ಕೇಂದ್ರದಿಂದ ಆರ್ಥಿಕ ತಳಹದಿ ಬಜೆಟ್

ವಿಶ್ವಮಟ್ಟದಲ್ಲಾದ ಹಿನ್ನಡೆಯೇ ಆರ್ಥಿಕ ಕುಸಿತಕ್ಕೆ ಕಾರಣ: ಡಾ| ಕೆ.ಸಿ. ಬಸವರಾಜ್‌

Team Udayavani, Jul 11, 2019, 11:55 AM IST

11-July-20

ಶಿವಮೊಗ್ಗ: ಬಜೆಟ್ ಅವಲೋಕನ ಕಾರ್ಯಕ್ರಮವನ್ನು ಡಾ| ಕೆ.ಸಿ. ಬಸವರಾಜ್‌ ಉದ್ಘಾಟಿಸಿದ

ಶಿವಮೊಗ್ಗ: ದೇಶದ ಸಮಗ್ರ ಅಭಿವೃದ್ಧಿ ದೃಷ್ಟಿಯಿಂದ ಸಣ್ಣಪುಟ್ಟ ದೋಷಗಳಿದ್ದರೂ ಭಾರತದ ಆರ್ಥಿಕ ವ್ಯವಸ್ಥೆ ತಳಹದಿ ಗಟ್ಟಿಗೊಳಿಸುವ ಬಜೆಟ್ ಇದಾಗಿದೆ ಎಂದು ಮೈಸೂರು ವಿಶ್ವವಿದ್ಯಾಲಯದ ವಿಶ್ರಾಂತ ಅರ್ಥಶಾಸ್ತ್ರ ಪ್ರಾಧ್ಯಾಪಕ ಡಾ| ಕೆ.ಸಿ. ಬಸವರಾಜ್‌ ಅಭಿಪ್ರಾಯಪಟ್ಟರು.

ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಸಭಾಂಗಣದಲ್ಲಿ ಶಿವಮೊಗ್ಗ ಎಕಾನಾಮಿಕ್ಸ್‌ ಫೋರಂ ಸಹಯೋಗದಲ್ಲಿ ಮಂಗಳವಾರ ಆಯೋಜಿಸಿದ್ದ ಕೇಂದ್ರ ಬಜೆಟ್ ಅವಲೋಕನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕಳೆದ ವರ್ಷ ಭಾರತದ ಆರ್ಥಿಕ ವ್ಯವಸ್ಥೆಯಲ್ಲಿ ಸ್ವಲ್ಪ ಮಟ್ಟಿನ ಕುಸಿತ ಕಾಣುವುದಕ್ಕೆ ವಿಶ್ವ ಮಟ್ಟದಲ್ಲಿ ಉಂಟಾದ ಆರ್ಥಿಕ ಹಿನ್ನಡೆಯೂ ಕಾರಣ ಎಂದು ತಿಳಿಸಿದರು. ರಾಜಕೀಯ ಮತ್ತು ಆರ್ಥಿಕ ನಿರ್ವಹಣೆ ದೃಷ್ಟಿಯಿಂದ ಬಜೆಟ್ ಮೇಲೆ ವಿಶ್ವಾಸ ಇಡಬಹುದು. ಭಾರೀ ಬಹುಮತದಿಂದ ಬಿಜೆಪಿ ಆಡಳಿತಕ್ಕೆ ಬಂದ ಹಿನ್ನಲೆಯಲ್ಲಿ ಜನರ ನಿರೀಕ್ಷೆ ಸಹಜವಾಗಿ ಹೆಚ್ಚಿತ್ತು. ಆದರೆ ನಿರೀಕ್ಷೆ ಮಟ್ಟದಲ್ಲಿ ಬಜೆಟ್ ಮಂಡಿಸಿಲ್ಲ. ಆದರೂ ಬಜೆಟ್ ಉತ್ತಮ ಅಂಶಗಳಿಂದ ಕೂಡಿದೆ ಎಂದರು.

