ಸಚಿವ ಡಿಕೆಶಿ ಮುಂಬಯಿ ಪೊಲೀಸರ ವಶಕ್ಕೆ; ಕಾಂಗ್ರೆಸ್ ಆಕ್ರೋಶ
Team Udayavani, Jul 10, 2019, 3:09 PM IST
ಮುಂಬಯಿ : ರಾಜ್ಯದ ರೆಬೆಲ್ ಶಾಸಕರು ತಂಗಿರುವ ರಿನೈಸೆನ್ಸ್ ಹೊಟೇಲ್ ಎದುರು ಬುಧವಾರ ಬೆಳಗ್ಗೆ 8.15 ರಿಂದ ಕದಲದೆ ಕುಳಿತಿದ್ದ ಸಚಿವ ಡಿ.ಕೆ.ಶಿವಕುಮಾರ್ ಅವರನ್ನು ಮುಂಬಯಿ ಪೊಲೀಸರು ಮಧ್ಯಾಹ್ನ 2 ಗಂಟೆಯ ವೇಳೆಗೆ ವಶಕ್ಕೆ ಪಡೆದಿದ್ದಾರೆ.
ಸಚಿವಡಿ.ಕೆ.ಶಿವಕುಮಾರ್ ಅವರನ್ನು ಮಾತ್ರ ವಶಕ್ಕೆ ಪಡೆದಿದ್ದು, ಜೊತೆಯಲ್ಲಿದ್ದ ಸಚಿವ ಜಿ.ಟಿ.ದೇವೇಗೌಡ ಮತ್ತು ಜೆಡಿಎಸ್ ಶಾಸಕ ಶಿವಲಿಂಗೇಗೌಡ ಅವರನ್ನು ವಶಕ್ಕೆ ಪಡೆಯಲಿಲ್ಲ.
ಸ್ಥಳಕ್ಕೆ ಮಹಾರಾಷ್ಟ್ರ ಕಾಂಗ್ರೆಸ್ ನಾಯಕರು ಆಗಮಿಸಿ ಪೊಲೀಸರೊಂದಿಗೆ ತೀವ್ರ ವಾಗ್ವಾದ ನಡೆಸಿದರು. ಆ ಬಳಿಕ ಹೆಚ್ಚುವರಿ ಪೊಲೀಸರನ್ನು ಕರೆಸಿಕೊಂಡು ಡಿ.ಕೆ.ಶಿವಕುಮಾರ್ ಅವರನ್ನು ಸ್ಥಳದಿಂದ ವಶಕ್ಕೆ ಪಡೆದು ಪಡೆದು ಕಾಲಿನ ವಿಶ್ವವಿದ್ಯಾಲಯದ ರೆಸ್ಟ್ ಹೌಸ್ಗೆ ಕರೆದೊಯ್ಯಲಾಗಿದೆ.ಶಿವಕುಮಾರ್ ಅವರೊಂದಿಗೆಕೆಲ ಸ್ಥಳೀಯ ಕಾಂಗ್ರೆಸ್ ನಾಯಕರನ್ನೂ ವಶಕ್ಕೆ ಪಡೆದಿದ್ದಾರೆ.
ಹೊಟೇಲ್ನ ಸುತ್ತ ಸೆಕ್ಷನ್ 144 ಜಾರಿ ಮಾಡಲಾಗಿದ್ದು ಭದ್ರತೆ ಬಿಗಿ ಗೊಳಿಸಲಾಗಿದೆ.
ಬುಧವಾರ ಬೆಳ್ಳಂಬೆಳಗ್ಗೆ ಬೆಂಗಳೂರಿನಿಂದ ತಿಂಡಿಯನ್ನೂ ಸೇವಿಸದೆ ತೆರಳಿದ ಸಚಿವ ಡಿ.ಕೆ.ಶಿವಕುಮಾರ್ ಅವರಿಗೆ ಹೊಟೇಲ್ ಪ್ರವೇಶಿಸಲು ಪೊಲೀಸರು ತಡೆ ಒಡ್ಡಿದ್ದರು.
ನಾನು ಅತೃಪ್ತ ಶಾಸಕರನ್ನು ಭೇಟಿಯಾಗಿಯೇ ಮರಳುವುದು ಎಂದು ಪಟ್ಟು ಹಿಡಿದು ಕುಳಿತಿದ್ದಡಿ.ಕೆ.ಶಿವಕುಮಾರ್ ಅವರು ಬೆಳಗ್ಗೆ ಕಾಫಿಯನ್ನು ರಸ್ತೆಯಲ್ಲೇ ಕುಡಿದಿದ್ದರು. 10 ಗಂಟೆಯ ಬಳಿಕ ಹಸಿವಾಗುತ್ತಿದೆ ಎಂದು ಹೇಳಿದಾಗ ಮುಂಬಯಿ ಪೊಲೀಸರು ಇಡ್ಲಿ,ವಡೆ ಮತ್ತು ಟೀ ತಂದು ಕೊಟ್ಟಿದ್ದು ಅದನ್ನೂ ಸೇವಿಸಿದ್ದರು. ಕೆಲ ಹೊತ್ತಿನ ಬಳಿಕ ಕುರ್ಚಿಗಳನ್ನು ತಂದು ಕೊಡಲಾಗಿದ್ದು ಸ್ಥಳದಿಂದ ಕದಲದೆ ಪಟ್ಟು ಹಿಡಿದು ಕುಳಿತಿದ್ದರು.ನಾನು ಯಾವುದುಕ್ಕೂ ಜಗ್ಗುವುದಿಲ್ಲ, ಶಾಸಕರು ನಮ್ಮವರು, ಅವರ ಬಳಿ ಮಾತನಾಡಿಯೇ ತೆರಳುತ್ತೇನೆ. ಇಲ್ಲೆ ಬಿದ್ದು ಹೋದರು ಚಿಂತೆ ಇಲ್ಲ ಎಂದು ಹೇಳಿದ್ದರು.
