ಪೈಕಿ ಪಹಣಿ ದುರಸ್ತಿಗೆ ಶೀಘ್ರ ಹೊಸ ಆದೇಶ

•ಬೆಳೆಸಾಲ ಮನ್ನಾ ವಿಷಯ ಯಾವುದೇ ಪ್ರಕರಣ ಬಾಕಿ ಉಳಿಸದಿರಲು ಅಧಿಕಾರಿಗಳಿಗೆ ಮೌದ್ಗಿಲ್ ಸೂಚನೆ

Team Udayavani, Jul 9, 2019, 9:44 AM IST

uk-tdy-2..

ಕಾರವಾರ: ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಸರ್ವೇ ಇಲಾಖೆ ಆಯುಕ್ತ ಮನೀಷ್‌ ಮೌದ್ಗಿಲ್ ಮಾತನಾಡಿದರು.

ಕಾರವಾರ: ರಾಜ್ಯಾದ್ಯಂತ ಪೈಕಿ ಪಹಣಿಗಳ ದುರಸ್ತಿ ಮಾಡಿ ಸರಿಪಡಿಸಲು ಸದ್ಯದಲ್ಲೇ ಹೊಸ ಆದೇಶ ಹೊರಡಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಹಾಗೂ ಸರ್ವೆ ಇಲಾಖೆ ಆಯುಕ್ತ ಮನೀಷ್‌ ಮೌದ್ಗಿಲ್ ತಿಳಿಸಿದ್ದಾರೆ.

ಡಿಸಿ ಕಚೇರಿಯಲ್ಲಿ ಜಿಲ್ಲಾ ಅಭಿವೃದ್ಧಿ ವಿಷಯಗಳು ಹಾಗೂ ಸಮಸ್ಯೆಗಳ ಕುರಿತು ನಡೆದ ಸಭೆಯ ಅಧ್ಯಕ್ಷತೆ ವಹಿಸಿದ ಅವರು, ಪೈಕಿ ಪಹಣಿಗಳು ಸರ್ವೆ ಸಂದರ್ಭದಲ್ಲಿ ದಾಖಲೆಗಳಲ್ಲಿ ಸಿಗದೆ ಗೊಂದಲ ಸೃಷ್ಟಿಸುತ್ತಿದ್ದು ರಾಜ್ಯಾದ್ಯಂತ ಇವುಗಳನ್ನು ಒಟ್ಟುಗೂಡಿಸಿ ದುರಸ್ತಿ ಮಾಡಲು ಸದ್ಯದಲ್ಲೇ ಹೊಸ ಆದೇಶ ಬರಲಿದೆ ಎಂದು ಹೇಳಿದರು.

ಈ ಹಿಂದೆ ಮೋಜಿಣಿ ಮಾಡದೆ ಪೋಡಿಗಳನ್ನು ಸರಿಪಡಿಸದೇ ಮಾಡಲಾದ ಪೈಕಿ ಪಹಣಿಗಳಲ್ಲಿ ಸರಿಯಾದ ದಾಖಲೆಗಳು ಸಿಗುತ್ತಿಲ್ಲ. ಇದರಿಂದ ಸರ್ಕಾರಿ ಜಮೀನು ಅಥವಾ ಖಾಸಗಿ ಜಮೀನು ವಹಿವಾಟಿಗೆ ಹಿನ್ನೆಡೆಯಾಗಿದೆ. ಈ ಕಾರಣದಿಂದ ಪೈಕಿ ಪಹಣಿಗಳನ್ನು ಒಟ್ಟುಗೂಡಿಸಿ ಮೂಲ ಸರ್ವೆ ನಂಬರಿನೊಂದಿಗೆ ತಾಳೆ ಮಾಡಿ ವಹಿವಾಟಿಗೆ ಅನುಕೂಲವಾಗುವಂತೆ ಸರಿಪಡಿಸಲು ಕಂದಾಯ ಇಲಾಖೆ ಮುಂದಾಗಿದೆ. ಇದರಿಂದ 11ಇ ಕಂದಾಯ ನಕ್ಷೆಗಳು ಸರಿಯಾಗಲಿವೆ. ಮುಂದಿನ 10 ದಿನಗಳೊಳಗಾಗಿ ಸರ್ಕಾರದಿಂದಲೇ ಹೊಸ ಆದೇಶ ಬರಲಿದೆ ಎಂದು ಅವರು ತಿಳಿಸಿದರು.

ತಹಶೀಲ್ದಾರ್‌ ಹಾಗೂ ಉಪ ವಿಭಾಗಾಧಿಕಾರಿಗಳು ಸರ್ವೆ ಸಂದರ್ಭದಲ್ಲಿ ಕಚೇರಿಯಲ್ಲೇ ಕುಳಿತು ಆರ್‌ಟಿಸಿಗಳಿಗೆ ಸಹಿ ಮಾಡುವ ಬದಲು ಕ್ಷೇತ್ರ ಪ್ರವಾಸ ಮಾಡಿ ದಾಖಲೆಗಳಂತೆ ಭೂಮಿ ಇದೆಯೇ ಎಂದು ಪರಿಶೀಲಿಸಬೇಕು. ಖರಾಬುಗಳು ಸರ್ವೆ ನಂಬರಿನ ಯಾವ ಹಿಸ್ಸೆಗೆ ಸೇರಬೇಕು ಎಂಬುದನ್ನು ನಿರ್ಧರಿಸಬೇಕು ಎಂದೂ ಅವರು ಹೇಳಿದರು.

