ಜನಸಂಖ್ಯಾ ಸ್ಫೋಟ : ಸಮಸ್ಯೆ ಒಂದು, ದುಷ್ಪರಿಣಾಮ ಹಲವು


Team Udayavani, Jul 11, 2019, 5:00 AM IST

w-22

ಇಂದು ವಿಶ್ವ ಜನಸಂಖ್ಯಾ ದಿನ. ಭಾರತಕ್ಕೆ ಭವಿಷ್ಯವಿದೆ ಎಂಬುದನ್ನು ರುಜುವಾತು ಪಡಿಸಬೇಕಾದ ಹಲವಾರು ವಾಸ್ತವಾಂಶಗಳಲ್ಲಿ ಜನಸಂಖ್ಯೆಯ ಸ್ಫೋಟಕ್ಕೆ ಕಡಿವಾಣ ಹಾಕುವುದು ಮಹತ್ವದ ವಿಚಾರವೆಂದರೆ ತಪ್ಪುಂಟೇ? ವಿಶ್ವಸಂಸ್ಥೆಯ ಸಮೀಕ್ಷೆಯ ಪ್ರಕಾರ ವಿಶ್ವದ ಜನಸಂಖ್ಯೆಯಲ್ಲಿ ಶೇ.17.74 ಭಾಗವನ್ನು ಹೊಂದಿರುವ ಭಾರತವು ಜಗತ್ತಿನ ಎರಡನೇ ಅತಿ ಹೆಚ್ಚು ಜನಸಂಖ್ಯೆ ಇರುವ ದೇಶವಾಗಿದೆ. ಭೌಗೋಳಿಕ ವಿಸ್ತೀರ್ಣದಲ್ಲಿ ಭಾರತಕ್ಕೆ ಏಳನೇ ಸ್ಥಾನ. ಆದರೆ ಜನಸಂಖ್ಯಾಭಿವೃದ್ಧಿಯಲ್ಲಿ ಮೊದಲನೇ ಸ್ಥಾನ.

2024ರ ವೇಳೆಗೆ ಭಾರತವು ವಿಶ್ವದ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶವಾಗಲಿದೆ ಎಂದು ಅಂದಾಜಿಸಲಾಗಿದೆ. 2030ರ ವೇಳೆಗೆ 150 ಕೋಟಿಗೂ ಹೆಚ್ಚು ಜನರಿಗೆ ನೆಲೆಯಾಗುವ ಇತಿಹಾಸದ ಮೊದಲ ರಾಜಕೀಯ ಘಟಕವಾಗಲಿದೆ ಎಂದು ನಿರೀಕ್ಷಿಸಲಾಗಿದೆ. ಭಾರತದಲ್ಲಿ ಜನಸಂಖ್ಯೆ ಏರುತ್ತಲೇ ಹೋಗು ತ್ತದೆ ಅನ್ನುವುದಕ್ಕಿಂತಲೂ ಸ್ಫೋಟಗೊಳ್ಳುತ್ತಿದೆ ಎಂದರೆ ಸಮರ್ಪಕವಾದೀತು. ಜನಸಂಖ್ಯೆ ಸ್ಫೋಟವೆಂಬ ಸಮಸ್ಯೆ ಒಂದು, ಆದರೆ ಅದರ ದುಷ್ಪರಿಣಾಮಗಳು ಹಲವು. ಮಾನವ ಸಂಪನ್ಮೂಲ ಸಮರ್ಪಕವಾಗಿ ಸದ್ಬಳಕೆಯಾಗದಿರುವುದು ದುರದೃಷ್ಟಕರ.