ಬುಕ್ ಮಾಡಿದ್ದ ರೂಂ ಕ್ಯಾನ್ಸಲ್
ಡಿ.ಕೆ.ಶಿವಕುಮಾರ್ ಅವರು ರಿನೈಸೆನ್ಸ್ ಹೊಟೇಲ್ ಗೆ ಆನ್ಲೈನ್ನಲ್ಲಿ ಬುಕ್ ಮಾಡಿದ್ದ ರೂಂ ಅನ್ನು ಕ್ಯಾನ್ಸಲ್ ಮಾಡಲಾಗಿದ್ದು, ಈ ಬಗ್ಗೆ ತಾಳ್ಮೆಯಲ್ಮೆ ಉತ್ತರ ನೀಡಿದ್ದಾರೆ. ಅವರು ನನ್ನಂತಹ ಗ್ರಾಹಕನ ಬಗ್ಗೆ ಹೆಮ್ಮೆ ಪಡಬೇಕು. ನಾನು ಮುಂಬಯಿಯನ್ನು ಇಷ್ಟಪಡುತ್ತೇನೆ. ಈ ಹೊಟೇಲನ್ನು ಮೆಚ್ಚುತ್ತೇನೆ. ಅವರು ಕ್ಯಾನ್ಸಲ್ ಮಾಡಿರಬಹುದು. ನನಗೆ ಬೇರೆ ರೂಂಗಳಿವೆ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಭಾರತ ಸೇರಿದಂತೆ ಜಾಗತಿಕವಾಗಿ ಕೋವಿಡ್ ಲಸಿಕೆ ಹಿಂಪಡೆಯುವುದಾಗಿ ಘೋಷಿಸಿದ ಆಸ್ಟ್ರಾಜೆನಿಕಾ!
Students; ವಿವಸ್ತ್ರಗೊಳಿಸಿ, ಖಾಸಗಿ ಅಂಗಕ್ಕೆ ಘಾಸಿ!; ಹಿರಿಯ ವಿದ್ಯಾರ್ಥಿಗಳಿಂದ ಚಿತ್ರಹಿಂಸೆ
Loksabha; ಮಂದಿರಕ್ಕೆ ಬಾಬರಿ ಲಾಕ್ ಬೀಳದಿರಲು 400 ಸೀಟು ಬೇಕು: ಪ್ರಧಾನಿ ಮೋದಿ
Lucknow; ಕೆಲಸಕ್ಕೆ ಬಾರದ ರಾಮ ಮಂದಿರ: ಎಸ್ಪಿ ನಾಯಕ ಯಾದವ್ ವಿವಾದ
Patanjali case; ಜಾಹೀರಾತಿಗೆ ಮುನ್ನ ಸ್ವ ಘೋಷಣೆ ಮಾಡಲು ಸುಪ್ರೀಂ ಸೂಚನೆ
MUST WATCH
ಹೊಸ ಸೇರ್ಪಡೆ
Air India: ಪೈಲಟ್ ಗಳ ಸಾಮೂಹಿಕ ರಜೆ-70ಕ್ಕೂ ಅಧಿಕ ಏರ್ ಇಂಡಿಯಾ ವಿಮಾನ ಸಂಚಾರ ರದ್ದು
Malpe: ತೊಟ್ಟಂ ಬೀಚ್ನಲ್ಲಿ ಮುಳುಗುತ್ತಿದ್ದವರ ರಕ್ಷಣೆ
Gujarat ; ದಟ್ಟಾರಣ್ಯದಲ್ಲಿ ಒಬ್ಬ ಮತದಾರನಿಗಾಗಿ ಮತಗಟ್ಟೆ ಸ್ಥಾಪನೆ!
ಭಾರತ ಸೇರಿದಂತೆ ಜಾಗತಿಕವಾಗಿ ಕೋವಿಡ್ ಲಸಿಕೆ ಹಿಂಪಡೆಯುವುದಾಗಿ ಘೋಷಿಸಿದ ಆಸ್ಟ್ರಾಜೆನಿಕಾ!
Sirsi; ಕಾಗೇರಿ ರಿಲಾಕ್ಸ್ ಮೂಡ್: ಪಕ್ಷಿಗಳಿಗೆ ಆಹಾರ, ತೋಟ ಸುತ್ತಾಟ!