ಆಧಾರ್‌ ಕಾರ್ಡ್‌ ಮಾಡ್ಸೋಕೆ ಪಡಿಪಾಟಲು

ಮೊಳಕಾಲ್ಮೂರು ಪಟ್ಟಣ-ಗ್ರಾಮೀಣ ಪ್ರದೇಶದ ಜನರಿಗೆ ತಪ್ಪುತ್ತಿಲ್ಲ ಅಲೆದಾಟ

Team Udayavani, Jul 11, 2019, 11:47 AM IST

11-July-18

ಮೊಳಕಾಲ್ಮೂರು: ಆಧಾರ್‌ ಕಾರ್ಡ್‌ ಟೋಕನ್‌ ಪಡೆಯಲು ರಾಂಪುರ ನಾಡಕಚೇರಿ ಆವರಣದಲ್ಲಿ ಕಾಯುತ್ತಿರುವ ಜನ

ಎಸ್‌. ರಾಜಶೇಖರ
ಮೊಳಕಾಲ್ಮೂರು:
ಪಟ್ಟಣದ ಪ್ರಗತಿಕೃಷ್ಣ ಗ್ರಾಮೀಣ ಬ್ಯಾಂಕ್‌ನಲ್ಲಿ ಆಧಾರ್‌ ಕಾರ್ಡ್‌ ಮಾಡಿಸಲು ಹಾಗೂ ಟೋಕನ್‌ ಪಡೆಯಲು ಜನಸಾಮಾನ್ಯರು ಹರಸಾಹಸ ಪಡುವಂತಾಗಿದೆ.

ತಾಲೂಕಿನಲ್ಲಿ ಬಹುತೇಕ ಜನರು ತಮ್ಮ ಮಕ್ಕಳ ಶಿಕ್ಷಣ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಮಹತ್ವಾಕಾಂಕ್ಷೆಯ ಹಲವಾರು ಯೋಜನೆಗಳನ್ನು ಪಡೆಯಲು ಆಧಾರ್‌ ಕಾರ್ಡ್‌ ಅಗತ್ಯವಾಗಿದೆ. ಈಗಾಗಲೇ ನೀಡಿರುವ ಬಹುತೇಕರ ಆಧಾರ್‌ ಕಾರ್ಡ್‌ಗಳಲ್ಲಿ ಹೆಚ್ಚಾಗಿ ತಿದ್ದುಪಡಿಗಾಗಿ ಮತ್ತು ಹೊಸದಾಗಿ ಆಧಾರ್‌ ಕಾರ್ಡ್‌ಗಳನ್ನು ಪಡೆಯಲು ಪ್ರತಿನಿತ್ಯ ಆಧಾರ್‌ ಕಾರ್ಡ್‌ಗಳ ಕೌಂಟರ್‌ಗಳಿಗೆ ಅಲೆಯುವಂತಾಗಿದೆ. ತಾಲೂಕಿನ ಕಸಬಾ ಮತ್ತು ದೇವಸಮುದ್ರ ಹೋಬಳಿಗಳಲ್ಲಿ ತೆರೆದ ಕೌಂಟರ್‌ಗಳಲ್ಲಿ ಪ್ರತಿನಿತ್ಯ ವೃದ್ಧರು, ಶಾಲಾ ಮಕ್ಕಳು, ಹೆಣ್ಣುಮಕ್ಕಳು ಅಲೆಯುವಂತಾಗಿದೆ. ಕಸಬಾ ಹೋಬಳಿಯ ಜನರಿಗಾಗಿ ಪಟ್ಟಣದ ತಾಲೂಕು ಕಚೇರಿ ಮತ್ತು ಪ್ರಗತಿಕೃಷ್ಣ ಗ್ರಾಮೀಣ ಬ್ಯಾಂಕ್‌ನಲ್ಲಿ ಕೌಂಟರ್‌ಗಳನ್ನು ತೆರೆಯಲಾಗಿದೆ. ನೂರಾರು ಫಲಾನುಭವಿಗಳು ಮತ್ತು ದೇವಸಮುದ್ರ ಹೋಬಳಿಯ ಜನರಿಗೆ ಕೇವಲ ಒಂದೇ ಕೌಂಟರ್‌ ಅನ್ನು ರಾಂಪುರದ ನಾಡಕಚೇರಿಯಲ್ಲಿ ತೆರೆಯಲಾಗಿದೆ. ಇದರಿಂದ ಜನಸಾಮಾನ್ಯರು ಆಧಾರ್‌ ಕಾರ್ಡ್‌ಗಳನ್ನು ಪಡೆಯಲು ನಿತ್ಯ ನರಕಯಾತನೆ ಅನುಭವಿಸುವಂತಾಗಿದೆ. ಆಧಾರ್‌ ಕಾರ್ಡ್‌ಗಾಗಿ ದೂರದ ಗ್ರಾಮಗಳಿಂದ ನೂರಾರು ರೂ. ವ್ಯಯ ಮಾಡಿಕೊಂಡು ತಮ್ಮ ಕೆಲಸ ಕಾರ್ಯಗಳನ್ನು ಬದಿಗೊತ್ತಿ ಆಧಾರ್‌ ಕಾರ್ಡ್‌ ಕೌಂಟರ್‌ ಗಳಿಗೆ ಅಲೆದಾಡುವಂತಾಗಿದೆ.

