ಶಾಶ್ವತ ಕುಡಿವ ನೀರಿನ ಯೋಜನೆ ಸ್ಥಳ ಪರಿಶೀಲನೆ

•ಪಂಪ್‌ಹೌಸ್‌-ವಾಟರ್‌ ಟ್ರಿಟರ್‌ ಯುನಿಟ್ ನಿರ್ಮಾಣ •ಜಿಲ್ಲಾಧಿಕಾರಿ ರಾಮಚಂದ್ರನ್‌ ಭೇಟಿ

Team Udayavani, Jul 9, 2019, 8:07 AM IST

bk-tdy-1..

ಗುಳೇದಗುಡ್ಡ: ಶಾಶ್ವತ ಕುಡಿಯುವ ನೀರಿನ ಯೋಜನೆಗೆ ಪಂಪ್‌ಹೌಸ್‌ ನಿರ್ಮಾಣ ಹಾಗೂ ವಾಟರ್‌ ಟ್ರಿಟರ್‌ ಯುನಿಟ್ ನಿರ್ಮಾಣಕ್ಕಾಗಿ ಜಿಲ್ಲಾಧಿಕಾರಿ ಆರ್‌.ರಾಮಚಂದ್ರನ್‌ ಅವರು ಸೋಮವಾರ ಸ್ಥಳ ಪರಿಶೀಲನೆ ನಡೆಸಿದರು.

ಗುಳೇದಗುಡ್ಡ: ಬಾದಾಮಿ-ಕೆರೂರ ಪಟ್ಟಣಗಳಿಗೆ ಆಲಮಟ್ಟಿಯಿಂದ ಶಾಶ್ವತ ಕುಡಿಯುವ ನೀರು ಪೂರೈಸುವ 228 ಕೋಟಿ ರೂ. ವೆಚ್ಚದ ಯೋಜನೆಗೆ ಪಂಪ್‌ಹೌಸ್‌ ನಿರ್ಮಾಣ ಹಾಗೂ ವಾಟರ್‌ ಟ್ರಿಟರ್‌ ಯುನಿಟ್ ನಿರ್ಮಾಣಕ್ಕಾಗಿ ಜಿಲ್ಲಾಧಿಕಾರಿ ಆರ್‌.ರಾಮಚಂದ್ರನ್‌ ಸೋಮವಾರ ಸ್ಥಳ ಪರಿಶೀಲನೆ ನಡೆಸಿದರು.

ಕೆರೂರ ಹಾಗೂ ಬದಾಮಿ ಪಟ್ಟಣ ಹಾಗೂ ಮಾರ್ಗ ಮಧ್ಯೆ ಬರುವ 18 ಹಳ್ಳಿಗಳಿಗೆ 24×7 ಯೋಜನೆಯ ಶಾಶ್ವತ ಕುಡಿಯುವ ನೀರು ಪೂರೈಸಲು ಪಂಪ್‌ಹೌಸ್‌ಗಾಗಿ ಕಮತಗಿ ರಸ್ತೆಗೆ, ವಾಟರ್‌ ಟ್ರೀಟರ್‌ ಯುನಿಟ್ ನಿರ್ಮಾಣಕ್ಕೆ ತೋಗುಣಶಿ ಹತ್ತಿರದ ಖಾಸಗಿ ಮಾಲೀಕತ್ವದ ಹಾಗೂ ಸರಕಾರಿ ಜಾಗೆಗಳನ್ನು ಪರಿಶೀಲನೆ ನಡೆಸಿ, ಇಲ್ಲಿ ವಿದ್ಯುತ್‌ ಮೇನ್‌ ಲೈನ್‌ ಹಾಯ್ದು ಹೋಗಿದೆ. ಈ ಜಾಗೆಯನ್ನು ಜಲಮಂಡಳಿ ಅಭಿಯಂತರರು ಪರಿಶೀಲನೆ ಮಾಡಿದ್ದಾರೋ ಇಲ್ಲವೋ ಎಂದು ಅಧಿಕಾರಿಗಳನ್ನು ಪ್ರಶ್ನಿಸಿದರು.