ಜನಸಂಖ್ಯೆ ಇಂದು ಒಂದು ಸಾಮಾಜಿಕ ಪಿಡುಗಾಗಿ ಪರಿಣಮಿಸಿದೆ. ಜನಸಂಖ್ಯೆ ಮಿತಿ ಮೀರುತ್ತಿದ್ದರೂ ಜನರು ವಾಸಿಸುವ ಭೂಪ್ರದೇಶ ಮೊದಲಿನಷ್ಟೇ ಇದೆ. ಹೆಚ್ಚುತ್ತಿರುವ ಜನಸಂಖ್ಯೆಗೆ ವಾಸಿಸಲು ನೆಲ, ಬದುಕಲು ಜಲ, ಆಹಾರ, ಉದ್ಯೋಗ ಮರೀಚಿಕೆಯಾಗುತ್ತಿದೆ. ಇದರಿಂದಾಗಿ ಆರ್ಥಿಕ ಪ್ರಗತಿ ಕುಂಠಿತಗೊಳ್ಳುತ್ತಿದೆ. ಜನಸಂಖ್ಯೆಯ ಹೆಚ್ಚಳ ನೆಲ, ಜಲ, ವಾಯು ಮಾಲಿನ್ಯಕ್ಕೆ ಕಾರಣವಾಗುತ್ತದೆ. ಭೂಮಿಯ ಉಷ್ಣಾಂಶವು ಏರುತ್ತದೆ. ಭಯೋತ್ಪಾದಕರ ಸೃಷ್ಟಿಯಾಗುತ್ತದೆ. ಉತ್ಪನ್ನಕ್ಕಿಂತ ಜನಸಂಖ್ಯೆ ಮಿತಿ ಮೀರಿದರೆ ಆಮದಿಗೆ ಮಾರು ಹೋಗಬೇಕಾಗುತ್ತದೆ. ಆಹಾರ, ಬಟ್ಟೆ, ಶಿಕ್ಷಣ, ಆರೋಗ್ಯ ಎಲ್ಲವನ್ನೂ ನಿಭಾಯಿಸುವುದು ಅತ್ಯಂತ ಕಠಿಣ ಸವಾಲಾಗುತ್ತದೆ. ಹಳ್ಳಿಗಳಲ್ಲಿ ಸಂಪಾದನೆ ಇಲ್ಲದೆ ನಗರಗಳಿಗೆ ಉದ್ಯೋಗಕ್ಕೆ ಜನ ಬಂದಿಳಿದಾಗ ನಗರದ ಜನಸಂಖ್ಯೆ ಮಿತಿ ಮೀರಿ ಕೊಳಚೆ ಪ್ರದೇಶಗಳು ಹುಟ್ಟಿಕೊಳ್ಳುತ್ತವೆ. ಜನಸಂಖ್ಯೆ ಸ್ಫೋಟ ಯಾವುದೇ ರೀತಿಯಲ್ಲಿ ಅಪೇಕ್ಷಣೀಯವಲ್ಲ, ಆರೋಗ್ಯದಾಯಕವಲ್ಲ, ಪ್ರಗತಿಗೂ ಪ್ರೇರಕವಲ್ಲ. ಆದರೆ ಮಾನವ ಸಂಪನ್ಮೂಲವನ್ನು ಧನಾತ್ಮಕವಾಗಿ ಪರಿವರ್ತಿಸಿಕೊಂಡರೆ ಹಲವಾರು ಸಮಸ್ಯೆಗಳನ್ನು ಪರಿಹರಿಸಿಕೊಳ್ಳಬಹುದು.

ವಿಶ್ವಸಂಸ್ಥೆಯ ಸಮೀಕ್ಷೆಯ ಪ್ರಕಾರ ಪ್ರಸಕ್ತ ಭಾರತದ ಜನಸಂಖ್ಯೆ 136.88 ಕೋಟಿ. ಜನಸಂಖ್ಯೆಯಲ್ಲಿ ಶೇ. 33.6 ರಷ್ಟು ನಗರವಾಸಿಗಳು. ಶೇ.65 ಜನ 35 ವರ್ಷಕ್ಕಿಂತ ಕಡಿಮೆ ವಯಸ್ಸಿನವರು. ಇದು ಚೀನಾದಲ್ಲಿ 37 ಮತ್ತು ಜಪಾನ್‌ನಲ್ಲಿ 48 ಆಗಿರುತ್ತದೆ. ನಮ್ಮದು ತರುಣರ ದೇಶ. ಎಲ್ಲಾ ಸಂಪತ್ತಿಗಿಂತಲೂ ಶ್ರೇಷ್ಠ ಸಂಪತ್ತು ಮಾನವ ಸಂಪನ್ಮೂಲ. ಪ್ರಪಂಚದ ವಿಪುಲ ಸಂಪತ್ತು ಮಾನವನ ಶರೀರದಲ್ಲಿ ಅಡಗಿದೆ. ಆದರೆ ಇಚ್ಛಾಶಕ್ತಿ, ದುಡಿಯುವ ಮನಸ್ಸು, ಶಿಸ್ತು, ದುಡಿಮೆಯ ಗೌರವ ಮತ್ತು ಪ್ರಾಮಾಣಿಕತೆಯ ಕೊರತೆ ನಮ್ಮನ್ನು ಕಾಡುವ ದೊಡ್ಡ ಸಮಸ್ಯೆ.