ಪಟ್ಟಣದ ಪ್ರಗತಿ ಕೃಷ್ಣ ಗ್ರಾಮೀಣ ಬ್ಯಾಂಕ್‌ನ ಕೌಂಟರ್‌ನಲ್ಲಂತೂ ಆಧಾರ್‌ ಕಾರ್ಡ್‌ ಸಮಸ್ಯೆ ಮಿತಿ ಮೀರಿದೆ. ಈ ಕೌಂಟರ್‌ನಲ್ಲಿ ವಾರಕ್ಕೊಮ್ಮೆ ಟೋಕನ್‌ ನೀಡುತ್ತಿರುವುದರಿಂದ ಕೇವಲ ಟೋಕನ್‌ ಪಡೆಯಲು ಗ್ರಾಮೀಣ ಭಾಗದ ಜನರು ಮತ್ತು ಪಟ್ಟಣದ ಜನರು ಬೆಳಗಿನ ಜಾವ 3 ಗಂಟೆಗೆ ಆಗಮಿಸಿ ಸರತಿ ಸಾಲಲ್ಲಿ ನಿಲ್ಲುವ ದುಸ್ಥಿತಿ ನಿರ್ಮಾಣವಾಗಿದೆ. ಹಾಗೆಯೇ ರಾಂಪುರ ನಾಡಕಚೇರಿಯಲ್ಲಿಯೂ ಇದೇ ಸ್ಥಿತಿ ಇದೆ.

ಟೋಕನ್‌ ಪಡೆದವರಿಗೆ ತಕ್ಷಣ ಆಧಾರ್‌ ಕಾರ್ಡ್‌ ಲಭ್ಯವಾಗದೆ ತಿಂಗಳುಗಳ ಕಾಲ ಕಚೇರಿಗೆ ಅಲೆಯುವಂತಾಗಿದೆ. ಆಧಾರ್‌ ಕಾರ್ಡ್‌ ಪಡೆಯಲು ನಿತ್ಯವೂ ಕೌಂಟರ್‌ನಲ್ಲಿ ಟೋಕನ್‌ ನೀಡಿದರೆ ತ್ವರಿತವಾಗಿ ಆಧಾರ್‌ ಕಾರ್ಡ್‌ ನೀಡಬಹುದು. ಆದರೆ ಈ ಬಗ್ಗೆ ಸಂಬಂಧಪಟ್ಟ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಗಮನ ಹರಿಸುತ್ತಿಲ್ಲ. ಜನಪ್ರತಿನಿಧಿಗಳು ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ತಾಲೂಕಿನಲ್ಲಿ ಆಧಾರ್‌ ಕಾರ್ಡ್‌ಗಾಗಿ ಹೆಚ್ಚಿನ ಕೌಂಟರ್‌ಗಳನ್ನು ತೆರೆದು ಅನುಕೂಲ ಮಾಡಿಕೊಡಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಟಾಪ್ ನ್ಯೂಸ್