ಕಳೆದ ವರ್ಷದಲ್ಲಿ ವಿತ್ತೀಯ ಕೊರತೆ ಶೇ 3.4 ರಷ್ಟು ಹಂತಕ್ಕೆ ಇಳಿಸಿರುವುದು 5 ವರ್ಷಗಳಲ್ಲಿ ಕಂಡುಬಂದಿರುವ ಸಾಧನೆಯಾಗಿದೆ. ನೇರ ತೆರಿಗೆಗಳ ಮೂಲಕ ಶೇ. 70ರಷ್ಟು ಆದಾಯ ಸಂಗ್ರಹ ಮಾಡಲಾಗಿದೆ. ಅಪ್ರತ್ಯಕ್ಷ ತೆರಿಗೆ ಮೂಲಕವೂ ಆದಾಯ ಹೆಚ್ಚಿಸುವಲ್ಲಿ ನಿರ್ವಹಣೆ ಚೆನ್ನಾಗಿದೆ ಎಂದು ಡಾ| ಕೆ.ಸಿ. ಬಸವರಾಜ್‌ ಹೇಳಿದರು. ಜಿ.ಎಸ್‌.ಟಿ. ತೆರಿಗೆಯು ಅಪ್ರತ್ಯಕ್ಷ ತೆರಿಗೆ ಸಂಗ್ರಹದಲ್ಲಿ ವಿಶ್ವದ ಬಹುತೇಕ ರಾಷ್ಟ್ರಗಳಲ್ಲಿ ಬಳಕೆಯಲ್ಲಿರುವ ಉತ್ತಮ ಮಾದರಿಯಾಗಿದೆ. ಕೇಂದ್ರ ಸರ್ಕಾರ ಸಂಪನ್ಮೂಲ ಕ್ರೊಢೀಕರಿಸುವಲ್ಲಿ ಯಶಸ್ವಿಯಾಗಿದೆ. ಜಿಎಸ್‌ಟಿ ಅನುಷ್ಠಾನ ಮಾಡುವಲ್ಲಿ ಗೊಂದಲ ಉಂಟಾಗಿತ್ತು. ಆದರೆ ಹಂತ ಹಂತವಾಗಿ ಲೋಪಗಳನ್ನು ಸರಿಪಡಿಸಿಕೊಳ್ಳಲಾಗುತ್ತಿದೆ ಎಂದು ತಿಳಿಸಿದರು.

ಕೃಷಿ ಕ್ಷೇತ್ರದಲ್ಲಿ ದ್ವಿದಳ ಧಾನ್ಯಗಳಿಗೆ ಕನಿಷ್ಠ ಬೆಂಬಲ ಬೆಲೆ ಘೋಷಿಸಿರುವುದು ಉತ್ತರ ಭಾರತದ ಅನೇಕ ರಾಜ್ಯಗಳಿಗೆ ಉಪಯುಕ್ತ ಆಗುತ್ತಿದೆ. ಆದರೆ ರಾಜ್ಯದಲ್ಲಿ ಉಪಯುಕ್ತವಾಗುತ್ತಿಲ್ಲ. ಇದರಿಂದ ಸಾಲಮನ್ನಾ ಕೂಗು ಕೇಳಿಬರುತ್ತಿದೆ. ಕೃಷಿ ಕ್ಷೇತ್ರದಲ್ಲಿ ಖಾಸಗಿ ಬಂಡವಾಳ ಹೂಡಿಕೆಯು ಕಾರ್ಪೊರೇಟ್‌ಗಳಿಗೆ ಲಾಭವಾಗುತ್ತದೆಯೇ ಹೊರತು ಉತ್ತೇಜನಕಾರಿಯಾಗುವುದಿಲ್ಲ. ಸಾಮಾನ್ಯ ರೈತನ ಸಮಸ್ಯೆಗಳಿಗೆ ಪರಿಹಾರ ನೀಡುವುದಿಲ್ಲ ಎಂದರು.

ಸಂಘದ ತೆರಿಗೆ ಸಲಹಾ ಸಮಿತಿ ಅಧ್ಯಕ್ಷ ಮಧುಸೂದನ್‌ ಐತಾಳ್‌ ಮಾತನಾಡಿ, ಬಜೆಟ್ ಅನ್ನು ಕೈಗಾರಿಕೆ ಮತ್ತು ಡಿಜಿಟಲ್ ಇಂಡಿಯಾಕ್ಕೆ ಪೂರಕ ಆಗಿರುವಂತೆ ರೂಪಿಸಲಾಗಿದೆ. 1.5 ಕೋಟಿ ರೂ.ಗಿಂತ ಕಡಿಮೆ ವಾರ್ಷಿಕ ವಹಿವಾಟು ನಡೆಸುವ ವ್ಯಾಪಾರಸ್ಥರಿಗೆ ವಿಮಾ ಯೋಜನೆ ಘೋಷಣೆಯಾಗಿದೆ. 3 ಕೋಟಿ ಸಣ್ಣ ವ್ಯಾಪಾರಿಗಳಿಗೆ ವಿಮಾ ಯೋಜನೆ, ಮಹಿಳಾ ಉದ್ದಿಮೆ ಪ್ರೋತ್ಸಾಹಿಸಲು ಸಾಲ ಸೌಲಭ್ಯ ಸೇರಿ ಉತ್ತಮ ಬಜೆಟ್ ಮಂಡನೆಯಾಗಿದೆ ಎಂದು ತಿಳಿಸಿದರು.

ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಜೆ.ಆರ್‌. ವಾಸುದೇವ್‌, ನಿಕಟಪೂರ್ವ ಅಧ್ಯಕ್ಷ ಡಿ.ಎಂ. ಶಂಕರಪ್ಪ, ಶಿವಮೊಗ್ಗ ಎಕಾನಾಮಿಕ್ಸ್‌ ಫೋರಂ ಅಧ್ಯಕ್ಷ ಟಿ.ಆರ್‌. ಮಂಜುನಾಥ್‌, ಕಾರ್ಯದರ್ಶಿ ಬಿ.ಆರ್‌. ಸಂತೋಷ್‌, ಬಿ. ಗೋಪಿನಾಥ್‌, ಜಿ. ವಿಜಯಕುಮಾರ್‌, ಡಾ| ವೆಂಕಟೇಶ್‌, ಪ್ರೊ| ಸತ್ಯನಾರಾಯಣ್‌, ಎಸ್‌.ಎಸ್‌. ಉದಯ್‌ಕುಮಾರ್‌ ಇದ್ದರು.

ಟಾಪ್ ನ್ಯೂಸ್

Housefull 5: ಕಾಮಿಡಿ ಜರ್ನಿಯ ‌ʼಹೌಸ್‌ ಫುಲ್‌ʼ ಕುಟುಂಬಕ್ಕೆ ಅಭಿಷೇಕ್‌ ಬಚ್ಚನ್ ಎಂಟ್ರಿ

Housefull 5: ಕಾಮಿಡಿ ಜರ್ನಿಯ ‌ʼಹೌಸ್‌ ಫುಲ್‌ʼ ಕುಟುಂಬಕ್ಕೆ ಅಭಿಷೇಕ್‌ ಬಚ್ಚನ್ ಎಂಟ್ರಿ

Team India’s T20 World Cup 2024 Jersey Leaked

T20 World Cup; ಹೊರಬಿತ್ತು ಭಾರತ ತಂಡದ ಜೆರ್ಸಿ ಫೋಟೊ: ಹೇಗಿದೆ ನೋಡಿ

Water Corridor: ಭಾರತಕ್ಕೆ ಅಗತ್ಯವಿದೆ ವಿಶೇಷ ವಾಟರ್‌ ಕಾರಿಡಾರ್‌!

Water Corridor: ಭಾರತಕ್ಕೆ ಅಗತ್ಯವಿದೆ ವಿಶೇಷ ವಾಟರ್‌ ಕಾರಿಡಾರ್‌!

Kangana Ranaut: ಚಿತ್ರರಂಗದಲ್ಲಿ ಅಮಿತಾಭ್ ಗೆ ಸಮಾನವಾದ ಗೌರವ ನನಗೆ ಸಿಗುತ್ತಿದೆ; ಕಂಗನಾ

Kangana Ranaut: ಚಿತ್ರರಂಗದಲ್ಲಿ ಅಮಿತಾಭ್ ಗೆ ಸಮಾನವಾದ ಗೌರವ ನನಗೆ ಸಿಗುತ್ತಿದೆ; ಕಂಗನಾ

Farooq Abdullah

ಪಾಕಿಸ್ತಾನದವರೇನು ಬಳೆ ಧರಿಸಿ ಕುಳಿತಿಲ್ಲ..; ವಿವಾದಾತ್ಮಕ ಹೇಳಿಕೆ ನೀಡಿದ ಫಾರೂಕ್ ಅಬ್ದುಲ್ಲಾ

Threat: ಅಹ್ಮದಾಬಾದ್ ನ ಹಲವು ಶಾಲೆಗಳಿಗೆ ಇಮೇಲ್‌ ಮೂಲಕ ಬಾಂಬ್ ಬೆದರಿಕೆ…

Threat: ಅಹ್ಮದಾಬಾದ್ ನ ಹಲವು ಶಾಲೆಗಳಿಗೆ ಇಮೇಲ್‌ ಮೂಲಕ ಬಾಂಬ್ ಬೆದರಿಕೆ…

Congress, ಬಿಜೆಡಿ ಲೂಟಿಯಿಂದ ಒಡಿಶಾ ಬಡ ರಾಜ್ಯವಾಗಿದೆ: ಪ್ರಧಾನಿ ಮೋದಿ ವಾಗ್ದಾಳಿ

Congress, ಬಿಜೆಡಿ ಲೂಟಿಯಿಂದ ಒಡಿಶಾ ಬಡ ರಾಜ್ಯವಾಗಿದೆ: ಪ್ರಧಾನಿ ಮೋದಿ ವಾಗ್ದಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಗಿದ ಅಬ್ಬರ; ಎರಡು ದಿನ ಮನೆ-ಮನೆ ಸಂದಾಯ! 1992ರ ಚುನಾವಣೆ ನೆನಪಿಸಿದ ರಣತಂತ್ರ