ಬಡತನವೂ ಒಂದು ರೀತಿಯಲ್ಲಿ ಅತಿ ಸಂತಾನಕ್ಕೆ ಕಾರಣ ಆಗಿದೆ. ಆದರೆ ಬಡತನವೇ ಮೂಲ ಕಾರಣವಲ್ಲ. ಅವರಲ್ಲಿರುವ ಅನಕ್ಷರತೆ ಮತ್ತು ಮೂಢನಂಬಿಕೆಗಳು ಕಾರಣ. ದೇಶದಲ್ಲಿ ಆಸುಪಾಸು ಶೇ.20ರಷ್ಟು ಅನಕ್ಷರತೆ ಇದೆ. ವೈಜ್ಞಾನಿಕ ಹಾಗೂ ಸಾಮಾನ್ಯಜ್ಞಾನವೂ ಹಳ್ಳಿಗಳೇ ಹೆಚ್ಚಿರುವ ಭಾರತೀಯರಲ್ಲಿ ಕಡಿಮೆಯಿದೆ. ಬಡವರಲ್ಲಿ ದುಡಿಯುವ ಛಲ, ಜೀವನದಲ್ಲಿ ಮೇಲೇರುವ ಆಕಾಂಕ್ಷೆ ಪ್ರಬಲವಾಗಿ ಬೇರೂರುವಂತೆ ಮಾಡು ವುದು ಅನಿವಾರ್ಯ. ಜನನ ನಿಯಂತ್ರಣ ಕಾರ್ಯಕ್ರಮವನ್ನು ಯಶಸ್ವಿಗೊಳಿಸದೆ ಹೋದರೆ ವಿವಿಧ ರೀತಿಯ ಸಮಸ್ಯೆಗಳು ಹೆಚ್ಚಾಗಿ ಜೀವನವೇ ದುಃಖಮಯ ಎನಿಸುತ್ತದೆ.

ಇದೀಗ ಗಾಂಧೀಜಿಯವರ 150ನೆಯ ಜನ್ಮಶತಾಬ್ಧಿಯನ್ನು ಆಚರಿಸುವ ಸಂದರ್ಭದಲ್ಲಿ ಜನಸಂಖ್ಯೆಯ ಬಗ್ಗೆ ಗಾಂಧೀಜಿಯವರ ಚಿಂತನೆ ಸಾರ್ವಕಾಲಿಕ ಸತ್ಯ. ಏನೆಂದರೆ ಭಾರತದಲ್ಲಿ ಜನಸಂಖ್ಯೆಗೆ ಅನುಗುಣವಾಗಿ ಸಾಕಷ್ಟು ಪ್ರಮಾಣದ ವೃತ್ತಿ, ಉದ್ಯೋಗಗಳಿವೆ. ಪ್ರತಿಯೊಬ್ಬರಿಗೂ ತಮ್ಮ ಜೀವನಕ್ಕೆ ಬೇಕಾಗುವಷ್ಟು ಗಳಿಸುವ ಅರ್ಹತೆ ಮತ್ತು ಸಾಮರ್ಥ್ಯವಿದೆ. ಅದನ್ನು ಸದ್ಬಳಕೆ ಮಾಡಿಕೊಂಡರೆ ತೃಪ್ತಿಕರ ಜೀವನಕ್ಕೆ ಕೊರತೆಯಿಲ್ಲ ಎಂದಿದ್ದರು. ಇವತ್ತಿಗೂ ನಮ್ಮಲ್ಲಿ ದುಡಿಯುವವರ ಮತ್ತು ತಿನ್ನುವವರ ಅನುಪಾತ ತಾಳೆ ಆಗುತ್ತಿಲ್ಲ.

