ಉಪನ್ಯಾಸಕರು-ಸೌಲಭ್ಯ ಕೊರತೆ

ವಿದ್ಯಾರ್ಥಿಗಳಿಗಿಲ್ಲ ಕುಡಿಯುವ ನೀರು-ಶೌಚಾಲಯ ಸೌಕರ್ಯ • ಇಲ್ಲ ವಿದ್ಯುತ್‌ ಸಂಪರ್ಕ

Team Udayavani, Jul 10, 2019, 10:52 AM IST

1–July-7

ದೇವದುರ್ಗ: ಮಸರಕಲ್ ಗ್ರಾಮದ ಸರಕಾರಿ ಪದವಿ ಪೂರ್ವ ಕಾಲೇಜು.

ದೇವದುರ್ಗ: ತಾಲೂಕಿನ ಮಸರಕಲ್ಲ ಗ್ರಾಮದ ಮುರುಘೇಂದ್ರಸ್ವಾಮಿ ಸರ್ಕಾರಿ ಪ.ಪೂ. ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಕುಡಿಯುವ ನೀರು, ಶೌಚಾಲಯ, ಕಾಂಪೌಂಡ್‌, ವಿದ್ಯುತ್‌ ಸೇರಿ ಹಲವು ಸಮಸ್ಯೆಗಳಿಂದ ಬಳಲುತ್ತಿದೆ.

ಮಸರಕಲ್ಲ ಗ್ರಾಮದಲ್ಲಿ 2006ರಲ್ಲಿ ಮುರುಘೇಂದ್ರಸ್ವಾಮಿ ಸರ್ಕಾರಿ ಪ.ಪೂ. ಕಾಲೇಜು ಕಲಾ ವಿಭಾಗ ಆರಂಭವಾಗಿದೆ. ಸದ್ಯ ಪ್ರಥಮ ಪಿಯುಸಿಗೆ 60, ದ್ವಿತೀಯ ಪಿಯುಸಿಗೆ 45 ಸೇರಿ 105 ವಿದ್ಯಾರ್ಥಿಗಳಿದ್ದಾರೆ.

ಹುದ್ದೆ ಖಾಲಿ: ಕಾಲೇಜಿನಲ್ಲಿ ಪ್ರಾಚಾರ್ಯ, ಇಬ್ಬರು ಉಪನ್ಯಾಸಕರು, ಪರಿಚಾರಕ ಹುದ್ದೆ ಖಾಲಿ ಇವೆ. ಪರಿಚಾರಕರು ಇಲ್ಲದ್ದರಿಂದ ವಿದ್ಯಾರ್ಥಿಗಳೇ ಕೋಣೆ ಮತ್ತು ಆವರಣದ ಸ್ವಚ್ಛತೆ ಮಾಡಬೇಕಿದೆ. ವರ್ಷಕ್ಕೆ 1500 ರೂ. ಅನುದಾನ ಬರುವುದರಿಂದ ಆಡಳಿತ ವರ್ಗವೇ ಸಣ್ಣಪುಟ್ಟ ಕೆಲಸ ಮಾಡಿಸಬೇಕಿದೆ. ರಾತ್ರಿ ಕಾವಲುಗಾರ ಇಲ್ಲದ್ದರಿಂದ ಕಾಲೇಜಿನ ಆವರಣದಲ್ಲಿ ಪುಂಡಪೋಕರಿಗಳಿಂದ ಅಕ್ರಮ ಚಟುವಟಿಕೆಗಳು ನಡೆಯುತ್ತಿವೆ ಎಂಬ ದೂರು ಇದೆ.

ಸೌಲಭ್ಯಕ್ಕೆ ಪರದಾಟ: ಕಾಲೇಜು ಆರಂಭವಾಗಿ 13 ವರ್ಷವಾದರೂ ವಿದ್ಯಾರ್ಥಿಗಳಿಗೆ ಕುಡಿಯುವ ನೀರು, ಶೌಚಾಲಯ ಸೇರಿ ಮೂಲ ಸೌಕರ್ಯಗಳಿಲ್ಲ. ವಿದ್ಯಾರ್ಥಿನಿಯರು ಪಕ್ಕದ ಸರಕಾರಿ ಪ್ರೌಢಶಾಲೆ ಶೌಚಾಲಯ ಅವಲಂಬಿಸಿದ್ದರೆ, ವಿದ್ಯಾರ್ಥಿಗಳು ಬಯಲನ್ನೇ ಆಶ್ರಯಿಸುವಂತಾಗಿದೆ. ಇಲ್ಲಿನ ಸಮಸ್ಯೆ ಕುರಿತು ತಾಲೂಕು, ಜಿಲ್ಲಾಮಟ್ಟದ ಅಧಿಕಾರಿಗಳ ಗಮನಕ್ಕೆ ತಂದರೂ ಸ್ಪಂದಿಸಿಲ್ಲ ಎನ್ನುತ್ತಾರೆ ವಿದ್ಯಾರ್ಥಿಗಳು.