ಜಮೀನಿನ ಮಾಲೀಕರೊಂದಿಗೆ ಚರ್ಚಿಸಿ ಜಿಲ್ಲಾಧಿಕಾರಿ ಆರ್‌.ರಾಮಚಂದ್ರನ್‌ ಮಾತನಾಡಿ, ನಾನು ಸರಕಾರದ ಪರವಾದ ಪ್ರತಿನಿಧಿಯಾಗಿದ್ದು, ಜನರಿಗೆ ಕುಡಿಯುವ ನೀರು ಒದಗಿಸುವ ಯೋಜನೆ ಇಲ್ಲಿ ಮಾಡಲಾಗುತ್ತಿದೆ. ತಾವು ಭೂಮಿ ನೀಡಿದರೆ ಕುಡಿಯುವ ನೀರಿನ ಯೋಜನೆಗೆ ಜಾಗ ಕೊಟ್ಟಂತಾಗುತ್ತದೆ. ಅಲ್ಲದೇ ನೀರಿನ ಯೋಜನೆಗೆ ಜಾಗೆ ಕೊಡುವುದರಿಂದ ಜನರಿಗೆ ಒಳ್ಳೆಯದಾಗುತ್ತದೆ ಎಂದು ಹೇಳಿದರು.

ತೋಗುಣಶಿಯಲ್ಲಿ ಪರಿಶೀಲನೆ: ತೋಗುಣಶಿ ಬಸ್‌ ನಿಲ್ದಾಣದ ಹತ್ತಿರದ ಸರಕಾರಿ ಜಾಗೆಯನ್ನು ಪರಿಶೀಲಿಸಿದ ಜಿಲ್ಲಾಧಿಕಾರಿಗಳು, ಕೆರೂರು-ಬಾದಾಮಿಗೆ ಶಾಶ್ವತ ಕುಡಿಯುವ ನೀರು ಒದಗಿಸುವ ಯೋಜನೆ ಕಾಮಗಾರಿ ಆರಂಭಕ್ಕೆ ಭೂಮಿ ಅವಶ್ಯವಿದೆ. ಅದಕ್ಕೆ ಜಾಗ ನೋಡುತ್ತಿದ್ದೇವೆ. ಭೂಮಿ ಸಿಕ್ಕರೆ ಟೆಂಡರ್‌ ಪ್ರಕ್ರಿಯೆಯು ಆರಂಭವಾಗಿ, ಕಾಮಗಾರಿ ಆರಂಭವಾಗಲಿದೆ ಎಂದರು.

ರಾಜ್ಯದಲ್ಲಿ ಬರಗಾಲ ಆವರಿಸಿದ್ದು, ಈ ಕಾಮಗಾರಿ ಶೀಘ್ರದಲ್ಲಿ ಪೂರ್ಣಗೊಂಡರೆ ಜನರಿಗೆ ಕುಡಿಯುವ ನೀರು ಒದಗಿಸಲು ಸಾಧ್ಯವಾಗುತ್ತದೆ. ಅದಕ್ಕಾಗಿ ಭೂಮಿ ಪರಿಶೀಲನೆ ಮಾಡುತ್ತಿದ್ದೇವೆ. ನೇರ ಖರೀದಿ ಯೋಜನೆ ಮೂಲಕ ಸರಕಾರವು ಮಾಲೀಕರಿಂದ ಭೂಮಿ ಖರೀದಿ ಪ್ರಕ್ರಿಯೆ ಮಾಡುತ್ತದೆ. ತೋಗುಣಶಿ ಕ್ರಾಸ್‌ ಹತ್ತಿರ ಭೂಮಿ ಕೊಡಲು ಕೆಲವರು ಮುಂದೆ ಬಂದಿದ್ದು, ಅವರು ಸರಕಾರಿ ದರಕ್ಕೆ ಭೂಮಿ ನೀಡಿದರೆ ಸರಕಾರ ಭೂಮಿ ಖರೀದಿಸುತ್ತದೆ. ಭೂಮಿ ಖರೀದಿ ಪ್ರಕ್ರಿಯೆ ಬಗ್ಗೆ ತಹಶೀಲ್ದಾರ ಎಸ್‌.ಎಸ್‌. ಇಂಗಳೆ ಅವರಿಗೆ ವಹಿಸಲಾಗಿದೆ ಎಂದು ಹೇಳಿದರು.

