ತೀರ್ಥಹಳ್ಳಿ-ಹೊಸನಗರದಲ್ಲಿ ಮಳೆಯಬ್ಬರ
•ಚರಂಡಿ ಕಟ್ಟಿಕೊಂಡು ರಸ್ತೆಗಳಿಗೆ ಉಕ್ಕಿದ ನೀರು-ಸಂಚಾರಕ್ಕೆ ಅಡ್ಡಿ•ಜನಜೀವನ ಅಸ್ತವ್ಯಸ್ತ
Team Udayavani, Jul 9, 2019, 10:14 AM IST
ಶೃಂಗೇರಿ: ಸೋಮವಾರ ಬೆಳಗ್ಗೆ ಸತತ ಮಳೆ ಸುರಿದ ಪರಿಣಾಮ ತುಂಗಾ ನದಿ ನೀರಿನ ಮಟ್ಟ ಗಣನೀಯವಾಗಿ ಏರಿತ್ತು.
ಹೊಸನಗರ: ತಾಲೂಕು ವ್ಯಾಪ್ತಿಯಲ್ಲಿ ಸೋಮವಾರ ಭಾರೀ ಪ್ರಮಾಣದಲ್ಲಿ ಮಳೆ ಸುರಿದಿದೆ.
ಕಳೆದ ಮೂರ್ನಾಲ್ಕು ದಿನಗಳಿಂದ ಮಳೆ ಹೆಚ್ಚಿದ್ದು ಸೋಮವಾರ ಬೆಳಗ್ಗೆಯಿಂದಲೇ ತೀವ್ರ ಮಳೆ ಮಧ್ಯಾಹ್ನದವರೆಗೂ ಸುರಿದು ತನ್ನ ರುದ್ರಾವತಾರ ಪ್ರದರ್ಶಿಸಿದೆ.
ತಾಲೂಕಿನ ನಗರ ಹೋಬಳಿ ಸೇರಿದಂತೆ ಹುಂಚಾ, ಕೆರೆಹಳ್ಳಿ, ಕಸಭಾ ಹೋಬಳಿ ವ್ಯಾಪ್ತಿಯಲ್ಲಿ ಉತ್ತಮ ಮಳೆಯಾಗಿದೆ.
ಮಳೆ ರಭಸಕ್ಕೆ ರಸ್ತೆಗಳ ಇಕ್ಕೆಲಗಳ ಚರಂಡಿಗಳು ಕಟ್ಟಿದ್ದು, ನೀರು ರಸ್ತೆ ಮೇಲೆ ಹರಿದಿದೆ. ಕೆಲವೆಡೆಗಳಲ್ಲಿ ಆಳೆತ್ತರ ನೀರು ನಿಂತಿತ್ತು. ನಗರ -ನಿಟ್ಟೂರು ಮಾರ್ಗದ ರಸ್ತೆಯಲ್ಲಿ ಚರಂಡಿಯಲ್ಲಿ ನೀರು ಹರಿಯದೆ ರಸ್ತೆಯಲ್ಲಿಯೇ ಹರಿಯುತ್ತಿದೆ. ಇದರಿಂದ ವಾಹನಗಳ ಸುಗಮ ಸಂಚಾರಕ್ಕೆ ಅಡ್ಡಿ ಆಗಿದೆ. ಹಲವೆಡೆಗಳಲ್ಲಿ ಮರ ಬಿದ್ದು ಅವಾಂತರ ಸೃಷ್ಟಿಯಾಗಿದೆ.
ಮುಖ್ಯರಸ್ತೆಗೆ ನುಗ್ಗಿದ ನೀರು: ಬೆಳಗ್ಗೆ ಪಟ್ಟಣದ ಮುಖ್ಯರಸ್ತೆ ಶಿವಮೊಗ್ಗ ರಸ್ತೆಯಲ್ಲಿ ಮಳೆ ನೀರು ನುಗ್ಗಿದ ಪರಿಣಾಮ ರಸ್ತೆ ಹೊಳೆಯೋಪಾದಿಯಲ್ಲಿ ಹರಿದಿದೆ. ಇಲ್ಲಿನ ಒಳ ಚರಂಡಿ ಕಟ್ಟಿಕೊಂಡ ಪರಿಣಾಮ ಒಮ್ಮೆಲೆ ಸುರಿದ ಮಳೆ ನೀರು ರಸ್ತೆಗೆ ನುಗ್ಗಿದೆ. ಇದರಿಂದ ರಸ್ತೆ ತುಂಬಾ ನೀರೋ ನೀರು ಎಂಬಂತಾಗಿತ್ತು. ವಾಹನ ಸವಾರರು ನಿಂತ ನೀರಲ್ಲೆ ವಾಹನ ಚಲಾಯಿಸಿಕೊಂಡು ಹೋಗಬೇಕಾಗಿತ್ತು.
ಹೀಗೆ ರಸ್ತೆಯಲ್ಲಿ ಸಾಕಷ್ಟು ನೀರು ಹರಿದು ವಾಹನ ಸಂಚಾರಕ್ಕೆ ಅಡ್ಡಿಯಾದದನ್ನು ಕೆಲವರು ಕ್ಯಾಮರಾದಲ್ಲಿ ಸೆರೆ ಹಿಡಿದು ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟರು. ಇದು ಎಲ್ಲೆಡೆ ವೈರಲ್ ಆಗಿದ್ದು ಪಟ್ಟಣ ಪಂಚಾಯಿತಿ ಆಡಳಿತಕ್ಕೆ ಜನತೆ ಹಿಡಿಶಾಪ ಹಾಕಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Chikkamagaluru; ಪ್ರವಾಸಿ ಬಸ್ ಪಲ್ಟಿ: ಬಾಲಕ ಸಾವು, 30 ಮಂದಿಗೆ ಗಾಯ
ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