಉಳಿಸಿಕೊಳ್ಳಬಹುದು ಎಂಬ ಲೆಕ್ಕಾಚಾರ ಕಾಂಗ್ರೆಸ್‌ ಮತ್ತು ಜೆಡಿಎಸ್‌ನದು.

ರಮೇಶ್‌ ಜಾರಕಿಹೊಳಿ, ಪ್ರತಾಪಗೌಡ ಪಾಟೀಲ್, ಮಹೇಶ್‌ ಕುಮಟಳ್ಳಿ, ಬಿ.ಸಿ.ಪಾಟೀಲ್, ಶಿವರಾಮ್‌ ಹೆಬ್ಟಾರ್‌, ಎಚ್.ವಿಶ್ವನಾಥ್‌, ನಾರಾಯಣಗೌಡ ವಾಪಸ್‌ ಬರದಿದ್ದರೂ ಸರ್ಕಾರ ಉಳಿಸಿಕೊಳ್ಳಲು ಕಾಂಗ್ರೆಸ್‌-ಜೆಡಿಎಸ್‌ ಕಾರ್ಯತಂತ್ರ ರೂಪಿಸಿದೆ. ಅವಕಾಶ ಸಿಕ್ಕರೆ ಬಿಜೆಪಿಯ ಕೆಲವು ಶಾಸಕರ ಸೆಳೆಯುವ ಪ್ರಯತ್ನವೂ ನಡೆಯುತ್ತಿದೆ.

ಬಿಜೆಪಿ ತಂತ್ರ: ‘ಆಪರೇಷನ್‌ ಕಮಲ ಇಲ್ಲ’ ಎಂದು ಹೇಳುತ್ತಲೇ ಸಮ್ಮಿಶ್ರ ಸರ್ಕಾರದ ಸಂಖ್ಯಾಬಲ ಕುಗ್ಗಿಸು ತ್ತಿರುವ ಬಿಜೆಪಿಯ ಕಾರ್ಯತಂತ್ರ ಬೇರೆಯದೇ ಇದೆ. ಈಗಾಗಲೇ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ 13 ಶಾಸಕರು ಕಾಂಗ್ರೆಸ್‌-ಜೆಡಿಎಸ್‌ನವರ ಸಂಪರ್ಕ, ಮನವೊಲಿಕೆಗೆ ಮಣಿಯದಂತೆ ಮಾಡುವುದು. ಜತೆಗೆ ಸೌಮ್ಯಾ ರೆಡ್ಡಿ ಸೇರಿ ಇನ್ನೂ ಇಬ್ಬರು ಶಾಸಕರ ಕೈಲಿ ರಾಜೀನಾಮೆ ಕೊಡಿಸುವುದು. ಆಗ, ಸರ್ಕಾರದ ಸಂಖ್ಯಾಬಲ 102 ಕ್ಕೆ ಕುಸಿಯಲಿದೆ.

ಒಂದೊಮ್ಮೆ ರಾಜ್ಯಪಾಲರು ಸದನದಲ್ಲಿ ಬಹುಮತ ಸಾಬೀತಿಗೆ ಕುಮಾರಸ್ವಾಮಿಗೆ ಅವಕಾಶ ಕೊಟ್ಟರೂ ರಾಜೀನಾಮೆ ಕೊಟ್ಟಿರುವ ಶಾಸಕರನ್ನು ಹೊರತುಪಡಿಸಿ ಒಟ್ಟಾರೆ ವಿಧಾನಸಭೆ ಸಂಖ್ಯಾಬಲ 209ಕ್ಕೆ ಇಳಿಯಲಿದೆ. ಆಗ ಬಹುಮತಕ್ಕೆ 105 ಬೇಕಾಗುತ್ತದೆ. ಸಮ್ಮಿಶ್ರ ಸರ್ಕಾರದ ಬಲ 102 ಮಾತ್ರ ಇರುವುದರಿಂದ ವಿಶ್ವಾಸಮತಕ್ಕೆ ಸೋಲಾಗುತ್ತದೆ. ಬಿಜೆಪಿಗೆ ಸರ್ಕಾರ ರಚನೆಗೆ ಅವಕಾಶ ಕೊಟ್ಟರೆ 107 ಸಂಖ್ಯಾಬಲದೊಂದಿಗೆ ಸರ್ಕಾರ ರಚನೆಗೆ ಅವಕಾಶ ಸಿಗುತ್ತದೆ ಎಂಬುದು ಬಿಜೆಪಿ ನಾಯಕರ ಲೆಕ್ಕಾಚಾರ.

ಹೈಕಮಾಂಡ್‌ಗೆ ಖಡಕ್‌ ಸಂದೇಶ: ಸರ್ಕಾರ ಉಳಿಸಿಕೊಳ್ಳಲು ಕೊನೇ ಪ್ರಯತ್ನವಾಗಿ ಎರಡೂ ಪಕ್ಷಗಳು ಮುಂದಾಗಿದ್ದು ಮುಂಬೈನಲ್ಲಿರುವ ಅತೃಪ್ತ ಶಾಸಕರು ಮನವೊಲಿಕೆ ಸಾಧ್ಯವಾಗಿದ್ದರೆ ಅಂತಿಮವಾಗಿ ಸಿಎಂ ಎಚ್.ಡಿ.ಕುಮಾರಸ್ವಾಮಿ ರಾಜೀನಾಮೆ ಕೊಡು ವುದು ಅನಿವಾರ್ಯ ವಾಗಬಹುದು. ಇದಕ್ಕಾಗಿ ದೇವೇಗೌಡರು ಹಾಗೂ ಕುಮಾರಸ್ವಾಮಿ ಇಬ್ಬರೂ ಕಾಂಗ್ರೆಸ್‌ ಹೈಕಮಾಂಡ್‌ಗೆ ಖಡಕ್‌ ಸಂದೇಶ ಸಹ ರವಾನಿಸಿ, ಮುಂಬೈನಲ್ಲಿರುವ ಕಾಂಗ್ರೆಸ್‌ ಶಾಸಕರನ್ನು ಕರೆಸುವ ಹೊಣೆ ನಿಮ್ಮದು, ನಮ್ಮ ಶಾಸಕರ ಕರೆಸುವ ಜವಾಬ್ದಾರಿ ನಮ್ಮದು. ಇಲ್ಲದಿದ್ದರೆ ನಮ್ಮ ದಾರಿ ನಮಗೆ ಎಂದೇ ಹೇಳಿದ್ದಾರೆ ಎಂದು ತಿಳಿದು ಬಂದಿದೆ.

-ಎಸ್‌. ಲಕ್ಷ್ಮಿನಾರಾಯಣ

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.