ಉಪವಿಭಾಗಾಧಿಕಾರಿ ಎಚ್.ಜಯಾ, ತಹಶೀಲ್ದಾರ್‌ ಎಸ್‌.ಎಸ್‌.ಇಂಗಳೆ, ಉಪತಹಶೀಲ್ದಾರ್‌ ಎಂ.ಎಸ್‌.ಅಂಗಡಿ, ಮಂಡಳಿಯ ಅಭಿಯಂತರ ನಿಖೀಲ್ ಕಡ್ಲಿಮಟ್ಟಿ, ಮುಖಂಡರಾದ ಸಂಜಯ ಕಾರಕೂನ, ಎಸ್‌.ಎಂ.ಪಾಟೀಲ, ಶ್ರೀನಿವಾಸ ಇನಾನಿ ಸೇರಿದಂತೆ ಇತರರು ಇದ್ದರು.

ಅಕ್ರಮ ಮರಳು ಸಾಗಾಟ ತಡೆಗೆ ಸೂಚನೆ:

ತಾಲೂಕಿನ ವ್ಯಾಪ್ತಿಯ ಹಲವು ಕಡೆಗಳಲ್ಲಿ ಅಕ್ರಮ ಮರಳು ಸಾಗಾಟ ನಡೆದಿದ್ದು, ಅದರ ತಡೆಗೆ ಕ್ರಮ ಕೈಗೊಳ್ಳಬೇಕು. ತಾಲೂಕಿನ ಹಲವು ಕಡೆಗಳಿಂದ ಅಕ್ರಮ ಮರಳು ಸಾಗಾಟ ನಡೆದಿದೆ ಎಂದು ದೂರು ಕೇಳಿ ಬಂದಿದೆ. ಈ ಬಗ್ಗೆ ಪರಿಶೀಲಿಸಿ ಅಕ್ರಮ ಮರಳು ಸಾಗಟವಾಗದಂತೆ ಕ್ರಮ ಕೈಗೊಳ್ಳುವಂತೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಆರ್‌.ರಾಮಚಂದ್ರನ್‌ ಸೂಚಿಸಿದರು.

ಟಾಪ್ ನ್ಯೂಸ್

Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ

Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ

CRZ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

ಸಿಆರ್‌ಝಡ್‌ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

24-saturday

Horoscope: ಧೈರ್ಯ, ಸಾಹಸದ ಪ್ರವೃತ್ತಿ ಯಶಸ್ಸಿಗೆ ಪೂರಕ, ವ್ಯಾಪಾರಿಗಳಿಗೆ ನಿರೀಕ್ಷಿತ ಲಾಭ

Udupi ಇನ್ನೂ ನಡೆಯದ ಟೆಂಡರ್‌ ಪ್ರಕ್ರಿಯೆ; ರಾಜ್ಯದಲ್ಲಿ ಅಗ್ನಿಶಾಮಕ ವಾಹನ ಕೊರತೆ

Udupi ಇನ್ನೂ ನಡೆಯದ ಟೆಂಡರ್‌ ಪ್ರಕ್ರಿಯೆ; ರಾಜ್ಯದಲ್ಲಿ ಅಗ್ನಿಶಾಮಕ ವಾಹನ ಕೊರತೆ

Covishield Vaccine; ಹಾಕಿಸಿಕೊಂಡವರು ಐಸ್‌ಕ್ರೀಮ್‌ ತಿನ್ನಬಾರದಾ?

