ಉಡುಪಿ ಹಲಸು ಮೇಳಕ್ಕೆ ಬರಲಿದೆ ತೂಬುಗೆರೆಯ ಹಣ್ಣು


Team Udayavani, Jul 11, 2019, 5:23 AM IST

halasu

ಉಡುಪಿ: ದೊಡ್ಡಣಗುಡ್ಡೆ ಶಿವಳ್ಳಿ ತೋಟಗಾರಿಕೆ ಕ್ಷೇತ್ರದ ರೈತ ಸೇವಾ ಕೇಂದ್ರದ ಆವರಣದಲ್ಲಿ ಜು. 13ರಿಂದ 15ರವರೆಗೆ ಆಯೋಜಿಸಿದ ಜಿಲ್ಲಾ ಮಟ್ಟದ ಹಲಸು ಮೇಳದಲ್ಲಿ ಈ ಬಾರಿ ದೊಡ್ಡಬಳ್ಳಾಪುರ ಜಿಲ್ಲೆಯ ತೂಬುಗೆರೆ ಹಲಸಿನ ಹಣ್ಣು ಪ್ರಮುಖ ಆಕರ್ಷಣೆಯಾಗಿರಲಿದೆ.

ಕಳೆದ ಬಾರಿಯೂ ಈ ಹಲಸಿನ ಮೇಳಕ್ಕೂ ಈ ಹಣ್ಣು ಬಂದಿದ್ದು ಒಂದೇ ದಿನದಲ್ಲಿ ಖಾಲಿಯಾಗಿತ್ತು. ಈ ಬಾರಿ ಬೇಡಿಕೆ ಮನಗಂಡು ಮೂರು ಟನ್‌ ತೂಬುಗೆರೆ ಹಲಸಿನ ಹಣ್ಣು ಬರಲಿದೆ. ಇದು ದೊಡ್ಡ ಕಲ್ಲಂಗಡಿ (ಕರಗುಂಜಿ) ಹಣ್ಣಿನ ಗಾತ್ರವನ್ನು ಹೊಂದಿರುತ್ತದೆ. ಇದು ಬಹಳ ರುಚಿಯಾದ ಹಣ್ಣು.

ತೊಳೆಯ ಬಣ್ಣವೂ ಆಕರ್ಷಕ. ಇದು ದೊಡ್ಡಬಳ್ಳಾಪುರದ ಭಾಗದಲ್ಲಿ ಬೆಳೆಯುತ್ತದೆ. ಹಣ್ಣು ತುಸು ದುಬಾರಿ. ಇದು ಐಸ್‌ಕ್ರೀಮ್‌ ಉತ್ಪಾದನೆಗೂ ರವಾನೆಯಾಗುತ್ತದೆ.

ಉಡುಪಿ ಜಿಲ್ಲಾಡಳಿತ, ಜಿ.ಪಂ. ತೋಟಗಾರಿಕೆ ಇಲಾಖೆ, ಜಿಲ್ಲಾ ಕೃಷಿಕ ಸಮಾಜದ ಸಹಭಾಗಿತ್ವದಲ್ಲಿ ನಡೆಯುವ ಮೇಳದ ಉದ್ಘಾಟನೆ 11 ಗಂಟೆಗೆ ನಡೆಯಲಿದೆ. ಬಳಿಕ ಹಲಸಿನ ಬೇಸಾಯ ಕ್ರಮ ಮತ್ತು ಮಾರುಕಟ್ಟೆ ಮೌಲ್ಯವರ್ಧನೆ ಕುರಿತು ಮತ್ತು ಕೊನೆಯ ದಿನ ಮಣ್ಣು -ನೀರಿನ ಸಂರಕ್ಷಣೆ ತಾಂತ್ರಿಕತೆ ಕುರಿತು ವಿಚಾರ ಸಂಕಿರಣ ನಡೆಯಲಿದ್ದು ಆಯಾ ವಿಷಯ ತಜ್ಞರು ಮಾಹಿತಿ ನೀಡಲಿದ್ದಾರೆ. ಇದರೊಂದಿಗೆ ಹಲಸಿನ ವಿವಿಧ ಉತ್ಪನ್ನಗಳು, ಗ್ರಾಮೀಣ ತಿಂಡಿ ತಿನಸುಗಳು ವಿಶೇಷ ಆಕರ್ಷಣೆಯಾಗಿರಲಿವೆ.

ಸಸ್ಯಸಂತೆಗೆ ಚಾಲನೆ

ತೋಟಗಾರಿಕೆ ಇಲಾಖೆಯ ಸಸ್ಯ ಕ್ಷೇತ್ರಗಳಲ್ಲಿ ಬೆಳೆ ಹಲಸು ಸೇರಿದಂತೆ ವಿವಿಧ ಹಣ್ಣಿನ ಗಿಡಗಳನ್ನು ಸರಕಾರ ನಿಗದಿಪಡಿಸಿದ ದರದಲ್ಲಿ ಮಾರಾಟ ಮಾಡಲಾಗುತ್ತದೆ. ಈ ಸಸ್ಯ ಸಂತೆಗೂ ಹಲಸಿನ ಮೇಳದಲ್ಲಿ ಚಾಲನೆ ನೀಡಲಾಗುವುದು. ಇದೇ ರೀತಿ ಕುಂದಾಪುರ ಮತ್ತು ಕಾರ್ಕಳ ತಾಲೂಕಿನಲ್ಲಿಯೂ ಸಸ್ಯಸಂತೆಗೆ ಚಾಲನೆ ನೀಡಲಾಗುತ್ತದೆ.

ಜನಾಕರ್ಷಣೆ ಪರಿಣಾಮ

ಕಳೆದ ವರ್ಷದ ಎರಡು ದಿನಗಳ ಹಲಸಿನ ಮೇಳಕ್ಕೆ ಜನರು ಭಾರೀ ಉತ್ಸಾಹವನ್ನು ತೋರಿಸಿದ್ದರಿಂದ ಈ ಬಾರಿ ಮೂರು ದಿನಗಳ ಮೇಳವನ್ನು ಆಯೋಜಿಸಿದೆ.

ಕಾಫಿ ಪೌಡರ್‌ನಂತಿರುವ ಹಲಸಿನ ಬೀಜದ ಪೌಡರ್‌ ಉತ್ಪಾದಿಸುವ ಚಿಕ್ಕಮಗಳೂರು ಜಿಲ್ಲೆಯ ಘಟಕದವರೂ ಹಲಸಿನ ಮೇಳಕ್ಕೆ ಆಗಮಿಸಲಿದ್ದಾರೆ. ಹಿಂದೊಂದು ಕಾಲದಲ್ಲಿ ಹಲಸಿನ ಹಣ್ಣಿನ ಬೀಜದಿಂದ ಅನೇಕ ರೀತಿಯ ಆಹಾರ ಪದಾರ್ಥಗಳನ್ನು ತಯಾರಿಸಲಾಗುತ್ತಿತ್ತು. ಬೀಜವನ್ನು ಪೌಡರ್‌ ಮಾಡಿಯೂ ಆಧುನಿಕ ಮಾರುಕಟ್ಟೆಯನ್ನು ಆಕರ್ಷಿಸಬಹುದು ಎಂಬುದನ್ನು ಚಿಕ್ಕಮಗಳೂರಿನವರು ಸಾಧಿಸುತ್ತಿದ್ದಾರೆ.

ಟಾಪ್ ನ್ಯೂಸ್

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Brahmavar

Padubidri: ಅಪಘಾತದ ಗಾಯಾಳು ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.