ಅರೆಬರೆ ಕೆಲಸ: ಹೈದರಾಬಾದ್‌ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯಿಂದ 5 ಲಕ್ಷ ರೂ. ಅನುದಾನ ಬಿಡುಗಡೆಯಾಗಿತ್ತು. ದುರಸ್ತಿ ಕಾಮಗಾರಿಯನ್ನು ಪಿಡಬ್ಲ್ಯೂಡಿ ಇಲಾಖೆಗೆ ವಹಿಸಲಾಗಿತ್ತು. ಸುಣ್ಣಬಣ್ಣ, ಶೌಚಾಲಯ ನಿರ್ಮಿಸಿ ನೀರಿನ ಸೌಲಭ್ಯ ಕಲ್ಪಿಸದೇ ಅರೆಬರೆ ಕೆಲಸ ಮಾಡಲಾಗಿದೆ. ಹೀಗಾಗಿ ಶೌಚಾಲಯ ಇದ್ದೂ ಇಲ್ಲದಂತಾಗಿದೆ. ಕಾಲೇಜಿಗೆ ವಿದ್ಯುತ್‌ ಸಂಪರ್ಕ ಇಲ್ಲ. ಕಾಲೇಜಿಗೆ ವಿದ್ಯುತ್‌ ಸೌಲಭ್ಯ ಕಲ್ಪಿಸಬೇಕೆಂದು ಗ್ರಾಮಸ್ಥ ವಿಜಯಕುಮಾರ ಆಗ್ರಹಿಸಿದ್ದಾರೆ.

ಉತ್ತಮ ಫಲಿತಾಂಶ: ಮಸರಕಲ್ಲ ಗ್ರಾಮದ ಸರಕಾರಿ ಪ.ಪೂ. ಕಾಲೇಜಿನ ವಿದ್ಯಾರ್ಥಿಗಳು 2014-15ರಿಂದ 2018-19ನೇ ಸಾಲಿನವರೆಗೆ ಸತತ ಐದು ವರ್ಷಗಳಿಂದ ತಾಲೂಕಿಗೆ ಉತ್ತಮ ಫಲಿತಾಂಶ ಜತೆ ಪ್ರಥಮ ಸ್ಥಾನ ಪಡೆದಿದ್ದಾರೆ. ಉಪನ್ಯಾಸಕರ ಗುಣಮಟ್ಟದ ಬೋಧನೆಯಿಂದಾಗಿ ದೇವದುರ್ಗ ಪಟ್ಟಣ ಸೇರಿ ಸುತ್ತಲಿನ ಹತ್ತಾರೂ ಗ್ರಾಮಗಳ ವಿದ್ಯಾರ್ಥಿಗಳು ಇಲ್ಲಿ ಪ್ರವೇಶ ಪಡೆಯುತ್ತಿದ್ದಾರೆ.

ಕುಡಿಯುವ ನೀರು, ಶೌಚಾಲಯ ಸೇರಿ ಮೂಲ ಸೌಲಭ್ಯ ಕಲ್ಪಿಸುವಂತೆ ಗ್ರಾ.ಪಂ. ಆಡಳಿತ ಮಂಡಳಿ ಗಮನಕ್ಕೆ ತರಲಾಗಿದೆ. ಸೌಲಭ್ಯ ಇಲ್ಲದ್ದರಿಂದ ವಿದ್ಯಾರ್ಥಿಗಳು ತೊಂದರೆ ಅನುಭವಿಸುತ್ತಿದ್ದಾರೆ.
•ಬಾಬು ಜಾನಿ,
ಪಾಲಕರು

ಕುಡಿಯುವ ನೀರು, ಶೌಚಾಲಯ, ಕಾಂಪೌಂಡ್‌ ಸೇರಿ ಮೂಲ ಸೌಲಭ್ಯ ಕಲ್ಪಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಪತ್ರ ಬರೆಯಲಾಗಿದೆ. ಕಾಲೇಜು ಸಮಸ್ಯೆ ಕುರಿತು ಜನಪ್ರತಿನಿದಿಗಳು ಗಮನಹರಿಸಬೇಕು.
ಸಿದ್ದಣ್ಣ ಪರಮೇಶ್ವರ,
ಪ್ರಭಾರಿ ಪ್ರಾಚಾರ್ಯ

ಟಾಪ್ ನ್ಯೂಸ್

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.