ಭಾರತ ಜಗತ್ತಿನ ಅತ್ಯಂತ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರ, ಅತಿ ಹೆಚ್ಚು ಜನಭರಿತ ದೇಶ, ಅತ್ಯಂತ ಅಭಿವೃದ್ಧಿಶೀಲ ದೇಶವೂ ಹೌದು ಎಂಬುದನ್ನು ನಾವು ಸಾಬೀತುಪಡಿಸಬೇಕು. ಮಾನವ ಸಂಪನ್ಮೂಲ ಸದ್ಬಳಕೆ, ಉತ್ಪಾದನಾ ಸಾಮರ್ಥ್ಯವನ್ನು ವೃದ್ಧಿಗೊಳಿಸಿ ಪ್ರಕೃತಿಯ ಪೋಷಣೆ, ರಕ್ಷಣೆ ಮತ್ತು ಕಾಳಜಿಯಿಂದ ಜನಸಂಖ್ಯಾ ಸಮಸ್ಯೆಗೆ ಪರಿಹಾರವನ್ನು ಕಂಡುಕೊಳ್ಳಬಹುದು.

– ಚೇರ್ಕಾಡಿ ಸಚ್ಚಿದಾನಂದ ಶೆಟ್ಟಿ

ಟಾಪ್ ನ್ಯೂಸ್

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

1-qeweqweqwe

IPL; ಹೈದರಾಬಾದ್ ಎದುರು ಚೆನ್ನೈ ಗೆ 78 ರನ್‌ಗಳ ಅಮೋಘ ಜಯ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದೂರದೃಷ್ಟಿಯ ನಾಯಕತ್ವಕ್ಕೆ ಮಾದರಿ ಎಸ್‌.ಆರ್‌. ಬೊಮ್ಮಾಯಿ

ದೂರದೃಷ್ಟಿಯ ನಾಯಕತ್ವಕ್ಕೆ ಮಾದರಿ ಎಸ್‌.ಆರ್‌. ಬೊಮ್ಮಾಯಿ

ಧೀರೋದಾತ್ತ ಕೆದಂಬಾಡಿ ರಾಮಯ್ಯ ಗೌಡ

ಧೀರೋದಾತ್ತ ಕೆದಂಬಾಡಿ ರಾಮಯ್ಯ ಗೌಡ

ನವ ನಾಮ, ನವ ರೂಪ ಧಾರಿಣೀ ನಮೋಸ್ತುತೇ

ನವ ನಾಮ, ನವ ರೂಪ ಧಾರಿಣೀ ನಮೋಸ್ತುತೇ

ಸಮಗ್ರ ಕರ್ನಾಟಕದ ಸಾಕ್ಷಿ ಪ್ರಜ್ಞೆ ಕಯ್ಯಾರ ರ ಕಿಂಞಣ್ಣ ರೈ

ಸಮಗ್ರ ಕರ್ನಾಟಕದ ಸಾಕ್ಷಿ ಪ್ರಜ್ಞೆ ಕಯ್ಯಾರ ರ ಕಿಂಞಣ್ಣ ರೈ

ಸತ್ಯಜ್ಞಾನದ ಶಕ್ತಿಯಿಂದ ರಾರಾಜಿಸುತ್ತಿದ್ದ ಯತೀಶ್ವರ

ಸತ್ಯಜ್ಞಾನದ ಶಕ್ತಿಯಿಂದ ರಾರಾಜಿಸುತ್ತಿದ್ದ ಯತೀಶ್ವರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Brahmavar

Padubidri: ಅಪಘಾತದ ಗಾಯಾಳು ಸಾವು

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

1-qeweqweqwe

IPL; ಹೈದರಾಬಾದ್ ಎದುರು ಚೆನ್ನೈ ಗೆ 78 ರನ್‌ಗಳ ಅಮೋಘ ಜಯ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.