Covishield Vaccine; ಹಾಕಿಸಿಕೊಂಡವರು ಐಸ್‌ಕ್ರೀಮ್‌ ತಿನ್ನಬಾರದಾ?

love birds

Supreme Court ಸಲಹೆ; ಹೊಂದಾಣಿಕೆಯು ಸುಖ ದಾಂಪತ್ಯದ ಅಡಿಪಾಯ

Parashurama Park 2 ವಾರದಲ್ಲಿ ಕ್ರಮ ಕೈಗೊಳ್ಳಲು ನಿರ್ಮಿತಿ ಕೇಂದ್ರಕ್ಕೆ ಹೈಕೋರ್ಟ್‌ ಸೂಚನೆ

Parashurama Park 2 ವಾರದಲ್ಲಿ ಕ್ರಮ ಕೈಗೊಳ್ಳಲು ನಿರ್ಮಿತಿ ಕೇಂದ್ರಕ್ಕೆ ಹೈಕೋರ್ಟ್‌ ಸೂಚನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pen Drive Case ಪ್ರಜ್ವಲ್‌ಗೆ ಕೇಂದ್ರದಿಂದ ರಕ್ಷಣೆ: ಸಿದ್ದರಾಮಯ್ಯ

Pen Drive Case ಪ್ರಜ್ವಲ್‌ಗೆ ಕೇಂದ್ರದಿಂದ ರಕ್ಷಣೆ: ಸಿದ್ದರಾಮಯ್ಯ

Shobha Karandlaje; 60 ವರ್ಷ ದೇಶವನ್ನಾಳಿದ ಕಾಂಗ್ರೆಸ್‌ಗೆ ಪ್ರಧಾನಿ ಅಭ್ಯರ್ಥಿ ಸಿಗ್ತಿಲ್ಲ

Shobha Karandlaje; 60 ವರ್ಷ ದೇಶವನ್ನಾಳಿದ ಕಾಂಗ್ರೆಸ್‌ಗೆ ಪ್ರಧಾನಿ ಅಭ್ಯರ್ಥಿ ಸಿಗ್ತಿಲ್ಲ

1-wdsad

I.N.D.I.A ಕೂಟದಲ್ಲಿ ವರ್ಷಕ್ಕೆ ಒಬ್ಬರನ್ನು ಪ್ರಧಾನಿಯನ್ನಾಗಿಸಲು ಚಿಂತನೆ: ಅಣ್ಣಾಮಲೈ

ಬಿಜೆಪಿ ಶಾಸಕ ಯತ್ನಾಳ ಶುಗರ್‌ ಫ್ಯಾಕ್ಟ್ರಿ ಹೆಂಗ್‌ ಕಟ್ಟಿದ್ರು: ಶಿವಾನಂದ ಪಾಟೀಲ

ಬಿಜೆಪಿ ಶಾಸಕ ಯತ್ನಾಳ ಶುಗರ್‌ ಫ್ಯಾಕ್ಟ್ರಿ ಹೆಂಗ್‌ ಕಟ್ಟಿದ್ರು: ಶಿವಾನಂದ ಪಾಟೀಲ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ

Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ

CRZ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

ಸಿಆರ್‌ಝಡ್‌ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

24-saturday

Horoscope: ಧೈರ್ಯ, ಸಾಹಸದ ಪ್ರವೃತ್ತಿ ಯಶಸ್ಸಿಗೆ ಪೂರಕ, ವ್ಯಾಪಾರಿಗಳಿಗೆ ನಿರೀಕ್ಷಿತ ಲಾಭ

Udupi ಇನ್ನೂ ನಡೆಯದ ಟೆಂಡರ್‌ ಪ್ರಕ್ರಿಯೆ; ರಾಜ್ಯದಲ್ಲಿ ಅಗ್ನಿಶಾಮಕ ವಾಹನ ಕೊರತೆ

Udupi ಇನ್ನೂ ನಡೆಯದ ಟೆಂಡರ್‌ ಪ್ರಕ್ರಿಯೆ; ರಾಜ್ಯದಲ್ಲಿ ಅಗ್ನಿಶಾಮಕ ವಾಹನ ಕೊರತೆ

Covishield Vaccine; ಹಾಕಿಸಿಕೊಂಡವರು ಐಸ್‌ಕ್ರೀಮ್‌ ತಿನ್ನಬಾರದಾ?

Covishield Vaccine; ಹಾಕಿಸಿಕೊಂಡವರು ಐಸ್‌ಕ್ರೀಮ್‌ ತಿನ್ನಬಾರದಾ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.