ರೈತರ ಸಮಸ್ಯೆಗಳಿಗೆ ಪ್ರಾಮಾಣಿಕವಾಗಿ ಸ್ಪಂದಿಸುವೆ
Team Udayavani, Jul 10, 2019, 10:58 AM IST
ಬ್ಯಾಡಗಿ: ಭಾರಿ ಗಾಳಿ-ಮಳೆಗೆ ರೇಷ್ಮೆ ಹುಳು ಸಾಕಾಣಿಕೆ ಮನೆ ಹಾಳಾಗಿದ್ದ ರೈತನಿಗೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಬಿಡುಗಡೆಗೊಂಡ 2 ಲಕ್ಷ ರೂ.ಗಳ ಚೆಕ್ನ್ನು ಶಾಸಕ ವಿರೂಪಾಕ್ಷಪ್ಪ ಬಳ್ಳಾರಿ ವಿತರಿಸಿದರು.
ಬ್ಯಾಡಗಿ: ಪ್ರಸ್ತುತ ದಿನಗಳಲ್ಲಿ ರೈತರು ಎದುರಿಸುತ್ತಿರುವ ಸಂಕಷ್ಟಗಳನ್ನು ನಾನೂ ಅನುಭವಿಸಿ ಬಂದಿದ್ದೇನೆ. ಹೀಗಾಗಿ ಶಾಸಕನಾಗಿ ರೈತರ ನೆರವಿಗೆ ಶಕ್ತಿಮೀರಿ ಪ್ರಯತ್ನಿಸುವ ಮೂಲಕ ಅವರಲ್ಲಿ ಆತ್ಮಸ್ಥೈರ್ಯ ತುಂಬುವ ಕೆಲಸ ನಿರ್ವಹಿಸಲು ಸದಾ ಬದ್ಧ ಎಂದು ಶಾಸಕ ವಿರೂಪಾಕ್ಷಪ್ಪ ಬಳ್ಳಾರಿ ಭರವಸೆ ನೀಡಿದರು.
ಪಟ್ಟಣದ ಶಾಸಕರ ಭವನದಲ್ಲಿ 2018 ಸೆ. 1ರಂದು ಸುರಿದ ಭಾರಿ ಗಾಳಿ ಮಳೆಗೆ ತಾಲೂಕಿನ ಕದರಮಂಡಲಗಿ ಗ್ರಾಮದ ಮಲ್ಲಪ್ಪ ಮಾಯಪ್ಪ ಕುಮ್ಮೂರ ಅವರಿಗೆ ಸೇರಿದ ರೇಷ್ಮೆ ಹುಳು ಸಾಕಾಣಿಕೆ ಮನೆ ಧ್ವಂಸಗೊಂಡಿದ್ದು ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಬಿಡುಗಡೆಗೊಂಡ 2 ಲಕ್ಷ ರೂ. ಚೆಕ್ ವಿತರಿಸಿ ಅವರು ಮಾತನಾಡಿದರು.
ಪ್ರತಿವರ್ಷವೂ ಅತೀವೃಷ್ಟಿ, ಅನಾವೃಷ್ಟಿ ಎದುರಿಸುತ್ತಿದ್ದೇವೆ. ಹೀಗಾಗಿ ಪ್ರಕೃತಿಯೂ ರೈತನಿಗೆ ಸಹಕಾರ ನೀಡುತ್ತಿಲ್ಲ. ಅಷ್ಟೇ ಅಲ್ಲದೆ ಭವಿಷ್ಯದ ದಿನಗಳಲ್ಲೂ ಕೈಜೋಡಿಸುವ ಲಕ್ಷಣಗಳೂ ಕಾಣುತ್ತಿಲ್ಲ. ಹೀಗಾಗಿ ಪ್ರತಿನಿತ್ಯ, ಪ್ರತಿಕ್ಷಣವೂ ರೈತ ಬದುಕಿಗಾಗಿ ಹೋರಾಟ ಮಾಡುವಂತಾಗಿದೆ. ಶಾಸಕನಾಗಿ ಕ್ಷೇತ್ರದ ರೈತರ ಸಂಕಷ್ಟಕ್ಕೆ ಸ್ಪಂದಿಸುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದರು.
ಪ್ರಕೃತಿ ವಿಕೋಪಕ್ಕೆ ಕೃಷಿ ಸರಣಿ ವೈಫಲ್ಯ ಕಾಣುತ್ತಿದೆ. ಎಂತಹುದೇ ಸಂಕಷ್ಟ ಎದುರಾದರೂ ಎದೆಗುಂದಬಾರದು. ಸಹಿಸುವ ಶಕ್ತಿ ಪಡೆದುಕೊಳ್ಳಬೇಕು. ಸಹನೆ ಕಳೆದುಕೊಂಡು ಆತ್ಮಹತ್ಯೆಯಂತಹ ಸ್ವಯಂಕೃತ ಅಪರಾಧಗಳಿಗೆ ಇಳಿಯಬಾರದು. ಎಲ್ಲ ಕಷ್ಟಗಳನ್ನು ಸಹಿಸಿಕೊಳ್ಳುವ ಶಕ್ತಿ ರೈತನಿಗೆ ಭಗವಂತನೇ ಕರುಣಿಸಿದ್ದಾನೆ. ಈ ಹಿನ್ನೆಲೆಯಲ್ಲಿ ರೈತರು ಯಾವುದೇ ಕಾರಣಕ್ಕೂ ದುಡುಕಿನ ನಿರ್ಧಾರ ತೆಗೆದುಕೊಳ್ಳದಂತೆ ಮನವಿ ಮಾಡಿದರು.
ಈ ಸಂದರ್ಭದಲ್ಲಿ ತಹಶೀಲ್ದಾರ್ ಗುರುಬಸವರಾಜ್, ಶಂಕ್ರಣ್ಣ ಮಾತನನವರ, ನ್ಯಾಯವಾದಿಗಳಾದ ಎಸ್.ಎಚ್.ಕುಡಪಲಿ, ಶಿವನಗೌಡ ಬಸನಗೌಡ್ರ, ವಿಷ್ಣುಕಾಂತ್ ಬೆನ್ನೂರ, ಬಳಿಗಾರ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ
ಹಾವೇರಿ: ಕಾಂಗ್ರೆಸ್ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ
ರಾಣಿಬೆನ್ನೂರ: ಸನ್ಮಾರ್ಗ ತೋರುತ್ತಿವೆ ಮಠ-ಮಾನ್ಯಗಳು: ಹರಳಯ್ಯ ಶ್ರೀ
MUST WATCH
ಹೊಸ ಸೇರ್ಪಡೆ
Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ
Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ
Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