ಸಾಂಪ್ರದಾಯಿಕ ಸಸಿ ಬೆಳೆಸಿ

•ಕೃಷಿ ಚಟುವಟಿಕೆ ಅನುಕೂಲವಿರಲಿ•ಅಕೇಶಿಯಾ-ನೀಲಗಿರಿ ಬೇಡವೇ ಬೇಡ

Team Udayavani, Jul 10, 2019, 11:54 AM IST

uk-tdy-3..

ಕುಮಟಾ: ಮೂರೂರು ಮತ್ತು ಕಲ್ಲಬ್ಬೆ ಗ್ರಾಮದ ಸುತ್ತಮುತ್ತ ಸಾಂಪ್ರದಾಯಿಕ ಸಸಿಗಳನ್ನು ನೆಡುವಂತೆ ಆಗ್ರಹಿಸಿ ಗ್ರಾಮಸ್ಥರು ತಹಶೀಲ್ದಾರ್‌ಗೆ ಮನವಿ ಸಲ್ಲಿಸಿದರು.

ಕುಮಟಾ: ಮೂರೂರು ಮತ್ತು ಕಲ್ಲಬ್ಬೆ ಗ್ರಾಮದ ಸುತ್ತಮುತ್ತಲಿನ ಬೆಟ್ಟ ಗುಡ್ಡಗಳಲ್ಲಿ ಅರಣ್ಯ ಇಲಾಖೆ ಪರಿಸರಕ್ಕೆ ಮಾರಕವಾದ ಅಕೇಶಿಯಾ ಗಿಡಗಳನ್ನು ನೆಡುವ ಬದಲು, ಸಾಂಪ್ರದಾಯಿಕ ವೈವಿಧ್ಯಮಯ ಗಿಡಗಳನ್ನು ನೆಡಬೇಕೆಂದು ಆಗ್ರಹಿಸಿ ಮೂರೂರು ಹಾಗೂ ಕಲ್ಲಬ್ಬೆ ಗ್ರಾಮಸ್ಥರು ಮಂಗಳವಾರ ತಹಶೀಲ್ದಾರ್‌ಗೆ ಮನವಿ ಸಲ್ಲಿಸಿದರು.

ಗ್ರಾಮಸ್ಥರೆಲ್ಲರೂ ಸಾಂಪ್ರದಾಯಿಕ ಅಡಕೆ, ಭತ್ತ, ತೆಂಗು ಸೇರಿದಂತೆ ಇನ್ನಿತರ ಬೆಳೆಗಳ ಕೃಷಿಕರಾಗಿದ್ದು, ಬಹಳ ವರ್ಷಗಳಿಂದ ಈ ಬೆಟ್ಟದ ತೆರಗಿನ ಎಲೆ ಹಾಗೂ ಹಸಿರು ಸೊಪ್ಪನ್ನು ತಮ್ಮ ಕೃಷಿ ಚಟುವಟಿಕೆಗಳಿಗೆ ಬಳಸಿಕೊಳ್ಳುತ್ತಿದ್ದಾರೆ. ಆದರೆ ಊರಿನ ಸುತ್ತಲಿನ ಬೆಟ್ಟಗಳಲ್ಲಿ ಅರಣ್ಯ ಇಲಾಖೆ ಅಕೇಶಿಯಾ ಗಿಡ ನೆಡುತ್ತಿದ್ದು, ಇದು ಇನ್ನಿತರ ಮರಗಿಡಗಳಿಗೆ ಹಾಗೂ ಮಣ್ಣಿಗೆ ಮಾರಕವಾಗಿದೆ. ಈ ಬೆಟ್ಟದಲ್ಲಿ ಯಾವುದೇ ಕಾರಣಕ್ಕೂ ಅಕೇಶಿಯಾ, ನಿಲಗಿರಿ, ಮ್ಯಾಂಜಿಯಮ್‌ ಈ ತರಹದ ಗಿಡಗಳನ್ನು ನೆಡಬಾರದು. ಬದಲಾಗಿ ವೈವಿಧ್ಯಮಯ ಸಾಂಪ್ರದಾಯಿಕ ಬೆಟ್ಟದ ಗಿಡಗಳನ್ನು, ಹಣ್ಣು, ಔಷಧಿ ಗಿಡಗಳನ್ನು ನೆಡಬೇಕು ಎಂದು ಮನವಿಯಲ್ಲಿ ಒತ್ತಾಯಿಸಿದರು.

ನಂತರ ಎಂ.ಜಿ. ಭಟ್ಟ ಮಾತನಾಡಿ, ಅಕೇಶಿಯಾ ಗಿಡ ರಾಕ್ಷಸಿ ಗುಣ ಹೊಂದಿದೆ. ಇದರಿಂದ ಪರಿಸರಕ್ಕೆ ಹಾಗೂ ಭೂಮಿಗೆ ಹಾನಿ ಉಂಟಾಗಲಿದೆ. ಮಣ್ಣಿನಲ್ಲಿರುವ ಸತ್ವ ಹಾಗೂ ನೀರಿನ ಅಂಶ ಕಡಿಮೆಯಾಗುತ್ತದೆ. ಅಂತರ್ಜಲ ಬತ್ತುತ್ತದೆ. ಆದ್ದರಿಂದ ಮೂರೂರು, ಕಲ್ಲಬ್ಬೆ ಭಾಗದ ಅರಣ್ಯ ಪ್ರದೇಶದಲ್ಲಿ ಅಕೇಶಿಯಾ ಗಿಡ ನೆಡುವುದನ್ನು ಸ್ಥಗಿತಗೊಳಿಸಬೇಕು. ಅರಣ್ಯ ಪ್ರದೇಶದಲ್ಲಿ ಮಂಗಗಳಿಗೆ ಹಾಗೂ ಕಾಡುಪ್ರಾಣಿಗಳಿಗೆ ತಿನ್ನುವಂತಹ ಆಹಾರವಿಲ್ಲದೇ, ಅವು ರೈತರು ಬೆಳೆಗಳತ್ತ ಮುಖಮಾಡುತ್ತಿವೆ. ಇದರಿಂದ ರೈತನಿಗೆ ಹಾನಿ ಉಂಟಾಗುತ್ತಿದೆ. ಅಕೇಶಿಯಾ ಗಿಡ ನೆಡುವುದರ ಬದಲು ಇತರೆ ಹಣ್ಣು, ಔಷಧಿಯ ಗಿಡಗಳನ್ನು ನೆಡಬೇಕು. ಇದರಿಂದ ಪರಿಸಕ್ಕೂ ಒಳಿತು ಎಂದರು.

ಮೂರೂರು ಕಲ್ಲಬ್ಬೆ ಗ್ರಾಮಸ್ಥರಾದ ಎಸ್‌.ವಿ. ಹೆಗಡೆ, ಮಂಜುನಾಥ ಶೇಟ್, ಧ‌ನಂಜಯ ಹೆಗಡೆ, ದಿನೇಶ ಭಟ್ಟ, ಉದಯ ಗೌಡ, ಚಿದಾನಂದ ಶಂಕರ ಹೆಗಡೆ, ಪ್ರವೀಣ ಹೆಗಡೆ, ತ್ರಿವೇಣಿ ಹೆಗಡೆ, ಡಿ.ಸಿ. ಭಟ್ಟ, ಕೆ.ವಿ. ಹೆಗಡೆ ಸೇರಿದಂತೆ ಹಲವರಿದ್ದರು.

ಟಾಪ್ ನ್ಯೂಸ್

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

1-qeeqwewqwqe

Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.