ಬೆಳೆಸಾಲ ಮನ್ನಾ ಯೋಜನೆ ವಿಷಯದಲ್ಲಿ ಯಾವ ಪ್ರಕರಣವನ್ನು ಬಾಕಿ ಉಳಿಸಿಕೊಳ್ಳಬೇಡಿ ಎಂದು ಸೂಚಿಸಿದ ಅವರು, ದಾಖಲೆಗಳು ಸರಿಇದ್ದು ಅರ್ಹರಿದ್ದರೆ ಅನುಮೋದಿಸಿ. ಇಲ್ಲವಾದರೆ ತಿರಸ್ಕರಿಸಿ.ಬಾಕಿ ಉಳಿಸಿಕೊಳ್ಳುವುದರಿಂದ ಯಾವ ಪ್ರಯೋಜನವೂ ಇಲ್ಲ ಎಂದರು. ಸಹಕಾರ ಇಲಾಖೆಗೆ ಸಂಬಂಧಿಸಿದಂತೆ ಕೆಲವು ಸಹಕಾರ ಸಂಘಗಳ ಕಾರ್ಯದರ್ಶಿಗಳೇ ಫಲಾನುಭವಿಗಳ ಹೆಸರಿನಲ್ಲಿ ಅಕ್ರಮವಾಗಿ ಸಾಲ ಪಡೆದುಕೊಂಡ ಪ್ರಕರಣಗಳು ಬೆಳಕಿಗೆ ಬಂದಿವೆ. ರೈತರ ಹೆಸರಿನಲ್ಲಿ ತಾವೇ ಸಾಲ ನೀಡಿದ ಮಾಹಿತಿ ಸೃಷ್ಟಿಸಿ ಸಾಲ ಪಡೆದುಕೊಂಡು ಸಾಲಮನ್ನಾ ಯೋಜನೆಯಲ್ಲಿ ಸರ್ಕಾರಕ್ಕೆ ವಂಚಿಸಲಾಗಿದೆ. ಇಂತಹ ಪ್ರಕರಣಗಳ ಬಗ್ಗೆ ಇಲಾಖೆ ಅಧಿಕಾರಿಗಳು ಪರಿಶೀಲಿಸಬೇಕು ಎಂದೂ ಅವರು ಸೂಚಿಸಿದರು.

ಪ್ರಧಾನ ಮಂತ್ರಿ ಕಿಸಾನ್‌ ಯೋಜನೆಯಲ್ಲಿ ಉತ್ತರ ಕನ್ನಡ ಜಿಲ್ಲೆಯಲ್ಲಿ ಶೇ.73 ಪ್ರಗತಿ ಸಾಧಿಸಿದ್ದು ಜಿಲ್ಲೆಯಲ್ಲಿ ಕಾರವಾರ ವಿಭಾಗದಲ್ಲಿ ಮಾತ್ರ ಕಡಿಮೆ ಆದ ಮಾಹಿತಿ ಪಡೆದ ಅವರು, ಇದು ಐದು ವರ್ಷದ ಕಾರ್ಯಕ್ರಮವಾಗಿದ್ದು ಇನ್ನೂ ಸಾಕಷ್ಟು ಕಾಲಾವಕಾಶಗಳಿವೆ ಎಂದೂ ಅವರು ತಿಳಿಸಿದರು.

ವಿವಿಧ ಇಲಾಖೆಗಳ ಸಿಬ್ಬಂದಿ ಕೊರತೆ ಇತರೆ ಸೌಲಭ್ಯಗಳ ಕೊರತೆ ಬಗ್ಗೆ ಉಸ್ತುವಾರಿ ಕಾರ್ಯದರ್ಶಿ ಮಾಹಿತಿ ಪಡೆದರು. ಜಿಲ್ಲಾಧಿಕಾರಿ ಡಾ| ಹರೀಶ್‌ಕುಮಾರ್‌ ಕೆ., ಜಿಪಂ ಸಿಇಒ ಎಂ.ರೋಷನ್‌, ಉಪ ವಿಭಾಗಾಧಿಕಾರಿಗಳಾದ ಪ್ರೀತಿ ಗೆಹ್ಲೂಟ್, ಸಾಜಿದ್‌ಮುಲ್ಲಾ, ಡಾ| ಈಶ್ವರ್‌ ಉಳ್ಳಾಗಡ್ಡಿ, ಅಭಿಜಿನ್‌ ಸೇರಿದಂತೆ ಎಲ್ಲ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qeeqwewqwqe

Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qeeqwewqwqe

Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.