prachanda-nepal

Nepal; 4ನೇ ಬಾರಿಗೆ ವಿಶ್ವಾಸಮತ ಗೆದ್ದ ಪ್ರಧಾನಿ ಪ್ರಚಂಡ

1-wqwewqeewqe

RSS ಸದಸ್ಯ ನಾನು ಎಂದ ಕಲ್ಕತ್ತಾ ಹೈಕೋರ್ಟ್ ನಿವೃತ್ತ ಜಡ್ಜ್

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

1-modi

Varanasi; 25000 ಮಹಿಳೆಯರ ಜತೆ ಸ್ವಕ್ಷೇತ್ರದಲ್ಲಿ ಪಿಎಂ ಸಂವಾದ

ನೇತ್ರಾವತಿಯಲ್ಲಿ ಹರಿವು ಏರಿಕೆ; ತುಂಬೆಗೆ ಎಎಂಆರ್‌ ನೀರು

Mangaluru ನೇತ್ರಾವತಿಯಲ್ಲಿ ಹರಿವು ಏರಿಕೆ; ತುಂಬೆಗೆ ಎಎಂಆರ್‌ ನೀರು

MOdi (3)

Odisha ರಾಜ್ಯ ಸರಕಾರವು ಭ್ರಷ್ಟರ ಹಿಡಿತಕ್ಕೆ ಸಿಲುಕಿದೆ: ಪಿಎಂ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

ನೇತ್ರಾವತಿಯಲ್ಲಿ ಹರಿವು ಏರಿಕೆ; ತುಂಬೆಗೆ ಎಎಂಆರ್‌ ನೀರು

Mangaluru ನೇತ್ರಾವತಿಯಲ್ಲಿ ಹರಿವು ಏರಿಕೆ; ತುಂಬೆಗೆ ಎಎಂಆರ್‌ ನೀರು

Rain ಕೊಡಗಿನಲ್ಲಿ ಉತ್ತಮ ಮಳೆ: ಅಂಗಡಿ, ಮನೆಗಳಿಗೆ ನುಗ್ಗಿದ ನೀರು

Rain ಕೊಡಗಿನಲ್ಲಿ ಉತ್ತಮ ಮಳೆ: ಅಂಗಡಿ, ಮನೆಗಳಿಗೆ ನುಗ್ಗಿದ ನೀರು

MLC Election: ನೈಋತ್ಯ ಕ್ಷೇತ್ರದಲ್ಲಿ ಗೆಲುವು ನಿಶ್ಚಿತ: ಕೋಟ

MLC Election: ನೈಋತ್ಯ ಕ್ಷೇತ್ರದಲ್ಲಿ ಗೆಲುವು ನಿಶ್ಚಿತ: ಕೋಟ

Kambala ಕ್ಷೇತ್ರದವರಿಗೆ ಉಚಿತ ವಿಮೆ ಸೌಲಭ್ಯ

Kambala ಕ್ಷೇತ್ರದವರಿಗೆ ಉಚಿತ ವಿಮೆ ಸೌಲಭ್ಯ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

police USA

China ಶಾಲೆಯಲ್ಲಿ ಚಾಕು ಇರಿತ: 5 ಮಂದಿಗೆ ಗಾಯ

prachanda-nepal

Nepal; 4ನೇ ಬಾರಿಗೆ ವಿಶ್ವಾಸಮತ ಗೆದ್ದ ಪ್ರಧಾನಿ ಪ್ರಚಂಡ

1-wqwewqeewqe

RSS ಸದಸ್ಯ ನಾನು ಎಂದ ಕಲ್ಕತ್ತಾ ಹೈಕೋರ್ಟ್ ನಿವೃತ್ತ ಜಡ್ಜ್

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.