ಆಯೋಧ್ಯೆ ಭೂ ವಿವಾದ ಕೇಸ್: ಶೀಘ್ರ ವಿಚಾರಣೆಗೆ ಒಪ್ಪಿದ ಸುಪ್ರೀಂ ಕೋರ್ಟ್
Team Udayavani, Jul 9, 2019, 12:22 PM IST
ಹೊಸದಿಲ್ಲಿ : ರಾಮಜನ್ಮಭೂಮಿ – ಬಾಬರಿ ಮಸೀದಿ ಭೂ ಒಡೆತನ ವಿವಾದದ ಕೇಸಿನ ಮೂಲ ಕಕ್ಷಿದಾರರಲ್ಲಿ ಒಬ್ಬರಾದ ಗೋಪಾಲ ಸಿಂಗ್ ವಿಶಾರದ ಅವರು ಪ್ರಕರಣದ ತುರ್ತು ವಿಚಾರಣೆಯನ್ನು ಕೋರಿ ಇಂದು ಮಂಗಳವಾರ ಸುಪ್ರೀಂ ಕೋರ್ಟ್ ಮೆಟ್ಟಲೇರಿದ್ದಾರೆ.
ರಾಮಜನ್ಮ ಭೂಮಿ ಭೂ ವಿವಾದವನ್ನು ಸೌಹಾರ್ದದಿಂದ ಬಗೆ ಹರಿಸುವ ಸಲುವಾಗಿ ಸುಪ್ರೀಂ ಕೋರ್ಟಿನ ಮಾಜಿ ನ್ಯಾಯಮೂರ್ತಿ ಎಫ್ ಎಂ ಐ ಕಲೀಫುಲ್ಲಾ ನೇತೃತ್ವದಲ್ಲಿ ಮೂವರು ಸದಸ್ಯರ ಸಂಧಾನಕಾರರ ಸಮಿತಿಯನ್ನು ನೇಮಿಸಲಾದ ಬಳಿಕದಲ್ಲಿ ಪ್ರಕರಣದಲ್ಲಿ ಯಾವುದೇ ಬೆಳವಣಿಗೆ ಆಗಿಲ್ಲ; ಆದುದರಿಂದ ಈ ವಿಷಯದ ತುರ್ತು ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಕೈಗೊಳ್ಳಬೇಕು ಎಂದು ಕಕ್ಷಿದಾರ ವಿಶಾರದ ಅವರು ತಮ್ಮ ಮೇಲ್ಮನವಿಯಲ್ಲಿ ಆಗ್ರಹಿಸಿದ್ದಾರೆ.
ಕಕ್ಷಿದಾರ ಗೋಪಾಲ ಸಿಂಗ್ ವಿಶಾರದ ಅವರ ಮನವಿಯನ್ನು ಪುರಸ್ಕರಿಸಿದ ವರಿಷ್ಠ ನ್ಯಾಯಮೂರ್ತಿ ರಂಜನ್ ಗೊಗೋಯ್ ನೇತೃತ್ವದ ಪೀಠವು, ಕೇಸಿನ ತುರ್ತು ವಿಚಾರಣೆಗಾಗಿ ಅದನ್ನು ಪಟ್ಟಿಗೆ ಸೇರಿಸಲು ಆದೇಶಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
Chennai ಅಪಾರ್ಟ್ಮೆಂಟ್ನ ಟಿನ್ ರೂಫ್ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