ಮುಗಿದ ಅಬ್ಬರ; ಎರಡು ದಿನ ಮನೆ-ಮನೆ ಸಂದಾಯ! 1992ರ ಚುನಾವಣೆ ನೆನಪಿಸಿದ ರಣತಂತ್ರ

Lok Sabha Election: ಮತಗಟ್ಟೆಗಳಿಗೆ ತೆರಳಿದ ಅಧಿಕಾರಿಗಳು, ಸಿಬ್ಬಂದಿಗಳು

Lok Sabha Election: ಮತಗಟ್ಟೆಗಳಿಗೆ ತೆರಳಿದ ಅಧಿಕಾರಿಗಳು, ಸಿಬ್ಬಂದಿಗಳು

BY Raghavendra: ಕಾಡಾನೆ ದಾಳಿಗೆ ಬಲಿಯಾದ ರೈತನ ಮನೆಗೆ ಸಂಸದ ಬಿ.ವೈ.ರಾಘವೇಂದ್ರ ಭೇಟಿ

BY Raghavendra: ಕಾಡಾನೆ ದಾಳಿಗೆ ಬಲಿಯಾದ ರೈತನ ಮನೆಗೆ ಸಂಸದ ಬಿ.ವೈ.ರಾಘವೇಂದ್ರ ಭೇಟಿ

Majestic Underpass: ಅಸಹ್ಯ, ಭಯ ಹುಟ್ಟಿಸುತ್ತೆ ಮೆಜೆಸ್ಟಿಕ್‌ ಅಂಡರ್‌ಪಾಸ್‌

Majestic Underpass: ಅಸಹ್ಯ, ಭಯ ಹುಟ್ಟಿಸುತ್ತೆ ಮೆಜೆಸ್ಟಿಕ್‌ ಅಂಡರ್‌ಪಾಸ್‌

Vande Bharat: ಉಪನಗರಕ್ಕೂ ವಂದೇ ಭಾರತ ಮೆಟ್ರೋ ಬೋಗಿ?

Vande Bharat: ಉಪನಗರಕ್ಕೂ ವಂದೇ ಭಾರತ ಮೆಟ್ರೋ ಬೋಗಿ?

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

ಮುಗಿದ ಅಬ್ಬರ; ಎರಡು ದಿನ ಮನೆ-ಮನೆ ಸಂದಾಯ! 1992ರ ಚುನಾವಣೆ ನೆನಪಿಸಿದ ರಣತಂತ್ರ

ಮುಗಿದ ಅಬ್ಬರ; ಎರಡು ದಿನ ಮನೆ-ಮನೆ ಸಂದಾಯ! 1992ರ ಚುನಾವಣೆ ನೆನಪಿಸಿದ ರಣತಂತ್ರ

Lok Sabha Election: ಮತಗಟ್ಟೆಗಳಿಗೆ ತೆರಳಿದ ಅಧಿಕಾರಿಗಳು, ಸಿಬ್ಬಂದಿಗಳು

Lok Sabha Election: ಮತಗಟ್ಟೆಗಳಿಗೆ ತೆರಳಿದ ಅಧಿಕಾರಿಗಳು, ಸಿಬ್ಬಂದಿಗಳು

Housefull 5: ಕಾಮಿಡಿ ಜರ್ನಿಯ ‌ʼಹೌಸ್‌ ಫುಲ್‌ʼ ಕುಟುಂಬಕ್ಕೆ ಅಭಿಷೇಕ್‌ ಬಚ್ಚನ್ ಎಂಟ್ರಿ

Housefull 5: ಕಾಮಿಡಿ ಜರ್ನಿಯ ‌ʼಹೌಸ್‌ ಫುಲ್‌ʼ ಕುಟುಂಬಕ್ಕೆ ಅಭಿಷೇಕ್‌ ಬಚ್ಚನ್ ಎಂಟ್ರಿ

Team India’s T20 World Cup 2024 Jersey Leaked

T20 World Cup; ಹೊರಬಿತ್ತು ಭಾರತ ತಂಡದ ಜೆರ್ಸಿ ಫೋಟೊ: ಹೇಗಿದೆ ನೋಡಿ

Water Corridor: ಭಾರತಕ್ಕೆ ಅಗತ್ಯವಿದೆ ವಿಶೇಷ ವಾಟರ್‌ ಕಾರಿಡಾರ್‌!

Water Corridor: ಭಾರತಕ್ಕೆ ಅಗತ್ಯವಿದೆ ವಿಶೇಷ ವಾಟರ್‌ ಕಾರಿಡಾರ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.